Homeಅಂಕಣಗಳುಯುವ ಮತದಾರರಿಗೆ ಒಂದು ಕಿವಿಮಾತು

ಯುವ ಮತದಾರರಿಗೆ ಒಂದು ಕಿವಿಮಾತು

- Advertisement -
* ಎಚ್.ಎಸ್.ದೊರೆಸ್ವಾಮಿ |
ಈಗ 18 ತುಂಬಿ ಹೊಸದಾಗಿ ಮತದಾನದ ಹಕ್ಕನ್ನು ಪಡೆದಿರುವ ಯುವಕ ಯುವತಿಯರಿಗೆ ನನ್ನ ಅಭಿನಂದನೆಗಳು.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಇನ್ನೆರೆಡು ದಿನಗಳಲ್ಲಿ ನಡೆಯಲಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಪ್ರಧಾನವಾಗಿ ಈ ಚುನಾವಣೆಯಲ್ಲಿ ಭಾಗವಹಿಸುತ್ತಿವೆ. ನೀವು ಪತ್ರಿಕೆಗಳಲ್ಲಿ, ಟಿವಿಗಳಲ್ಲಿ ಇವರ ಪ್ರಚಾರದ ಅಬ್ಬರವನ್ನು ಒಂದೆರಡು ವಾರದಿಂದ ಕೇಳುತ್ತಾ ಬಂದಿದ್ದೀರಿ. ಈ ಅಬ್ಬರಕ್ಕೆ ಹೊಸದಾಗಿ ಮತದಾನ ಅರ್ಹತೆಯನ್ನು ಪಡೆದವರು ಗಾಬರಿಗೊಂಡಿರಬಹುದು, ಸಿಡಿಮಿಡಿಗೊಂಡಿರಬಹುದು.
ನೀವು ಗಮನಿಸಿರಬಹುದು, ಪ್ರಧಾನಮಂತ್ರಿ ಮೋದಿಯವರು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎದುರಾಳಿಗಳಾದ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಹಾಗೂ ಜಾತ್ಯತೀತ ಜನತಾದಳದ ದೇವೇಗೌಡರನ್ನು ವೈಯಕ್ತಿಕವಾಗಿ ಟೀಕೆ ಮಾಡುತ್ತಿರುವುದನ್ನು ನೀವು ಗಮನಿಸಿರಬಹುದು. ಬಿಜೆಪಿಯ ಈ ಇಬ್ಬರು ಮಹನೀಯರು ಇಷ್ಟು ಕೆಟ್ಟದಾಗಿ ಮಾತಾಡಿದಾಗ, ಎದುರಾಳಿಗಳೂ ಇದಕ್ಕೆ ಉತ್ತರ ನೀಡಬೇಕಾದ್ದು ಅನಿವಾರ್ಯವಾಗುತ್ತದೆ. ಹೀಗಾಗಿ ಇಡೀ ಚುನಾವಣೆಯ ಸಂದರ್ಭದಲ್ಲಿ ಈ ದಾಳಿ ಮತ್ತು ಪ್ರತಿದಾಳಿ ಮತದಾರರ ತಿರಸ್ಕಾರಕ್ಕೆ ಒಳಗಾಗಿದೆ.
ನೀವು ಹೊಸದಾಗಿ ಮತ ಹಾಕಲು ಬಂದವರು ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ. ಮೋದಿ ಕರ್ನಾಟಕವನ್ನು ಕಬ್ಜಾ ಮಾಡಲು, ಕಾಂಗ್ರೆಸ್ಸನ್ನು ನಾಮಾವಶೇಷ ಮಾಡಲು ಹೊರಟಿರುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಈ ರೀತಿ ಮೂದಲಿಕೆ ಮಾಡುವ ಮೋದಿ ತನ್ನ ಈ 4 ವರ್ಷಗಳ ಆಡಳಿತದ ಅವಧಿಯಲ್ಲಿ ಏನು ಸಾಧಿಸಿದ್ದಾರೆ ಎಂಬುದನ್ನು ಹೊಸ ಮತದಾರರಾದ ನೀವು ಅರಿಯಬೇಕು. ಈಗಾಗಲೇ ಈ ವಿಷಯ ಕುರಿತು ಅನೇಕರು ಮಾತನಾಡಿದ್ದಾರೆ. ನೀವೂ ಗಮನಿಸಿರಬಹುದು. ಇದನ್ನು ಗಮನಿಸದವರ ಗಮನ ಸೆಳೆಯಲು ಮೋದಿಯವರ ವೈಫಲ್ಯದ ಪ್ರಮುಖ ಪ್ರಕರಣಗಳನ್ನು ನಿಮ್ಮ ಗಮನಕ್ಕೆ ತರ ಬಯಸುತ್ತೇನೆ.
1. ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ 100 ದಿನಗಳ ಒಳಗಾಗಿ ಸ್ವಿಸ್ ಬ್ಯಾಂಕ್‍ನಲ್ಲಿರುವ ಭಾರತೀಯರ ಎಲ್ಲಾ ಕಪ್ಪು ಹಣವನ್ನೂ ಒಳಗೊಂಡಂತೆ ಭಾರತದಲ್ಲೇ ಅಡಗಿಸಿಟ್ಟಿರುವ ಹಣವನ್ನೂ ಹೊರತೆಗೆಸಿ ಪ್ರತಿಯೊಬ್ಬರ ಖಾತೆಗೆ ತಲಾ 15 ಲಕ್ಷ ರೂಪಾಯಿ ಹಾಕುವುದಾಗಿ 2014ರ ಲೋಕಸಭೆಯ ಚುನಾವಣಾ ವೇಳೆಯಲ್ಲಿ ಮೋದಿಯವರು ಘೋಷಣೆ ಮಾಡಿದ್ದರು. ಆದರೆ ನಯಾ ಪೈಸೆಯೂ ಬರಲಿಲ್ಲ. ಜನರ ಖಾತೆಗಳಿಗೆ ತಲಾ 15 ಲಕ್ಷ ಹಾಕುವ ಬೊಗಳೆ ಮಾತು ಹುಸಿಯಾಯಿತು. ಇದರಿಂದ ಬಡಜನರಿಗೆ ನಿರಾಸೆಯೂ ಆಯಿತು.
2. ತಾವು ಅಧಿಕಾರಕ್ಕೆ ಬಂದನಂತರ ಪ್ರತಿ ವರ್ಷ 1 ಕೋಟಿ ಉದ್ಯೋಗ ಸೃಷ್ಟಿಸಿ, ನಿರುದ್ಯೋಗ ಸಮಸ್ಯೆ ಬಗೆಹರಿಸುವುದಾಗಿ ಬೂಸಿ ಬಿಟ್ಟರು. ಹೊಸ ಉದ್ಯೋಗ ಸೃಷ್ಟಿ ಮಾಡುವುದಿರಲಿ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಪಾರ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿದ್ದು ಅವುಗಳನ್ನೆಲ್ಲ ಭರ್ತಿ ಮಾಡುವ ಮೂಲಕ ಲಕ್ಷಾಂತರ ವಿದ್ಯಾವಂತರಿಗೆ ಉದ್ಯೋಗ ಒದಗಿಸಬಹುದಾಗಿತ್ತು. ಭಾರತ ಸರ್ಕಾರ ನೀಡಿರುವ ಅಂಕಿಅಂಶಗಳ ಪ್ರಕಾರ. ಕೇಂದ್ರ ಸಚಿವಾಲಯದಲ್ಲೇ 60,235 ಹುದ್ದೆಗಳು ಖಾಲಿಯಿವೆ. ರೈಲ್ವೆ ಇಲಾಖೆಯಲ್ಲಿ 2.35 ಲಕ್ಷ ಹುದ್ದೆಗಳಿವೆ. ಸಶಸ್ತ್ರ ಪೊಲೀಸ್ ಪಡೆಯಲ್ಲಿ 65,709 ಹುದ್ದೆಗಳು ಖಾಲಿಯಿವೆ. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗ ಸಮಸ್ಯೆ ಬಗೆಹರಿಸುವ ಕೆಲಸವಂತೂ ಮಾಡುತ್ತಿಲ್ಲ. ಬದಲಿಗೆ ಶ್ರೀಮಂತ ಉದ್ದಿಮೆಪತಿಗಳ ಪರವಾಗಿ hiಡಿe ಚಿಟಿಜ ಜಿiಡಿe ನೀತಿಯನ್ನು ಜಾರಿಗೆ ತಂದು, ಕಾಯಂ ಉದ್ಯೋಗಗಳೇ ಇಲ್ಲದಂತೆ ಮಾಡಲು ಹೊರಟಿದ್ದಾರೆ.
3. 500 ಮತ್ತು 1000 ರೂಪಾಯಿ ನೋಟುಗಳನ್ನು ಅನಾಣ್ಯೀಕರಣ ಮಾಡಿದ ಮೋದಿಯವರು ಈ ಮೂಲಕ ಕಪ್ಪುಹಣವನ್ನು ನಿರ್ನಾಮ ಮಾಡುತ್ತೇವೆಂದು ಘೋಷಿಸಿದರು. ಆದರೆ ವಾಸ್ತವದಲ್ಲಿ ಏನಾಯಿತು? ತಮಗೆ ಬೇಕಾದ ಕಪ್ಪುಹಣದ ಕುಳಗಳು ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ಕೋಟ್ಯಾಂತರ ರೂಪಾಯಿಗಳ ಕಪ್ಪು ಹಣವನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟರು. ಈ ನೋಟುಗಳ ಅಪಮೌಲ್ಯೀಕರಣದಿಂದ ತೊಂದರೆಗೆ ಒಳಗಾದವರು ಶ್ರೀಮಂತರಲ್ಲ, ಕಾಳಧನ ಇಟ್ಟುಕೊಂಡವರಲ್ಲ; ಜನಸಾಮಾನ್ಯರು, ಮಧ್ಯಮವರ್ಗದವರು ಮತ್ತು ಸಣ್ಣ ವ್ಯಾಪಾರಿಗಳು. ಈ ದಿಢೀರ್ ಹೊಡೆತದಿಂದಾಗಿ ನೂರಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡರು. ಕೈಲಿದ್ದ ನೋಟುಗಳಿಗೆ ಬೆಲೆಯಿಲ್ಲದೆ, ಹೊಸದಾಗಿ ಪ್ರಿಂಟಾದ 500 ಮತ್ತು 2000 ನೋಟುಗಳು ಕೈಗೆ ಸಿಗದೆ ಅನೇಕ ಸಣ್ಣಪುಟ್ಟ ವ್ಯಾಪಾರಿಗಳು ಬೀದಿ ಪಾಲಾದರು. ದಿನನಿತ್ಯ ಕೂಲಿ ಮಾಡಿ ಹೊಟ್ಟೆತುಂಬಿಸಿಕೊಳ್ಳುತ್ತಿದ್ದ ಕೂಲಿಕಾರ್ಮಿಕರಿಗೆ ಕೆಲಸ ಸಿಗದೆ ಕಂಗಾಲಾದರು. ಇಷ್ಟೆಲ್ಲಾ ಅನಾಹುತಗಳಾಗಿ ಕಪ್ಪು ಹಣ ವಾಪಸ್ ಬಂತೇ ಎಂದರೆ ಅದೂ ಇಲ್ಲ. ಎಷ್ಟು ನೋಟುಗಳು ಬ್ಯಾಂಕಿಗೆ ಜಮೆಯಾಗಿದೆಯೆಂಬ ಲೆಕ್ಕವನ್ನೇ ರಿಸರ್ವ್ ಬ್ಯಾಂಕ್ ಇನ್ನೂ ಕೊಟ್ಟಿಲ್ಲ.
4. ಬಿಜೆಪಿ ಪಕ್ಷ ಮತ್ತು ಅದಕ್ಕೆ ಸಂಬಂಧಿತ ಸಂಘಟನೆಗಳು ಸಂಸ್ಕøತಿ ರಕ್ಷಕರ ಹೆಸರಿನಲ್ಲಿ ಯುವಕ-ಯುವತಿಯರ ಮೇಲೆ ಹಲ್ಲೆ ಮಾಡುತ್ತಿರುವ ದಾರುಣ ಘಟನೆಗಳು ದೇಶಾದ್ಯಂತ ನಡೆಯುತ್ತಿವೆ. ಈ ಸಂಘಟನೆಗಳು ಸಕ್ರಿಯವಾಗಿರುವ ಕಡೆಗಳಲ್ಲಿ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳ ಜೊತೆ ಮಾತಾಡಲಿಕ್ಕೂ ಭಯ ಬೀಳಬೇಕಾದ ವಾತಾವರಣ ಸೃಷ್ಟಿಯಾಗಿದೆ.
5. ನಮ್ಮ ಬ್ಯಾಂಕುಗಳ ಲಕ್ಷಾಂತರ ಕೋಟಿ ಹಣವನ್ನು ತಮ್ಮ ನೆಚ್ಚಿನ ಉದ್ಯಮಿಗಳ ಒಡಲಿಗೆ ಹಾಕಿ, ಅವರು ಅಸಲು ಬಡ್ಡಿ ಯಾವುದೂ ಕಟ್ಟದೆ ನಮ್ಮ ಬ್ಯಾಂಕುಗಳಿಗೆ ಪಂಗನಾಮ ಹಾಕಿ ಓಡಿಹೋಗಿದ್ದಾರೆ. ವಿಜಯ ಮಲ್ಯ, ಲಲಿತ್ ಮೋದಿ, ನೀರವ್ ಮೋದಿ, ಮೆಹುಲ್ ಚೋಕ್ಸಿ, ಜತಿನ್ ಮೆಹ್ತಾ ಮುಂತಾದ ಖದೀಮರು ದೇಶ ಬಿಟ್ಟು ವಿದೇಶಕ್ಕೆ ಹಾರಿಹೋಗಲು ಅವಕಾಶ ಮಾಡಿಕೊಟ್ಟು ನಂತರ ನೋಟಿಸ್ ಕೊಡುವ, ಕೇಸು ಹಾಕುವ ನಾಟಕವಾಡುತ್ತಿರುವುದು ನಮ್ಮ ಕಣ್ಣೆದುರಿಗಿದೆ.
6. ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುತ್ತೇವೆಂದು ಉದ್ದುದ್ದ ಭಾಷಣ ಮಾಡಿ ಅಧಿಕಾರಕ್ಕೆ ಬಂದ ಈ ಪಕ್ಷದ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ವಿವಿಧ ರಾಜ್ಯಗಳಲ್ಲಿ ಹೆಣ್ಣುಮಕ್ಕಳ ಪಾಲಿಗೆ ಕಂಟಕಪ್ರಾಯರಾಗಿದ್ದಾರೆ. ಅತ್ಯಾಚಾರದ ಆರೋಪದಲ್ಲಿ, ಇತರೆ ಕ್ರಿಮಿನಲ್ ಕೇಸುಗಳಲ್ಲಿ ಜೈಲು ಸೇರಿದವರಲ್ಲಿ ಹೆಚ್ಚಿನವರು ಮೋದಿಯ ಪಕ್ಷದವರೇ.
ವಾಸ್ತವ ಸತ್ಯಗಳು ಹೀಗಿವೆ. ಮೋದಿಯವರು ತಮ್ಮ ಎಲೆಯಲ್ಲಿ ಕತ್ತೆ ಸತ್ತು ಬಿದ್ದಿರುವುದನ್ನು ಮರೆಮಾಚಿ, ಬೇರೆಯವರ ಎಲೆಯಲ್ಲಿ ನೊಣ ಸತ್ತು ಬಿದ್ದಿರುವುದನ್ನು ದೊಡ್ಡದು ಮಾಡಿ ಕೂಗು ಹಾಕುತ್ತಿದ್ದಾರೆ. ತಮ್ಮ ವಾಕ್ಚಾತುರ್ಯದಿಂದ ದೇಶವನ್ನು ಮರುಳು ಮಾಡಿಬಿಡಬಹುದು ಎಂದುಕೊಂಡಿದ್ದಾರೆ. ಇದನ್ನು ಹೊಸ ಮತದಾರರಾದ ಯುವಕ ಯುವತಿಯರು ಗಮನಿಸಬೇಕು. ಮೋದಿ ಮತ್ತು ಅಮಿತ್ ಶಾ ಅವರ ಪೊಳ್ಳು ಆರ್ಭಟಕ್ಕೆ ಸೊಪ್ಪು ಹಾಕಬೇಡಿ.
ಭಾರತ ದೇಶದಲ್ಲಿ ಸಾವಿರಾರು ವರ್ಷಗಳಿಂದ ಕ್ರಿಶ್ಚಿಯನ್ನರು, ಮುಸ್ಲಿಮರು, ಸಿಖ್ಖರು, ಪಾರ್ಸಿಗಳು ನೆಲೆಸಿದ್ದಾರೆ. ನಮ್ಮ ಈ ಎಲ್ಲ ಪೂರ್ವಿಕರು ದೇಶ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಆರೆಸ್ಸೆಸ್, ವಿಶ್ವಹಿಂದೂ ಪರಿಷತ್, ಭಜರಂಗದಳ ಮುಂತಾದ ಹಿಂದೂತ್ವ ಮತಾಂಧ ಸಂಸ್ಥೆಗಳು ಎಲ್ಲೆಡೆ ವಿಜೃಂಭಿಸುತ್ತಿದ್ದು, ತಮ್ಮ ಮತೀಯವಾದಿ agendaಗಳಿಗೆ ಪೂರಕವಾಗಿ ಸಂವಿಧಾನವನ್ನು ತಿದ್ದಬೇಕೆಂದು ಬೊಬ್ಬೆ ಎಬ್ಬಿಸಿದ್ದಾರೆ. ಇದೇನಾದರು ಕಾರ್ಯಗತವಾದರೆ, ಭಾರತದಲ್ಲಿ ಶಾಂತಿ, ಸೌಹಾರ್ದತೆ, ಭ್ರಾತೃತ್ವ ಯಾವುದೂ ಉಳಿಯುವ ಸಂಭವವಿಲ್ಲ. ಭಾರತ ದೇಶ ಆಫ್ಘಾನಿಸ್ತಾನದಂತೆ ಈ ಹಿಂದೂ ತಾಲಿಬಾನಿಗಳ ತಾಣವಾಗಲಿದೆ.
ನಿಮ್ಮಲ್ಲಿ ನನ್ನ ವಿನಂತಿ ಇಷ್ಟೆ. ಬಿಜೆಪಿಯ ನಿಜವಾದ hidden agendaವನ್ನು ಅಧ್ಯಯನ ಮಾಡಿ. ಪ್ರಜಾಪ್ರಭುತ್ವವನ್ನು ಮತ್ತು ಸಂವಿಧಾನವನ್ನು ಭಾರತೀಯ ಜನತಾ ಪಕ್ಷದ ಹೆಸರಿನಲ್ಲಿ ಮೋದಿ ಧೂಳೀಪಟ ಮಾಡಲು ಬಿಡಬೇಡಿ. ಈ ಬಾರಿಯ ವಿಧಾನಸಭಾ ಚುನಾವಣೆ ಮೋದಿ ವರ್ಸಸ್ ಕರ್ನಾಟಕದ ಮಧ್ಯೆ ನಡೆಯುತ್ತಿದೆ. ನಿಮ್ಮ ಮತವನ್ನು ವಿವೇಕದಿಂದ ಚಲಾಯಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...