Homeಅಂತರಾಷ್ಟ್ರೀಯರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

- Advertisement -
- Advertisement -

| ಆರ್.ಜಗನ್ನಾಥ್ |

ಮನಶಾಸ್ತ್ರದ ಬಗ್ಗೆ ಪಾಠ ಮಾಡುವ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಒಂದು ಅಸಾಧರಿವಾದ ಪ್ರಯೋಗವನ್ನು ದಿನಾಂಕ 1971 ಆಗಸ್ಟ್ 14 ರಿಂದ 21ರ ವರೆಗೆ ನಡೆಸಿದ್ದು ಇದಕ್ಕೆ (Stanford Prison Experiment) ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್(ಎಸ್‍ಪಿಇ) ಎಂದು ಕರೆದಿರುತ್ತಾರೆ.

ಅಮೇರಿಕಾದ ನೌಕಾಪಡೆಯ ಸಂಶೋಧನೆಗಾಗಿ ನಡೆದ ಪ್ರಯೋಗದಲ್ಲಿ ಪ್ರೊ.ಫಿಲಿಪ್ ಜಿಂಬರ್‍ಡೊ ಪ್ರಯೋಗಕ್ಕಾಗಿ ಸೇರಿಸಿಕೊಂಡದ್ದು ತನ್ನ ಇಪ್ಪತ್ತನಾಲ್ಕು ಜನ ವಿದ್ಯಾರ್ಥಿಗಳನ್ನು. ಈ ಇಪ್ಪತ್ತನಾಲ್ಕು ಜನರನ್ನು ಆಯ್ಕೆ ಮಾಡಿಕೊಳ್ಳುವಾಗ ಆರೋಗ್ಯ ಸಮಸ್ಯೆ ಇಲ್ಲದ ಕ್ರಿಮಿನಲ್ ಹಿನ್ನೆಲೆಯಿಲ್ಲದ, ಮಾನಸಿಕ ಸಮಸ್ಯೆ ಇಲ್ಲದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿರುತ್ತದೆ.

ಇಪ್ಪತ್ನಾಲ್ಕು ಜನರನ್ನು ತಲಾ ಎರಡು ತಂಡಗಳಾಗಿ ವಿಭಜಿಸಿ 12 ಜನರ ಒಂದು ತಂಡವನ್ನು ಸೆರೆವಾಸಿಗಳಾಗಿ, ಮತ್ತೊಂದು 12 ಜನರ ತಂಡವನ್ನು ಜೈಲರ್‍ಗಳಾಗಿ ವಿಭಾಗಿಸಲಾಗುತ್ತದೆ. ಯೂನಿವರ್ಸಿಟಿಯ ಸೆಲ್ಲರ್‍ನ್ನು ನಿಜವಾದ ಜೈಲಿನ ರೀತಿಯಲ್ಲಿ ಪರಿವರ್ತಿಸಿ ಸದರಿ ಪ್ರಯೋಗಕ್ಕೆ ಬಳಸಿಕೊಳ್ಳಲಾಗುತ್ತದೆ.

ಹನ್ನೆರಡು ಜನರ ಸೆರೆವಾಸಿಗಳಿಗೆ ಹೆಸರಿನ ಬದಲಾಗಿ ನಂಬರ್‍ಗಳನ್ನು, ಸೆರೆವಾಸಿಗಳ ಯೂನಿಫಾರಂನ್ನು ನೀಡಲಾಗಿರುತ್ತದೆ. ಅದೇ ರೀತಿ ಜೈಲರ್‍ಗಳಿಗೂ ಸಹ ನಿಜವಾದ ಜೈಲರ್‍ಗಳಿಗೆ ನೀಡಲಾಗುವ ಸಮವಸ್ತ್ರ ಮತ್ತು ಪರಿಕರಗಳನ್ನು ನೀಡಲಾಗುತ್ತದೆ.

ಜೊತೆಯಲ್ಲಿ ಊಟ ಮಾಡುತ್ತಿದ್ದ, ಜೊತೆಯಲ್ಲಿ ಪಾಠ ಕೇಳುತ್ತಿದ್ದ, ಜೊತೆಯಲ್ಲಿ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಗಳಲ್ಲಿನ ಒಂದು ತಂಡಕ್ಕೆ ‘ಅಧಿಕಾರ’ ಸಿಕ್ಕಕೂಡಲೇ ಯಾವ ರೀತಿಯಲ್ಲಿ ವರ್ತಿಸತೊಡಗುತ್ತಾರೆ ಎಂಬುದೇ ಪ್ರಯೋಗದ ಉದ್ದೇಶ.

ಸ್ವತಃ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಜೈಲಿನ ಸೂಪರಿಂಟೆಂಡೆಟ್ ಆಗಿ ಜೈಲರ್‍ಗಳನ್ನು ಮುನ್ನಡೆಸುತ್ತಿರುತ್ತಾನೆ. 15 ದಿನಗಳ ಕಾಲದ ಈ ಪ್ರಯೋಗ ಜೈಲರ್‍ಗಳ ಮಿತಿಮೀರಿದ ಅಧಿಕಾರದ ದುರ್ಬಳಕೆಯ ಕಾರಣ 6ನೇ ದಿವಸಕ್ಕೇ ಕೊನೆಯಾಗಬೇಕಾಗುತ್ತದೆ.

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

ಇವತ್ತು ದೇಶದಲ್ಲಿ ಒಟ್ಟಿಗೆ ಬೆಳೆದ, ಒಟ್ಟಿಗೆ ಆಟವಾಡಿದ, ಒಟ್ಟಿಗೆ ಬದುಕು ಕಟ್ಟಿಕೊಂಡ ಸ್ನೇಹಿತರ ನಡುವೆ ಜೈಲರ್‍ಗಳು ಮತ್ತು ಸೆರೆವಾಸಿಗಳು ಎಂಬ ಸ್ಪಷ್ಟವಾದ ವಿಭಾಗ ಉಂಟಾಗಿದೆ.

ಈ ಸೊಕಾಲ್ಡ್ ಜೈಲರ್‍ಗಳು ತಮ್ಮನ್ನು ತಾವೇ ಅಪರಿಮಿತ ಅಧಿಕಾರವುಳ್ಳ ದೇಶಭಕ್ತರೆಂದು, ಗೋರಕ್ಷಕರೆಂದೂ, ಈ ದೇಶದ ನಿಜವಾದ ರಕ್ಷಕರೆಂದೂ ಬಿಂಬಿಸಿಕೊಂಡಿದ್ದಾರೆ. ವಾಟ್ಸಾಪ್, ಫೇಸ್‍ಬುಕ್, ಸಮಾಜ ಎಲ್ಲಾ ಕಡೆ ತನ್ನ ರಾಜಕೀಯ ವಿರೋಧಿಗಳನ್ನು ತನ್ನ ವಿಚಾರಧಾರೆಯ ವಿರೋಧಿಗಳನ್ನು ಸೆರೆಯಾಳುಗಳ ರೀತಿಯಲ್ಲಿ ಭಾವಿಸಿ ಬಗ್ಗುಬಡಿಯಲೆತ್ನಿಸುತ್ತಿದ್ದಾರೆ. ಅವರುಗಳ ವಿರುದ್ಧ ಸುಳ್ಳುಗಳನ್ನು ಸೃಷ್ಟಿಸಿ ದೇಶವಿರೋಧಿಗಳು, ತುಕಡೆ ತುಕಡೆ ಗ್ಯಾಂಗ್, ಕಾಂಗಿ, ಕಮ್ಮಿ, ಹುಸಿ ಜಾತ್ಯಾತೀತರೆಂದು ಕರೆದು ವಿವಿಧ ರೀತಿಯ ಮಾನಸಿಕ ಹಿಂಸೆ ಮತ್ತು ಒತ್ತಡ ಹೇರುವ ಕೆಲಸದಲ್ಲಿ ನಿರತವಾಗಿದೆ.

ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್ (ಎಸ್.ಪಿ.ಎ) ಹದಿನೈದು ದಿನ ನಡೆಯಬೇಕಾದ ಪ್ರಯೋಗ ‘ಅಧಿಕಾರ’ದ ಅಪರಿಮಿತ ದುರ್ಬಳಕೆಯ ಕಾರಣ ಆರು ದಿವಸಕ್ಕೆ ಮುಕ್ತಾಯವಾಯಿತು. ಅದೇ ರೀತಿಯಲ್ಲಿ ಇಂದು ದೇಶದಲ್ಲಿ ನಡೆಯುತ್ತಿರುವ ಪ್ರಯೋಗ ಸಹ ಅದಷ್ಟು ಬೇಗ ಮುಕ್ತಾಯಗೊಳ್ಳಲಿ ಎಂಬುದಷ್ಟೇ ಸದ್ಯದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...