Homeಅಂಕಣಗಳುರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

ರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

- Advertisement -
- Advertisement -

ಕುಮಾರಸ್ವಾಮಿಯವರ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಸಂಯುಕ್ತ ಸರ್ಕಾರ ದಕ್ಷತೆಯಿಂದ ನಡೆಯಬೇಕೆಂಬುದು ನಮ್ಮೆಲ್ಲರ ಬಯಕೆ. ಎರಡೂ ಪಕ್ಷಗಳು ಕ್ಯಾತೆ ತೆಗೆದು ಬೀದಿ ಹಗರಣ ಮಾಡುವುದನ್ನು ಕೂಡಲೆ ಬಂದ್ ಮಾಡಬೇಕು. ಪ್ರಣಾಳಿಕೆಗಳ ಅನುಷ್ಠಾನ ಸಮಿತಿ ಹಾಗೂ ಸಮನ್ವಯ ಸಮಿತಿಗಳು ಅನುಷ್ಠಾನಕ್ಕೆ ಬಂದಿವೆ. ಈ ಎರಡು ಸಮಿತಿಗಳು ಕಾಲಕಾಲಕ್ಕೆ ಸಭೆ ಸೇರಿ ಮುಖ್ಯಮಂತ್ರಿಯವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಯಾವುದೇ ಕಾರಣಕ್ಕೆ ಶಾಸಕರಾಗಲಿ, ಮಂತ್ರಿಗಳಾಗಲಿ, ಪುಢಾರಿಗಳಾಗಲಿ ಸುದ್ದಿ ಮಾಧ್ಯಮ ಮತ್ತು ದೃಶ್ಯ ಮಾಧ್ಯಮಗಳಿಗೆ ದೂರುಕೊಡುವ ಹೇಳಿಕೆಗಳನ್ನು ನೀಡಬಾರದು. ಸಂಯುಕ್ತ ಸರ್ಕಾರದಲ್ಲಿ ತಪ್ಪುಗಳಾದಾಗ ಈ ಸಮಿತಿಗಳು ಮುಖ್ಯಮಂತ್ರಿಯವರನ್ನು ಕರೆದು ಕೂರಿಸಿಕೊಂಡು ಸೌಹಾರ್ದದಿಂದ ತಪ್ಪನ್ನು ಸರಿಪಡಿಸುವ ಕೆಲಸ ಆಗಬೇಕು.
ಈ ಸಂಯುಕ್ತ ಸರ್ಕಾರ ಆದರ್ಶ ರೀತಿಯಲ್ಲಿ ನಡೆಯಬೇಕು. ಉಭಯ ಪಕ್ಷಗಳಲ್ಲಿರುವ ಕಳಂಕಿತ ಶಾಸಕರಿಗೆ ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡದಂತೆ ತಾಕೀತು ಮಾಡಬೇಕು. ಕ್ರಿಮಿನಲ್ ಕೇಸುಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಸಚಿವರಿಗೆ ತಪ್ಪುದಾರಿಗೆ ಹೋದರೆ, ಭ್ರಷ್ಟಾಚಾರದಲ್ಲಿ ತೊಡಗಿದರೆ ಅಧಿಕಾರಿಗಳನ್ನು ದಾರಿತಪ್ಪಿಸಿದರೆ, ಅವರಿಗೆ ಮಾಡಬಾರದ್ದನ್ನು ಮಾಡಲು ಯತ್ನಿಸಿದರೆ ಕೂಡಲೇ ಅಂತಹ ಕಳಂಕಿತರನ್ನು ಮಂತ್ರಿಮಂಡಲದಿಂದ ಹೊರದೂಡಲು ಹಿಂದು-ಮುಂದು ನೋಡಬಾರದು. ಆಗ ರಾಜ್ಯಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ ಮತ್ತು ಈ ಎರಡೂ ಸಂಸ್ಥೆಗಳ ಬಗೆಗೆ ಮತದಾರರು ಒಲವು ತೋರಿಸುತ್ತಾರೆ.
ಮಂತ್ರಿಗಳ, ಶಾಸಕರ ತಪ್ಪುಗಳನ್ನು ಮುಚ್ಚಿ ಹಾಕಲು ಸರ್ಕಾರ ತೊಡಗಿದರೆ ಈ ಸರ್ಕಾರದ ಬಗೆಗೆ ಜನ ತಿರಸ್ಕಾರ ಸೂಚಿಸುತ್ತಾರೆ ಮತ್ತು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ. ಇದು ಜ್ಞಾಪಕವಿರರಲಿ.
ಭಾರತೀಯ ಜನತಾ ಪಕ್ಷ ರಣಹದ್ದಿನಂತೆ ಕಾಯುತ್ತಿದೆ. ಸರ್ಕಾರದಲ್ಲಿ ಒಡಕು ಬಂದು ಛಿದ್ರವಾಗಿ ಬಿಡಲಿ ಎಂದು ಭಜನೆ ಮಾಡುತ್ತಿದ್ದಾರೆ. ಆ ರಣಹದ್ದುಗಳಿಗೆ ಆಹಾರವಾಗದಂತೆ ನಡೆÀದುಕೊಳ್ಳಿ. ನೀವು ಅಧಿಕಾರ ಕಳೆದುಕೊಳ್ಳುವುದಷ್ಟೇ ಆದರೆ ಪ್ರಜೆಗಳಿಗೆ ಅಷ್ಟೇನೂ ನಷ್ಟವಿಲ್ಲ. ಆದರೆ ನಿಮ್ಮ ಕಾರ್ಯವಿಧಾನದಿಂದ ಸಾರ್ವಜನಿಕರು ತಲೆತಗ್ಗಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಕೊಡಬೇಡಿ.
ಮುಖ್ಯಮಂತ್ರಿಗಳಿಗೊಂದು ವಿನಂತಿ. ನೀವು ಯಾವುದೇ ಕಾರಣಕ್ಕೂ ನಿಮ್ಮ ಆಡಳಿತ ಕಳಂಕಿತವಾಗುವುದಕ್ಕೆ ಎಡೆ ಮಾಡಿಕೊಡಬೇಡಿ. ದುಷ್ಟ, ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಬೇಡಿ. ಲೋಕಾಯುಕ್ತರು, ಎಸಿಬಿ ಹಲವಾರು ಭ್ರಷ್ಟ ಅಧಿಕಾರಿಗಳು ನ್ಯಾಯಯುತರಾದವರಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವವರ ಮನೆಗಳ ಮೇಲೆ ದಾಳಿ ಮಾಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಅಧಿಕಾರಿಗಳ ಮೇಲೆ ಅಪರಾಧದ ಪಟ್ಟಿ ಸಿದ್ಧಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲು ಸರ್ಕಾರದ ಅನುಮತಿ ಕೇಳಿದ್ದಾರೆ. ಲೋಕಾಯುಕ್ತರ ಈ ಪಟ್ಟಿ ಸರ್ಕಾರಕ್ಕೆ ತಲುಪಿ ನಾಲ್ಕು ವರ್ಷಗಳೇ ಆಗಿದ್ದರೂ ಅವುಗಳನ್ನು ತಮ್ಮಲ್ಲೇ ಇಟ್ಟುಕೊಂಡು ಆ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಆ ಫೈಲುಗಳನ್ನು ತರಿಸಿ ಪರಾಂಬರಿಸಿ ಶೀಘ್ರದಲ್ಲೇ ಲೋಕಾಯುಕ್ತರಿಗೆ ಅವರ ಮೇಲೆ ಖಟ್ಲೆ ಹೂಡಬಹುದೆಂದು ಪತ್ರ ಬರೆಯಿರಿ. ಈ ಕೆಲಸ ಕೂಡಲೇ ನೀವು ಮಾಡಲಿಲ್ಲವಾದರೆ…? ನೀವೂ ಕೂಡ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದ್ದೀರಿ ಎಂಬ ಕಳಂಕ ಹೊರಬೇಕಾದೀತು.
ಎ.ಟಿ ರಾಮಸ್ವಾಮಿ ವರದಿಯನ್ನು ಸರ್ಕಾರ ಅಂಗೀಕರಿಸಿದ್ದರೂ ವರದಿಯಲ್ಲಿ ಉಲ್ಲೇಖಿತವಾಗಿರುವ ಯಾವ ಭೂಗಳ್ಳರಿಗೂ ಇದುವರೆಗೆ ಶಿಕ್ಷೆಯಾಗಿಲ್ಲ. ಈ ಭೂಗಳ್ಳರಲ್ಲಿ ಶಾಸಕರಿದ್ದಾರೆ. ಸರ್ಕಾರದ ಉನ್ನತಾಧಿಕಾರಿಗಳಿದ್ದಾರೆ, ಬಿಲ್ಡರ್‍ಗಳಿದ್ದಾರೆ, ರಿಯಲ್‍ಎಸ್ಟೇಟ್ ಮಾಫಿಯಾದವರಿದ್ದಾರೆ. ಈ ಹತ್ತು ವರ್ಷಗಳ ಕಾಲದಿಂದ ಅಧಿಕಾರದಲ್ಲಿದ್ದ ಯಾವ ಮಂತ್ರಿಯಾಗಲಿ, ಮುಖ್ಯಮಂತ್ರಿಯಾಗÀಲಿ ಈ ಹಗರಣಗಳನ್ನು ತೀವ್ರವಾಗಿ ಗಮನಿಸಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಎ.ಟಿ ರಾಮಸ್ವಾಮಿಯವರ ನೇತೃತ್ವದಲ್ಲಿ ನಾವು 39 ದಿನ ಸತತ ಧರಣಿ ನಡೆಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸಿದ್ದರಾಮಯ್ಯರನ್ನು ಒಪ್ಪಿಸಿದೆವು. ಅವರು ಅರೆಮನಸ್ಸಿನಿಂದ ನ್ಯಾಯಾಲಯ ಸ್ಥಾಪನೆ ಮಾಡಿಸಿ, ತಾವೇ ಅದರ ಉದ್ಘಾಟನೆಯನ್ನು ನೆರವೇರಿಸಿದರು. ಆದರೆ ಒಂದು ವರ್ಷಗಳ ಕಾಲ ನ್ಯಾಯಾಧೀಶರಿಗೆ ನೌಕರರಿಗೆ ಸಂಬಳವನ್ನೇ ನೀಡಲಿಲ್ಲ. ನ್ಯಾಯಾಲಯದ ಖರ್ಚಿಗೆ ಹಣ ಬಿಡುಗಡೆ ಮಾಡಲಿಲ್ಲ. ಅಷ್ಟೇ ಅಲ್ಲ, ಜಿಲ್ಲಾಧಿಕಾರಿಗಳು ಯಾವುದೇ ಕೇಸನ್ನು ಅವರ ಮುಂದೆ ಮಂಡಿಸಲಿಲ್ಲ. ಮೂರು ವರ್ಷದ ಅವಧಿಗೆ ನೇಮಕರಾದ ನ್ಯಾಯಾಧೀಶರು ಎರಡು ವರ್ಷಕಾಲ ನ್ಯಾಯಾಲಯವನ್ನು ನಡೆಸಲು ಸಾಧ್ಯವಾಯಿತು. ಈಗ ಈ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಅವಧಿ ಮುಗಿಯುತ್ತಾ ಬಂದಿದೆ. ಕುಮಾರಸ್ವಾಮಿಯವರು ಈ ಖಾಲಿಯಾಗುವ ಸ್ಥಾನಗಳಿಗೆ ದಕ್ಷರನ್ನು ಭರ್ತಿಮಾಡಿ ಎ.ಟಿ ರಾಮಸ್ವಾಮಿಯವರ ವರದಿಯಲ್ಲಿ ನಮೂದಾಗಿರುವ ಭೂಗಳ್ಳರ ವಿಚಾರಣೆಯನ್ನು ನಿಮ್ಮ ಅಧಿಕಾರದ ಅವಧಿಯಲ್ಲಿ ಮುಗಿಯಲು ಕ್ರಮ ಕೈಗೊಳ್ಳಬೇಕೆಂದು ಪ್ರಾರ್ಥನೆ.
ಭಾಜಪ ಸರ್ಕಾರ ನಡೆದಾಗ ವಿಶೇಷ ಜಿಲ್ಲಾಧಿಕಾರಿಗಳನ್ನು ಸರ್ಕಾರ ನೇಮಿಸಿತು. ಅವರೆಲ್ಲ ಬೆಂಗಳೂರು ನಗರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸರ್ಕಾರಕ್ಕೆ ಸೇರಿದ ಸುಮಾರು 40 ಸಾವಿರ ಎಕರೆ ಹುಲ್ಲುಗಾವಲು, ಕೆರೆ ಅಂಗಳ, ಗುಂಡುತೋಪು, ಖರಾಬ್ ಜಮೀನು ಕೊನೆಗೆ ಸ್ಮಶಾನಗಳನ್ನೂ ಹಂಚಿಬಿಟ್ಟರು. ಉಚ್ಛನ್ಯಾಯಾಲಯಕ್ಕೆ ವಿಶೇಷ ಜಿಲ್ಲಾಧಿಕಾರಿಗಳನ್ನು ಸೃಷ್ಟಿಸಿ ಅವರಿಗೆ ಜಿಲ್ಲಾಧಿಕಾರಿಗಳ ಅಧಿಕಾರ ನೀಡುವ ಅಧಿಕಾರವೇ ಇಲ್ಲ. ಅಲ್ಲದೆ ಕಾನೂನು ಮೀರಿ ನಡೆಯುವ ಈ ವಿಶೇಷ ಜಿಲ್ಲಾಧಿಕಾರಿಗಳು, cordoned the limelight in a prominent way. The frequency of their indulgence in passing arbitrary, whimsical and utracious orders have been passed ಎಂದು ಕರ್ನಾಟಕ ಉಚ್ಛನ್ಯಾಯಾಲಯ ತಿಳಿಸಿದೆ.
ಈಗ ಈ ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಗಳು ರದ್ದಾಗಿವೆ, ಅವರ ಸ್ಥಾನದಲ್ಲಿ ಇಬ್ಬರು ವಿಶೇಷ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅವರು ಮಂದಗತಿಯಲ್ಲಿ ತೆರವು ಕಾರ್ಯ ನಡೆಸುತ್ತಿದ್ದಾರೆ. ಅವರಿಗೆ ಒಂದು ನಿರ್ದಿಷ್ಟ ಕಾಲಾವಧಿಯಲ್ಲಿ ಈ ಕೆಲಸ ಮುಗಿಸಬೇಕೆಂದು ಕುಮಾರಸ್ವಾಮಿಯವರು ಅವರಿಗೆ ಆಜ್ಞೆ ಮಾಡಬೇಕು. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಪದೇಪದೇ ವರ್ಗಾವಣೆ ಮಾಡುತ್ತಿರುವುದೂ, ಶನಿವಾರ ದಿನ ಮಾತ್ರ ತೆರವುಗೊಳಿಸುವ ಕೆಲಸ ನಡೆಯುತ್ತಿರುವುದೂ ಈ ಕೆಲಸ ಸುಸೂತ್ರವಾಗಿ ನಡೆಯದಿರಲು ಕಾರಣವಾಗಿದೆ. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಈ ಕೆಲಸ ಮುಗಿಸುವವರೆಗೂ ವರ್ಗ ಮಾಡದೆ ಬಿಟ್ಟರೆ ಕ್ಷಿಪ್ರವಾಗಿ ಗುರಿಮುಟ್ಟಬಹುದು ಎಂಬುದು ನನ್ನ ಅನಿಸಿಕೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...