Homeರಾಜಕೀಯರಾಜಧಾನಿ ರಾಜಕಾರಣದಲ್ಲಿ ಕೈ ಸೇಫು , ಕಮಲ ಪಾಸು

ರಾಜಧಾನಿ ರಾಜಕಾರಣದಲ್ಲಿ ಕೈ ಸೇಫು , ಕಮಲ ಪಾಸು

- Advertisement -
- Advertisement -
  • ಟೀಮ್ ಗೌರಿ |

ರಾಜಧಾನಿ ಬೆಂಗಳೂರು ತನ್ನ ವಿಧಾನಸಭಾ ಕ್ಷೇತ್ರಗಳನ್ನು 28ಕ್ಕೆ ಏರಿಸಿಕೊಂಡ ಮೇಲೆ ಎಲ್ಲಾ ಚುನಾವಣೆಗಳಲ್ಲೂ ನಿರ್ಣಾಯಕ ಪಾತ್ರ ನಿರ್ವಹಿಸಿಕೊಂಡು ಬಂದಿದೆ. 2008 ರಲ್ಲಿ ಜೆಡಿಎಸ್ 20-20 ಸರ್ಕಾರ ಬಿದ್ದು, ಚುನಾವಣೆ ನಡೆದಾಗ ಕೇಸರಿ ಅಲೆಯಲ್ಲಿ ತೇಲಿ ಹೋಗಿದ್ದ ಉದ್ಯಾನನಗರಿ ಬಿಜೆಪಿಗೆ 17 ಸ್ಥಾನಗಳನ್ನು ನೀಡಿತ್ತು. ವಚನಭ್ರಷ್ಟ ಎಂಬ ಪಟ್ಟ ಕಟ್ಟಿಕೊಂಡಿದ್ದ ಗೌಡರ ಜೆಡಿಎಸ್ ಕೇವಲ 1 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರೆ ಕಾಂಗ್ರೆಸ್ 10 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿತ್ತು. ಕಳೆದ 2013 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 13, ಬಿಜೆಪಿ 12 ಮತ್ತು ಜೆಡಿಎಸ್ 3 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದ್ದವು. ಒಂದು ಕಡೆ ನುಡಿದಂತೆ ನಡೆದಿದ್ದೇವೆ ಮತ್ತೊಮ್ಮೆ ಕಾಂಗ್ರೆಸ್ ಎಂದು ಹೊರಟಿರುವ ಸಿದ್ದರಾಮಯ್ಯ ಪಡೆ ಸ್ಪಷ್ಟ ಬಹುಮತ ಸಿಗಬೇಕಾದರೆ ಐಟಿ ಸಿಟಿಯ ಬಹುಸಂಸ್ಕೃ ತಿ ಮತ್ತು ಬಹುಭಾಷಾ ಜನರನ್ನು ಮನ ಗೆಲ್ಲುವುದು ಅತಿ ಅವಶ್ಯ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿಯನ್ನೇ ನೆಚ್ಚಿಕೊಂಡು ಹೋರಾಟ ಮಾಡುತ್ತಿರುವ ಭಾರತೀಯ ಜನತಾ ಪಕ್ಷಕ್ಕೆ ಬೆಂಗಳೂರು ಕೋಟೆಯನ್ನು ಬೇಧಿಸುವುದು ಸುಲಭ ಸಾಧ್ಯವಲ್ಲ. ಯಾಕೆಂದರೆ ಗಾರ್ಡನ್ ಸಿಟಿಯನ್ನು ಗಾರ್ಬೇಜ್ ಸಿಟಿಯಾಗಿ ಮಾಡಿ ಅಪಖ್ಯಾತಿ ಗಳಿಸಿದ ಸಾಧನೆ ಬಿಜೆಪಿಯದ್ದು. ಜಮೀರ್ ಮತ್ತು ಅಖಂಡ ಶ್ರೀನಿವಾಸರನ್ನು ಕಳೆದುಕೊಂಡ ಜಾತ್ಯಾತೀತ ಜನತಾ ದಳಕ್ಕೆ ಈಗ ಉಳಿದಿರುವುದು ಗೋಪಾಲಯ್ಯ ಮಾತ್ರ.

ಝಮೀರ್

ರಾಜ್ಯ ಪೂರ್ತಿ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆಯುತ್ತಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಆದರೆ ಬೆಂಗಳೂರು ಮಹಾನಗರದಲ್ಲಿ ಸಂಪೂರ್ಣವಾಗಿ ಜಾತಿ ಲೆಕ್ಕಾಚಾರದಡಿಯಲ್ಲಿ ಚುನಾವಣೆ ನಡೆಯದಿದ್ದರೂ ಅದನ್ನು ಅಲ್ಲಗಳೆಯಲಾಗುವುದಿಲ್ಲ.

ವೈಟ್ ಟಾಪಿಂಗ್ ರಸ್ತೆಗಳು, ಇಂದಿರಾ ಕ್ಯಾಂಟೀನ್ ಜೊತೆಗೆ ಹಲವಾರು ಭಾಗ್ಯಗಳನ್ನು ಕರುಣಿಸಿರುವ ಸಿದ್ದರಾಮಯ್ಯ ಸರ್ಕಾರದ ಮೇಲೆ ಯಾವುದೇ ಗುರುತರ ಆರೋಪಗಳಿಲ್ಲದಿರುವುದು ಬಿಗ್ ಪ್ಲಸ್‍ಪಾಯಿಂಟ್. ಮೂವರು ಮುಖ್ಯಮಂತ್ರಿಗಳನ್ನು ಕಂಡ ಬಿಜೆಪಿಯ ಅಧಿಕಾರಾವಧಿಯಲ್ಲಿ ಬೃಹತ್ ಮಹಾನಗರ ಪಾಲಿಕೆ ಸಾಲದ ಸುಳಿಯಲ್ಲಿ ಸಿಲುಕಿ ಐತಿಹಾಸಿಕ ಕಟ್ಟಡಗಳನ್ನು ಒತ್ತೆ ಇಟ್ಟಿದ್ದು ಜನರ ಮನಸ್ಸಿನಿಂದ ಇನ್ನೂ ಮರೆಯಾಗಿಲ್ಲ. ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಉದ್ಯಾನನಗರಿ ಗಾರ್ಬೇಜ್ ಸಿಟಿಯಾಗಿ ಜಗದ್ವಿಖ್ಯಾತವಾಗಿದ್ದನ್ನು ಜನರು ಇನ್ನೂ ಮಾತನಾಡಿಕೊಳ್ಳುತ್ತಿರುವುದು ಯಡ್ಡಿ ಬಳಗಕ್ಕೆ ಹಿನ್ನಡೆಯಾಗಿದೆ. ಜೊತೆಗೆ ಜೆಡಿಎಸ್‍ನ ಜಮೀರ್ ಅಹಮದ್ ಮತ್ತು ಅಖಂಡ ಶ್ರೀನಿವಾಸ್ ರವರು ಕಾಂಗ್ರೆಸ್ಸಿಗೆ ಪಕ್ಷಾಂತರವಾಗಿರುವ ಕಾರಣ ಕಾಂಗ್ರೆಸ್ಸಿಗೆ ಬಲ ಬಂದಿದೆ ಎಂದು ಮೇಲ್ನೋಟಕ್ಕೆ ಅನಿಸುತ್ತಿದೆ.

ಆರ್.ಅಶೋಕ್

ಈ ಎಲ್ಲಾ ಲೆಕ್ಕಾಚಾರಗಳನ್ನು ಬದಿಗಿಟ್ಟು ನೋಡಿದರೂ ಬೆಂಗಳೂರಿನ ಬಹಳಷ್ಟು ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ನಿರ್ಧರಿಸುವುದು ಜೆಡಿಎಸ್‍ನ ದೊಡ್ಡ ಗೌಡರು ಎಂದರೆ ತಪ್ಪಾಗಲಾರದು. ಜಾತಿ ಲೆಕ್ಕಾಚಾರದ ಚಾಣಾಕ್ಷ ದೇವೇಗೌಡ ಒಂದೆಡೆ ಬಿಜೆಪಿ ಅಶೋಕ್ ಗೆಲುವಿಗೆ ನೆರವಾದರೆ ಇನ್ನೊಂದೆಡೆ ತಮ್ಮನ್ನು ಬಿಟ್ಟುಹೋದ ಜಮೀರ್ ಅಹಮದ್ ರನ್ನು ಸೋಲಿಸುವ ರಣತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ.

ನಗರದ ಪ್ರಮುಖ ನಾಯಕರುಗಳಾದ ಬಿಜೆಪಿಯ ಪದ್ಮನಾಭನಗರದ ಕ್ಷೇತ್ರದ ಆರ್ ಅಶೋಕ್, ಬೆಂಗಳೂರು ದಕ್ಷಿಣ ಕ್ಷೇತ್ರದ ಎಂ.ಕೃಷ್ಣಪ್ಪ, ಯಲಹಂಕ ಕ್ಷೇತ್ರದ ಎಸ್.ಆರ್.ವಿಶ್ವನಾಥ್ ಮತ್ತು ಬೊಮ್ಮನಹಳ್ಳಿ ಕ್ಷೆತ್ರದ ಸತೀಶ್ ರೆಡ್ಡಿ, ಕಾಂಗ್ರೆಸ್ಸಿನ ಬ್ಯಾಟರಾಯನಪುರ ಕ್ಷೇತ್ರದ ಕೃಷ್ಣ ಬೈರೇಗೌಡ, ಗಾಂಧಿನಗರ ಕ್ಷೇತ್ರದ ದಿನೇಶ್ ಗುಂಡೂರಾವ್, ಬಿಟಿಎಂ ಬಡಾವಣೆ ಕ್ಷೇತ್ರದ ರಾಮಲಿಂಗಾರೆಡ್ಡಿ, ಶಾಂತಿನಗರ ಕ್ಷೇತ್ರದ ಹ್ಯಾರಿಸ್, ಸರ್ವಜ್ಞನಗರ ಕ್ಷೇತ್ರದ ಕೆ.ಜೆ ಜಾರ್ಜ್ ಮತ್ತು ಚಾಮರಾಜಪೇಟೆ ಕ್ಷೇತ್ರದ ಜಮೀರ್ ಅಹಮದ್ ಜೊತೆಗೆ ಜೆಡಿಎಸ್‍ನ ಮಹಾಲಕ್ಷ್ಮಿ ಬಡಾವಣೆ ಕ್ಷೇತ್ರದ ಗೋಪಾಲಯ್ಯ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಸ್ಪಷ್ಟ ಮುನ್ನಡೆಯಲ್ಲಿದ್ದಾರೆ.

ದಿನೇಶ್ ಗುಂಡೂರಾವ್

ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿಗಳಾದ ಚಿಕ್ಕಪೇಟೆ ಕ್ಷೇತ್ರದಲ್ಲಿ ಆರ್. ವಿ. ದೇವರಾಜ್, ವಿಜಯನಗರ ಕ್ಷೇತ್ರದಲ್ಲಿ ಎಂ. ಕೃಷ್ಣಪ್ಪ, ಗೋವಿಂದರಾಜನಗರ ಕ್ಷೇತ್ರದಲ್ಲಿ ಪ್ರಿಯಾ ಕೃಷ್ಣ, ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ, ಶಿವಾಜಿನಗರದ ಕ್ಷೇತ್ರದಲ್ಲಿ ರೋಷನ್ ಬೇಗ್, ಬಿಜೆಪಿ ಅಭ್ಯರ್ಥಿಯಾದ ಬಸವನಗುಡಿ ಕ್ಷೇತ್ರದಲ್ಲಿ ರವಿ ಸುಬ್ರಮಣ್ಯ, ತಮ್ಮ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳುವತ್ತ ದಾಪುಗಾಲು ಹಾಕಿದ್ದಾರೆ.

ಇದರ ಮಧ್ಯೆಯೂ ಕೆಲವು ಪ್ರಮುಖ ನಾಯಕರು ಸೋಲಿನ ಭೀತಿ ಎದುರಿಸುತ್ತಿದ್ದಾರೆ. ಪ್ರಮುಖವಾಗಿ ಕಳೆದ ಬಾರಿ ಕಡಿಮೆ ಅಂತರದಲ್ಲಿ ಗೆದ್ದಿದ್ದ ಬಿಜೆಪಿಯ ಹೆಬ್ಬಾಳದ ಜಗದೀಶ್ ಕುಮಾರ್, ಸಿ.ವಿ.ರಾಮನ್ ನಗರದ ರಘು ಮತ್ತು ಮಹದೇವಪುರದ ಅರವಿಂದ ಲಿಂಬಾವಳಿ, ಗೋವಿಂದರಾಜನಗರದ ವಿ.ಸೋಮಣ್ಣ, ಮಾಜಿ ಕಾನೂನು ಸಚಿವರಾದ ರಾಜಾಜಿನಗರದಲ್ಲಿ ಸುರೇಶ್ ಕುಮಾರ್, ಕಾಂಗ್ರೆಸ್ಸಿನ ಕೆ.ಆರ್.ಪುರಂ ಕ್ಷೇತ್ರದ ಬೈರತಿ ಬಸವರಾಜ್, ಯಶವಂತಪುರದಲ್ಲಿ ಸೋಮಶೇಖರ್ ತಮ್ಮ ಎದುರಾಳಿಗಳಿಂದ ಸೋಲುವ ಹೊಸ್ತಿಲಿನಲ್ಲಿದ್ದಾರೆ.

ಹಾಗಾಗಿ ಈ ಚುನಾವಣೆಯಲ್ಲಿ ಬೆಂಗಳೂರು, ಕಾಂಗ್ರೆಸ್ ಪಕ್ಷಕ್ಕೆ ವರವಾಗಿ ಪರಿಣಮಿಸುವ ಸಾಧ್ಯತೆಗಳು ಹೆಚ್ಚಿವೆ. ಆದಾಗ್ಯೂ ಬಿಜೆಪಿ ಮತ್ತು ಜೆಡಿಎಸ್ ಹಲವೆಡೆ ಪ್ರಬಲ ಪೈಪೋಟಿ ನೀಡುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಬಿಜೆಪಿ ಕಳೆದ ಬಾರಿಯ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ತಿಣುಕಾಡುತ್ತಿರುವುದು ಎದ್ದು ಕಾಣುತ್ತಿದೆಯಲ್ಲದೆ ಎರಡು ಮೂರು ಸೀಟುಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿಯೂ ಇದೆ. ಪ್ರಧಾನಿ ಮೋದಿಯವರ ಭಾಷಣಗಳೂ ಸಹ ಬಿಜೆಪಿ ಕೈಹಿಡಿಯುವ ಸಾಧ್ಯತೆಗಳು ಕಾಣುತ್ತಿಲ್ಲ. ಜೆಡಿಎಸ್‍ಗೆ ಬಂಡಾಯ ಅಭ್ಯರ್ಥಿಗಳನ್ನು ಸೋಲಿಸುವುದೇ ದೊಡ್ಡ ವಿಚಾರವಾಗಿದೆ. ಈ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗಿಟ್ಟಿಸಿಕೊಳ್ಳುವುದು ಖಚಿತವಾಗುತ್ತಿದೆ.

ಬೆಂಗಳೂರು ಗ್ರಾಮಾಂತರ

ಎಂ.ಟಿ.ಬಿ. ನಾಗರಾಜ್

ಹೊಸಕೋಟೆಯಲ್ಲಿ ಬಚ್ಚೇಗೌಡರು ಸುದೀರ್ಘ ಕಾಲದ ರಾಜಕೀಯ ಜೀವನದಿಂದ ವಿಶ್ರಾಂತಿ ತೆಗೆದುಕೊಂಡು ಮಗ ಶರತ್‍ಗೆ ಬಿಜೆಪಿಯಿಂದ ಟಿಕೆಟ್ ಕೊಡಿಸಿದ್ದಾರೆ. ಬಚ್ಚೇಗೌಡರನ್ನು ಎರಡು ಬಾರಿ ಮಣಿಸಿದ್ದ ಎಂಟಿಬಿ ನಾಗರಾಜ್ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದಾರೆ. ಉಳಿದ ಸ್ಪರ್ಧಿಗಳು ಲೆಕ್ಕಕ್ಕಿಲ್ಲ. ಇಬ್ಬರಲ್ಲಿ ಯಾರು ಗೆಲ್ಲುತ್ತಾರೆಂಬುದಕ್ಕೆ ಫಲಿತಾಂಶದ ದಿನದವರೆಗೂ ಕಾಯಬೇಕು.

ದೇವನಹಳ್ಳಿಯಲ್ಲಿ ಹಾಲಿ ಶಾಸಕ ಜೆಡಿಎಸ್‍ನ ಪಿಳ್ಳಮುನಿಶಾಮಪ್ಪ ಮತ್ತು ಕಾಂಗ್ರೆಸ್‍ನ ವೆಂಕಟಸ್ವಾಮಿಯ ಜೊತೆಗೆ ಬಿಜೆಪಿಯ ನಾಗೇಶ್ ಸಹಾ ಸ್ಪರ್ಧಿಸಿದ್ದಾರೆ. ಆದರೆ, ಜೆಡಿಎಸ್ ಮತ್ತು ಕಾಂಗ್ರೆಸ್‍ನ ನಡುವಿನ ಸ್ಪರ್ಧೆಯ ನಡುವೆ ಈ ಸಾರಿ ಕಾಂಗ್ರೆಸ್‍ಗೆ ಹೆಚ್ಚಿನ ಸಾಧ್ಯತೆ ಇದೆ.

ದೊಡ್ಡಬಳ್ಳಾಪುರದಲ್ಲಿ ಹಾಲಿ ಶಾಸಕ ಕಾಂಗ್ರೆಸ್‍ನ ವೆಂಕಟರಮಣಪ್ಪ ಮತ್ತು ಜೆಡಿಎಸ್‍ನಿಂದ ಈ ಸಾರಿ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಮುನೇಗೌಡರ ನಡುವೆ ಸ್ಪರ್ಧೆಯಿದೆ. ಬಿಜೆಪಿಯ ನರಸಿಂಹಸ್ವಾಮಿ ಮೂರನೇ ಸ್ಥಾನಕ್ಕೆ ಹೋಗುತ್ತಾರೆ.

ನೆಲಮಂಗಲದಲ್ಲಿ ಕಾಂಗ್ರೆಸ್‍ನ ನಾರಾಯಣಸ್ವಾಮಿ, ಬಿಜೆಪಿಯ ಎಂ.ವಿ.ನಾಗರಾಜು ಮತ್ತು ಜೆಡಿಎಸ್‍ನಿಂದ ಹಾಲಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಸ್ಪರ್ಧಿಸಿದ್ದಾರೆ. ಮೂರನೆಯ ಸ್ಥಾನದಲ್ಲಿದ್ದ ಬಿಜೆಪಿಯ ಹವಾ ಈಗ ಸ್ವಲ್ಪ ಹೆಚ್ಚಾಗಿದ್ದರೂ, ಹೆಚ್ಚಿನ ಸ್ಪರ್ಧೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಇದೆ. ಕಾಂಗ್ರೆಸ್ ಗೆಲ್ಲುವ ಸಾಧ್ಯತೆಯೇ ಹೆಚ್ಚು. ಜಿಲ್ಲೆಯ ಒಟ್ಟು ನಾಲ್ಕು ಸ್ಥಾನಗಳಲ್ಲಿ 2 ಜೆಡಿಎಸ್, 1 ಕಾಂಗ್ರೆಸ್ ಮತ್ತು 1 ಬಿಜೆಪಿ ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...