Homeಎಂಟರ್ತೈನ್ಮೆಂಟ್ರಾಜ್ - ಎಂದೂ ಮಾಸದ ನೆನಪು: ಭವಾನಿ ಕ್ಯಾಮರಾ ಕಣ್ಣಲ್ಲಿ ರಾಜ್!

ರಾಜ್ – ಎಂದೂ ಮಾಸದ ನೆನಪು: ಭವಾನಿ ಕ್ಯಾಮರಾ ಕಣ್ಣಲ್ಲಿ ರಾಜ್!

- Advertisement -
- Advertisement -

ವರನಟ ಡಾ.ರಾಜಕುಮಾರ್ ಅಗಲಿ ಇಂದಿಗೆ ಹದಿನಾಲ್ಕು ವರ್ಷ. ಏಕೀಕರಣದ ನಂತರ ಕನ್ನಡ ನಾಡು-ನುಡಿಯ ಬಗ್ಗೆ ಕನ್ನಡಿಗರಲ್ಲಿ ಒಲವು ಮೂಡಿಸಿದ ಸಾಂಸ್ಕೃತಿಕ ವ್ಯಕ್ತಿತ್ವ ರಾಜ್. ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಅವರು ರಾಜ್ ಅವರ ಆತ್ಮೀಯರೊಲ್ಲಬ್ಬರು. ತಾವು ಕಂಡ ನಟನನ್ನು ಅಪರೂಪದ ಸಂದರ್ಭಗಳೊಂದಿಗೆ ಅವರಿಲ್ಲಿ ಸ್ಮರಿಸಿಕೊಂಡಿದ್ದಾರೆ.

ನಾನು ರಾಜ್‌ರ ನೂರಾರು ಫೋಟೋಗಳನ್ನು ಸೆರೆಹಿಡಿದ್ದೇನೆ. ಸೂಕ್ಷ್ಮವಾಗಿ ಗಮನಿಸಿ ನೋಡಿದರೆ, ಪ್ರತೀ ಚಿತ್ರದಲ್ಲೂ ಅವರಲ್ಲಿನ ಸರಳತೆ ಕಾಣಿಸುತ್ತದೆ. ನಾನು ಹತ್ತಾರು ವರ್ಷಗಳ ಕಾಲ ಕಂಡಂತೆ ಸೆಟ್‌ನಲ್ಲೂ ಅವರು ಎಲ್ಲರೊಂದಿಗೂ ಸರಳವಾಗಿ ಬೆರೆಯುತ್ತಿದ್ದರು. ಸಹಕಲಾವಿದರೊಂದಿಗೆ ಅವರದು ಉತ್ತಮ ಬಾಂಧವ್ಯ. ಹಿರಿಯರನ್ನು ಗೌರವಿಸುತ್ತಿದ್ದ ರಾಜ್, ಕಿರಿಯರಿಗೆ ಸಲಹೆ – ಸೂಚನೆ ಕೊಡುತ್ತಿದ್ದರು. ಕ್ಯಾಮರಾ ಎದುರು ಕೂಡ ಅವರು ಅಷ್ಟೇ ಸಂಯಮಿ. ಟೇಕ್ ಹೆಚ್ಚಾದರೆ ಒಂದಿಷ್ಟೂ ಬೇಸರಿಸಿಕೊಳ್ಳದೆ ಮತ್ತೊಂದು ಟೇಕ್‌ಗೆ ರೆಡಿಯಾಗುತ್ತಿದ್ದರು. ತಪ್ಪನ್ನು ಒಪ್ಪಿಕೊಳ್ಳುವ ಗುಣ ಅವರದು. ಸನ್ನಿವೇಶ ಮತ್ತಷ್ಟು ಚೆನ್ನಾಗಿ ಮೂಡಿಬರಬೇಕೆಂದು ನಿರ್ದೇಶಕರ ಸಲಹೆಯನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸುತ್ತಿದ್ದರು. ಅವರು ನಿರ್ದೇಶಕರಿಗೆ ಎದುರಾಡಿದ್ದನ್ನು ನಾನಂತೂ ಒಮ್ಮೆಯೂ ನೋಡಿಲ್ಲ. ಶೂಟಿಂಗ್ ಬಿಡುವಿನ ವೇಳೆಯಲ್ಲಿ ನಾನು ಕೊಡುತ್ತಿದ್ದ ತೊಂದರೆಗೂ ಅವರು ಬೇಸರ ಮಾಡಿಕೊಂಡವರಲ್ಲ. ಒಳ್ಳೆಯ ಮೂಡ್‌ನ ನಿರೀಕ್ಷೆಯಲ್ಲಿರುವ ಛಾಯಾಗ್ರಾಹಕನಿಗೆ ಮತ್ತೇನು ಬೇಕು ಹೇಳಿ?

ಕೂಸು ಮರಿ

ನಾನು ನೋಡಿದಂತೆ ರಾಜ್ ಮತ್ತು ಚಿತ್ರಸಾಹಿತಿ ಚಿ.ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು? ರಾಜ್‌ರನ್ನು ಹತ್ತಿರದಿಂದ ಒಡನಾಡಿದ್ದರಿಂದ ಅವರ ಇಮೇಜ್‌ಗೆ ಸರಿಹೊಂದುವಂತೆ ಬರೆಯಲು ಉದಯಶಂಕರ್ ಅವರಿಗೆ ಸಾಧ್ಯವಾಗಿರಬಹುದು. ರಾಜ್ ಸಿನಿಮಾಗಳ ಚಿತ್ರೀಕರಣಗಳಿಗೆ ಹೋದ ಬಹಳಷ್ಟು ಸಂದರ್ಭಗಳಲ್ಲಿ ಚಿ.ಉದಯಶಂಕರ್ ಅವರನ್ನು ಭೇಟಿಯಾಗಿದ್ದೇನೆ. ಸಾಕಷ್ಟು ಬಾರಿ ಅವರು ನನ್ನ ಕ್ಯಾಮರಾಗೆ ರೂಪದರ್ಶಿಯಾಗಿದ್ದಾರೆ.

ನಂದಿಬೆಟ್ಟದಲ್ಲೊಮ್ಮೆ ರಾಜ್ ಮತ್ತು ಉದಯಶಂಕರ್ ಜೋಡಿಯ ಚಿತ್ರ ತೆಗೆದದ್ದು ನನಗೆ ಬಹುವಾಗಿ ಕಾಡುತ್ತದೆ. ರಾಜ್‌ರ ಚಿತ್ರವೊಂದಕ್ಕೆ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಚಿ.ಉದಯಶಂಕರ್ ಕೂಡ ಸೆಟ್‌ನಲ್ಲಿದ್ದರು. ನಾನಲ್ಲಿಗೆ ಹೋದಾಗ ಇಬ್ಬರೂ ಸನ್ನಿವೇಶವೊಂದರ ಬಗ್ಗೆ ಚರ್ಚಿಸುತ್ತಿದ್ದರೆಂದು ಕಾಣುತ್ತದೆ. ಅವರ ಗಂಭೀರ ಮಾತುಕತೆ ಮುಗಿಯುತ್ತಿದ್ದಂತೆ ನಾನಲ್ಲಿಗೆ ಹೋದೆ. ಅಪರೂಪದ ಪೋಸ್ ಬೇಕೆಂದಾಗ, ಉತ್ಸಾಹಿ ರಾಜ್ ಕ್ಷಣಕಾಲ ಯೋಚಿಸಿದರು.ಉದಯಶಂಕರ್‌ರನ್ನು ಕೂಸು ಮರಿ ಮಾಡಿದರೆ ಹೇಗೆ?’ ಎಂದು ಕೇಳಿದ ರಾಜ್, ಅದಕ್ಕೆ ಸಜ್ಜಾದರು. ಚಿ.ಉದಯಶಂಕರ್ ನಗುತ್ತಲೇ ರಾಜ್ ಬೆನ್ನೇರಿದರು. ಸ್ಥೂಲಕಾಯದ ಅವರನ್ನು ಹೊರುತ್ತಲೇ ರಾಜ್ ಒಂದೆಡೆ ಕೊಂಚ ವಾಲಿದರು. ಆಕಸ್ಮಾತ್ ಇಬ್ಬರೂ ಬಿದ್ದರೇನು ಗತಿ ಎಂದು ನನಗೆ ಗಾಬರಿಯಾಯ್ತು. ಯಾಕಾದರೂ ಭಿನ್ನ ಪೋಸ್ ಕೊಡಿ ಎಂದು ಕೇಳಿದೆನೋ ಎಂದು ಪರಿತಪಿಸಿದೆ. ಹಾಗೇನೂ ಆಗಲಿಲ್ಲ. ರಾಜ್ ತಮ್ಮ ಸ್ನೇಹಿತನನ್ನು ಕೂಸು ಮರಿ ಮಾಡುವ ಅಪರೂಪದ ಪೋಸ್ ನನ್ನ ಕ್ಯಾಮರಾಗೆ ದಕ್ಕಿತು. ಮುಂದೆ ಈ ಫೋಟೋ ನೋಡಿ ಅವರಿಬ್ಬರೂ ತುಂಬಾ ಖುಷಿಪಟ್ಟಿದ್ದರು.

ರಾಜ್ ನೃತ್ಯಕ್ಕೆ ಮನಸೋತ ಹನುಮ!

ನಂದಿಬೆಟ್ಟದಲ್ಲಿ ರಾಜ್ ಸಿನಿಮಾಗೆ ಚಿತ್ರೀಕರಣ ನಡೆಯಲಿದೆ ಎನ್ನುವ ವಿಷಯ ಕಿವಿಗೆ ಬಿದ್ದಿತ್ತು. ಯಾವ ಸಿನಿಮಾ ಎನ್ನುವ ಕುತೂಹಲದಿಂದಲೇ ಹೋಗಿದ್ದೆ. ಸೆಟ್‌ಗೆ ಹೋಗುತ್ತಿದ್ದಂತೆ ನೃತ್ಯ ನಿರ್ದೇಶಕ ಉಡುಪಿ ಜಯರಾಂ ಎದುರಾದರು. `ಓ, ನೀವು ಬಂದ್ಬಿಟ್ರಾ, ಇನ್ನು ಅಣ್ಣಾವ್ರು ನಮಗೆ ಸಿಗೋಲ್ಲ ಬಿಡಿ..’ ಎಂದು ನಗುತ್ತಲೇ ನನ್ನನ್ನು ಸ್ವಾಗತಿಸಿದರು. ಅವರೊಂದಿಗೆ ಲೋಕಾಭಿರಾಮವಾಗಿ ಮಾತನಾಡುತ್ತಿರುವಾಗ ನಿರ್ದೇಶಕ ಗೀತಪ್ರಿಯ ಅವರ ಪದಾರ್ಪಣೆಯಾಯ್ತು. ರಾಜ್ ಅಭಿನಯದ `ಭೂಪತಿ ರಂಗ’ ಸಿನಿಮಾ ಹಾಡಿನ ಚಿತ್ರೀಕರಣ ಎನ್ನುವುದು ಗೊತ್ತಾಯಿತು. ಕೊಂಚ ಹೊತ್ತಿನಲ್ಲಿಯೇ ಶಾಟ್‌ಗೆ ಸಿದ್ಧರಾಗಿ ರಾಜ್ ನನ್ನೆಡೆ ಕೈಬೀಸುತ್ತಾ ಬಂದರು.
ತಮಿಳಿನಲ್ಲಿ ಆಗ ಹೆಸರು ಮಾಡಿದ್ದ ಉದಯ ಚಂದ್ರಿಕಾ ಈ ಚಿತ್ರದ ನಾಯಕಿ. ರಾಜ್ – ಉದಯ ಚಂದ್ರಿಕಾ ಜೋಡಿಯ `ಓಹೋ ಮುದ್ದಿನ ಮಲ್ಲಿಗೆ..’ ಯುಗಳ ಗೀತೆಗೆ ಅಂದು ಚಿತ್ರೀಕರಣ ನಡೆದದ್ದು. ಮಧ್ಯಾಹ್ನದಿಂದ ಸಂಜೆ ನಾಲ್ಕರವರೆಗೆ ಸತತವಾಗಿ ಚಿತ್ರೀಕರಣ ನಡೆಸಿದರು. ಕೊನೆಯಲ್ಲೊಂದು ತಮಾಷೆ ನಡೆಯಿತು. ಆಗ ನಂದಿ ಬೆಟ್ಟದಲ್ಲಿ ಕೋತಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ರಾಜ್ ಮುಂದಿನ ಶಾಟ್‌ಗೆಂದು ಕ್ಯಾಮರಾ ಎದುರು ಬರುತ್ತಿದ್ದಂತೆ ಕೋತಿಯೊಂದು ಅವರ ಬಳಿ ಓಡಿಬಂತು. ಚಿತ್ರತಂಡದ ಹುಡುಗರು ಓಡಿಸಿದರೂ ಅದು ಹೋಗಲೊಲ್ಲದು. ತಮ್ಮ ಕಾಲ ಬಳಿಯೇ ಸುಳಿದಾಡುತ್ತಿದ್ದ ಕೋತಿಯನ್ನು ರಾಜ್ ಪ್ರೀತಿಯಿಂದ ಮಾತನಾಡಿಸತೊಡಗಿದರು. ಕ್ಯಾಮರಾಮನ್ ಪಿ.ಎಸ್.ಪ್ರಕಾಶ್ ತಮ್ಮ ಕ್ಯಾಮರಾ ಆಫ್ ಮಾಡಿ ನಗುತ್ತಾ ಕುಳಿತರು. ನಾನು ಕ್ಯಾಮರಾ ಎತ್ತಿಕೊಂಡು ಅಲ್ಲಿಗೆ ಓಡಿದೆ. ಕೋತಿ ಎದುರು ರಾಜ್ ನೃತ್ಯದ ಬಂಗಿಯಲ್ಲಿ ಕೊಟ್ಟ ಪೋಸುಗಳನ್ನು ಕ್ಲಿಕ್ಕಿಸಿಕೊಂಡೆ. ಹೀಗೆ, ರಾಜ್ ಅವರೊಂದಿಗಿನ ಒಡನಾಟ ನನ್ನ ಬದುಕಿನ ಮಧುರ ನೆನಪುಗಳಾಗಿ ಉಳಿದಿವೆ.

ನಿರೂಪಣೆ: ಶಶಿಧರ ಚಿತ್ರದುರ್ಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...