Homeರಾಜಕೀಯರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

- Advertisement -
- Advertisement -

ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ ಹಿಂದೆಂದಿಗಿಂತಲೂ ಆಘಾತಕಾರಿಯಾದುದು. ಮೋದಿ ಸರ್ಕಾರವು ಹಸೀ ಹಸೀ ಸುಳ್ಳನ್ನು ಸುಪ್ರಿಂಕೋರ್ಟಿಗೇ ಹೇಳಲಾಗಿದೆ.

ಹೌದು, ಇಂದು ರಾಫೇಲ್ ವಿಚಾರದಲ್ಲಿ ಸುಪ್ರೀಂಕೋರ್ಟು ತೀರ್ಪು ಹೊರಬಿದ್ದ ನಂತರ ಚುನಾವಣಾ ಸೋಲಿನಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತು ಗೋದಿ ಮೀಡಿಯಾಗೆ ಇದ್ದಕ್ಕಿದ್ದಂತೆ ಭಾರೀ ಹುಮ್ಮಸ್ಸು ಬಂದಿತು. ಆದರೆ ಜಡ್ಜ್ಮೆಂಟ್ ಪ್ರತಿ ಹೊರಬಿದ್ದು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಇನ್ನೊಂದು ಹಗರಣ ಹೊರಬಿದ್ದಿತು.

ಸುಪ್ರೀಂಕೋರ್ಟು ಹೇಳಿದ್ದು ಇಷ್ಟು. ಈ ವ್ಯವಹಾರದ ತಾಂತ್ರಿಕ ಅಂಶಗಳನ್ನು ನಿರ್ಧರಿಸುವುದು ನಮ್ಮ ಪರಿಣಿತಿಯ ವಿಚಾರ ಅಲ್ಲ; ಡಸಾಲ್ಟ್ & ರಿಲೆಯನ್ಸ್ ನಡುವೆ ಏನು ನಡೆದಿದೆ ಅದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ; ಇದರಲ್ಲಿ ಪ್ರತಿವಾದಿ (ನರೇಂದ್ರ ದಾಮೋದರದಾಸ್ ಮೋದಿ)ಯ ಪಾತ್ರದ ಬಗ್ಗೆ ಏನು ಹೇಳಲಾಗುತ್ತಿದೆ ಅದನ್ನು ಅವರು ನಿರಾಕರಿಸಿದ್ದಾರೆ. ಈ ವ್ಯವಹಾರವನ್ನು ಸೂಕ್ತ ಪ್ರಕ್ರಿಯೆಗಳನ್ನು ಅನುಸರಿಸಿಯೇ ಮಾಡಲಾಗಿದೆ. (ಈ ಕುರಿತು ತೀರ್ಪಿನ 21ನೇ ಪುಟದ 25ನೇ ಪಾಯಿಂಟ್‌ನಲ್ಲಿ ಹೇಳಲಾಗಿದೆ) ವ್ಯವಹಾರದ ದರಗಳ ಕುರಿತು ಕಂಟ್ರೋಲರ್ & ಆಡಿಟರ್ ಜನರಲ್ (ಸಿಎಜಿ) ಮುಂದೆ ಇಡಲಾಗಿದೆ ಮತ್ತು ಅದನ್ನು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಪರಿಶೀಲಿಸಿದೆ. ಇವೆಲ್ಲಾ ಕಾರಣಗಳಿಂದ ಇದರಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ ಎಂದು ನ್ಯಾಯಾಲಯವು ಭಾವಿಸಿ ಈ ಪಿಟಿಷನ್‌ಅನ್ನು ವಜಾಗೊಳಿಸುತ್ತೇವೆ.

ಈ ಎಲ್ಲಾ ವ್ಯವಹಾರವು ಸೂಕ್ತ ಪ್ರಕ್ರಿಯೆಯನ್ನನುಸರಿಸಿಯೇ ನಡೆದಿದೆ ಎಂದು ಸುಪ್ರೀಂಕೋರ್ಟು ಭಾವಿಸಲು ಇದು ಮುಖ್ಯ ಕಾರಣಗಳಲ್ಲೊಂದಾಗಿದೆ.

(ತೀರ್ಪಿನ ಪ್ರತಿಯ ಈ ಭಾಗವನ್ನೂ ನೋಡಬಹುದು)

ಆದರೆ, ವಾಸ್ತವವೇನು?

ಕಾಕತಾಳೀಯವಾಗಿ, ಈ ತೀರ್ಪು ಬಂದ ದಿನವೇ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಭೆ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ಅದರ ಅಧ್ಯಕ್ಷರು ಡೆಪ್ಯುಟಿ ಸಿಎಜಿಯನ್ನು ‘ನಮ್ಮ ಮುಂದಿಟ್ಟಿದ್ದ ಆ ವರದಿ ಯಾವುದು?’ ಎಂದು ಕೇಳಿದ್ದಾರೆ. ಅಂತಹ ಯಾವ ವರದಿಯೂ ಇಲ್ಲವೆಂದು ಅವರು ಉತ್ತರಿಸಿದ್ದಾರೆ. ಅಂದರೆ, ಸಿಎಜಿಯ ಮುಂದಾಗಲೀ ಪಿಎಸಿಯ ಮುಂದಾಗಲೀ ಅಂತಹ ಯಾವ ಮಾಹಿತಿಯನ್ನೂ ಕೊಟ್ಟೇ ಇಲ್ಲ. ಅಷ್ಟೂ ಸಾಲದೆಂಬಂತೆ ಅವೆಲ್ಲವನ್ನೂ ಮಾಡಿಯಾಗಿದೆಯೆಂದು ಸುಪ್ರೀಂಕೋರ್ಟಿಗೇ ಸುಳ್ಳು ಹೇಳಲಾಗಿದೆ.

ಖುದ್ದು ಪಿಎಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಪಕ್ಕದಲ್ಲೇ ಕೂರಿಸಿಕೊಂಡು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿಯವರು ಇಂದು ಪತ್ರಿಕಾಗೋಷ್ಠಿ ನಡೆಸಿ ಇದೆಲ್ಲವನ್ನೂ ವಿವರಿಸಿದ್ದಾರೆ. (ಪತ್ರಿಕಾಗೋಷ್ಠಿಯ ವಿಡಿಯೋ ಇದರೊಂದಿಗಿದೆ, ನೋಡಬಹುದು)

ಹಾಗೆಯೇ ಸುಪ್ರೀಂಕೋರ್ಟಿನ ಅತ್ಯಂತ ಘನತೆವೆತ್ತ ನ್ಯಾಯವಾದಿಗಳಲ್ಲೊಬ್ಬರಾದ ಪ್ರಶಾಂತ್ ಭೂಷಣ್ ಏನು ಹೇಳಿದ್ದಾರೆಂಬುದರ ಕುರಿತೂ ಸದ್ಯದಲ್ಲೇ ವಿವರಗಳನ್ನು ನಿಮ್ಮ ಮುಂದಿಡಲಾಗುವುದು. ಎಲ್ಲಾ ವಿವರಗಳೂ ಈ ಸುದ್ದಿಯೊಂದಿಗೆ ಅಪ್‌ಡೇಟ್ ಆಗುತ್ತಿರುತ್ತದೆ, ಸರ್ಕಾರವು ಮತ್ತು ಸುಪ್ರೀಂಕೋರ್ಟು ನಂತರ ಏನೇನು ಹೇಳುತ್ತದೆ ಎಂಬ ವಿವರಗಳು ಇದರ ಜೊತೆಗೆ ಇರುತ್ತವೆ. ಆಗಿಂದಾಗ್ಗೆ ಈ ಪುಟವನ್ನು ನೀವು ನೋಡುತ್ತಿರಬಹುದು.

ಅದೇನೇ ಇರಲಿ, ಸುಪ್ರೀಂಕೋರ್ಟಿನ ತೀರ್ಪು ಬಂದು ಕ್ಲೀನ್‌ಚಿಟ್ ಸಿಕ್ಕಿತು ಎಂದು ಎಲ್ಲರೂ ಭಾವಿಸುತ್ತಿರುವಾಗ, ಅದು ಕ್ಲೀನ್‌ಚಿಟ್ ಅಲ್ಲ; ಪಾರ್ಲಿಮೆಂಟ್ ಸಮಿತಿಗೇ ವರದಿ ಕೊಟ್ಟಿದ್ದೇವೆಂದು ಸುಪ್ರೀಂಕೋರ್ಟಿಗೇ ಸ್ವತಃ ಕೇಂದ್ರ ಸರ್ಕಾರವೇ ಸುಳ್ಳು ಹೇಳಿದ ಪ್ರಕರಣ ಎಂದು ಬಿಚ್ಚಿಕೊಳ್ಳುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ಈ ವಿಚಾರದಲ್ಲಿ ಹೊರಬರುವ, ಈ ವಾದಕ್ಕೆ ಪ್ರತಿಯಾಗಿ ಬರುವ ವಾದಗಳನ್ನೂ ನಿಮ್ಮ ಮುಂದಿಡುವ ಕೆಲಸವನ್ನು ಈ ಪುಟದಲ್ಲಿ ಮಾಡಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...