Homeಅಂಕಣಗಳುರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

ರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ಬಿಜೆಪಿಯ ಬತ್ತಳಿಕೆಯಲ್ಲಿದ್ದ ಎಲ್ಲಾ ಆಯುಧಗಳು ಠುಸ್ಸೆಂದಿವೆ. ಅದರಿಂದ ಮಧ್ಯಪ್ರದೇಶ, ರಾಜಸ್ಥಾನ ಶಾಸನಸಭೆ ಚುನಾವಣೆಗಳನ್ನು ಎದುರಿಸಲು ಬಿಜೆಪಿಗೆ ನಡುಕ ಹುಟ್ಟಿದೆ. ರಫೇಲ್ ಡೀಲ್, ನೋಟುಗಳ ಅಮಾನ್ಯೀಕರಣ, ಸ್ವಚ್ಛ ಭಾರತ, ಜನರ ಖಾತೆಗೆ ಹದಿನೈದು ಲಕ್ಷ ರೂಪಾಯಿ ಹಾಕುವುದು ಮುಂತಾದ ಮೋದಿಯ ಎಲ್ಲಾ ತಂತ್ರಗಾರಿಕೆಯೂ ವಿಫಲಗೊಂಡು ಮೋದಿ, ಷಾಗಳು ತತ್ತರಿಸ ಹತ್ತಿದ್ದಾರೆ. ಸೀಮಾಂದ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯುಡು ಎಲ್ಲ ವಿರೋಧ ಪಕ್ಷಗಳನ್ನು ಒಂದುಗೂಡಿಸಿ ಲೋಕಸಭೆಯ ಚುನಾವಣೆಯನ್ನು ಎದುರಿಸಲು ಭಾರಿ ಪ್ರಯತ್ನ ಮಾಡುತ್ತಿರುವುದೂ ಬಿಜೆಪಿಗೆ ಭಾರಿ ತಲೆನೋವಾಗಿದೆ. ಆದ್ದರಿಂದ ಮೋದಿ, ಷಾಗಳು ಚುನಾವಣೆ ಎದುರಿಸಲು ಹೊಸತಂತ್ರ ರೂಪಿಸಲು ಹೆಣಗುತ್ತಿದ್ದಾರೆ.

ಅವರಿಗೆ ರಾಮಚಂದ್ರ ಭೂಮಿಯ ನೆನಪಾಗಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕೂಡಲೇ ಕಟ್ಟುವ ಮಾತನ್ನಾರಂಭಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಮುಂತಾದ ಹಿಂದೂ ಮತಾಂಧ ಸಂಸ್ಥೆಗಳ ನೆರವಂತೂ ಬಿಜೆಪಿಗೆ ಇದ್ದೇ ಇದೆ. ಆರೆಸ್ಸೆಸ್ ಏರ್ಪಡಿಸಿದ್ದ ಬೈಠಕ್‍ಗೆ ಬಿಜೆಪಿ ಅಧ್ಯಕ್ಷ ಷಾ ಹೋಗಿ ಅಯೋಧ್ಯೆಯಲ್ಲಿ ಒಂದು ಗದ್ದಲ ಎಬ್ಬಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲೇಬೇಕೆಂಬ ಉದ್ದೇಶ ಬಿಜೆಪಿಗಂತೂ ಇಲ್ಲ. ರಾಮಮಂದಿರ ನಿರ್ಮಾಣದ ಪ್ರಶ್ನೆಯನ್ನು ಜೀವಂತ ಇಟ್ಟು ಮತ ಕೀಳುವ ತಂತ್ರಗಾರಿಕೆ ಬಿಜೆಪಿಯದ್ದು. ಒಂದೊಮ್ಮೆ ರಾಮಚಂದ್ರನ ದೇವಾಲಯವನ್ನು ಕಟ್ಟಿಬಿಟ್ಟರೆ ಚುನಾವಣೆ ಎದುರಾದಾಗ ಅಯೋಧ್ಯೆ ಟ್ರಂಪ್‍ಕಾರ್ಡ್ ಬಳಸಲು ಎಲ್ಲಿ ಸಾಧ್ಯವಾದೀತು? ರಾಮ ಮಂದಿರದ ನೆಪದಲ್ಲಿ ಹಿಂದೂಗಳ ಮತಗಳನ್ನು ಕೀಳುತ್ತಾ ಹೋಗುವುದು ಬಿಜೆಪಿಯ ಹುನ್ನಾರ. ಇದಕ್ಕಾಗಿ ಅಯೋಧ್ಯೆಯಲ್ಲಿ ಒಂದು ಲಕ್ಷ ಹಿಂದೂಗಳ ಸಮಾವೇಶವನ್ನು ನಡೆಸಿದ್ದಾರೆ. ಮೋದಿಗೆ ಸಾಥ್ ಕೊಡಲು ಉತ್ತರ ಪ್ರದೇಶದ ಸನ್ಯಾಸದ ಛದ್ಮ ವೇಷಧಾರಿ ಮುಖ್ಯಮಂತ್ರಿ ಆದಿತ್ಯನಾಥ್ ಇದ್ದೇ ಇದ್ದಾನೆ. ಉತ್ತರಪ್ರದೇಶ ಸರ್ಕಾರ ಈ ಮಾರೀಚನ ಕೈಯಲ್ಲಿರುವುದರಿಂದ ಬಿಜೆಪಿ ರಕ್ಷಣೆಗೆ ಬೇಕಾದ ಎಲ್ಲ ಕ್ರಮಗಳೂ ಸುಲಭ. ಅಯೋಧ್ಯೆಯಲ್ಲಿ ತಲೆತಲಾಂತರದಿಂದ ನೆಲೆಸಿರುವ ಮುಸ್ಲಿಂ ಜನಾಂಗಕ್ಕೆ ತಮಗೇನು ಕೇಡು ಕಾದಿದೆಯೋ ಎಂಬ ಆತಂಕ ಉಂಟಾಗಿದೆ. ಈ ಹಿಂದೂ ಮತಾಂಧರ ಸಮಾವೇಶದಲ್ಲಿ ಎಷ್ಟು ಹೆಣಗಳು ಬೀಳುವುದೋ ಎಂಬ ಆತಂಕ ಅಲ್ಲಿಯ ಮಹಮದೀಯರದಾಗಿದೆ. ಆದರೂ ಸಾಮೂಹಿಕವಾಗಿ ಸಮಾವೇಶ ನಡೆಯುವ ಕಾಲದಲ್ಲಿ ಅಯೋಧ್ಯೆ ಬಿಟ್ಟುಹೋಗುವುದಾಗಿ ಘೋಷಿಸಿದ್ದಾರೆ.

ಅಯೋಧ್ಯೆಯಲ್ಲಿ ಅನೇಕ ಕಾಲದಿಂದ ಹಿಂದೂ ಮುಸ್ಲಿಮರು ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಅಡ್ವಾಣಿಯವರ ನೇತೃತ್ವದಲ್ಲಿ ಕರಸೇವಕರು ಕೆಡಿಸಿದ ಸಂದರ್ಭ ಹೊರತುಪಡಿಸಿ, ಅದಕ್ಕೆ ಹಿಂದಿನ ದಿನಗಳಲ್ಲಾಗಲಿ, ಅನಂತರದ ದಿನಗಳಲ್ಲಾಗಲಿ ಅಯೋಧ್ಯೆಯಲ್ಲಿ ಕೋಮುಗಲಭೆ ಆಗಿಲ್ಲ. ಲೋಕಸಭೆ ಚುನಾವಣೆಯ ನಿಮಿತ್ತ ಈಗ ಮತ್ತೆ ಅಯೋಧ್ಯೆಯಲ್ಲಿ ಗದ್ದಲ ಎಬ್ಬಿಸಿ ಗೊಂದಲ ಉಂಟುಮಾಡಿ ಚುನಾವಣೆಯಲ್ಲಿ ಗೆದ್ದು ಬರುವ ಸಂಚನ್ನು ರೂಪಿಸಲಾಗಿದೆ.

ಎರಡನೆಯದಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇವಾಲಯದ ಸಮಸ್ಯೆಯೊಂದನ್ನು ಬಿಜೆಪಿ ಹುಟ್ಟುಹಾಕಿ ಅದರ ದುರ್ಲಾಭ ಪಡೆಯುವ ಹುನ್ನಾರವೂ ರೂಪುಗೊಳ್ಳುತ್ತಿದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸ್ತ್ರೀಯರಿಗೂ ಪ್ರವೇಶ ಮಾಡುವ ಹಕ್ಕಿದೆಯೆಂದು ಸರ್ವೋಚ್ಛ ನ್ಯಾಯಾಲಯ ತೀರ್ಪಿತ್ತಿದೆ. ದೇವಸ್ಥಾನದ ಮುಖ್ಯ ಅರ್ಚಕರು, ಆಡಳಿತ ಮಂಡಳಿಯವರು ಸರ್ವೋಚ್ಛ ನ್ಯಾಯಾಲಯದ ಈ ತೀರ್ಪನ್ನು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿವೆ. ಕೇರಳ ಸರ್ಕಾರಕ್ಕೆ ಈಗಂತೂ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸದೆ ಬೇರೆದಾರಿ ಇಲ್ಲವಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಈಗ ಮೋದಿಯೇ ಆದರ ಸರ್ವಾಧಿಕಾರಿ. ‘any stick is good to beat’ ಇದು ಮೋದಿಯ ನಿಲುವು. ಹೀಗಾಗಿ ಬೇಜವಾಬ್ದಾರಿಯ ಪ್ರಧಾನಮಂತ್ರಿ ಮೋದಿ ಚುನಾವಣೆ ದೃಷ್ಟಿಯಿಂದ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ನಡೆದುಕೊಳ್ಳಲು ಹೊರಟಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕೇರಳೀಯ ಹಿಂದೂಗಳ ಮತಗಳನ್ನೆಲ್ಲ ತನ್ನದಾಗಿಸಿಕೊಳ್ಳುವ ಏಕೈಕ ಉದ್ದೇಶದಿಂದ ಅಯ್ಯಪ್ಪ ಭಕ್ತರನ್ನು ಕೇರಳ ಸರ್ಕಾರದ ವಿರುದ್ಧ ಎತ್ತಿ ಕಟ್ಟಲು ಸಂಚು ಮಾಡಲಾಗಿದೆ. ಮಹಿಳೆಯರಿಗೂ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ದೊರೆಯಬೇಕು ಎಂಬುದು ಹಿಂದೂಗಳೆಲ್ಲರ ಅಭಿಮತವಾಗಿದೆ. ಹಿಂದೂ ಮತಾಂಧರು ಇದನ್ನು ಅರ್ಥಮಾಡಿಕೊಳ್ಳಬೇಕು. ಚುನಾವಣೆ ಗೆಲ್ಲುವುದಕ್ಕೆ ಇದು ಸಾಧನ ಎಂದು ಸರ್ವಾಧಿಕಾರಿ ಮೋದಿ ನಂಬಿದ್ದರೆ, ಬಿಜೆಪಿಯೇತರ ಹಿಂದೂಗಳು ದೇವಾಲಯ ಪ್ರವೇಶದ ವಿಚಾರದಲ್ಲಿ ಸ್ತ್ರೀ-ಪುರುಷರ ಭೇದ ಮಾಡಬಾರದೆಂದು ಘೋಷಣೆ ಮಾಡುತ್ತಾರೆ.

ಮೋದಿ ಅಮಿತ್ ಷಾಗಳಿಗೆ ಅಂತಿಮ ತೀರ್ಪು ಬರುವವರೆಗೂ ಕಾಯುವ ವ್ಯವಧಾನ ಇಲ್ಲ. ಮತದಾರರ ಮನಸ್ಸುಗಳನ್ನು ಕೆಡಿಸಿ, ಮತ ಕಸಿಯುವ ಏಕೈಕ ಗುರಿಯನ್ನೇ ಹೊಂದಿರುವ ಅವರು ಕಿವಿಗೆ ಕಣಜ ಹೊಕ್ಕವರಂತೆ ನಡೆದುಕೊಳ್ಳುತ್ತಿದ್ದಾರೆ. ಶಬರಿಮಲೆಗೆ ಹರಕೆ ಹೊತ್ತು ಹೋಗುವ ಜನ ದಕ್ಷಿಣ ರಾಜ್ಯಗಳಲ್ಲಂತೂ ತುಂಬ ಇದ್ದಾರೆ. ಇವರಿರುವ ಸ್ಥಳಗಳಲ್ಲಿ ಅಯ್ಯಪ್ಪನ ದೇವಾಲಯಗಳನ್ನೂ ಕಟ್ಟಲಾಗಿದೆ. ಅದರ ಮೇಲ್ವಿಚಾರಣೆಗೆ ಇರುವವರನ್ನೆಲ್ಲಾ ಕರೆದು ಸಭೆ ಮಾಡಿ ಅಯ್ಯಪ್ಪ ಭಕ್ತರ ಎಲ್ಲ ಓಟನ್ನೂ ನಮಗೆ ಹಾಕಿಸಿ ಎಂದು ಕೇಳುವ ಪ್ರಸ್ತಾಪವನ್ನು ಮೋದಿ, ಷಾ ಜೋಡಿ ಈಗಾಗಲೇ ಮಾಡಿದೆ. ಈ ಮುಗ್ಧ ಭಕ್ತರ ಧಾರ್ಮಿಕ ಭಾವನೆಯನ್ನು ಕೆರಳಿಸಿ ಅವರಲ್ಲಿ ವಿಷ ತುಂಬಿ ಅವರ ಮತಗಳನ್ನೆಲ್ಲ ಕಸಿಯುವ ತಂತ್ರಗಾರಿಕೆಗೆ ಈಗಾಗಲೇ ಕೈಹಾಕಿದ್ದಾರೆ.

ತಮ್ಮದೇ ಪಕ್ಷ ಇಡೀ ದೇಶದಲ್ಲಿ ಮತ್ತು ಅಯೋಧ್ಯೆ ವಿವಾದವಿರುವ ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿದ್ದರು ಇಷ್ಟು ದಿನ ತೆಪ್ಪಗಿದ್ದು ಚುನಾವಣೆಯ ಹೊಸ್ತಿಲಲ್ಲಿ ಅಯೋಧ್ಯೆ, ಅಯ್ಯಪ್ಪರನ್ನು ಭಜಿಸುತ್ತಿರುವ ಬಿಜೆಪಿಯವರ ಈ ಎರಡೂ ಹುನ್ನಾರಗಳನ್ನು ಜನರು ಅರ್ಥಮಾಡಿಕೊಳ್ಳಬೇಕಿದೆ. ಮೋದಿ-ಷಾ-ಆರೆಸ್ಸೆಸ್, ಹೇಗೆ ತಮ್ಮ ಬೇಳೆ ಬೇಯಿಸಿಕೊಳ್ಳಲು ಹೇಗೆ ಈ ಮುಗ್ಧ ಜನರನ್ನು ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ನಮ್ಮೆಲ್ಲರ ಮೇಲಿರುವ ಹೊಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...