Homeಅಂಕಣಗಳುರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

ರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ಬಿಜೆಪಿಯ ಬತ್ತಳಿಕೆಯಲ್ಲಿದ್ದ ಎಲ್ಲಾ ಆಯುಧಗಳು ಠುಸ್ಸೆಂದಿವೆ. ಅದರಿಂದ ಮಧ್ಯಪ್ರದೇಶ, ರಾಜಸ್ಥಾನ ಶಾಸನಸಭೆ ಚುನಾವಣೆಗಳನ್ನು ಎದುರಿಸಲು ಬಿಜೆಪಿಗೆ ನಡುಕ ಹುಟ್ಟಿದೆ. ರಫೇಲ್ ಡೀಲ್, ನೋಟುಗಳ ಅಮಾನ್ಯೀಕರಣ, ಸ್ವಚ್ಛ ಭಾರತ, ಜನರ ಖಾತೆಗೆ ಹದಿನೈದು ಲಕ್ಷ ರೂಪಾಯಿ ಹಾಕುವುದು ಮುಂತಾದ ಮೋದಿಯ ಎಲ್ಲಾ ತಂತ್ರಗಾರಿಕೆಯೂ ವಿಫಲಗೊಂಡು ಮೋದಿ, ಷಾಗಳು ತತ್ತರಿಸ ಹತ್ತಿದ್ದಾರೆ. ಸೀಮಾಂದ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯುಡು ಎಲ್ಲ ವಿರೋಧ ಪಕ್ಷಗಳನ್ನು ಒಂದುಗೂಡಿಸಿ ಲೋಕಸಭೆಯ ಚುನಾವಣೆಯನ್ನು ಎದುರಿಸಲು ಭಾರಿ ಪ್ರಯತ್ನ ಮಾಡುತ್ತಿರುವುದೂ ಬಿಜೆಪಿಗೆ ಭಾರಿ ತಲೆನೋವಾಗಿದೆ. ಆದ್ದರಿಂದ ಮೋದಿ, ಷಾಗಳು ಚುನಾವಣೆ ಎದುರಿಸಲು ಹೊಸತಂತ್ರ ರೂಪಿಸಲು ಹೆಣಗುತ್ತಿದ್ದಾರೆ.

ಅವರಿಗೆ ರಾಮಚಂದ್ರ ಭೂಮಿಯ ನೆನಪಾಗಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕೂಡಲೇ ಕಟ್ಟುವ ಮಾತನ್ನಾರಂಭಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಮುಂತಾದ ಹಿಂದೂ ಮತಾಂಧ ಸಂಸ್ಥೆಗಳ ನೆರವಂತೂ ಬಿಜೆಪಿಗೆ ಇದ್ದೇ ಇದೆ. ಆರೆಸ್ಸೆಸ್ ಏರ್ಪಡಿಸಿದ್ದ ಬೈಠಕ್‍ಗೆ ಬಿಜೆಪಿ ಅಧ್ಯಕ್ಷ ಷಾ ಹೋಗಿ ಅಯೋಧ್ಯೆಯಲ್ಲಿ ಒಂದು ಗದ್ದಲ ಎಬ್ಬಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲೇಬೇಕೆಂಬ ಉದ್ದೇಶ ಬಿಜೆಪಿಗಂತೂ ಇಲ್ಲ. ರಾಮಮಂದಿರ ನಿರ್ಮಾಣದ ಪ್ರಶ್ನೆಯನ್ನು ಜೀವಂತ ಇಟ್ಟು ಮತ ಕೀಳುವ ತಂತ್ರಗಾರಿಕೆ ಬಿಜೆಪಿಯದ್ದು. ಒಂದೊಮ್ಮೆ ರಾಮಚಂದ್ರನ ದೇವಾಲಯವನ್ನು ಕಟ್ಟಿಬಿಟ್ಟರೆ ಚುನಾವಣೆ ಎದುರಾದಾಗ ಅಯೋಧ್ಯೆ ಟ್ರಂಪ್‍ಕಾರ್ಡ್ ಬಳಸಲು ಎಲ್ಲಿ ಸಾಧ್ಯವಾದೀತು? ರಾಮ ಮಂದಿರದ ನೆಪದಲ್ಲಿ ಹಿಂದೂಗಳ ಮತಗಳನ್ನು ಕೀಳುತ್ತಾ ಹೋಗುವುದು ಬಿಜೆಪಿಯ ಹುನ್ನಾರ. ಇದಕ್ಕಾಗಿ ಅಯೋಧ್ಯೆಯಲ್ಲಿ ಒಂದು ಲಕ್ಷ ಹಿಂದೂಗಳ ಸಮಾವೇಶವನ್ನು ನಡೆಸಿದ್ದಾರೆ. ಮೋದಿಗೆ ಸಾಥ್ ಕೊಡಲು ಉತ್ತರ ಪ್ರದೇಶದ ಸನ್ಯಾಸದ ಛದ್ಮ ವೇಷಧಾರಿ ಮುಖ್ಯಮಂತ್ರಿ ಆದಿತ್ಯನಾಥ್ ಇದ್ದೇ ಇದ್ದಾನೆ. ಉತ್ತರಪ್ರದೇಶ ಸರ್ಕಾರ ಈ ಮಾರೀಚನ ಕೈಯಲ್ಲಿರುವುದರಿಂದ ಬಿಜೆಪಿ ರಕ್ಷಣೆಗೆ ಬೇಕಾದ ಎಲ್ಲ ಕ್ರಮಗಳೂ ಸುಲಭ. ಅಯೋಧ್ಯೆಯಲ್ಲಿ ತಲೆತಲಾಂತರದಿಂದ ನೆಲೆಸಿರುವ ಮುಸ್ಲಿಂ ಜನಾಂಗಕ್ಕೆ ತಮಗೇನು ಕೇಡು ಕಾದಿದೆಯೋ ಎಂಬ ಆತಂಕ ಉಂಟಾಗಿದೆ. ಈ ಹಿಂದೂ ಮತಾಂಧರ ಸಮಾವೇಶದಲ್ಲಿ ಎಷ್ಟು ಹೆಣಗಳು ಬೀಳುವುದೋ ಎಂಬ ಆತಂಕ ಅಲ್ಲಿಯ ಮಹಮದೀಯರದಾಗಿದೆ. ಆದರೂ ಸಾಮೂಹಿಕವಾಗಿ ಸಮಾವೇಶ ನಡೆಯುವ ಕಾಲದಲ್ಲಿ ಅಯೋಧ್ಯೆ ಬಿಟ್ಟುಹೋಗುವುದಾಗಿ ಘೋಷಿಸಿದ್ದಾರೆ.

ಅಯೋಧ್ಯೆಯಲ್ಲಿ ಅನೇಕ ಕಾಲದಿಂದ ಹಿಂದೂ ಮುಸ್ಲಿಮರು ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಅಡ್ವಾಣಿಯವರ ನೇತೃತ್ವದಲ್ಲಿ ಕರಸೇವಕರು ಕೆಡಿಸಿದ ಸಂದರ್ಭ ಹೊರತುಪಡಿಸಿ, ಅದಕ್ಕೆ ಹಿಂದಿನ ದಿನಗಳಲ್ಲಾಗಲಿ, ಅನಂತರದ ದಿನಗಳಲ್ಲಾಗಲಿ ಅಯೋಧ್ಯೆಯಲ್ಲಿ ಕೋಮುಗಲಭೆ ಆಗಿಲ್ಲ. ಲೋಕಸಭೆ ಚುನಾವಣೆಯ ನಿಮಿತ್ತ ಈಗ ಮತ್ತೆ ಅಯೋಧ್ಯೆಯಲ್ಲಿ ಗದ್ದಲ ಎಬ್ಬಿಸಿ ಗೊಂದಲ ಉಂಟುಮಾಡಿ ಚುನಾವಣೆಯಲ್ಲಿ ಗೆದ್ದು ಬರುವ ಸಂಚನ್ನು ರೂಪಿಸಲಾಗಿದೆ.

ಎರಡನೆಯದಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇವಾಲಯದ ಸಮಸ್ಯೆಯೊಂದನ್ನು ಬಿಜೆಪಿ ಹುಟ್ಟುಹಾಕಿ ಅದರ ದುರ್ಲಾಭ ಪಡೆಯುವ ಹುನ್ನಾರವೂ ರೂಪುಗೊಳ್ಳುತ್ತಿದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸ್ತ್ರೀಯರಿಗೂ ಪ್ರವೇಶ ಮಾಡುವ ಹಕ್ಕಿದೆಯೆಂದು ಸರ್ವೋಚ್ಛ ನ್ಯಾಯಾಲಯ ತೀರ್ಪಿತ್ತಿದೆ. ದೇವಸ್ಥಾನದ ಮುಖ್ಯ ಅರ್ಚಕರು, ಆಡಳಿತ ಮಂಡಳಿಯವರು ಸರ್ವೋಚ್ಛ ನ್ಯಾಯಾಲಯದ ಈ ತೀರ್ಪನ್ನು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿವೆ. ಕೇರಳ ಸರ್ಕಾರಕ್ಕೆ ಈಗಂತೂ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸದೆ ಬೇರೆದಾರಿ ಇಲ್ಲವಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಈಗ ಮೋದಿಯೇ ಆದರ ಸರ್ವಾಧಿಕಾರಿ. ‘any stick is good to beat’ ಇದು ಮೋದಿಯ ನಿಲುವು. ಹೀಗಾಗಿ ಬೇಜವಾಬ್ದಾರಿಯ ಪ್ರಧಾನಮಂತ್ರಿ ಮೋದಿ ಚುನಾವಣೆ ದೃಷ್ಟಿಯಿಂದ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ನಡೆದುಕೊಳ್ಳಲು ಹೊರಟಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕೇರಳೀಯ ಹಿಂದೂಗಳ ಮತಗಳನ್ನೆಲ್ಲ ತನ್ನದಾಗಿಸಿಕೊಳ್ಳುವ ಏಕೈಕ ಉದ್ದೇಶದಿಂದ ಅಯ್ಯಪ್ಪ ಭಕ್ತರನ್ನು ಕೇರಳ ಸರ್ಕಾರದ ವಿರುದ್ಧ ಎತ್ತಿ ಕಟ್ಟಲು ಸಂಚು ಮಾಡಲಾಗಿದೆ. ಮಹಿಳೆಯರಿಗೂ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ದೊರೆಯಬೇಕು ಎಂಬುದು ಹಿಂದೂಗಳೆಲ್ಲರ ಅಭಿಮತವಾಗಿದೆ. ಹಿಂದೂ ಮತಾಂಧರು ಇದನ್ನು ಅರ್ಥಮಾಡಿಕೊಳ್ಳಬೇಕು. ಚುನಾವಣೆ ಗೆಲ್ಲುವುದಕ್ಕೆ ಇದು ಸಾಧನ ಎಂದು ಸರ್ವಾಧಿಕಾರಿ ಮೋದಿ ನಂಬಿದ್ದರೆ, ಬಿಜೆಪಿಯೇತರ ಹಿಂದೂಗಳು ದೇವಾಲಯ ಪ್ರವೇಶದ ವಿಚಾರದಲ್ಲಿ ಸ್ತ್ರೀ-ಪುರುಷರ ಭೇದ ಮಾಡಬಾರದೆಂದು ಘೋಷಣೆ ಮಾಡುತ್ತಾರೆ.

ಮೋದಿ ಅಮಿತ್ ಷಾಗಳಿಗೆ ಅಂತಿಮ ತೀರ್ಪು ಬರುವವರೆಗೂ ಕಾಯುವ ವ್ಯವಧಾನ ಇಲ್ಲ. ಮತದಾರರ ಮನಸ್ಸುಗಳನ್ನು ಕೆಡಿಸಿ, ಮತ ಕಸಿಯುವ ಏಕೈಕ ಗುರಿಯನ್ನೇ ಹೊಂದಿರುವ ಅವರು ಕಿವಿಗೆ ಕಣಜ ಹೊಕ್ಕವರಂತೆ ನಡೆದುಕೊಳ್ಳುತ್ತಿದ್ದಾರೆ. ಶಬರಿಮಲೆಗೆ ಹರಕೆ ಹೊತ್ತು ಹೋಗುವ ಜನ ದಕ್ಷಿಣ ರಾಜ್ಯಗಳಲ್ಲಂತೂ ತುಂಬ ಇದ್ದಾರೆ. ಇವರಿರುವ ಸ್ಥಳಗಳಲ್ಲಿ ಅಯ್ಯಪ್ಪನ ದೇವಾಲಯಗಳನ್ನೂ ಕಟ್ಟಲಾಗಿದೆ. ಅದರ ಮೇಲ್ವಿಚಾರಣೆಗೆ ಇರುವವರನ್ನೆಲ್ಲಾ ಕರೆದು ಸಭೆ ಮಾಡಿ ಅಯ್ಯಪ್ಪ ಭಕ್ತರ ಎಲ್ಲ ಓಟನ್ನೂ ನಮಗೆ ಹಾಕಿಸಿ ಎಂದು ಕೇಳುವ ಪ್ರಸ್ತಾಪವನ್ನು ಮೋದಿ, ಷಾ ಜೋಡಿ ಈಗಾಗಲೇ ಮಾಡಿದೆ. ಈ ಮುಗ್ಧ ಭಕ್ತರ ಧಾರ್ಮಿಕ ಭಾವನೆಯನ್ನು ಕೆರಳಿಸಿ ಅವರಲ್ಲಿ ವಿಷ ತುಂಬಿ ಅವರ ಮತಗಳನ್ನೆಲ್ಲ ಕಸಿಯುವ ತಂತ್ರಗಾರಿಕೆಗೆ ಈಗಾಗಲೇ ಕೈಹಾಕಿದ್ದಾರೆ.

ತಮ್ಮದೇ ಪಕ್ಷ ಇಡೀ ದೇಶದಲ್ಲಿ ಮತ್ತು ಅಯೋಧ್ಯೆ ವಿವಾದವಿರುವ ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿದ್ದರು ಇಷ್ಟು ದಿನ ತೆಪ್ಪಗಿದ್ದು ಚುನಾವಣೆಯ ಹೊಸ್ತಿಲಲ್ಲಿ ಅಯೋಧ್ಯೆ, ಅಯ್ಯಪ್ಪರನ್ನು ಭಜಿಸುತ್ತಿರುವ ಬಿಜೆಪಿಯವರ ಈ ಎರಡೂ ಹುನ್ನಾರಗಳನ್ನು ಜನರು ಅರ್ಥಮಾಡಿಕೊಳ್ಳಬೇಕಿದೆ. ಮೋದಿ-ಷಾ-ಆರೆಸ್ಸೆಸ್, ಹೇಗೆ ತಮ್ಮ ಬೇಳೆ ಬೇಯಿಸಿಕೊಳ್ಳಲು ಹೇಗೆ ಈ ಮುಗ್ಧ ಜನರನ್ನು ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ನಮ್ಮೆಲ್ಲರ ಮೇಲಿರುವ ಹೊಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...