Homeಅಂಕಣಗಳುರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

ರಾಮ, ಅಯ್ಯಪ್ಪನ ಹೆಸರಲ್ಲಿ ಬಿಜೆಪಿಯ ಕುತಂತ್ರಗಳು

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ಬಿಜೆಪಿಯ ಬತ್ತಳಿಕೆಯಲ್ಲಿದ್ದ ಎಲ್ಲಾ ಆಯುಧಗಳು ಠುಸ್ಸೆಂದಿವೆ. ಅದರಿಂದ ಮಧ್ಯಪ್ರದೇಶ, ರಾಜಸ್ಥಾನ ಶಾಸನಸಭೆ ಚುನಾವಣೆಗಳನ್ನು ಎದುರಿಸಲು ಬಿಜೆಪಿಗೆ ನಡುಕ ಹುಟ್ಟಿದೆ. ರಫೇಲ್ ಡೀಲ್, ನೋಟುಗಳ ಅಮಾನ್ಯೀಕರಣ, ಸ್ವಚ್ಛ ಭಾರತ, ಜನರ ಖಾತೆಗೆ ಹದಿನೈದು ಲಕ್ಷ ರೂಪಾಯಿ ಹಾಕುವುದು ಮುಂತಾದ ಮೋದಿಯ ಎಲ್ಲಾ ತಂತ್ರಗಾರಿಕೆಯೂ ವಿಫಲಗೊಂಡು ಮೋದಿ, ಷಾಗಳು ತತ್ತರಿಸ ಹತ್ತಿದ್ದಾರೆ. ಸೀಮಾಂದ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯುಡು ಎಲ್ಲ ವಿರೋಧ ಪಕ್ಷಗಳನ್ನು ಒಂದುಗೂಡಿಸಿ ಲೋಕಸಭೆಯ ಚುನಾವಣೆಯನ್ನು ಎದುರಿಸಲು ಭಾರಿ ಪ್ರಯತ್ನ ಮಾಡುತ್ತಿರುವುದೂ ಬಿಜೆಪಿಗೆ ಭಾರಿ ತಲೆನೋವಾಗಿದೆ. ಆದ್ದರಿಂದ ಮೋದಿ, ಷಾಗಳು ಚುನಾವಣೆ ಎದುರಿಸಲು ಹೊಸತಂತ್ರ ರೂಪಿಸಲು ಹೆಣಗುತ್ತಿದ್ದಾರೆ.

ಅವರಿಗೆ ರಾಮಚಂದ್ರ ಭೂಮಿಯ ನೆನಪಾಗಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕೂಡಲೇ ಕಟ್ಟುವ ಮಾತನ್ನಾರಂಭಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಮುಂತಾದ ಹಿಂದೂ ಮತಾಂಧ ಸಂಸ್ಥೆಗಳ ನೆರವಂತೂ ಬಿಜೆಪಿಗೆ ಇದ್ದೇ ಇದೆ. ಆರೆಸ್ಸೆಸ್ ಏರ್ಪಡಿಸಿದ್ದ ಬೈಠಕ್‍ಗೆ ಬಿಜೆಪಿ ಅಧ್ಯಕ್ಷ ಷಾ ಹೋಗಿ ಅಯೋಧ್ಯೆಯಲ್ಲಿ ಒಂದು ಗದ್ದಲ ಎಬ್ಬಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲೇಬೇಕೆಂಬ ಉದ್ದೇಶ ಬಿಜೆಪಿಗಂತೂ ಇಲ್ಲ. ರಾಮಮಂದಿರ ನಿರ್ಮಾಣದ ಪ್ರಶ್ನೆಯನ್ನು ಜೀವಂತ ಇಟ್ಟು ಮತ ಕೀಳುವ ತಂತ್ರಗಾರಿಕೆ ಬಿಜೆಪಿಯದ್ದು. ಒಂದೊಮ್ಮೆ ರಾಮಚಂದ್ರನ ದೇವಾಲಯವನ್ನು ಕಟ್ಟಿಬಿಟ್ಟರೆ ಚುನಾವಣೆ ಎದುರಾದಾಗ ಅಯೋಧ್ಯೆ ಟ್ರಂಪ್‍ಕಾರ್ಡ್ ಬಳಸಲು ಎಲ್ಲಿ ಸಾಧ್ಯವಾದೀತು? ರಾಮ ಮಂದಿರದ ನೆಪದಲ್ಲಿ ಹಿಂದೂಗಳ ಮತಗಳನ್ನು ಕೀಳುತ್ತಾ ಹೋಗುವುದು ಬಿಜೆಪಿಯ ಹುನ್ನಾರ. ಇದಕ್ಕಾಗಿ ಅಯೋಧ್ಯೆಯಲ್ಲಿ ಒಂದು ಲಕ್ಷ ಹಿಂದೂಗಳ ಸಮಾವೇಶವನ್ನು ನಡೆಸಿದ್ದಾರೆ. ಮೋದಿಗೆ ಸಾಥ್ ಕೊಡಲು ಉತ್ತರ ಪ್ರದೇಶದ ಸನ್ಯಾಸದ ಛದ್ಮ ವೇಷಧಾರಿ ಮುಖ್ಯಮಂತ್ರಿ ಆದಿತ್ಯನಾಥ್ ಇದ್ದೇ ಇದ್ದಾನೆ. ಉತ್ತರಪ್ರದೇಶ ಸರ್ಕಾರ ಈ ಮಾರೀಚನ ಕೈಯಲ್ಲಿರುವುದರಿಂದ ಬಿಜೆಪಿ ರಕ್ಷಣೆಗೆ ಬೇಕಾದ ಎಲ್ಲ ಕ್ರಮಗಳೂ ಸುಲಭ. ಅಯೋಧ್ಯೆಯಲ್ಲಿ ತಲೆತಲಾಂತರದಿಂದ ನೆಲೆಸಿರುವ ಮುಸ್ಲಿಂ ಜನಾಂಗಕ್ಕೆ ತಮಗೇನು ಕೇಡು ಕಾದಿದೆಯೋ ಎಂಬ ಆತಂಕ ಉಂಟಾಗಿದೆ. ಈ ಹಿಂದೂ ಮತಾಂಧರ ಸಮಾವೇಶದಲ್ಲಿ ಎಷ್ಟು ಹೆಣಗಳು ಬೀಳುವುದೋ ಎಂಬ ಆತಂಕ ಅಲ್ಲಿಯ ಮಹಮದೀಯರದಾಗಿದೆ. ಆದರೂ ಸಾಮೂಹಿಕವಾಗಿ ಸಮಾವೇಶ ನಡೆಯುವ ಕಾಲದಲ್ಲಿ ಅಯೋಧ್ಯೆ ಬಿಟ್ಟುಹೋಗುವುದಾಗಿ ಘೋಷಿಸಿದ್ದಾರೆ.

ಅಯೋಧ್ಯೆಯಲ್ಲಿ ಅನೇಕ ಕಾಲದಿಂದ ಹಿಂದೂ ಮುಸ್ಲಿಮರು ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಅಡ್ವಾಣಿಯವರ ನೇತೃತ್ವದಲ್ಲಿ ಕರಸೇವಕರು ಕೆಡಿಸಿದ ಸಂದರ್ಭ ಹೊರತುಪಡಿಸಿ, ಅದಕ್ಕೆ ಹಿಂದಿನ ದಿನಗಳಲ್ಲಾಗಲಿ, ಅನಂತರದ ದಿನಗಳಲ್ಲಾಗಲಿ ಅಯೋಧ್ಯೆಯಲ್ಲಿ ಕೋಮುಗಲಭೆ ಆಗಿಲ್ಲ. ಲೋಕಸಭೆ ಚುನಾವಣೆಯ ನಿಮಿತ್ತ ಈಗ ಮತ್ತೆ ಅಯೋಧ್ಯೆಯಲ್ಲಿ ಗದ್ದಲ ಎಬ್ಬಿಸಿ ಗೊಂದಲ ಉಂಟುಮಾಡಿ ಚುನಾವಣೆಯಲ್ಲಿ ಗೆದ್ದು ಬರುವ ಸಂಚನ್ನು ರೂಪಿಸಲಾಗಿದೆ.

ಎರಡನೆಯದಾಗಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೇವಾಲಯದ ಸಮಸ್ಯೆಯೊಂದನ್ನು ಬಿಜೆಪಿ ಹುಟ್ಟುಹಾಕಿ ಅದರ ದುರ್ಲಾಭ ಪಡೆಯುವ ಹುನ್ನಾರವೂ ರೂಪುಗೊಳ್ಳುತ್ತಿದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸ್ತ್ರೀಯರಿಗೂ ಪ್ರವೇಶ ಮಾಡುವ ಹಕ್ಕಿದೆಯೆಂದು ಸರ್ವೋಚ್ಛ ನ್ಯಾಯಾಲಯ ತೀರ್ಪಿತ್ತಿದೆ. ದೇವಸ್ಥಾನದ ಮುಖ್ಯ ಅರ್ಚಕರು, ಆಡಳಿತ ಮಂಡಳಿಯವರು ಸರ್ವೋಚ್ಛ ನ್ಯಾಯಾಲಯದ ಈ ತೀರ್ಪನ್ನು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿವೆ. ಕೇರಳ ಸರ್ಕಾರಕ್ಕೆ ಈಗಂತೂ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸದೆ ಬೇರೆದಾರಿ ಇಲ್ಲವಾಗಿದೆ. ಭಾರತೀಯ ಜನತಾ ಪಕ್ಷಕ್ಕೆ ಈಗ ಮೋದಿಯೇ ಆದರ ಸರ್ವಾಧಿಕಾರಿ. ‘any stick is good to beat’ ಇದು ಮೋದಿಯ ನಿಲುವು. ಹೀಗಾಗಿ ಬೇಜವಾಬ್ದಾರಿಯ ಪ್ರಧಾನಮಂತ್ರಿ ಮೋದಿ ಚುನಾವಣೆ ದೃಷ್ಟಿಯಿಂದ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ನಡೆದುಕೊಳ್ಳಲು ಹೊರಟಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತಂದು ಕೇರಳೀಯ ಹಿಂದೂಗಳ ಮತಗಳನ್ನೆಲ್ಲ ತನ್ನದಾಗಿಸಿಕೊಳ್ಳುವ ಏಕೈಕ ಉದ್ದೇಶದಿಂದ ಅಯ್ಯಪ್ಪ ಭಕ್ತರನ್ನು ಕೇರಳ ಸರ್ಕಾರದ ವಿರುದ್ಧ ಎತ್ತಿ ಕಟ್ಟಲು ಸಂಚು ಮಾಡಲಾಗಿದೆ. ಮಹಿಳೆಯರಿಗೂ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ದೊರೆಯಬೇಕು ಎಂಬುದು ಹಿಂದೂಗಳೆಲ್ಲರ ಅಭಿಮತವಾಗಿದೆ. ಹಿಂದೂ ಮತಾಂಧರು ಇದನ್ನು ಅರ್ಥಮಾಡಿಕೊಳ್ಳಬೇಕು. ಚುನಾವಣೆ ಗೆಲ್ಲುವುದಕ್ಕೆ ಇದು ಸಾಧನ ಎಂದು ಸರ್ವಾಧಿಕಾರಿ ಮೋದಿ ನಂಬಿದ್ದರೆ, ಬಿಜೆಪಿಯೇತರ ಹಿಂದೂಗಳು ದೇವಾಲಯ ಪ್ರವೇಶದ ವಿಚಾರದಲ್ಲಿ ಸ್ತ್ರೀ-ಪುರುಷರ ಭೇದ ಮಾಡಬಾರದೆಂದು ಘೋಷಣೆ ಮಾಡುತ್ತಾರೆ.

ಮೋದಿ ಅಮಿತ್ ಷಾಗಳಿಗೆ ಅಂತಿಮ ತೀರ್ಪು ಬರುವವರೆಗೂ ಕಾಯುವ ವ್ಯವಧಾನ ಇಲ್ಲ. ಮತದಾರರ ಮನಸ್ಸುಗಳನ್ನು ಕೆಡಿಸಿ, ಮತ ಕಸಿಯುವ ಏಕೈಕ ಗುರಿಯನ್ನೇ ಹೊಂದಿರುವ ಅವರು ಕಿವಿಗೆ ಕಣಜ ಹೊಕ್ಕವರಂತೆ ನಡೆದುಕೊಳ್ಳುತ್ತಿದ್ದಾರೆ. ಶಬರಿಮಲೆಗೆ ಹರಕೆ ಹೊತ್ತು ಹೋಗುವ ಜನ ದಕ್ಷಿಣ ರಾಜ್ಯಗಳಲ್ಲಂತೂ ತುಂಬ ಇದ್ದಾರೆ. ಇವರಿರುವ ಸ್ಥಳಗಳಲ್ಲಿ ಅಯ್ಯಪ್ಪನ ದೇವಾಲಯಗಳನ್ನೂ ಕಟ್ಟಲಾಗಿದೆ. ಅದರ ಮೇಲ್ವಿಚಾರಣೆಗೆ ಇರುವವರನ್ನೆಲ್ಲಾ ಕರೆದು ಸಭೆ ಮಾಡಿ ಅಯ್ಯಪ್ಪ ಭಕ್ತರ ಎಲ್ಲ ಓಟನ್ನೂ ನಮಗೆ ಹಾಕಿಸಿ ಎಂದು ಕೇಳುವ ಪ್ರಸ್ತಾಪವನ್ನು ಮೋದಿ, ಷಾ ಜೋಡಿ ಈಗಾಗಲೇ ಮಾಡಿದೆ. ಈ ಮುಗ್ಧ ಭಕ್ತರ ಧಾರ್ಮಿಕ ಭಾವನೆಯನ್ನು ಕೆರಳಿಸಿ ಅವರಲ್ಲಿ ವಿಷ ತುಂಬಿ ಅವರ ಮತಗಳನ್ನೆಲ್ಲ ಕಸಿಯುವ ತಂತ್ರಗಾರಿಕೆಗೆ ಈಗಾಗಲೇ ಕೈಹಾಕಿದ್ದಾರೆ.

ತಮ್ಮದೇ ಪಕ್ಷ ಇಡೀ ದೇಶದಲ್ಲಿ ಮತ್ತು ಅಯೋಧ್ಯೆ ವಿವಾದವಿರುವ ಉತ್ತರಪ್ರದೇಶದಲ್ಲಿ ಅಧಿಕಾರದಲ್ಲಿದ್ದರು ಇಷ್ಟು ದಿನ ತೆಪ್ಪಗಿದ್ದು ಚುನಾವಣೆಯ ಹೊಸ್ತಿಲಲ್ಲಿ ಅಯೋಧ್ಯೆ, ಅಯ್ಯಪ್ಪರನ್ನು ಭಜಿಸುತ್ತಿರುವ ಬಿಜೆಪಿಯವರ ಈ ಎರಡೂ ಹುನ್ನಾರಗಳನ್ನು ಜನರು ಅರ್ಥಮಾಡಿಕೊಳ್ಳಬೇಕಿದೆ. ಮೋದಿ-ಷಾ-ಆರೆಸ್ಸೆಸ್, ಹೇಗೆ ತಮ್ಮ ಬೇಳೆ ಬೇಯಿಸಿಕೊಳ್ಳಲು ಹೇಗೆ ಈ ಮುಗ್ಧ ಜನರನ್ನು ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ನಮ್ಮೆಲ್ಲರ ಮೇಲಿರುವ ಹೊಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...