HomeUncategorizedಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ' ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

ಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ’ ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

- Advertisement -
- Advertisement -

ಕುಸಿಯುತ್ತಿರುವ ಆರ್ಥಿಕತೆ, ನಿರುದ್ಯೋಗ ಸೇರಿ ಹಲವು ಸಮಸ್ಯೆಗಳು ಅಭಿವೃದ್ಧಿಗೆ ಮಾರಕವಾಗಿವೆ. ಜಿಡಿಪಿ ಕುಸಿದಿದ್ದು, ಹಲವು ಕ್ಷೇತ್ರಗಳು ಲಾಭವಿಲ್ಲದೇ ನೆಲಕಚ್ಚುತ್ತಿವೆ. ವ್ಯಾಪಾರ, ಉದ್ಯಮ, ಮಾರುಕಟ್ಟೆ ಸ್ಥಿತಿಗತಿ ಮಂದಗತಿಯಲ್ಲಿ ಸಾಗಿದೆ. ಕಾರ್ಪೊರೇಟ್ ವಲಯ ಚೇತರಿಕೆ ಕಾಣುತ್ತಿಲ್ಲ. ಹೀಗಿರುವಾಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಾತ್ರ ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿದೆ. ಕಾಂಗ್ರೆಸ್ ಆಡಳಿತವಿದ್ದಾಗಲೂ ಆರ್ಥಿಕತೆ ಕುಸಿತವುಂಟಾಗಿತ್ತು. ಆದರೆ ಹಲವು ಸುಧಾರಿತ ಕ್ರಮಗಳ ಜಾರಿಯ ನಂತರ ಎಲ್ಲವೂ ಸರಿಹೋಗಿ, ಜನತೆಯ ಜೀವನ ಕ್ರಮ ಉತ್ತಮವಾಗಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ ಹಾಗೇ ಆಗುತ್ತಿಲ್ಲ. ಬಿಜೆಪಿ ಸರ್ಕಾರ ಇತರೆ ಆರ್ಥಿಕ ತಜ್ಞರ ಸಲಹೆ ಪಡೆಯದೇ ತನ್ನ ಸೊಂಡಿಲಿನಿಂದ ತಾನೇ ನೀರು ಕುಡಿಯಲು ಹೊರಟಿರುವ ವಿಷಯ  ಗೌಪ್ಯವಾಗಿ ಉಳಿದಿಲ್ಲ. ಈಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್, ದಿ ಹಿಂದೂ ದಿನಪತ್ರಿಕೆಯ ಅಭಿಪ್ರಾಯ ಸಂಗತಿಗೆ ಬರೆದ ಲೇಖನ ಜಗಜ್ಜಾಹೀರುಗೊಳಿಸಿದೆ.

ಹೌದು… ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್ ಸುದೀರ್ಘ ಲೇಖನವೊಂದನ್ನು ಬರೆದಿದ್ದಾರೆ. ಅದರಲ್ಲಿ ಬಿಜೆಪಿ ಸರ್ಕಾರ, ಕಾಂಗ್ರೆಸ್ ಆಡಳಿತದಲ್ಲಿ ಅನುಸರಿಸಲಾಗಿದ್ದ ಆರ್ಥಿಕತೆ ಅಭಿವೃದ್ಧಿ ನಿಯಮಾವಳಿಗಳನ್ನು ಅನುಸರಿಸಬೇಕಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಬಿಜೆಪಿಯ ರಾಜಕೀಯ ಯೋಜನೆಗಳ ಐಕಾನ್ ಆಗಿ ಆಯ್ಕೆ ಮಾಡುತ್ತದೆ. ಹಾಗೆಯೇ ಆರ್ಥಿಕತೆಯ ವಾಸ್ತುಶಿಲ್ಪದ ಆಧಾರವಾಗಿ ನರಸಿಂಹರಾವ್ ಅವರ ದೃಢ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

60 ವರ್ಷದ ಪರಕಲಾ ಪ್ರಭಾಕರ್ ಅವರು, ಆಂಧ್ರಪ್ರದೇಶ ಸರ್ಕಾರದ ಮಾಜಿ ಸಂವಹನ ಸಲಹೆಗಾರರಾಗಿದ್ದರು. ನೆಹರು ಕಾಲದ ಆರ್ಥಿಕತೆಯ ವ್ಯವಸ್ಥೆ ಹಾಗೂ ಚೌಕಟ್ಟಿನ ಬಗ್ಗೆ ಬಿಜೆಪಿ ಸರ್ಕಾರ ಮಾಡುತ್ತಿರುವ ಟೀಕೆ, ವಿಮರ್ಶೆ, ವ್ಯಂಗ್ಯದ ವಿರುದ್ಧವೂ ಪ್ರಭಾಕರ್ ಮಾತನಾಡಿದ್ದಾರೆ. ಥಿಂಕ್-ತ್ಯಾಂಕ್, ತಪ್ಪನ್ನು ತಿದ್ದಿಕೊಂಡು, ಅರಿತು ನಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಆಧುನಿಕ ಮಾರುಕಟ್ಟೆ, ಜಾಗತೀಕರಣದ ಜಗತ್ತಲ್ಲಿ ಆಂತರಿಕವಾಗಿ ಸಮಗ್ರ ಮಾನವತಾವಾದದ ರಚನೆಯ ಮೇಲೆ ಪ್ರಾಯೋಗಿಕ ಉಪಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲ. ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಆರ್ಥಿಕ ವಾಸ್ತುಶಿಲ್ಪ ಮತ್ತು ಅಭಿವೃದ್ಧಿ ಅಜೆಂಡಾವನ್ನು ಸ್ವೀಕರಿಸಿ ಅದನ್ನು ಅನುಸರಿಸುವ ಮೂಲಕ ಬಿಜೆಪಿ ಸೀಮಿತ ಕಾರ್ಯಸೂಚಿಯಿಂದ ಬಿಡುಗಡೆ ಹೊಂದಬಹುದು ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದ ಪ್ರಸ್ತುತ ಬೃಹತ್ ಸಮಸ್ಯೆ ಆರ್ಥಿಕತೆ ಕುಸಿತದಿಂದ ಹೊರಬರಲು ಬಿಜೆಪಿ ತನ್ನಲ್ಲಿರುವ ಕೆಲವು ಚಿಂತನೆಗಳಲ್ಲಿನ ದೌರ್ಬಲ್ಯತೆಯನ್ನು ಸರಿಪಡಿಸಿಕೊಳ್ಳಬೇಕಿದೆ. ಸರ್ಕಾರ ಇನ್ನೂ ನಿರಾಕರಣೆ ಕ್ರಮವನ್ನೇ ಅನುಸರಿಸುತ್ತಿದೆ. ಸಾರ್ವಜನಿಕ ವಲಯಕ್ಕೆ ಹರಿಯುವ ದತ್ತಾಂಶವು ನಂತರದ ದಿನಗಳಲ್ಲಿ ಎದುರಾಗಬಹುದಾದ ಗಂಭೀರ ಸವಾಲು ದುಃಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಬರೆದಿದ್ದಾರೆ.

ಇತ್ತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿಯ ಲೇಖನದ ಬಗ್ಗೆ ಪ್ರತಿಕ್ರಿಯಿಸಿ, 2014 ರಿಂದ 2019 ರವರೆಗೆ ಬಿಜೆಪಿ ಸರ್ಕಾರ ಮೂಲಭೂತ ಸುಧಾರಣೆಗಳನ್ನು ಮಾಡಿದೆ. ಸರಕು ಮತ್ತು ಸೇವಾ ತೆರಿಗೆ, ಆಧಾರ್ ಮತ್ತು ಅಡುಗೆ ಅನಿಲ ವಿತರಣೆಯಂತಹ ಕ್ರಮಗಳ ಬಗ್ಗೆ ಪಟ್ಟಿ ಮಾಡಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...