HomeUncategorizedಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ' ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

ಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ’ ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

- Advertisement -
- Advertisement -

ಕುಸಿಯುತ್ತಿರುವ ಆರ್ಥಿಕತೆ, ನಿರುದ್ಯೋಗ ಸೇರಿ ಹಲವು ಸಮಸ್ಯೆಗಳು ಅಭಿವೃದ್ಧಿಗೆ ಮಾರಕವಾಗಿವೆ. ಜಿಡಿಪಿ ಕುಸಿದಿದ್ದು, ಹಲವು ಕ್ಷೇತ್ರಗಳು ಲಾಭವಿಲ್ಲದೇ ನೆಲಕಚ್ಚುತ್ತಿವೆ. ವ್ಯಾಪಾರ, ಉದ್ಯಮ, ಮಾರುಕಟ್ಟೆ ಸ್ಥಿತಿಗತಿ ಮಂದಗತಿಯಲ್ಲಿ ಸಾಗಿದೆ. ಕಾರ್ಪೊರೇಟ್ ವಲಯ ಚೇತರಿಕೆ ಕಾಣುತ್ತಿಲ್ಲ. ಹೀಗಿರುವಾಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಾತ್ರ ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿದೆ. ಕಾಂಗ್ರೆಸ್ ಆಡಳಿತವಿದ್ದಾಗಲೂ ಆರ್ಥಿಕತೆ ಕುಸಿತವುಂಟಾಗಿತ್ತು. ಆದರೆ ಹಲವು ಸುಧಾರಿತ ಕ್ರಮಗಳ ಜಾರಿಯ ನಂತರ ಎಲ್ಲವೂ ಸರಿಹೋಗಿ, ಜನತೆಯ ಜೀವನ ಕ್ರಮ ಉತ್ತಮವಾಗಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ ಹಾಗೇ ಆಗುತ್ತಿಲ್ಲ. ಬಿಜೆಪಿ ಸರ್ಕಾರ ಇತರೆ ಆರ್ಥಿಕ ತಜ್ಞರ ಸಲಹೆ ಪಡೆಯದೇ ತನ್ನ ಸೊಂಡಿಲಿನಿಂದ ತಾನೇ ನೀರು ಕುಡಿಯಲು ಹೊರಟಿರುವ ವಿಷಯ  ಗೌಪ್ಯವಾಗಿ ಉಳಿದಿಲ್ಲ. ಈಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್, ದಿ ಹಿಂದೂ ದಿನಪತ್ರಿಕೆಯ ಅಭಿಪ್ರಾಯ ಸಂಗತಿಗೆ ಬರೆದ ಲೇಖನ ಜಗಜ್ಜಾಹೀರುಗೊಳಿಸಿದೆ.

ಹೌದು… ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್ ಸುದೀರ್ಘ ಲೇಖನವೊಂದನ್ನು ಬರೆದಿದ್ದಾರೆ. ಅದರಲ್ಲಿ ಬಿಜೆಪಿ ಸರ್ಕಾರ, ಕಾಂಗ್ರೆಸ್ ಆಡಳಿತದಲ್ಲಿ ಅನುಸರಿಸಲಾಗಿದ್ದ ಆರ್ಥಿಕತೆ ಅಭಿವೃದ್ಧಿ ನಿಯಮಾವಳಿಗಳನ್ನು ಅನುಸರಿಸಬೇಕಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಬಿಜೆಪಿಯ ರಾಜಕೀಯ ಯೋಜನೆಗಳ ಐಕಾನ್ ಆಗಿ ಆಯ್ಕೆ ಮಾಡುತ್ತದೆ. ಹಾಗೆಯೇ ಆರ್ಥಿಕತೆಯ ವಾಸ್ತುಶಿಲ್ಪದ ಆಧಾರವಾಗಿ ನರಸಿಂಹರಾವ್ ಅವರ ದೃಢ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

60 ವರ್ಷದ ಪರಕಲಾ ಪ್ರಭಾಕರ್ ಅವರು, ಆಂಧ್ರಪ್ರದೇಶ ಸರ್ಕಾರದ ಮಾಜಿ ಸಂವಹನ ಸಲಹೆಗಾರರಾಗಿದ್ದರು. ನೆಹರು ಕಾಲದ ಆರ್ಥಿಕತೆಯ ವ್ಯವಸ್ಥೆ ಹಾಗೂ ಚೌಕಟ್ಟಿನ ಬಗ್ಗೆ ಬಿಜೆಪಿ ಸರ್ಕಾರ ಮಾಡುತ್ತಿರುವ ಟೀಕೆ, ವಿಮರ್ಶೆ, ವ್ಯಂಗ್ಯದ ವಿರುದ್ಧವೂ ಪ್ರಭಾಕರ್ ಮಾತನಾಡಿದ್ದಾರೆ. ಥಿಂಕ್-ತ್ಯಾಂಕ್, ತಪ್ಪನ್ನು ತಿದ್ದಿಕೊಂಡು, ಅರಿತು ನಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಆಧುನಿಕ ಮಾರುಕಟ್ಟೆ, ಜಾಗತೀಕರಣದ ಜಗತ್ತಲ್ಲಿ ಆಂತರಿಕವಾಗಿ ಸಮಗ್ರ ಮಾನವತಾವಾದದ ರಚನೆಯ ಮೇಲೆ ಪ್ರಾಯೋಗಿಕ ಉಪಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲ. ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಆರ್ಥಿಕ ವಾಸ್ತುಶಿಲ್ಪ ಮತ್ತು ಅಭಿವೃದ್ಧಿ ಅಜೆಂಡಾವನ್ನು ಸ್ವೀಕರಿಸಿ ಅದನ್ನು ಅನುಸರಿಸುವ ಮೂಲಕ ಬಿಜೆಪಿ ಸೀಮಿತ ಕಾರ್ಯಸೂಚಿಯಿಂದ ಬಿಡುಗಡೆ ಹೊಂದಬಹುದು ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದ ಪ್ರಸ್ತುತ ಬೃಹತ್ ಸಮಸ್ಯೆ ಆರ್ಥಿಕತೆ ಕುಸಿತದಿಂದ ಹೊರಬರಲು ಬಿಜೆಪಿ ತನ್ನಲ್ಲಿರುವ ಕೆಲವು ಚಿಂತನೆಗಳಲ್ಲಿನ ದೌರ್ಬಲ್ಯತೆಯನ್ನು ಸರಿಪಡಿಸಿಕೊಳ್ಳಬೇಕಿದೆ. ಸರ್ಕಾರ ಇನ್ನೂ ನಿರಾಕರಣೆ ಕ್ರಮವನ್ನೇ ಅನುಸರಿಸುತ್ತಿದೆ. ಸಾರ್ವಜನಿಕ ವಲಯಕ್ಕೆ ಹರಿಯುವ ದತ್ತಾಂಶವು ನಂತರದ ದಿನಗಳಲ್ಲಿ ಎದುರಾಗಬಹುದಾದ ಗಂಭೀರ ಸವಾಲು ದುಃಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಬರೆದಿದ್ದಾರೆ.

ಇತ್ತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿಯ ಲೇಖನದ ಬಗ್ಗೆ ಪ್ರತಿಕ್ರಿಯಿಸಿ, 2014 ರಿಂದ 2019 ರವರೆಗೆ ಬಿಜೆಪಿ ಸರ್ಕಾರ ಮೂಲಭೂತ ಸುಧಾರಣೆಗಳನ್ನು ಮಾಡಿದೆ. ಸರಕು ಮತ್ತು ಸೇವಾ ತೆರಿಗೆ, ಆಧಾರ್ ಮತ್ತು ಅಡುಗೆ ಅನಿಲ ವಿತರಣೆಯಂತಹ ಕ್ರಮಗಳ ಬಗ್ಗೆ ಪಟ್ಟಿ ಮಾಡಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...