HomeUncategorizedಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ' ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

ಕುಸಿಯುತ್ತಿರುವ ಆರ್ಥಿಕತೆ ತಡೆಯಲು `ಕಾಂಗ್ರೆಸ್ ಸೂತ್ರ’ ಅನುಸರಿಸಿ: ಬಿಜೆಪಿಗೆ ಸಲಹೆಕೊಟ್ಟ ವಿತ್ತ ಸಚಿವೆಯ ಪತಿ!

- Advertisement -
- Advertisement -

ಕುಸಿಯುತ್ತಿರುವ ಆರ್ಥಿಕತೆ, ನಿರುದ್ಯೋಗ ಸೇರಿ ಹಲವು ಸಮಸ್ಯೆಗಳು ಅಭಿವೃದ್ಧಿಗೆ ಮಾರಕವಾಗಿವೆ. ಜಿಡಿಪಿ ಕುಸಿದಿದ್ದು, ಹಲವು ಕ್ಷೇತ್ರಗಳು ಲಾಭವಿಲ್ಲದೇ ನೆಲಕಚ್ಚುತ್ತಿವೆ. ವ್ಯಾಪಾರ, ಉದ್ಯಮ, ಮಾರುಕಟ್ಟೆ ಸ್ಥಿತಿಗತಿ ಮಂದಗತಿಯಲ್ಲಿ ಸಾಗಿದೆ. ಕಾರ್ಪೊರೇಟ್ ವಲಯ ಚೇತರಿಕೆ ಕಾಣುತ್ತಿಲ್ಲ. ಹೀಗಿರುವಾಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಾತ್ರ ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿದೆ. ಕಾಂಗ್ರೆಸ್ ಆಡಳಿತವಿದ್ದಾಗಲೂ ಆರ್ಥಿಕತೆ ಕುಸಿತವುಂಟಾಗಿತ್ತು. ಆದರೆ ಹಲವು ಸುಧಾರಿತ ಕ್ರಮಗಳ ಜಾರಿಯ ನಂತರ ಎಲ್ಲವೂ ಸರಿಹೋಗಿ, ಜನತೆಯ ಜೀವನ ಕ್ರಮ ಉತ್ತಮವಾಗಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ ಹಾಗೇ ಆಗುತ್ತಿಲ್ಲ. ಬಿಜೆಪಿ ಸರ್ಕಾರ ಇತರೆ ಆರ್ಥಿಕ ತಜ್ಞರ ಸಲಹೆ ಪಡೆಯದೇ ತನ್ನ ಸೊಂಡಿಲಿನಿಂದ ತಾನೇ ನೀರು ಕುಡಿಯಲು ಹೊರಟಿರುವ ವಿಷಯ  ಗೌಪ್ಯವಾಗಿ ಉಳಿದಿಲ್ಲ. ಈಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್, ದಿ ಹಿಂದೂ ದಿನಪತ್ರಿಕೆಯ ಅಭಿಪ್ರಾಯ ಸಂಗತಿಗೆ ಬರೆದ ಲೇಖನ ಜಗಜ್ಜಾಹೀರುಗೊಳಿಸಿದೆ.

ಹೌದು… ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಪರಕಲಾ ಪ್ರಭಾಕರ್ ಸುದೀರ್ಘ ಲೇಖನವೊಂದನ್ನು ಬರೆದಿದ್ದಾರೆ. ಅದರಲ್ಲಿ ಬಿಜೆಪಿ ಸರ್ಕಾರ, ಕಾಂಗ್ರೆಸ್ ಆಡಳಿತದಲ್ಲಿ ಅನುಸರಿಸಲಾಗಿದ್ದ ಆರ್ಥಿಕತೆ ಅಭಿವೃದ್ಧಿ ನಿಯಮಾವಳಿಗಳನ್ನು ಅನುಸರಿಸಬೇಕಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಬಿಜೆಪಿಯ ರಾಜಕೀಯ ಯೋಜನೆಗಳ ಐಕಾನ್ ಆಗಿ ಆಯ್ಕೆ ಮಾಡುತ್ತದೆ. ಹಾಗೆಯೇ ಆರ್ಥಿಕತೆಯ ವಾಸ್ತುಶಿಲ್ಪದ ಆಧಾರವಾಗಿ ನರಸಿಂಹರಾವ್ ಅವರ ದೃಢ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

60 ವರ್ಷದ ಪರಕಲಾ ಪ್ರಭಾಕರ್ ಅವರು, ಆಂಧ್ರಪ್ರದೇಶ ಸರ್ಕಾರದ ಮಾಜಿ ಸಂವಹನ ಸಲಹೆಗಾರರಾಗಿದ್ದರು. ನೆಹರು ಕಾಲದ ಆರ್ಥಿಕತೆಯ ವ್ಯವಸ್ಥೆ ಹಾಗೂ ಚೌಕಟ್ಟಿನ ಬಗ್ಗೆ ಬಿಜೆಪಿ ಸರ್ಕಾರ ಮಾಡುತ್ತಿರುವ ಟೀಕೆ, ವಿಮರ್ಶೆ, ವ್ಯಂಗ್ಯದ ವಿರುದ್ಧವೂ ಪ್ರಭಾಕರ್ ಮಾತನಾಡಿದ್ದಾರೆ. ಥಿಂಕ್-ತ್ಯಾಂಕ್, ತಪ್ಪನ್ನು ತಿದ್ದಿಕೊಂಡು, ಅರಿತು ನಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಆಧುನಿಕ ಮಾರುಕಟ್ಟೆ, ಜಾಗತೀಕರಣದ ಜಗತ್ತಲ್ಲಿ ಆಂತರಿಕವಾಗಿ ಸಮಗ್ರ ಮಾನವತಾವಾದದ ರಚನೆಯ ಮೇಲೆ ಪ್ರಾಯೋಗಿಕ ಉಪಕ್ರಮಗಳನ್ನು ರೂಪಿಸಲು ಸಾಧ್ಯವಿಲ್ಲ. ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಆರ್ಥಿಕ ವಾಸ್ತುಶಿಲ್ಪ ಮತ್ತು ಅಭಿವೃದ್ಧಿ ಅಜೆಂಡಾವನ್ನು ಸ್ವೀಕರಿಸಿ ಅದನ್ನು ಅನುಸರಿಸುವ ಮೂಲಕ ಬಿಜೆಪಿ ಸೀಮಿತ ಕಾರ್ಯಸೂಚಿಯಿಂದ ಬಿಡುಗಡೆ ಹೊಂದಬಹುದು ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತದ ಪ್ರಸ್ತುತ ಬೃಹತ್ ಸಮಸ್ಯೆ ಆರ್ಥಿಕತೆ ಕುಸಿತದಿಂದ ಹೊರಬರಲು ಬಿಜೆಪಿ ತನ್ನಲ್ಲಿರುವ ಕೆಲವು ಚಿಂತನೆಗಳಲ್ಲಿನ ದೌರ್ಬಲ್ಯತೆಯನ್ನು ಸರಿಪಡಿಸಿಕೊಳ್ಳಬೇಕಿದೆ. ಸರ್ಕಾರ ಇನ್ನೂ ನಿರಾಕರಣೆ ಕ್ರಮವನ್ನೇ ಅನುಸರಿಸುತ್ತಿದೆ. ಸಾರ್ವಜನಿಕ ವಲಯಕ್ಕೆ ಹರಿಯುವ ದತ್ತಾಂಶವು ನಂತರದ ದಿನಗಳಲ್ಲಿ ಎದುರಾಗಬಹುದಾದ ಗಂಭೀರ ಸವಾಲು ದುಃಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಬರೆದಿದ್ದಾರೆ.

ಇತ್ತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತಿಯ ಲೇಖನದ ಬಗ್ಗೆ ಪ್ರತಿಕ್ರಿಯಿಸಿ, 2014 ರಿಂದ 2019 ರವರೆಗೆ ಬಿಜೆಪಿ ಸರ್ಕಾರ ಮೂಲಭೂತ ಸುಧಾರಣೆಗಳನ್ನು ಮಾಡಿದೆ. ಸರಕು ಮತ್ತು ಸೇವಾ ತೆರಿಗೆ, ಆಧಾರ್ ಮತ್ತು ಅಡುಗೆ ಅನಿಲ ವಿತರಣೆಯಂತಹ ಕ್ರಮಗಳ ಬಗ್ಗೆ ಪಟ್ಟಿ ಮಾಡಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...