Homeಕರ್ನಾಟಕರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಜ್ಯಪಾಲರು, ಸುಪ್ರೀಂಕೋರ್ಟಿನ ಮಧ್ಯಪ್ರವೇಶದಿಂದ ಬಿಕ್ಕಟ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.

- Advertisement -
- Advertisement -

ರಾಜ್ಯ ಸರ್ಕಾರದ ಸುತ್ತ ನಡೆಯುತ್ತಿರುವ ಘಟನಾವಳಿಗಳು ರಾಷ್ಟ್ರಪತಿ ಆಡಳಿತದ ಕಡೆಗೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆ ನಂತರ ಬಿದ್ದು ಹೋಗುವ ಸಾಧ್ಯತೆಯೇ ಹೆಚ್ಚಿದೆ. ಆದರೆ, ಬಿಜೆಪಿಯವರು ಅಷ್ಟು ಹೊತ್ತು ಕಾಯಲು ಸಿದ್ಧವಿಲ್ಲ. ಹಾಗೆ ಆದರೆ, ಮುಂಬೈನಲ್ಲಿ ಇರುವ ಶಾಸಕರು ಮರಳಿ ತಮ್ಮ ಪಕ್ಷಗಳಿಗೆ ಹೋಗಿಬಿಡಬಹುದೆಂಬ ಆತಂಕ ಬಿಜೆಪಿಯದ್ದು. ಹಾಗಾಗಿ ರಾಜ್ಯಪಾಲರಿಗೆ ಪದೇ ಪದೇ ಮನವಿ ಕೊಟ್ಟು ಅವರಿಂದ ಸ್ಪೀಕರ್‍ಗೆ ಸಂದೇಶ ಬರುವಂತೆ ನೋಡಿಕೊಂಡರು. ಆದರೆ, ಸ್ಪೀಕರ್‍ಗೆ ಸದನವನ್ನು ಯಾವ ರೀತಿ ನಡೆಸಬೇಕೆಂಬ ನಿರ್ದೇಶನ ಕೊಡುವ ಅಧಿಕಾರ ರಾಜ್ಯಪಾಲರಿಗಿಲ್ಲವಾದ್ದರಿಂದ ಅದಕ್ಕೆ ಸ್ಪೀಕರ್ ಕವಡೆ ಕಾಸಿನ ಕಿಮ್ಮತ್ತು ನೀಡಲಿಲ್ಲ.

ಆ ನಂತರ ಸಭಾನಾಯಕ ಕುಮಾರಸ್ವಾಮಿಯವರಿಗೇ ರಾಜ್ಯಪಾಲರಿಂದ ಸಮಯ ನಿಗದಿ ಮಾಡಿಸಿದರು. ತಾಂತ್ರಿಕವಾಗಿ ಇದು ಸರಿಯಿತ್ತು. ಹಾಗಾಗಿ ಅದನ್ನು ಕುಮಾರಸ್ವಾಮಿಯವರು ಒಪ್ಪಲೇಬೇಕಾಗುತ್ತದೆ ಎಂಬ ನಿರೀಕ್ಷೆ ಎಲ್ಲರದ್ದಾಗಿತ್ತು. ಅದರ ಕುರಿತು ಮತ್ತೆ ರಾಜ್ಯಪಾಲರಿಗೆ ಪತ್ರ ಬರೆದರು. ಮಧ್ಯಾಹ್ನ 1.30ರ ಡೆಡ್‍ಲೈನ್‍ಗೆ ಡೋಂಟ್‍ಕೇರ್ ಎಂಬಂತೆ ಸದನದ ಕಲಾಪ ನಡೆಯಿತು. ಅಷ್ಟೇ ಅಲ್ಲದೇ ರಾಜ್ಯಪಾಲರು ಇಂತಹ ಡೆಡ್‍ಲೈನ್ ತಾಂತ್ರಿಕವಾಗಿಯೂ ತಪ್ಪಿರಬಹುದೇ ಎಂಬ ಅನುಮಾನ ಮೂಡುವ ರೀತಿಯಲ್ಲಿ ಹಲವು ಕೋರ್ಟ್ ಆದೇಶಗಳನ್ನು ಉಲ್ಲೇಖಿಸಲಾಯಿತು.

ಇಷ್ಟು ಹೊತ್ತಿಗೆ ರಾಜ್ಯಪಾಲರಿಂದ ಇನ್ನೊಂದು ಗಡುವು, ಸಂಜೆ 6 ಗಂಟೆ ನಿಗದಿಯಾಯಿತು. ಅದನ್ನು ಉಲ್ಲೇಖಿಸಿದ ಕುಮಾರಸ್ವಾಮಿಯವರು ರಾಜ್ಯಪಾಲರು ಈ ಅವಧಿಯಲ್ಲಿ ನಡೆದುಕೊಂಡ ಪಕ್ಷಪಾತದ ರೀತಿಯನ್ನು ಸದನದಲ್ಲಿ ಪ್ರಸ್ತಾಪಿಸಿದರು. ಅಂದರೆ, ರಾಜ್ಯಪಾಲರ ಈ ನಡೆಗೆ ನಮ್ಮ ಮಾನ್ಯತೆ ಇಲ್ಲ ಎನ್ನುವುದನ್ನು ಸೂಚಿಸಿದರು. ತನ್ನ ಪತ್ರದಲ್ಲಿ ಕುದುರೆ ವ್ಯಾಪಾರ ಎಂಬ ಪದವನ್ನು ಬಳಸಿರುವ ರಾಜ್ಯಪಾಲರು, ಕುದುರೆ ವ್ಯಾಪಾರ ಯಾರು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಲ್ಲವಾ ಎಂದು ಹರಿಹಾಯ್ದರು.

ಮುಂದುವರೆದು, ಯಡಿಯೂರಪ್ಪನವರನ್ನುದ್ದೇಶಿಸಿ ‘ಬಹಳ ಆತುರದಲ್ಲಿದ್ದೀರಿ. ಅದು ಅಷ್ಟು ಒಳ್ಳೆಯದಲ್ಲ. ನೋಡೋಣ, ಏನಾಗುತ್ತೆ ಅಂತ. ರಾಷ್ಟ್ರಪತಿ ಆಡಳಿತ ಬರುತ್ತದೋ ಅಥವಾ ನೀವು ಮುಖ್ಯಮಂತ್ರಿಯಾಗ್ತೀರೋ ಎನ್ನೋದನ್ನು ನೋಡೋಣ’ ಎಂದೂ ಹೇಳಿದರು.

ಇದರ ಅರ್ಥ ಇಷ್ಟೇ. ರಾಜ್ಯಪಾಲರ (ಸರ್ಕಾರದ ಪ್ರಕಾರ) ಅನೈತಿಕ ನಡೆಗೆ ಸರ್ಕಾರವು ಬದ್ಧವಾಗುವುದಿಲ್ಲ. ಅದರ ಬದಲಿಗೆ ಸುಪ್ರೀಂಕೋರ್ಟಿಗೆ ಹೋಗುತ್ತದೆ. ಸುಪ್ರೀಂಕೋರ್ಟು ತೀರ್ಮಾನ ಘೋಷಿಸುವುದೇ ತಡವಾಗುವ ಸಾಧ್ಯತೆಯೂ ಇದೆ. ಏಕೆಂದರೆ, ಇದರಲ್ಲಿ ಹಲವು ಸಾಂವಿಧಾನಿಕ ಅಂಶಗಳಿವೆ. ಅಸಾಂವಿಧಾನಿಕವಾದ ತೀರ್ಪು ಬಂದರೆ, ಶಾಸಕಾಂಗದ ಸ್ವಾಯತ್ತತೆಗೆ ಧಕ್ಕೆ ತಂದರೆ ಒಪ್ಪಲ್ಲ ಎನ್ನುವ ಸರ್ಕಾರ ಇದೆ. ಹಾಗಾಗಿ ಕೋರ್ಟೂ ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡಬೇಕಾಗುತ್ತದೆ. ಆ ಮಧ್ಯೆ ಸದನದಲ್ಲಿ ವಿಶ್ವಾಸಮತ ಯಾಚನೆ ಮುಗಿಯದೇ ಹೋದರೆ ರಾಜ್ಯಪಾಲರು ಏನು ಮಾಡುತ್ತಾರೆ?

ಇದನ್ನೂ ಓದಿ: ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಸರ್ಕಾರವನ್ನು ಮತ್ತು ಸದನವನ್ನು ಅಮಾನತ್ತಿನಲ್ಲಿಡುವ ಸಂಭವವಿದೆ. ಆಗ ಅನಿವಾರ್ಯವಾಗಿ ರಾಷ್ಟ್ರಪತಿ ಆಡಳಿತ ಬರುತ್ತದೆ. ಅದೇ ಹೊತ್ತಿನಲ್ಲಿ ಸುಪ್ರೀಂಕೋರ್ಟಿನಲ್ಲಿ ಉಳಿದ ವಿಚಾರಗಳು ಬಗೆಹರಿದಿರುವುದಿಲ್ಲ. ಹಾಗಿರುವಾಗ ಬಿಜೆಪಿಯನ್ನು ಆಡಳಿತದಲ್ಲಿ ಕೂರಿಸುವ ಕೆಲಸವನ್ನು ರಾಜ್ಯಪಾಲರು ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇವೆಲ್ಲದರ ಕಾರಣದಿಂದ ರಾಷ್ಟ್ರಪತಿ ಆಡಳಿತದ ಪ್ರಶ್ನೆ ಉದ್ಭವಿಸಿದೆ. ಆ ನಂತರ ಈ ಬಿಕ್ಕಟ್ಟು ಹೇಗೆ ಮತ್ತು ಯಾವಾಗ ಬಗೆಹರಿಯುತ್ತದೆಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಇರುತ್ತವೆ. ಶಾಸಕರು ಅನರ್ಹಗೊಂಡರೂ ಬಿಜೆಪಿಗೆ ಹೆಚ್ಚಿನ ಸೀಟುಗಳು ಇರುವುದರಿಂದ ಅವರದ್ದೇ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚು. ಅನರ್ಹಗೊಂಡ ನಂತರ ಮತ್ತೆ ಆ ಶಾಸಕರು ಬಿಜೆಪಿ ಟಿಕೆಟ್‍ನಿಂದ ಸ್ಪರ್ಧಿಸಿ ಗೆಲ್ಲಬೇಕು. ಕೆಲವರು ಸೋಲಲೂಬಹುದು. ಒಟ್ಟಿನಲ್ಲಿ ಅತಂತ್ರ ಸ್ಥಿತಿ ಸಾಕಷ್ಟು ಕಾಲ ಮುಂದುವರೆಯುವುದಂತೂ ಖಂಡಿತ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....