Homeಕರ್ನಾಟಕರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

ರಾಜ್ಯಪಾಲರು, ಸುಪ್ರೀಂಕೋರ್ಟಿನ ಮಧ್ಯಪ್ರವೇಶದಿಂದ ಬಿಕ್ಕಟ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ.

- Advertisement -
- Advertisement -

ರಾಜ್ಯ ಸರ್ಕಾರದ ಸುತ್ತ ನಡೆಯುತ್ತಿರುವ ಘಟನಾವಳಿಗಳು ರಾಷ್ಟ್ರಪತಿ ಆಡಳಿತದ ಕಡೆಗೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆ ನಂತರ ಬಿದ್ದು ಹೋಗುವ ಸಾಧ್ಯತೆಯೇ ಹೆಚ್ಚಿದೆ. ಆದರೆ, ಬಿಜೆಪಿಯವರು ಅಷ್ಟು ಹೊತ್ತು ಕಾಯಲು ಸಿದ್ಧವಿಲ್ಲ. ಹಾಗೆ ಆದರೆ, ಮುಂಬೈನಲ್ಲಿ ಇರುವ ಶಾಸಕರು ಮರಳಿ ತಮ್ಮ ಪಕ್ಷಗಳಿಗೆ ಹೋಗಿಬಿಡಬಹುದೆಂಬ ಆತಂಕ ಬಿಜೆಪಿಯದ್ದು. ಹಾಗಾಗಿ ರಾಜ್ಯಪಾಲರಿಗೆ ಪದೇ ಪದೇ ಮನವಿ ಕೊಟ್ಟು ಅವರಿಂದ ಸ್ಪೀಕರ್‍ಗೆ ಸಂದೇಶ ಬರುವಂತೆ ನೋಡಿಕೊಂಡರು. ಆದರೆ, ಸ್ಪೀಕರ್‍ಗೆ ಸದನವನ್ನು ಯಾವ ರೀತಿ ನಡೆಸಬೇಕೆಂಬ ನಿರ್ದೇಶನ ಕೊಡುವ ಅಧಿಕಾರ ರಾಜ್ಯಪಾಲರಿಗಿಲ್ಲವಾದ್ದರಿಂದ ಅದಕ್ಕೆ ಸ್ಪೀಕರ್ ಕವಡೆ ಕಾಸಿನ ಕಿಮ್ಮತ್ತು ನೀಡಲಿಲ್ಲ.

ಆ ನಂತರ ಸಭಾನಾಯಕ ಕುಮಾರಸ್ವಾಮಿಯವರಿಗೇ ರಾಜ್ಯಪಾಲರಿಂದ ಸಮಯ ನಿಗದಿ ಮಾಡಿಸಿದರು. ತಾಂತ್ರಿಕವಾಗಿ ಇದು ಸರಿಯಿತ್ತು. ಹಾಗಾಗಿ ಅದನ್ನು ಕುಮಾರಸ್ವಾಮಿಯವರು ಒಪ್ಪಲೇಬೇಕಾಗುತ್ತದೆ ಎಂಬ ನಿರೀಕ್ಷೆ ಎಲ್ಲರದ್ದಾಗಿತ್ತು. ಅದರ ಕುರಿತು ಮತ್ತೆ ರಾಜ್ಯಪಾಲರಿಗೆ ಪತ್ರ ಬರೆದರು. ಮಧ್ಯಾಹ್ನ 1.30ರ ಡೆಡ್‍ಲೈನ್‍ಗೆ ಡೋಂಟ್‍ಕೇರ್ ಎಂಬಂತೆ ಸದನದ ಕಲಾಪ ನಡೆಯಿತು. ಅಷ್ಟೇ ಅಲ್ಲದೇ ರಾಜ್ಯಪಾಲರು ಇಂತಹ ಡೆಡ್‍ಲೈನ್ ತಾಂತ್ರಿಕವಾಗಿಯೂ ತಪ್ಪಿರಬಹುದೇ ಎಂಬ ಅನುಮಾನ ಮೂಡುವ ರೀತಿಯಲ್ಲಿ ಹಲವು ಕೋರ್ಟ್ ಆದೇಶಗಳನ್ನು ಉಲ್ಲೇಖಿಸಲಾಯಿತು.

ಇಷ್ಟು ಹೊತ್ತಿಗೆ ರಾಜ್ಯಪಾಲರಿಂದ ಇನ್ನೊಂದು ಗಡುವು, ಸಂಜೆ 6 ಗಂಟೆ ನಿಗದಿಯಾಯಿತು. ಅದನ್ನು ಉಲ್ಲೇಖಿಸಿದ ಕುಮಾರಸ್ವಾಮಿಯವರು ರಾಜ್ಯಪಾಲರು ಈ ಅವಧಿಯಲ್ಲಿ ನಡೆದುಕೊಂಡ ಪಕ್ಷಪಾತದ ರೀತಿಯನ್ನು ಸದನದಲ್ಲಿ ಪ್ರಸ್ತಾಪಿಸಿದರು. ಅಂದರೆ, ರಾಜ್ಯಪಾಲರ ಈ ನಡೆಗೆ ನಮ್ಮ ಮಾನ್ಯತೆ ಇಲ್ಲ ಎನ್ನುವುದನ್ನು ಸೂಚಿಸಿದರು. ತನ್ನ ಪತ್ರದಲ್ಲಿ ಕುದುರೆ ವ್ಯಾಪಾರ ಎಂಬ ಪದವನ್ನು ಬಳಸಿರುವ ರಾಜ್ಯಪಾಲರು, ಕುದುರೆ ವ್ಯಾಪಾರ ಯಾರು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಲ್ಲವಾ ಎಂದು ಹರಿಹಾಯ್ದರು.

ಮುಂದುವರೆದು, ಯಡಿಯೂರಪ್ಪನವರನ್ನುದ್ದೇಶಿಸಿ ‘ಬಹಳ ಆತುರದಲ್ಲಿದ್ದೀರಿ. ಅದು ಅಷ್ಟು ಒಳ್ಳೆಯದಲ್ಲ. ನೋಡೋಣ, ಏನಾಗುತ್ತೆ ಅಂತ. ರಾಷ್ಟ್ರಪತಿ ಆಡಳಿತ ಬರುತ್ತದೋ ಅಥವಾ ನೀವು ಮುಖ್ಯಮಂತ್ರಿಯಾಗ್ತೀರೋ ಎನ್ನೋದನ್ನು ನೋಡೋಣ’ ಎಂದೂ ಹೇಳಿದರು.

ಇದರ ಅರ್ಥ ಇಷ್ಟೇ. ರಾಜ್ಯಪಾಲರ (ಸರ್ಕಾರದ ಪ್ರಕಾರ) ಅನೈತಿಕ ನಡೆಗೆ ಸರ್ಕಾರವು ಬದ್ಧವಾಗುವುದಿಲ್ಲ. ಅದರ ಬದಲಿಗೆ ಸುಪ್ರೀಂಕೋರ್ಟಿಗೆ ಹೋಗುತ್ತದೆ. ಸುಪ್ರೀಂಕೋರ್ಟು ತೀರ್ಮಾನ ಘೋಷಿಸುವುದೇ ತಡವಾಗುವ ಸಾಧ್ಯತೆಯೂ ಇದೆ. ಏಕೆಂದರೆ, ಇದರಲ್ಲಿ ಹಲವು ಸಾಂವಿಧಾನಿಕ ಅಂಶಗಳಿವೆ. ಅಸಾಂವಿಧಾನಿಕವಾದ ತೀರ್ಪು ಬಂದರೆ, ಶಾಸಕಾಂಗದ ಸ್ವಾಯತ್ತತೆಗೆ ಧಕ್ಕೆ ತಂದರೆ ಒಪ್ಪಲ್ಲ ಎನ್ನುವ ಸರ್ಕಾರ ಇದೆ. ಹಾಗಾಗಿ ಕೋರ್ಟೂ ಎಚ್ಚರಿಕೆಯಿಂದ ಹೆಜ್ಜೆಗಳನ್ನಿಡಬೇಕಾಗುತ್ತದೆ. ಆ ಮಧ್ಯೆ ಸದನದಲ್ಲಿ ವಿಶ್ವಾಸಮತ ಯಾಚನೆ ಮುಗಿಯದೇ ಹೋದರೆ ರಾಜ್ಯಪಾಲರು ಏನು ಮಾಡುತ್ತಾರೆ?

ಇದನ್ನೂ ಓದಿ: ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಸರ್ಕಾರವನ್ನು ಮತ್ತು ಸದನವನ್ನು ಅಮಾನತ್ತಿನಲ್ಲಿಡುವ ಸಂಭವವಿದೆ. ಆಗ ಅನಿವಾರ್ಯವಾಗಿ ರಾಷ್ಟ್ರಪತಿ ಆಡಳಿತ ಬರುತ್ತದೆ. ಅದೇ ಹೊತ್ತಿನಲ್ಲಿ ಸುಪ್ರೀಂಕೋರ್ಟಿನಲ್ಲಿ ಉಳಿದ ವಿಚಾರಗಳು ಬಗೆಹರಿದಿರುವುದಿಲ್ಲ. ಹಾಗಿರುವಾಗ ಬಿಜೆಪಿಯನ್ನು ಆಡಳಿತದಲ್ಲಿ ಕೂರಿಸುವ ಕೆಲಸವನ್ನು ರಾಜ್ಯಪಾಲರು ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇವೆಲ್ಲದರ ಕಾರಣದಿಂದ ರಾಷ್ಟ್ರಪತಿ ಆಡಳಿತದ ಪ್ರಶ್ನೆ ಉದ್ಭವಿಸಿದೆ. ಆ ನಂತರ ಈ ಬಿಕ್ಕಟ್ಟು ಹೇಗೆ ಮತ್ತು ಯಾವಾಗ ಬಗೆಹರಿಯುತ್ತದೆಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಇರುತ್ತವೆ. ಶಾಸಕರು ಅನರ್ಹಗೊಂಡರೂ ಬಿಜೆಪಿಗೆ ಹೆಚ್ಚಿನ ಸೀಟುಗಳು ಇರುವುದರಿಂದ ಅವರದ್ದೇ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚು. ಅನರ್ಹಗೊಂಡ ನಂತರ ಮತ್ತೆ ಆ ಶಾಸಕರು ಬಿಜೆಪಿ ಟಿಕೆಟ್‍ನಿಂದ ಸ್ಪರ್ಧಿಸಿ ಗೆಲ್ಲಬೇಕು. ಕೆಲವರು ಸೋಲಲೂಬಹುದು. ಒಟ್ಟಿನಲ್ಲಿ ಅತಂತ್ರ ಸ್ಥಿತಿ ಸಾಕಷ್ಟು ಕಾಲ ಮುಂದುವರೆಯುವುದಂತೂ ಖಂಡಿತ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...