Homeಮುಖಪುಟರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

ರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

- Advertisement -
- Advertisement -

ಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪತ್ರಕರ್ತರೊಡನೆ ಮಾತನಾಡುತ್ತಿರಬೇಕಾದರೆ, ಅವರ ತಲೆ, ಕಿವಿಯ ಮೇಲಿನ ಭಾಗಗಳಲ್ಲಿ ಲೇಸರ್ ಲೈಟ್‍ನಿಂದ ಹೊರಡುವ ರೀತಿಯ ಬೆಳಕು ಬಿದ್ದಿದೆ. ಅತೀ ಸಣ್ಣ ಅವಧಿಯಲ್ಲೇ 7 ಬಾರಿ ಈ ರೀತಿಯ ಬೆಳಕು ಓಡಾಡಿದೆ. ಆ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಪಡೆಯುತ್ತಿದ್ದ ಕ್ಯಾಮೆರಾಗಳಲ್ಲಿ ಇದು ಸ್ಪಷ್ಟವಾಗಿ ಕಂಡಿದೆ. ಇದು ಸ್ನೈಪರ್ ಗನ್‍ನಿಂದ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಆ ರೀತಿಯ ಬೆಳಕು ಬರುತ್ತದೆ ಎಂದು ರಕ್ಷಣಾ ಕೆಲಸದಲ್ಲಿರುವ ಕೆಲವರೂ ಹೇಳಿದ್ದಾರೆಂದು ಉಲ್ಲೇಖಿಸಿ, ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್, ಸುರ್ಜೇವಾಲಾ ಮತ್ತು ಜೈರಾಂ ರಮೇಶ್ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಇದು ರಾಹುಲ್ ಗಾಂಧಿಯವರನ್ನು ಹತ್ಯೆಗೈಯ್ಯುವ ಸಂಚು ಆಗಿರಬಹುದು. ಹಾಗಾಗಿ ಅದರ ಕುರಿತು ಉನ್ನತ ಮಟ್ಟದ ತನಿಖೆ ನಡೆದು ಅಂತಹ ಅಪಾಯ ಇಲ್ಲದಂತೆ ಮಾಡಬೇಕು ಎಂದು ಈ ಪತ್ರ ಕೇಳಿದೆ.

ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಇಲಾಖೆಯು, ಎಸ್‍ಪಿಜಿ ಮುಖ್ಯಸ್ಥರ ಜೊತೆ ಈ ಕುರಿತು ಚರ್ಚೆ ನಡೆದಿದೆಯೆಂತಲೂ, ಅದು ಯಾರದ್ದೋ ಮೊಬೈಲ್ ಫೋನ್‍ನಿಂದ ಹೊರಟಿರುವ ಬೆಳಕು ಅಷ್ಟೇ ಆಗಿದೆಯೆಂಬ ಅಭಿಪ್ರಾಯವಿದೆ ಎಂದು ಹೇಳಿದೆಯೆಂದು ಎನ್‍ಡಿಟಿವಿ ವರದಿ ಮಾಡಿದೆ. ಆದರೆ, ಉತ್ತರ ಪ್ರದೇಶ ಸರ್ಕಾರವು ಭದ್ರತೆಯಲ್ಲಿ ತೋರಿಸುತ್ತಿರುವ ಲೋಪದ ಕಾರಣಕ್ಕೇ ಹೀಗೆ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್‍ಗಾಂಧಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗಲೂ ಅವಘಡ ಸಂಭವಿಸಿತ್ತು. ವಿಮಾನವು ಸರಿಯಾಗಿ ಲ್ಯಾಂಡ್ ಆಗದೇ, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೂ ಸಹಾ ಹತ್ಯೆಯ ಪ್ರಯತ್ನ ಇರಬಹುದೇ ಎಂಬ ಸಂದೇಹವನ್ನು ಹಲವರು ವ್ಯಕ್ತಪಡಿಸಿದ್ದರು. ನಂತರ ನಾಗರಿಕ ವಿಮಾನಯಾನ ನಿಯಂತ್ರಣ ಪ್ರಾಧಿಕಾರ ಡಿಜಿಸಿಎ, ಅದನ್ನು ಅಲ್ಲಗಳೆದಿತ್ತು. ಆಟೋ ಪೈಲಟ್ ಮೋಡ್‍ಗೆ ವಿಮಾನವನ್ನು ಹಾಕಲಾಗಿತ್ತೆಂದೂ, ನಂತರ ಚಾಲಕ ಅದನ್ನು ಮ್ಯಾನ್ಯುಯೆಲ್ ಮೋಡ್‍ಗೆ ಹಾಕಿ ನಿಭಾಯಿಸಿದರೆಂದೂ, ಇದು ಮಾಮೂಲಿಯೆಂತಲೂ ಅದು ಹೇಳಿತ್ತು.

ವಿಡಿಯೋ ನೋಡಿ

ರಾಹುಲ್‍ಗಾಂಧಿಯವರ ತಂದೆ ರಾಜೀವ್‍ಗಾಂಧಿ ಮತ್ತು ಅವರ ಅಜ್ಜಿ ಇಂದಿರಾಗಾಂಧಿಯವರೂ ಅವರ ಮೇಲೆ ನಡೆದ ಹತ್ಯಾಪ್ರಯತ್ನಗಳಿಂದಲೇ ಜೀವ ಕಳೆದುಕೊಂಡಿದ್ದರು ಎಂಬುದನ್ನಿಲ್ಲಿ ಸ್ಮರಿಸಬಹುದು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ವ್ಯಕ್ತವಾಗಿದ್ದು, ಅವರು ರಾಜಕಾರಣದಿಂದಲೇ ಹೊರಗುಳಿದರೂ ಪರವಾಗಿಲ್ಲ, ವಿದೇಶಕ್ಕೆ ಹೋದರೂ ಪರವಾಗಿಲ್ಲ, ಅವರ ಸುರಕ್ಷತೆ ಮುಖ್ಯ. ಆ ಕುಟುಂಬದಲ್ಲಿ ಮತ್ತೊಂದು ದುರಂತ ನಡೆಯದಿರಲಿ ಎಂಬ ಚರ್ಚೆಯನ್ನು ಹಲವರು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...