Homeಮುಖಪುಟರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

ರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

- Advertisement -
- Advertisement -

ಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪತ್ರಕರ್ತರೊಡನೆ ಮಾತನಾಡುತ್ತಿರಬೇಕಾದರೆ, ಅವರ ತಲೆ, ಕಿವಿಯ ಮೇಲಿನ ಭಾಗಗಳಲ್ಲಿ ಲೇಸರ್ ಲೈಟ್‍ನಿಂದ ಹೊರಡುವ ರೀತಿಯ ಬೆಳಕು ಬಿದ್ದಿದೆ. ಅತೀ ಸಣ್ಣ ಅವಧಿಯಲ್ಲೇ 7 ಬಾರಿ ಈ ರೀತಿಯ ಬೆಳಕು ಓಡಾಡಿದೆ. ಆ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಪಡೆಯುತ್ತಿದ್ದ ಕ್ಯಾಮೆರಾಗಳಲ್ಲಿ ಇದು ಸ್ಪಷ್ಟವಾಗಿ ಕಂಡಿದೆ. ಇದು ಸ್ನೈಪರ್ ಗನ್‍ನಿಂದ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಆ ರೀತಿಯ ಬೆಳಕು ಬರುತ್ತದೆ ಎಂದು ರಕ್ಷಣಾ ಕೆಲಸದಲ್ಲಿರುವ ಕೆಲವರೂ ಹೇಳಿದ್ದಾರೆಂದು ಉಲ್ಲೇಖಿಸಿ, ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್, ಸುರ್ಜೇವಾಲಾ ಮತ್ತು ಜೈರಾಂ ರಮೇಶ್ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಇದು ರಾಹುಲ್ ಗಾಂಧಿಯವರನ್ನು ಹತ್ಯೆಗೈಯ್ಯುವ ಸಂಚು ಆಗಿರಬಹುದು. ಹಾಗಾಗಿ ಅದರ ಕುರಿತು ಉನ್ನತ ಮಟ್ಟದ ತನಿಖೆ ನಡೆದು ಅಂತಹ ಅಪಾಯ ಇಲ್ಲದಂತೆ ಮಾಡಬೇಕು ಎಂದು ಈ ಪತ್ರ ಕೇಳಿದೆ.

ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಇಲಾಖೆಯು, ಎಸ್‍ಪಿಜಿ ಮುಖ್ಯಸ್ಥರ ಜೊತೆ ಈ ಕುರಿತು ಚರ್ಚೆ ನಡೆದಿದೆಯೆಂತಲೂ, ಅದು ಯಾರದ್ದೋ ಮೊಬೈಲ್ ಫೋನ್‍ನಿಂದ ಹೊರಟಿರುವ ಬೆಳಕು ಅಷ್ಟೇ ಆಗಿದೆಯೆಂಬ ಅಭಿಪ್ರಾಯವಿದೆ ಎಂದು ಹೇಳಿದೆಯೆಂದು ಎನ್‍ಡಿಟಿವಿ ವರದಿ ಮಾಡಿದೆ. ಆದರೆ, ಉತ್ತರ ಪ್ರದೇಶ ಸರ್ಕಾರವು ಭದ್ರತೆಯಲ್ಲಿ ತೋರಿಸುತ್ತಿರುವ ಲೋಪದ ಕಾರಣಕ್ಕೇ ಹೀಗೆ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್‍ಗಾಂಧಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗಲೂ ಅವಘಡ ಸಂಭವಿಸಿತ್ತು. ವಿಮಾನವು ಸರಿಯಾಗಿ ಲ್ಯಾಂಡ್ ಆಗದೇ, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೂ ಸಹಾ ಹತ್ಯೆಯ ಪ್ರಯತ್ನ ಇರಬಹುದೇ ಎಂಬ ಸಂದೇಹವನ್ನು ಹಲವರು ವ್ಯಕ್ತಪಡಿಸಿದ್ದರು. ನಂತರ ನಾಗರಿಕ ವಿಮಾನಯಾನ ನಿಯಂತ್ರಣ ಪ್ರಾಧಿಕಾರ ಡಿಜಿಸಿಎ, ಅದನ್ನು ಅಲ್ಲಗಳೆದಿತ್ತು. ಆಟೋ ಪೈಲಟ್ ಮೋಡ್‍ಗೆ ವಿಮಾನವನ್ನು ಹಾಕಲಾಗಿತ್ತೆಂದೂ, ನಂತರ ಚಾಲಕ ಅದನ್ನು ಮ್ಯಾನ್ಯುಯೆಲ್ ಮೋಡ್‍ಗೆ ಹಾಕಿ ನಿಭಾಯಿಸಿದರೆಂದೂ, ಇದು ಮಾಮೂಲಿಯೆಂತಲೂ ಅದು ಹೇಳಿತ್ತು.

ವಿಡಿಯೋ ನೋಡಿ

ರಾಹುಲ್‍ಗಾಂಧಿಯವರ ತಂದೆ ರಾಜೀವ್‍ಗಾಂಧಿ ಮತ್ತು ಅವರ ಅಜ್ಜಿ ಇಂದಿರಾಗಾಂಧಿಯವರೂ ಅವರ ಮೇಲೆ ನಡೆದ ಹತ್ಯಾಪ್ರಯತ್ನಗಳಿಂದಲೇ ಜೀವ ಕಳೆದುಕೊಂಡಿದ್ದರು ಎಂಬುದನ್ನಿಲ್ಲಿ ಸ್ಮರಿಸಬಹುದು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ವ್ಯಕ್ತವಾಗಿದ್ದು, ಅವರು ರಾಜಕಾರಣದಿಂದಲೇ ಹೊರಗುಳಿದರೂ ಪರವಾಗಿಲ್ಲ, ವಿದೇಶಕ್ಕೆ ಹೋದರೂ ಪರವಾಗಿಲ್ಲ, ಅವರ ಸುರಕ್ಷತೆ ಮುಖ್ಯ. ಆ ಕುಟುಂಬದಲ್ಲಿ ಮತ್ತೊಂದು ದುರಂತ ನಡೆಯದಿರಲಿ ಎಂಬ ಚರ್ಚೆಯನ್ನು ಹಲವರು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...