Homeಮುಖಪುಟರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

ರಾಹುಲ್ ಹತ್ಯಗೆ ಸಂಚು? ಅಮೇಥಿಯಲ್ಲಿ ನಡೆದದ್ದೇನು?

- Advertisement -
- Advertisement -

ಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪತ್ರಕರ್ತರೊಡನೆ ಮಾತನಾಡುತ್ತಿರಬೇಕಾದರೆ, ಅವರ ತಲೆ, ಕಿವಿಯ ಮೇಲಿನ ಭಾಗಗಳಲ್ಲಿ ಲೇಸರ್ ಲೈಟ್‍ನಿಂದ ಹೊರಡುವ ರೀತಿಯ ಬೆಳಕು ಬಿದ್ದಿದೆ. ಅತೀ ಸಣ್ಣ ಅವಧಿಯಲ್ಲೇ 7 ಬಾರಿ ಈ ರೀತಿಯ ಬೆಳಕು ಓಡಾಡಿದೆ. ಆ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಪಡೆಯುತ್ತಿದ್ದ ಕ್ಯಾಮೆರಾಗಳಲ್ಲಿ ಇದು ಸ್ಪಷ್ಟವಾಗಿ ಕಂಡಿದೆ. ಇದು ಸ್ನೈಪರ್ ಗನ್‍ನಿಂದ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಆ ರೀತಿಯ ಬೆಳಕು ಬರುತ್ತದೆ ಎಂದು ರಕ್ಷಣಾ ಕೆಲಸದಲ್ಲಿರುವ ಕೆಲವರೂ ಹೇಳಿದ್ದಾರೆಂದು ಉಲ್ಲೇಖಿಸಿ, ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್, ಸುರ್ಜೇವಾಲಾ ಮತ್ತು ಜೈರಾಂ ರಮೇಶ್ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಇದು ರಾಹುಲ್ ಗಾಂಧಿಯವರನ್ನು ಹತ್ಯೆಗೈಯ್ಯುವ ಸಂಚು ಆಗಿರಬಹುದು. ಹಾಗಾಗಿ ಅದರ ಕುರಿತು ಉನ್ನತ ಮಟ್ಟದ ತನಿಖೆ ನಡೆದು ಅಂತಹ ಅಪಾಯ ಇಲ್ಲದಂತೆ ಮಾಡಬೇಕು ಎಂದು ಈ ಪತ್ರ ಕೇಳಿದೆ.

ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಇಲಾಖೆಯು, ಎಸ್‍ಪಿಜಿ ಮುಖ್ಯಸ್ಥರ ಜೊತೆ ಈ ಕುರಿತು ಚರ್ಚೆ ನಡೆದಿದೆಯೆಂತಲೂ, ಅದು ಯಾರದ್ದೋ ಮೊಬೈಲ್ ಫೋನ್‍ನಿಂದ ಹೊರಟಿರುವ ಬೆಳಕು ಅಷ್ಟೇ ಆಗಿದೆಯೆಂಬ ಅಭಿಪ್ರಾಯವಿದೆ ಎಂದು ಹೇಳಿದೆಯೆಂದು ಎನ್‍ಡಿಟಿವಿ ವರದಿ ಮಾಡಿದೆ. ಆದರೆ, ಉತ್ತರ ಪ್ರದೇಶ ಸರ್ಕಾರವು ಭದ್ರತೆಯಲ್ಲಿ ತೋರಿಸುತ್ತಿರುವ ಲೋಪದ ಕಾರಣಕ್ಕೇ ಹೀಗೆ ಆಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್‍ಗಾಂಧಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗಲೂ ಅವಘಡ ಸಂಭವಿಸಿತ್ತು. ವಿಮಾನವು ಸರಿಯಾಗಿ ಲ್ಯಾಂಡ್ ಆಗದೇ, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೂ ಸಹಾ ಹತ್ಯೆಯ ಪ್ರಯತ್ನ ಇರಬಹುದೇ ಎಂಬ ಸಂದೇಹವನ್ನು ಹಲವರು ವ್ಯಕ್ತಪಡಿಸಿದ್ದರು. ನಂತರ ನಾಗರಿಕ ವಿಮಾನಯಾನ ನಿಯಂತ್ರಣ ಪ್ರಾಧಿಕಾರ ಡಿಜಿಸಿಎ, ಅದನ್ನು ಅಲ್ಲಗಳೆದಿತ್ತು. ಆಟೋ ಪೈಲಟ್ ಮೋಡ್‍ಗೆ ವಿಮಾನವನ್ನು ಹಾಕಲಾಗಿತ್ತೆಂದೂ, ನಂತರ ಚಾಲಕ ಅದನ್ನು ಮ್ಯಾನ್ಯುಯೆಲ್ ಮೋಡ್‍ಗೆ ಹಾಕಿ ನಿಭಾಯಿಸಿದರೆಂದೂ, ಇದು ಮಾಮೂಲಿಯೆಂತಲೂ ಅದು ಹೇಳಿತ್ತು.

ವಿಡಿಯೋ ನೋಡಿ

ರಾಹುಲ್‍ಗಾಂಧಿಯವರ ತಂದೆ ರಾಜೀವ್‍ಗಾಂಧಿ ಮತ್ತು ಅವರ ಅಜ್ಜಿ ಇಂದಿರಾಗಾಂಧಿಯವರೂ ಅವರ ಮೇಲೆ ನಡೆದ ಹತ್ಯಾಪ್ರಯತ್ನಗಳಿಂದಲೇ ಜೀವ ಕಳೆದುಕೊಂಡಿದ್ದರು ಎಂಬುದನ್ನಿಲ್ಲಿ ಸ್ಮರಿಸಬಹುದು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ವ್ಯಕ್ತವಾಗಿದ್ದು, ಅವರು ರಾಜಕಾರಣದಿಂದಲೇ ಹೊರಗುಳಿದರೂ ಪರವಾಗಿಲ್ಲ, ವಿದೇಶಕ್ಕೆ ಹೋದರೂ ಪರವಾಗಿಲ್ಲ, ಅವರ ಸುರಕ್ಷತೆ ಮುಖ್ಯ. ಆ ಕುಟುಂಬದಲ್ಲಿ ಮತ್ತೊಂದು ದುರಂತ ನಡೆಯದಿರಲಿ ಎಂಬ ಚರ್ಚೆಯನ್ನು ಹಲವರು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...