Homeಮುಖಪುಟರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

- Advertisement -
- Advertisement -

ನಿಮಗಿದು ಗೊತ್ತೇ? ಮೊನ್ನೆಯಷ್ಟೇ ಬಿಜೆಪಿ ಸೇರಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಿಯಲ್ ಎಸ್ಟೇಟ್ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹಾಜರಾಗುವಂತೆ ಕಳೆದ ಡಿಸೆಂಬರ್ ನಲ್ಲಿ ಕೋರ್ಟ್ ವಾರೆಂಟ್ ಹೊರಡಿಸಿತ್ತು.

ರುದ್ರಾ ಬಿಲ್ಡ್ವೆಲ್ ಕಂಪನಿಯ ಪ್ರಾಜೆಕ್ಟ್ ಒಂದರಲ್ಲಿ ನಡೆದ ಮೋಸ ಮತ್ತು ಪಿತೂರಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಗೆ ಈ ಕಂಪನಿಯ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸತತ ಗೈರು ಹಾಜರಾಗಿದ್ದರು. ನಂತರ ಜನವರಿ 24, 2019ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ದೆಹಲಿ ಹೈಕೋರ್ಟ್ ಖಡಕ್ ವಾರ್ನಿಂಗ್ ನೀಡಿತ್ತು. ಆದರೆ ಗಂಭೀರ್ ತಮ್ಮ ಮೇಲಿನ ಪ್ರಕರಣ ಕೈ ಬಿಡುವಂತೆ ಮೇಲ್ಮನವಿ ಸಲ್ಲಿಸಿದ್ದರು. ದೆಹಲಿಯ ಸಾಕೇತ್ ಕೋರ್ಟ್ ಅರ್ಜಿಯನ್ನು ವಜಾ ಮಾಡಿತ್ತು.

ದೆಹಲಿಯ ಗಾಜಿಯಾಬಾದ್ ನ ಇಂದಿರಾಪುರಂನಲ್ಲಿ ಶುರುವಾಗಬೇಕಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಪ್ಲ್ಯಾಟ್ ಖರೀದಿಸಲು ಅನೇಕರು ಕೋಟ್ಯಾಂತರ ರೂಪಾಯಿ ಹೂಡಿಕೆ ಮಾಡಿದ್ದರು. ಆದರೆ ಕಟ್ಟಡ ನಿರ್ಮಾಣ ಕೆಲಸ ಇನ್ನೂ ಪ್ರಾರಂಭವಾಗಿಲ್ಲ ಎಂದು ಹೂಡಿಕೆದಾರರು 2016ರಲ್ಲಿ ದೂರು ಸಲ್ಲಿಸಿದ್ದರು. ಹೂಡಿಕೆದಾರರನ್ನು ವಂಚಿಸುವ ಸಲುವಾಗಿಯೇ ಈ ಪ್ರಾಜೆಕ್ಟನ್ನು ಆರಂಭಿಸಲಾಗಿತ್ತು ಎಂದು ಈ ದೂರಿನಲ್ಲಿ ಹೇಳಲಾಗಿದ್ದು ಪ್ರಕರಣ ವಿಚಾರಣೆಯ ಹಂತದಲ್ಲಿದೆ.

ಈ ಎಲ್ಲಾ ಕೇಸುಗಳಿಂದ ಬೇಸತ್ತಿರುವ ಗಂಭೀರ್ ಈ ಕಾರಣಕ್ಕಾಗಿಯೇ ಖುಸೆಗೊಳ್ಳಲು ಬಿಜೆಪಿ ಸೇರಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಈ ಹಿಂದೆಯೂ ಹಲವಾರು ಜನ ತಮ್ಮ ಮೇಲಿನ ಕೇಸುಗಳಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸೇರಿದ್ದರು ನಂತರ ಅವರ ಕೇಸುಗಳು ಖುಲಾಸೆಗೊಂಡ ಸಾಕಷ್ಟು ಉದಾಹರಣೆಗಳು ಸಹ ಇವೆ.

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದ ಮುಕುಲ್ ರಾಯ್ ಬಿಜೆಪಿ ಸೇರ್ಪಡೆ

ಈ ಹಿಂದೆಯೂ ಮುಕುಲ್ ರಾಯ್ ಶ್ರದ್ಧಾ ಚಿಟ್ ಫಂಡ್ ಸ್ಕ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ನಂತರ ಅವರು ಬಿಜೆಪಿ ಸೇರಿದ ಕೂಡಲೇ ಹಗರಣ ಮುಕ್ತರಾದರು. ಹಿಮಾಚಲ ಪ್ರದೇಶದ ಅನಿಲ್ ಶರ್ಮಾ ಟಿಲಿಕಾಂ ಹಗರಣದಲ್ಲಿ ಸಿಲುಕಿಕೊಂಡು ಬಿಜೆಪಿ ಸೇರಿ ಬಗೆಹರಿಸಿಕೊಂಡರು. ಇಂತಹ ಹತ್ತಾರು ಉದಾಹರಣೆಗಳ ಸಾಲಿಗೆ ಹೊಸ ಸೇರ್ಪಡೆ ಗೌತಮ್ ಗಂಭೀರತೆ ಆಗಿದ್ದಾರೆ.

ಒಂದು ರಾಜಕೀಯ ಪಕ್ಷಕ್ಕೆ ಆರೋಗ್ಯಕರವೆನಿಸದ `ಕಾಂಗ್ರೆಸ್ ಮುಕ್ತ ಭಾರತ ಮಾಡುವೆ’ ಎಂದು ಹೊರಟ ಬಿಜೆಪಿ ಅದಕ್ಕೋಸ್ಕರ ಆಯ್ದುಕೊಂಡಿದ್ದು ಜನರಿಗೆ ಹತ್ತಿರವಾಗುವ ಜನಪರ ಹಾದಿಯನ್ನಲ್ಲ, ಬದಲಿಗೆ ಕಾಂಗ್ರೆಸಿನ ಹಗರಣವೀರರನ್ನು ತನ್ನತ್ತ ಸೆಳೆದುಕೊಂಡು ಕಾಂಗ್ರೆಸ್ ಅನ್ನು ಶುದ್ಧಗೊಳಿಸಿದ್ದು! ಈ ವಿಚಾರದಲ್ಲಿ ಬಿಜೆಪಿ ಎರಡು ರೀತಿಯಲ್ಲಿ ವ್ಯವಹರಿಸುತ್ತಾ ಬಂದಿದೆ. ಒಂದು, ಹಗರಣದಲ್ಲಿ ಸಿಕ್ಕಿಹಾಕಿಕೊಂಡವರಿಗೆ ತಮ್ಮ ಪಕ್ಷಕ್ಕೆ ಆಹ್ವಾನಿಸಿ ಅವರಿಗೆ ತಮ್ಮ ಪ್ರಭಾವ ಮತ್ತು ಅಧಿಕಾರ ದುರಪಯೋಗ ಬಳಸಿ ಕ್ಲಿನ್ ಚಿಟ್ ನೀಡಲಾಗುತ್ತದೆ. ಒಂದುವೇಳೆ ಅವರು ಪಕ್ಷಕ್ಕೆ ಬರದಿದ್ದರೆ ಅಂಥವರ ಮೇಲೆ ಐ.ಟಿ ದಾಳಿ, ಇ.ಡಿ ದಾಳಿ ರೀತಿಯಲ್ಲಿ ಬೆದರಿಕೆ ಒಡ್ಡಿ, ಸಿಬಿಐ ತನಿಖೆಯ ಗುಮ್ಮನನ್ನು ತೋರಿಸಿ ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಅಪ್ರಜಾತಾಂತ್ರಿಕ ನಡೆ ಎರಡನೆಯದ್ದು.

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ

ಕರ್ನಾಟಕದ ಎಸ್.ಎಂ ಕೃಷ್ಣರವರು ಸಹ ತೆರಿಗೆ ವಂಚನೆಯ ಬಲೆಯಲ್ಲಿ ಬಂಧಿಯಾಗಿದ್ದ ತಮ್ಮ ಅಳಿಯ ಸಿದ್ಧಾರ್ಥ ಹೆಗ್ಡೆಯನ್ನು ಬಚಾವು ಮಾಡಿಕೊಳ್ಳುವುದಕ್ಕಾಗಿ ಇಳಿ ವಯಸ್ಸಿನಲ್ಲಿ ಬಿಜೆಪಿ ಸೇರಿ ಮೂಲೆಗುಂಪಾದರು ಎಂಬ ಮಾತುಗಳಿವೆ. ಕೊಡಗು ಚಿಕ್ಕಮಗಳೂರು ಬೇನಾಮಿ ಕಾಫಿ ಎಸ್ಟೇಟ್ ಕುರಿತು ಸಿದ್ದಾರ್ಥ ವಿರುದ್ಧ ದೂರುಗಳಿದ್ದವು. ತನಿಖೆ ಭಯಕ್ಕಾಗಿಯೇ ಬಿಜೆಪಿ ಸೇರಿದ್ದರು ಎಂಬ ಮಾತುಗಳು ಚಾಲ್ತಿಯಲ್ಲಿವೆ. ಇನ್ನು ದೇಶ ಬಿಟ್ಟು ಓಡಿಹೋದ ಕಳ್ಳ ಉದ್ಯಮಿಗಳಿಗೆಲ್ಲಾ ನೇರ ಬಿಜೆಪಿಯೇ ಸಹಕರಿಸಿದ್ದಲ್ಲದೇ ಅವರಿಂದ ಹೇರಳವಾಗಿ ಪಾರ್ಟಿ ಫಂಡ್ ಪಡೆಯಿತ್ತಿರುವುದರ ಬಗ್ಗೆ ಬಿಜೆಪಿಯ ಮಿತ್ರ ಶಿವಸೇನೆಯೇ ಆರೋಪ ಮಾಡಿದೆ.

ಅವಕಾಶ ಸಿಕ್ಕಾಗಲೆಲ್ಲಾ ದೆಹಲಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿರುವ ಆಪ್ ಸರ್ಕಾರವನ್ನು ಗಂಭೀರ್ ಟೀಕಿಸಿದ್ದರು. ಕಳೆದ ವರ್ಷ ಗಂಭೀರ್ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಕೇಳಿಬಂದ ಸಂದರ್ಭದಲ್ಲಿ ಅದನ್ನು ಸ್ವತಃ ತಳ್ಳಿಹಾಕಿದ್ದರು. ಆದರೆ ಈಗ ಯಾವುದೇ ಮಾತುಕತೆಗಳಿಲ್ಲದೆ ಇದ್ದಕ್ಕಿದ್ದಂತೆ ಬಿಜೆಪಿ ಸೇರಿ ಕೂತುಹಲಕ್ಕೆ ತೆರೆ ಎಳೆದಿದ್ದಾರೆ.

ಇನ್ನೂ ಅನುಮಾನಗಳಿಗೆ ಎಡೆಮಾಡಿಕೊಡುವ ಕಾರಣವೆಂದರೆ ಗಂಭೀರ್ ಅವರು ತರಾತುರಿಯಲ್ಲಿ ಬಿಜೆಪಿ ಸೇರಿದ್ದರು ಕೂಡ ಈ ಲೋಕಸಭೆಯಲ್ಲಿ ಸ್ಪರ್ಧಿಸುವ ಕುರಿತು ಯಾವುದೇ ಸ್ಪಷ್ಟನೆಯನ್ನು ನೀಡುತ್ತಿಲ್ಲ. ಈ ಕುರಿತು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ಮುಖಂಡರು ಅಧಿಕಾರಯುತ ಧ್ವನಿಯಲ್ಲಿ ಹೇಳುತ್ತಿರುವುದು ಊಹಾಪೋಹಗಳಿಗೆ ಕಾರಣವಾಗಿದೆ. ಬಿಜೆಪಿಯಲ್ಲಿ ಗಂಭೀರ್ ಭವಿಷ್ಯ ಏನಾಗಲಿದೆ ಎನ್ನುವುದಕ್ಕಿಂತ ಇಂಥಾ ಅಪ್ರಜಾತಾಂತ್ರಿಕ ನಡೆಗಳಿಂದ ಸ್ವತಃ ಬಿಜೆಪಿಯೇ ತನ್ನ ಭವಿಷ್ಯ ಹಾಳುಮಾಡಿಕೊಂಡಿರುವುದರಿಂದ ಜನ ಗೌತಮ್ ಗಂಭೀರ್ ಬಗ್ಗೆ ಅಷ್ಟು ಗಮನವನ್ನು ಕೊಡುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...