Homeಅಂಕಣಗಳುಥೂತ್ತೇರಿ | ಯಾಹೂರೇಣುಕಾಚಾರಿಗೆ ಹೊನ್ನಾಳಿ ಹೊಡೆತ ಗೊತ್ತಿಲ್ಲವಂತಲ್ಲಾ.....ಯಾಹೂ

ರೇಣುಕಾಚಾರಿಗೆ ಹೊನ್ನಾಳಿ ಹೊಡೆತ ಗೊತ್ತಿಲ್ಲವಂತಲ್ಲಾ…..ಯಾಹೂ

- Advertisement -
- Advertisement -

ನೋಡಿದ ಕೂಡಲೇ ಆರೆಸ್ಸೆಸ್‍ನ ಸಕ್ರಿಯ ಕಾರ್ಯಕರ್ತನಂತೆ ಕಾಣುವ ಆದಿತ್ಯರಾವ್ ಮೀಡಿಯಾ ಜನಿವಾರಿಗಳ ನಿಜಬಣ್ಣ ಬಯಲು ಮಾಡಿದ ಯುಗಪುರುಷನಂತೆ ಗೋಚರಿಸುತ್ತಿದ್ದಾನಲ್ಲಾ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬು ಮಡಗಿ ಆತ ಮಾಯವಾದ ನಂತರ ಬೆಳಗ್ಗೆ ಚಡ್ಡಿ ಪತ್ರಿಕೆಗಳನ್ನ ತೆಗೆದು ನೋಡಿದರೆ, ದೇಶವೇ ಬೆಚ್ಚಿಬೀಳುವಂತಹ ಸುದ್ದಿ ಮಾಡಿದ್ದರಲ್ಲಾ. ಅದರಲ್ಲೂ ನಿದ್ರೆಯಲ್ಲೂ ಬುದೂರನೆದ್ದು ನೀರು ಕುಡಿದು ಬೆವರು ಒರೆಸಿಕೊಳ್ಳುತ್ತ ಬುಲೆಟ್‍ನಿಂದ ಬಚಾವಾದವನಂತೆ ತೊದಲುವ ವಿಜಯಸಂಕೇಶ್ವರ ಎಂಬ ಹಳೆ ಲಾರಿ ಇಂಜಿನ್ ತನ್ನ ವಿಶದವಾಣಿ ಎಂಬ ಪತ್ರಿಕೆಯಲ್ಲಿ ಗಣರಾಜ್ಯೋತ್ಸವದ ಟೈಮಿಗೆ ದುಷ್ಕೃತ್ಯವೆಸಗಿ ದೇಶವನ್ನೇ ಗಂಡಾಂತರಕ್ಕೆ ದೂಡುವ ಕೃತ್ಯವಿದು ಎಂದು ತನ್ನ ಮನಸ್ಸಿನಾಳದಲ್ಲಿದ್ದ ಮುಸ್ಲಿಂ ದ್ವೇಷವನ್ನ ಕಾರಿಕೊಂಡಿದ್ದನಲ್ಲಾ. ಆದರೇನು ಮರುದಿನವೇ ಸಿಕ್ಕ ಆದಿತ್ಯರಾವ್ ಬಗ್ಗೆ ಕನಿಕರ ಉಕ್ಕಿ ಹರಿದ ಪರಿಣಾಮ ಈತ ಮಾನಸಿಕ ಅಸ್ವಸ್ಥನಾದ. ಈ ಮನೋರೋಗಿ ಅಂತಿಂಥವನಲ್ಲ ಡಿಗ್ರಿ ಪಡೆದವನು. ಬಾಂಬು ತಯಾರಿಸುವ ತಂತ್ರಜ್ಞಾನ ಹೊಂದಿದ್ದವನು. ಆನ್‍ಲೈನ್ ಮುಖಾಂತರ ಬಾಂಬು ಸಾಮಗ್ರಿ ಖರೀದಿಸಿದವನು. ಆದರೂ ಬುದ್ಧಿಮಾಂದ್ಯನೆಂದು ಬಿಂಬಿತನಾಗಿರುವ ಈತನೇನಾದರೂ ಸಿಕ್ಕಿ ಬೀಳದಿದ್ದರೆ, ವಿಜಯ ಸಂಕೇಶ್ವರ ಸಾಬರ ಭಯೋತ್ಪಾದನೆ ಬಗ್ಗೆ ವಿಶೇಷ ಪುರವಣಿಯನ್ನೇ ತರುತ್ತಿದ್ದನಂತಲ್ಲಾ. ತನ್ನ ತಮ್ಮನ ಪರ ವಕಾಲತ್ತು ವಹಿಸಿದವನಂತೆ ಇನ್ನೂ ಒದರುತ್ತಲೇ ಇದ್ದಾನೆ. ಈ ನಡುವೆ ಸಂಕೇಶ್ವರನಿಗೆ ಪದ್ಮಶ್ರೀ ಬೇರೆ ಬಂದಿದೆ. ಪತ್ರಿಕೆಯನ್ನೂ ಚಡ್ಡಿಗಳ ಕರಪತ್ರ ಮಾಡಿರೋದು ಮತ್ತು ಅತಿಹೆಚ್ಚು ಲಾರಿಗಳನ್ನು ಮಡಗಿರೋದೆ ಪ್ರಶಸ್ತಿಗೆ ಆತನನ್ನು ಆಯ್ಕೆ ಮಾಡಿರೋದಕ್ಕೆ ಮಾನದಂಡವಂತಲ್ಲ. ಅಂದಹಾಗೆ, ಪ್ರಶಸ್ತಿ ಪಟ್ಟಿಯಲ್ಲಿ ಕೊನೇ ಘಳಿಗೆಯಲ್ಲಿ ಸಂಕೇಶ್ವರ ಹೆಸರು ಮಿಸ್ ಆಗುವ ಸಂಭವ ಇತ್ತಂತೆ, ಹಾಗಾಗಿ ಎರಡು ದಿನ ಮೋದಿ ಸರ್ಕಾರದ ವಿರುದ್ಧ ಮುಖಪುಟ ಸುದ್ದಿ ಪ್ರಕಟಿಸಿ, ಬ್ಲ್ಯಾಕ್‍ಮೇಲ್ ಮಾಡಿ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದಾನೆ ಅಂತ ಜನ ಮಾತಾಡುತ್ತಿದ್ದಾರಲ್ಲಾ, ಥೂತ್ತೇರಿ….

ಹಾದಿಬೀದಿಯಲ್ಲಿ ಸಿಗುವ ಸಾಬರೆಲ್ಲಾ ವಿಧ್ವಂಸಕರೆಂದು ಸದಾ ಚಿಂತಿಸುತ್ತ ನನ್ನ ಲಾರಿಗಳ ಕತೆಯೇನೆಂದು ಯೋಚಿಸುವ ಸಂಕೇಶ್ವರನಿಗೆ ತಿಳಿಯದ ಇನ್ನೊಂದೆರಡು ವಿಷಯಗಳೇನೆಂದರೆ ಬಾಬಾ ಬುಡನ್‍ಗಿರಿ ವಿಷಯವನ್ನ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹಬ್ಬಿಸುವ ಹವಣಿಕೆಯಿಂದ ಚಿಕ್ಕಮಗಳೂರು ದೇವಸ್ಥಾನದ ಮೇಲಕ್ಕೆ ಮೆಟ್ಟು ತಂದು ಕಟ್ಟಿದ್ದವರು ಪರಮಭಕ್ತರಾದ ಭಜರಂಗಿಗಳು! ಹಾಗೇ ಮಾನ್ವಿಯಲ್ಲಿ ಮಧ್ಯರಾತ್ರಿ ವೇಳೆ ಬಸ್ಟ್ಯಾಂಡಿಗೆ ಬಂದು ಪಾಕಿಸ್ತಾನದ ಧ್ವಜ ಹಾರಿಸಿಹೋದವರು ಸನಾತನ ಸಂಘದವರು. ಈತ ಮುಂದೆ ಗೌರಿ ಕೊಲೆಯಲ್ಲಿ ಆರೋಪಿಯಾದ. ಹಾಗೆಯೇ ಹೊನ್ನಾಳಿ ತಾಲ್ಲೂಕಿನಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿಹೋದವನು ಶಾಸಕ ರೇಣುಕಾಚಾರಿ ಎಂಬುದು ಈಚೆಗೆ ಬಹಿರಂಗಗೊಂಡಿದೆಯಲ್ಲಾ. ಹೇಗೆಂದರೆ ನನಗೆ ಮುಸ್ಲಿಮರು ಓಟು ಮಾಡಿಲ್ಲ, ಜೊತೆಗೆ ಸದಾ ಮಸೀದಿಯಲ್ಲಿ ಬಾಂಬು ತಯಾರಿಸುತ್ತ ಚೂರಿ ಮಸೆಯುತ್ತ ಪಾಕಿಸ್ತಾನದ ಪರವಿರುವ ಹೊನ್ನಾಳಿ ಸಾಬರಿಗೆ ನಾನು ಯಾವ ಸರಕಾರಿ ಸವಲತ್ತನ್ನು ಕೊಡುವುದಿಲ್ಲವೆಂದು ಹೇಳಿರುವ ವಿಲಾಸಿಜೀವನದ ರೇಣುಕಾಚಾರಿಯ ಮನಸ್ಸಿನಾಳದಲ್ಲಿ ಸಾಬರ ಗಲ್ಲಿಯ ಚರಂಡಿ ನೀರೇ ಹರಿಯುತ್ತಿರುವುದರಿಂದ ಅವನಿನ್ನೇನು ಹೇಳಲು ಸಾಧ್ಯ ಎಂಬುದು ಹೊನ್ನಾಳಿ ಕುರುಬರ ಅಭಿಪ್ರಾಯವಾಗಿದೆಯಂತಲ್ಲಾ, ಥೂತ್ತೇರಿ.

ಭೂಗತಲೋಕದ ದೊರೆಯಾಗಿ ಮೆರೆದಿದ್ದ ಮುತ್ತಪ್ಪ ರೈ ಐದಾರು ಗುಂಡುಗಳಿಂದ ಬಚಾವಾಗಿ ಉಳಿದಿದ್ದರಂತೆ. ಆದರೇನು ಕ್ಯಾನ್ಸರ್ ಗುಂಡಿನಿಂದ ತಪ್ಪಿಸಿಕೊಳ್ಳಲಾಗಿಲ್ಲ. ಕಡೆಗೂ ಬಂದ ಸಾವನ್ನು ಸಂಭ್ರಮಿಸುತ್ತಿರುವ ಆತನನ್ನು ಮಾಧ್ಯಮದ ಮಂದಮತಿಗಳು ಇನ್ನಿಲ್ಲದ ಉಪಮೆಗಳೊಂದಿಗೆ ಹೊಗಳಿ ಹೊಗಳಿ ಸುಸ್ತಾಗುತ್ತಿವೆ. ಮುತ್ತಪ್ಪ ರೈ ದಕ್ಷಿಣ ಕನ್ನಡದ ಬುದ್ಧಿವಂತಿಕೆಯನ್ನ ಭೂಗತಲೋಕಕ್ಕೆ ಪರಿಚಯಿಸಿ ಮಚ್ಚು, ಲಾಂಗು, ಚಾಕುವಿನ ಬದಲು ಜೀವಹತ್ಯೆಗೆ ಪಿಸ್ತೂಲು ಬಳಸಿದ ವ್ಯಕ್ತಿ. ಆತನನ್ನ ಪೊಲೀಸರು ಕೂಡ ಪಿಸ್ತೂಲಿನಿಂದಲೇ ಮುಗಿಸಲು ಯತ್ನಿಸಿದಾಗ, ಲಂಕೇಶರ ಬಳಿಯಿದ್ದ ಕೂಗುಮಾರಿಯೊಬ್ಬಳು ಪೊಲೀಸರನ್ನೇ ವಿಲನ್‍ಗಳನ್ನಾಗಿ ಮಾಡಿ ಮುತ್ತಪ್ಪರೈಯನ್ನ ಹೀರೋ ಮಾಡಿ ಬರೆಸಿದ್ದಳು. ಅಲ್ಲದೆ ಆಗಿನ ಪೊಲೀಸ್ ಅಧಿಕಾರಿ ಕೆಂಪಯ್ಯನನ್ನೇ ಟಾರ್ಗೆಟ್ ಮಾಡಿದ ಕೂಗುಮಾರಿ ಕಡೆಗೂ ಮುತ್ತಪ್ಪರೈ ಬಚಾವಾಗುವಂತೆ ಮಾಡಿದ್ದಳು. ಆದರೆ ಲಂಕೇಶರು ಆಕೆಯ ನಡವಳಿಕೆ ಬಗ್ಗೆ ಗುಮಾನಿಪಟ್ಟು ಕೆಲಸದಿಂದ ತೆಗೆದಿದ್ದರು. ಪೊಲೀಸರಿಂದ ಬಚಾವಾಗಲು ದೇಶವನ್ನೇ ಬಿಟ್ಟಿದ್ದ ಮುತ್ತಪ್ಪ ರೈ ಕನ್ನಡಿಗರ ಸಂಘಟನೆ ನೆವದಲ್ಲಿ ಸೈನ್ಯ ಕಟ್ಟಿ ಮೆರವಣಿಗೆ ಮಾಡಿಸುತ್ತಿದ್ದರು. ಈಗ ಅನಾಥರಾಗುವವರೆಂದರೆ ಆತನಿಂದ ಹಣ ಪಡೆದು ಕಾರ್ಯಕ್ರಮ ಮಾಡುತ್ತಿದ್ದ ಅಬ್ಬೇಪಾರಿಗಳಂತಲ್ಲಾ, ಥೂತ್ತೇರಿ.

ಮೈಸೂರಿನಲ್ಲಿ ಯುವತಿಯೊಬ್ಬಳು ಫ್ರೀ ಕಾಶ್ಮೀರ ಎಂಬ ಫಲಕ ಪ್ರದರ್ಶಿಸಿದ್ದಕ್ಕೆ ನಮ್ಮ ಪೊಲೀಸರು ದೇಶದ್ರೋಹದ ಕೇಸುಮಾಡಿ ಕೋರ್ಟಿಗೆ ಎಳೆದಿರುವುದರಿಂದ, ದೇಶಭಕ್ತ ವಕೀಲರೆಲ್ಲಾ ಸೇರಿ ಆಕೆಯ ಪರ ಯಾರೂ ವಕಾಲತ್ತು ವಹಿಸಬಾರದೆಂಬ ತೀರ್ಮಾನ ತೆಗೆದುಕೊಂಡಿದ್ದಾರಲ್ಲಾ. ಈ ಬಗ್ಗೆ ವಕೀಲರ ನಡೆಯನ್ನ ಸಿದ್ದರಾಮಯ್ಯ ಟೀಕಿಸಿದಾಗ ನೀವೆ ಬಂದು ವಾದಿಸಿ ಎಂದು ರಾಘವೇಂದ್ರ ಎಂಬ ವಕೀಲ ಸವಾಲು ಹಾಕಿದ್ದಾನಲ್ಲಾ. ಈ ವಕೀಲರು ತಾವೇ ಕೋರ್ಟೆಂದು ಭಾವಿಸಿರುವಂತಿದೆ. ವಕೀಲರ ಸಂಘದ ತೀರ್ಮಾನದಂತೆ ಕೋರ್ಟು ನಡೆಯುವುದಿಲ್ಲ. ಆರೋಪಿ ಮೇಲಿನ ಆರೋಪ ತೀರ್ಮಾನವಾಗುವುದು ನ್ಯಾಯಾಲಯದಲ್ಲೇ ಹೊರತು ವಕೀಲರ ಗುಂಪಿನಲ್ಲಲ್ಲ ಎಂಬುದನ್ನು ವಕೀಲರು ಮನಗಾಣಬೇಕು. ಇದೆಲ್ಲಾ ಸರ್ವಾಧಿಕಾರಿಗಳ ಆಡಳಿತದ ಸಂದರ್ಭದಲ್ಲಿ ಹುಟ್ಟುವ ಘೋಷಣೆಗಳು. ವಕೀಲರು ಸಂವಿಧಾನಾತ್ಮಕವಾಗಿ ದತ್ತವಾಗಿರುವ ಹಕ್ಕುಗಳ ಬಗ್ಗೆ ಗಾಢವಾಗಿ ಯೋಚಿಸಿದರೆ ಹೀಗಾಗುವುದಿಲ್ಲವಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Un Constitutional opinions in Mysore Bar decession is wrong. Speeking truth is not a crime. Where as the loyers protect the Constitution. All world is observing the desession of Mysore Bar Associations attitude.This kind of actions are not good for society.

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...