Homeಅಂಕಣಗಳುಥೂತ್ತೇರಿ | ಯಾಹೂರೇಣುಕಾಚಾರಿಗೆ ಹೊನ್ನಾಳಿ ಹೊಡೆತ ಗೊತ್ತಿಲ್ಲವಂತಲ್ಲಾ.....ಯಾಹೂ

ರೇಣುಕಾಚಾರಿಗೆ ಹೊನ್ನಾಳಿ ಹೊಡೆತ ಗೊತ್ತಿಲ್ಲವಂತಲ್ಲಾ…..ಯಾಹೂ

- Advertisement -
- Advertisement -

ನೋಡಿದ ಕೂಡಲೇ ಆರೆಸ್ಸೆಸ್‍ನ ಸಕ್ರಿಯ ಕಾರ್ಯಕರ್ತನಂತೆ ಕಾಣುವ ಆದಿತ್ಯರಾವ್ ಮೀಡಿಯಾ ಜನಿವಾರಿಗಳ ನಿಜಬಣ್ಣ ಬಯಲು ಮಾಡಿದ ಯುಗಪುರುಷನಂತೆ ಗೋಚರಿಸುತ್ತಿದ್ದಾನಲ್ಲಾ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬು ಮಡಗಿ ಆತ ಮಾಯವಾದ ನಂತರ ಬೆಳಗ್ಗೆ ಚಡ್ಡಿ ಪತ್ರಿಕೆಗಳನ್ನ ತೆಗೆದು ನೋಡಿದರೆ, ದೇಶವೇ ಬೆಚ್ಚಿಬೀಳುವಂತಹ ಸುದ್ದಿ ಮಾಡಿದ್ದರಲ್ಲಾ. ಅದರಲ್ಲೂ ನಿದ್ರೆಯಲ್ಲೂ ಬುದೂರನೆದ್ದು ನೀರು ಕುಡಿದು ಬೆವರು ಒರೆಸಿಕೊಳ್ಳುತ್ತ ಬುಲೆಟ್‍ನಿಂದ ಬಚಾವಾದವನಂತೆ ತೊದಲುವ ವಿಜಯಸಂಕೇಶ್ವರ ಎಂಬ ಹಳೆ ಲಾರಿ ಇಂಜಿನ್ ತನ್ನ ವಿಶದವಾಣಿ ಎಂಬ ಪತ್ರಿಕೆಯಲ್ಲಿ ಗಣರಾಜ್ಯೋತ್ಸವದ ಟೈಮಿಗೆ ದುಷ್ಕೃತ್ಯವೆಸಗಿ ದೇಶವನ್ನೇ ಗಂಡಾಂತರಕ್ಕೆ ದೂಡುವ ಕೃತ್ಯವಿದು ಎಂದು ತನ್ನ ಮನಸ್ಸಿನಾಳದಲ್ಲಿದ್ದ ಮುಸ್ಲಿಂ ದ್ವೇಷವನ್ನ ಕಾರಿಕೊಂಡಿದ್ದನಲ್ಲಾ. ಆದರೇನು ಮರುದಿನವೇ ಸಿಕ್ಕ ಆದಿತ್ಯರಾವ್ ಬಗ್ಗೆ ಕನಿಕರ ಉಕ್ಕಿ ಹರಿದ ಪರಿಣಾಮ ಈತ ಮಾನಸಿಕ ಅಸ್ವಸ್ಥನಾದ. ಈ ಮನೋರೋಗಿ ಅಂತಿಂಥವನಲ್ಲ ಡಿಗ್ರಿ ಪಡೆದವನು. ಬಾಂಬು ತಯಾರಿಸುವ ತಂತ್ರಜ್ಞಾನ ಹೊಂದಿದ್ದವನು. ಆನ್‍ಲೈನ್ ಮುಖಾಂತರ ಬಾಂಬು ಸಾಮಗ್ರಿ ಖರೀದಿಸಿದವನು. ಆದರೂ ಬುದ್ಧಿಮಾಂದ್ಯನೆಂದು ಬಿಂಬಿತನಾಗಿರುವ ಈತನೇನಾದರೂ ಸಿಕ್ಕಿ ಬೀಳದಿದ್ದರೆ, ವಿಜಯ ಸಂಕೇಶ್ವರ ಸಾಬರ ಭಯೋತ್ಪಾದನೆ ಬಗ್ಗೆ ವಿಶೇಷ ಪುರವಣಿಯನ್ನೇ ತರುತ್ತಿದ್ದನಂತಲ್ಲಾ. ತನ್ನ ತಮ್ಮನ ಪರ ವಕಾಲತ್ತು ವಹಿಸಿದವನಂತೆ ಇನ್ನೂ ಒದರುತ್ತಲೇ ಇದ್ದಾನೆ. ಈ ನಡುವೆ ಸಂಕೇಶ್ವರನಿಗೆ ಪದ್ಮಶ್ರೀ ಬೇರೆ ಬಂದಿದೆ. ಪತ್ರಿಕೆಯನ್ನೂ ಚಡ್ಡಿಗಳ ಕರಪತ್ರ ಮಾಡಿರೋದು ಮತ್ತು ಅತಿಹೆಚ್ಚು ಲಾರಿಗಳನ್ನು ಮಡಗಿರೋದೆ ಪ್ರಶಸ್ತಿಗೆ ಆತನನ್ನು ಆಯ್ಕೆ ಮಾಡಿರೋದಕ್ಕೆ ಮಾನದಂಡವಂತಲ್ಲ. ಅಂದಹಾಗೆ, ಪ್ರಶಸ್ತಿ ಪಟ್ಟಿಯಲ್ಲಿ ಕೊನೇ ಘಳಿಗೆಯಲ್ಲಿ ಸಂಕೇಶ್ವರ ಹೆಸರು ಮಿಸ್ ಆಗುವ ಸಂಭವ ಇತ್ತಂತೆ, ಹಾಗಾಗಿ ಎರಡು ದಿನ ಮೋದಿ ಸರ್ಕಾರದ ವಿರುದ್ಧ ಮುಖಪುಟ ಸುದ್ದಿ ಪ್ರಕಟಿಸಿ, ಬ್ಲ್ಯಾಕ್‍ಮೇಲ್ ಮಾಡಿ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದಾನೆ ಅಂತ ಜನ ಮಾತಾಡುತ್ತಿದ್ದಾರಲ್ಲಾ, ಥೂತ್ತೇರಿ….

ಹಾದಿಬೀದಿಯಲ್ಲಿ ಸಿಗುವ ಸಾಬರೆಲ್ಲಾ ವಿಧ್ವಂಸಕರೆಂದು ಸದಾ ಚಿಂತಿಸುತ್ತ ನನ್ನ ಲಾರಿಗಳ ಕತೆಯೇನೆಂದು ಯೋಚಿಸುವ ಸಂಕೇಶ್ವರನಿಗೆ ತಿಳಿಯದ ಇನ್ನೊಂದೆರಡು ವಿಷಯಗಳೇನೆಂದರೆ ಬಾಬಾ ಬುಡನ್‍ಗಿರಿ ವಿಷಯವನ್ನ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹಬ್ಬಿಸುವ ಹವಣಿಕೆಯಿಂದ ಚಿಕ್ಕಮಗಳೂರು ದೇವಸ್ಥಾನದ ಮೇಲಕ್ಕೆ ಮೆಟ್ಟು ತಂದು ಕಟ್ಟಿದ್ದವರು ಪರಮಭಕ್ತರಾದ ಭಜರಂಗಿಗಳು! ಹಾಗೇ ಮಾನ್ವಿಯಲ್ಲಿ ಮಧ್ಯರಾತ್ರಿ ವೇಳೆ ಬಸ್ಟ್ಯಾಂಡಿಗೆ ಬಂದು ಪಾಕಿಸ್ತಾನದ ಧ್ವಜ ಹಾರಿಸಿಹೋದವರು ಸನಾತನ ಸಂಘದವರು. ಈತ ಮುಂದೆ ಗೌರಿ ಕೊಲೆಯಲ್ಲಿ ಆರೋಪಿಯಾದ. ಹಾಗೆಯೇ ಹೊನ್ನಾಳಿ ತಾಲ್ಲೂಕಿನಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿಹೋದವನು ಶಾಸಕ ರೇಣುಕಾಚಾರಿ ಎಂಬುದು ಈಚೆಗೆ ಬಹಿರಂಗಗೊಂಡಿದೆಯಲ್ಲಾ. ಹೇಗೆಂದರೆ ನನಗೆ ಮುಸ್ಲಿಮರು ಓಟು ಮಾಡಿಲ್ಲ, ಜೊತೆಗೆ ಸದಾ ಮಸೀದಿಯಲ್ಲಿ ಬಾಂಬು ತಯಾರಿಸುತ್ತ ಚೂರಿ ಮಸೆಯುತ್ತ ಪಾಕಿಸ್ತಾನದ ಪರವಿರುವ ಹೊನ್ನಾಳಿ ಸಾಬರಿಗೆ ನಾನು ಯಾವ ಸರಕಾರಿ ಸವಲತ್ತನ್ನು ಕೊಡುವುದಿಲ್ಲವೆಂದು ಹೇಳಿರುವ ವಿಲಾಸಿಜೀವನದ ರೇಣುಕಾಚಾರಿಯ ಮನಸ್ಸಿನಾಳದಲ್ಲಿ ಸಾಬರ ಗಲ್ಲಿಯ ಚರಂಡಿ ನೀರೇ ಹರಿಯುತ್ತಿರುವುದರಿಂದ ಅವನಿನ್ನೇನು ಹೇಳಲು ಸಾಧ್ಯ ಎಂಬುದು ಹೊನ್ನಾಳಿ ಕುರುಬರ ಅಭಿಪ್ರಾಯವಾಗಿದೆಯಂತಲ್ಲಾ, ಥೂತ್ತೇರಿ.

ಭೂಗತಲೋಕದ ದೊರೆಯಾಗಿ ಮೆರೆದಿದ್ದ ಮುತ್ತಪ್ಪ ರೈ ಐದಾರು ಗುಂಡುಗಳಿಂದ ಬಚಾವಾಗಿ ಉಳಿದಿದ್ದರಂತೆ. ಆದರೇನು ಕ್ಯಾನ್ಸರ್ ಗುಂಡಿನಿಂದ ತಪ್ಪಿಸಿಕೊಳ್ಳಲಾಗಿಲ್ಲ. ಕಡೆಗೂ ಬಂದ ಸಾವನ್ನು ಸಂಭ್ರಮಿಸುತ್ತಿರುವ ಆತನನ್ನು ಮಾಧ್ಯಮದ ಮಂದಮತಿಗಳು ಇನ್ನಿಲ್ಲದ ಉಪಮೆಗಳೊಂದಿಗೆ ಹೊಗಳಿ ಹೊಗಳಿ ಸುಸ್ತಾಗುತ್ತಿವೆ. ಮುತ್ತಪ್ಪ ರೈ ದಕ್ಷಿಣ ಕನ್ನಡದ ಬುದ್ಧಿವಂತಿಕೆಯನ್ನ ಭೂಗತಲೋಕಕ್ಕೆ ಪರಿಚಯಿಸಿ ಮಚ್ಚು, ಲಾಂಗು, ಚಾಕುವಿನ ಬದಲು ಜೀವಹತ್ಯೆಗೆ ಪಿಸ್ತೂಲು ಬಳಸಿದ ವ್ಯಕ್ತಿ. ಆತನನ್ನ ಪೊಲೀಸರು ಕೂಡ ಪಿಸ್ತೂಲಿನಿಂದಲೇ ಮುಗಿಸಲು ಯತ್ನಿಸಿದಾಗ, ಲಂಕೇಶರ ಬಳಿಯಿದ್ದ ಕೂಗುಮಾರಿಯೊಬ್ಬಳು ಪೊಲೀಸರನ್ನೇ ವಿಲನ್‍ಗಳನ್ನಾಗಿ ಮಾಡಿ ಮುತ್ತಪ್ಪರೈಯನ್ನ ಹೀರೋ ಮಾಡಿ ಬರೆಸಿದ್ದಳು. ಅಲ್ಲದೆ ಆಗಿನ ಪೊಲೀಸ್ ಅಧಿಕಾರಿ ಕೆಂಪಯ್ಯನನ್ನೇ ಟಾರ್ಗೆಟ್ ಮಾಡಿದ ಕೂಗುಮಾರಿ ಕಡೆಗೂ ಮುತ್ತಪ್ಪರೈ ಬಚಾವಾಗುವಂತೆ ಮಾಡಿದ್ದಳು. ಆದರೆ ಲಂಕೇಶರು ಆಕೆಯ ನಡವಳಿಕೆ ಬಗ್ಗೆ ಗುಮಾನಿಪಟ್ಟು ಕೆಲಸದಿಂದ ತೆಗೆದಿದ್ದರು. ಪೊಲೀಸರಿಂದ ಬಚಾವಾಗಲು ದೇಶವನ್ನೇ ಬಿಟ್ಟಿದ್ದ ಮುತ್ತಪ್ಪ ರೈ ಕನ್ನಡಿಗರ ಸಂಘಟನೆ ನೆವದಲ್ಲಿ ಸೈನ್ಯ ಕಟ್ಟಿ ಮೆರವಣಿಗೆ ಮಾಡಿಸುತ್ತಿದ್ದರು. ಈಗ ಅನಾಥರಾಗುವವರೆಂದರೆ ಆತನಿಂದ ಹಣ ಪಡೆದು ಕಾರ್ಯಕ್ರಮ ಮಾಡುತ್ತಿದ್ದ ಅಬ್ಬೇಪಾರಿಗಳಂತಲ್ಲಾ, ಥೂತ್ತೇರಿ.

ಮೈಸೂರಿನಲ್ಲಿ ಯುವತಿಯೊಬ್ಬಳು ಫ್ರೀ ಕಾಶ್ಮೀರ ಎಂಬ ಫಲಕ ಪ್ರದರ್ಶಿಸಿದ್ದಕ್ಕೆ ನಮ್ಮ ಪೊಲೀಸರು ದೇಶದ್ರೋಹದ ಕೇಸುಮಾಡಿ ಕೋರ್ಟಿಗೆ ಎಳೆದಿರುವುದರಿಂದ, ದೇಶಭಕ್ತ ವಕೀಲರೆಲ್ಲಾ ಸೇರಿ ಆಕೆಯ ಪರ ಯಾರೂ ವಕಾಲತ್ತು ವಹಿಸಬಾರದೆಂಬ ತೀರ್ಮಾನ ತೆಗೆದುಕೊಂಡಿದ್ದಾರಲ್ಲಾ. ಈ ಬಗ್ಗೆ ವಕೀಲರ ನಡೆಯನ್ನ ಸಿದ್ದರಾಮಯ್ಯ ಟೀಕಿಸಿದಾಗ ನೀವೆ ಬಂದು ವಾದಿಸಿ ಎಂದು ರಾಘವೇಂದ್ರ ಎಂಬ ವಕೀಲ ಸವಾಲು ಹಾಕಿದ್ದಾನಲ್ಲಾ. ಈ ವಕೀಲರು ತಾವೇ ಕೋರ್ಟೆಂದು ಭಾವಿಸಿರುವಂತಿದೆ. ವಕೀಲರ ಸಂಘದ ತೀರ್ಮಾನದಂತೆ ಕೋರ್ಟು ನಡೆಯುವುದಿಲ್ಲ. ಆರೋಪಿ ಮೇಲಿನ ಆರೋಪ ತೀರ್ಮಾನವಾಗುವುದು ನ್ಯಾಯಾಲಯದಲ್ಲೇ ಹೊರತು ವಕೀಲರ ಗುಂಪಿನಲ್ಲಲ್ಲ ಎಂಬುದನ್ನು ವಕೀಲರು ಮನಗಾಣಬೇಕು. ಇದೆಲ್ಲಾ ಸರ್ವಾಧಿಕಾರಿಗಳ ಆಡಳಿತದ ಸಂದರ್ಭದಲ್ಲಿ ಹುಟ್ಟುವ ಘೋಷಣೆಗಳು. ವಕೀಲರು ಸಂವಿಧಾನಾತ್ಮಕವಾಗಿ ದತ್ತವಾಗಿರುವ ಹಕ್ಕುಗಳ ಬಗ್ಗೆ ಗಾಢವಾಗಿ ಯೋಚಿಸಿದರೆ ಹೀಗಾಗುವುದಿಲ್ಲವಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Un Constitutional opinions in Mysore Bar decession is wrong. Speeking truth is not a crime. Where as the loyers protect the Constitution. All world is observing the desession of Mysore Bar Associations attitude.This kind of actions are not good for society.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...