Homeಅಂಕಣಗಳುಹೊಸ ಸವಾಲುಗಳ ಕಾಲದಲ್ಲಿ ರೈತ ಮತ್ತು ಪ್ರಗತಿಪರರು

ಹೊಸ ಸವಾಲುಗಳ ಕಾಲದಲ್ಲಿ ರೈತ ಮತ್ತು ಪ್ರಗತಿಪರರು

- Advertisement -
- Advertisement -

ಗೌರಿ ಲಂಕೇಶ್
28 ಫೆಬ್ರವರಿ, 2008 (`ಕಂಡಹಾಗೆ’ ಸಂಪಾದಕೀಯದಿಂದ) |

ರೈತರ ಆತ್ಮಹತ್ಯೆಗಳ ಬಗ್ಗೆ ಅಧ್ಯಯನ ಮಾಡಿರುವವರು ಮತ್ತು ಕೋಮುಗಲಭೆಗಳ ಬಗ್ಗೆ ವಿಶ್ಲೇಷಿಸಿರುವವರು ಇವೆರಡರ ಮಧ್ಯೆ ಒಂದು ಸಾಮ್ಯತೆಯನ್ನು ಗುರುತಿಸುತ್ತಾರೆ. ಉದಾಹರಣೆಗೆ, ಅತ್ಮಹತ್ಯೆ ತರಹದ ತೀವ್ರವಾದ ವ್ಯಕ್ತಿಗತ ನಿರ್ಣಯವನ್ನು ತೆಗೆದುಕೊಳ್ಳುವಾಗ ರೈತನೊಬ್ಬ ತನ್ನ ಸುತ್ತಮುತ್ತಲಿನ ಸಮಾಜದಿಂದ ಸಂಪೂರ್ಣವಾಗಿ ಬೇರ್ಪಟ್ಟು ಏಕಾಂಗಿಯಾಗಿರುತ್ತಾನೆ. ಆತನನ್ನು ಸಮಾಜದೊಂದಿಗೆ, ಸಾಮಾಜಿಕ ಆಸರೆಯೊಂದಿಗೆ ಬೆಸೆಯುವ ಕೊಂಡಿ ಕಳಚಿ ಹೋಗಿರುತ್ತದೆ. ರೈತ ಸಂಘ ಇದ್ದ ಕಡೆ, ಅದು ಸಮರ್ಥವಾಗಿ ಕಾರ್ಯನಿರ್ವಹಿಸಿದ ಕಡೆ ರೈತನೊಬ್ಬ ಎಷ್ಟೇ ಸಂಕಷ್ಟದಲ್ಲಿದ್ದರೂ ಆತ ಆತ್ಮಹತ್ಯೆಯಂತಹ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳದಂತೆ ಒಂದು ಸಾಮಾಜಿಕ ಆಸರೆಯಾಗಿರುತ್ತಿತ್ತು. ಇದನ್ನು ಅರಿತುಕೊಂಡಿದ್ದ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು “ರೈತ ಸಂಘ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವ ಕಡೆ ಆತ್ಮಹತ್ಯೆಗಳಾಗಿಲ್ಲ” ಎಂದೇ ಹೇಳುತ್ತಿದ್ದರು.
ಆದರೆ, ದುರದೃಷ್ಟವಶಾತ್ ರೈತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಳೆದ ಒಂದು ದಶಕದುದ್ದಕ್ಕೂ ರೈತ ಸಮುದಾಯಕ್ಕೆ ಆಸರೆಯಾಗಬೇಕಿದ್ದ ರೈತ ಸಂಘವೇ ವಿಭಜನೆಗೊಂಡು, ನಾಯಕರ ಸ್ವಪ್ರತಿಷ್ಟೆಗೆ ಬಲಿಯಾಗಿತ್ತು. ಈಗ ಅವೆಲ್ಲ ಮುಗಿದ ಕತೆ ಎಂದು ಆಶಿಸಬಹುದಾಗಿದೆ.
ಕರ್ನಾಟಕದಲ್ಲಿ ಕೋಮುವಾದ ಹೆಚ್ಚಾಗಿರುವುದರ ಹಿಂದೆಯೂ ಇಂತಹದ್ದೇ ಕಾರಣಗಳಿವೆ. 1969ರಲ್ಲಿ ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಹೊರತುಪಡಿಸಿದರೆ 70 ಮತ್ತು 80ರ ದಶಕದಲ್ಲಿ ಅಲ್ಲಲ್ಲಿ ಮಾತ್ರ ಕೋಮುಗಲಭೆಗಳು ನಡೆದಿತ್ತು. ಆದರೆ 90ರ ದಶಕದಲ್ಲಿ ಆರಂಭಗೊಂಡ ಕೋಮುಗಲಭೆಗಳು ಇವತ್ತಿನವರೆಗೂ ನಿಂತಿಲ್ಲ.
ಇದಕ್ಕೆ ಪ್ರಮುಖ ಕಾರಣ 80ರ ದಶಕದವರೆಗೂ ಹಲವಾರು ಪ್ರಗತಿಪರರು ಮತ್ತು ಎಡಪಂಥೀಯರು ಈ ನಾಡಿನ ರೈತ, ಕೂಲಿ, ಕಾರ್ಮಿಕ, ದಲಿತ, ಶೂದ್ರ, ಯುವ ಜನಾಂಗ-ಇವರೆಲ್ಲರನ್ನೂ ಸಂಘಟಿಸುತ್ತಿದ್ದದ್ದು ಮತ್ತು ಚಿಂತನೆಗೆ, ಚಳವಳಿಗೆ ಪ್ರೇರೇಪಿಸುತ್ತಿದ್ದದ್ದು. ಆದರೆ 90ರ ದಶಕದಲ್ಲಿ ನಡೆದ ದುಷ್ಟ ರಾಜಕಾರಣದಿಂದಾಗಿ ಪ್ರಗತಿಪರ, ದಲಿತ, ಎಡಪಂಥೀಯರ ನಡುವೆ ಒಡಕು ಸೃಷ್ಟಿಯಾದದಲ್ಲದೆ, ಅದರಲ್ಲಿ ಹಲವರಿಗೆ ಆಮಿಷಗಳನ್ನು ನೀಡಿ ಭ್ರಷ್ಟಗೊಳಿಸಲಾಯಿತು. ರೈತಸಂಘದಲ್ಲಿ ಮಾತ್ರವಲ್ಲ, ದಲಿತ ಸಂಘರ್ಷ ಸಮಿತಿ ಕೂಡ ಛಿದ್ರಗೊಂಡಿರುವುದು ಇದಕ್ಕೆ ಸಾಕ್ಷಿಯಾಗಿ ನಿಂತಿದೆ.
ಈ ಎಲ್ಲದರ ಹಿನ್ನೆಲೆಯಲ್ಲಿ ರೈತ ಸಂಘಟನೆ ಮತ್ತು ಪ್ರಗತಿಪರರು ಈಗಲಾದರೂ ತಾವು ಹಿಂದೆ ಸೋತಿದ್ದೆಲ್ಲಿ ಎಂಬುದರ ಬಗ್ಗೆ ಆತ್ಮವಿಮರ್ಷೆ ಮಾಡಿಕೊಂಡರೆ ಒಳ್ಳೆಯದು ಅನ್ನಿಸುತ್ತದೆ. ಯಾಕೆಂದರೆ ಇವುಗಳು ಹಿಂದೊಮ್ಮೆ ವಿಫಲಗೊಂಡಿದ್ದರ ಹಿಂದಿದ್ದ ಹಲವು ಕಾರಣಗಳಲ್ಲಿ ಅವಕಾಶವಾದ, ಸ್ವಾರ್ಥ, ಅಧಿಕಾರ ಲಾಲಸೆ ಪ್ರಮುಖ. ಅಂದಿನ ನಾಯಕರ ಸ್ವಪ್ರತಿಷ್ಠೆ ಮತ್ತು ಸ್ವಾರ್ಥ ಹೆಚ್ಚಾದಂತೆ ಅವರ ಸಂಘಟನೆಗಳ ಶಕ್ತಿ ಕಳೆದುಕೊಂಡವಲ್ಲದೆ, ಅವುಗಳ ರಾಜಿರಹಿತ ಹೋರಾಟವೂ ಮೂಲೆಗುಂಪಾದವು. ಅಂತಹ ಅಪಾಯಗಳು ಈಗ ಎದುರಾಗದಂತೆ ಎಚ್ಚರ ವಹಿಸಬೇಕಿದೆ.
ಈಗಿನ ಜಾಗತೀಕರಣವಂತೂ ರೈತ, ದಲಿತ, ಎಡಪಂಥೀಯ ಮತ್ತು ಮಹಿಳಾವಾದಿಗಳ ಚಳವಳಿಗಳಿಗೆ ಹೊಸ ಸವಾಲುಗಳನ್ನು ಹಾಕಿದೆ. ಇದೇ ಹೊತ್ತಿಗೆ ಸರ್ಕಾರಗಳೂ ಕೂಡ ಅನ್ಯಾಯಕ್ಕೆ, ಶೋಷಣೆಗೆ, ದಬ್ಬಾಳಿಕೆಗೆ ಒಳಗಾಗುತ್ತಿರುವ ಸಮುದಾಯಗಳ ಪರವಿಲ್ಲದೆ ಡಬ್ಲ್ಯೂಟಿಓ, ಐಎಂಎಫ್ ವಿಶ್ವಬ್ಯಾಂಕ್‍ನಂತಹ ಸಂಸ್ಥೆಗಳ ಪರವಾಗಿ ನಿಂತಿದೆ. ಅದರೊಂದಿಗೆ ಜನಪರ ಹೋರಾಟಗಳನ್ನು, ಚಳವಳಿಗಳನ್ನು ದಮನ ಮಾಡಲೆಂದೇ ಕರಾಳ ಕಾನೂನುಗಳನ್ನು ಜಾರಿಗೆ ತಂದಿದೆ. ತುರ್ತುಪರಿಸ್ಥಿತಿಯ ಕಾಲದಲ್ಲಿ ಎಂಐಎಸ್‍ಎ(ಮಿಸಾ) ಗಿಂತಲೂ ಟಿಎಡಿಎ(ಟಾಡಾ) ಕರಾಳವಾಗಿದ್ದರೆ, 90ರ ದಶಕದಲ್ಲಿ ಟಿಎಡಿಎ(ಟಾಡಾ) ಜಾಗಕ್ಕೆ ಬಂದಿದ್ದೆ ಪೊಟಾ(ಪಿಓಟಿಎ) ಮತ್ತು ಈಗ ಅದರ ಬದಲಿಗೆ ಯುಪಿಎ ಸರ್ಕಾರ ತಂದಿರುವ ಯುಎಲ್‍ಪಿಎ ಮಾನವ ಹಕ್ಕುಗಳನ್ನೇ ನಿರಾಕರಿಸುತ್ತಿದೆ.
ಇಂತಹ ಪರಿಸ್ಥಿತಿಯಲ್ಲಿ ಕಪಟ ಶಾಸಕ, ಭ್ರಷ್ಟ ಅಧಿಕಾರಿ, ಲಂಪಟ ಪೊಲೀಸ್ ಮತ್ತು ಹಿಂದೂತ್ವವಾದಿ ಪುಡಾರಿ ಜೊತೆಗೂಡಿದರೆ ಯಾರನ್ನು ಬೇಕಾದರೂ ಕೊಲ್ಲಬಹುದು, ಯಾರನ್ನು ಬೇಕಾದರೂ ಜೈಲಿಗೆ ದೂಡಬಹುದು, ಯಾರ ಚಳವಳಿಯನ್ನಾದರೂ ಮುರಿದುಹಾಕಬಹುದು.
ಕರ್ನಾಟಕ ಇವತ್ತು ಎಲ್ಲ ರೀತಿಯಲ್ಲೂ ಸಂಕ್ರಮಣ ಕಾಲದಲ್ಲಿದೆ. ಆದ್ದರಿಂದ ಈಗ ನಮ್ಮೆಲ್ಲರ ಶತ್ರಯ ಯಾರೆಂಬುದನ್ನು ಸ್ಪಷ್ಟವಾಗಿ ಗುರುತಿಸಬೇಕಾಗಿದೆಯಲ್ಲದೆ, ನಮ್ಮೊಳಗಿನ ಶತ್ರುವನ್ನೂ ಗುರುತಿಸಿ ಹೋರಾಟಗಳು ವಿಫಲವಾಗದಂತೆ ನೋಡಿಕೊಳ್ಳಬೇಕಿದೆ. ಹಾಗೆಯೇ ಎಲ್ಲಾ ಸಮಾನ ಮನಸ್ಕರು ತಮ್ಮ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದುಗೂಡಬೇಕಿದೆ. ನಮ್ಮೆಲ್ಲರ ಶತ್ರುಗಳು ಒಂದಾಗಿರುವ ಈ ಕಾಲದಲ್ಲಿ ನಾವೆಲ್ಲರೂ ದಾಯಾದಿಗಳಂತೆ ಕಚ್ಚಾಡುವುದರಲ್ಲಿ ಅರ್ಥವಿಲ್ಲ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕಿದೆ.
ರೈತ ಸಂಘಗಳ ವಿಲೀನ, ಕೋಮುವಾದದ ವಿರುದ್ಧದ ಪ್ರಗತಿಪರರ ಹೊಸ ಯತ್ನ ಹಳೇ ಅನುಭವಗಳಿಂದ ಪಾಠಗಳನ್ನು ಕಲಿತು, ಸಂಘಟನಾತ್ಮಕ ಚಳವಳಿಯನ್ನು ಮಾಡುತ್ತವೆ ಎಂದು ಆಶಿಸುತ್ತೇನೆ. ಅವರ ಅಂತಹ ಎಲ್ಲಾ ಪ್ರಯತ್ನಗಳಿಗೆ ನಿಮ್ಮ ಮತ್ತು ನಮ್ಮ ಬೆಂಬಲ ಇದ್ದೇ ಇರುತ್ತದೆ ಎಂದೂ ಹೇಳಲು ಇಚ್ಛಿಸುತ್ತೇನೆ…….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...