Homeಚಳವಳಿಅಮೃತಭೂಮಿಯಲ್ಲಿ ಬಿತ್ತಿದ ಬೀಜಗಳು  ನಾಡೆಲ್ಲಾ ಪಸರಿಸಲಿ....

ಅಮೃತಭೂಮಿಯಲ್ಲಿ ಬಿತ್ತಿದ ಬೀಜಗಳು  ನಾಡೆಲ್ಲಾ ಪಸರಿಸಲಿ….

- Advertisement -
ರೈತ ಚಳವಳಿಯ ಪುನಶ್ಚೇತನ ಆಗಬೇಕೆಂದರೆ ಯುವಜನರು ದೊಡ್ಡ ಪ್ರಮಾಣದಲ್ಲಿ ಸಂಘಟನೆಯೊಳಕ್ಕೂ ಬರಬೇಕು; ರೈತ ಚಳವಳಿಯೊಳಕ್ಕೂ ಬರಬೇಕು. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘವು ನಡೆಸಿದ ಆತ್ಮಾವಲೋಕನವು ಹೀಗಿತ್ತು. ರೈತ ಚಳವಳಿಗೆ ಬಂದ ಹೊಸಬರಿಗೆ ರೈತ ಸಂಘದ ಮೂಲ ಸಿದ್ಧಾಂತಗಳನ್ನು ಹೇಳಿಕೊಡುವ ಕೆಲಸ ನಡೆಯಲಿಲ್ಲ. ಹಾಗಾಗಿಯೇ ಎಂಬತ್ತರ ದಶಕದ ತಲೆಮಾರಿಗಿದ್ದ ಸೈದ್ಧಾಂತಿಕ ಸ್ಪಷ್ಟತೆ ನಂತರದ ದಶಕಗಳಲ್ಲಿ ಬಂದ ತಲೆಮಾರುಗಳಲ್ಲಿ ಕಾಣಲಿಲ್ಲ. ವಿಚಾರದ ಮೇಲೆ ಕಟ್ಟುವ ಹೊಸ ತಲೆಮಾರಿನ ರೈತ ಚಳವಳಿ ಕೇವಲ ಸಂಘರ್ಷದ ಜೊತೆಗೆ ರಚನಾತ್ಮಕ ಕೆಲಸಗಳಲ್ಲಿಯೂ ತೊಡಗಿಸಿಕೊಳ್ಳಬೇಕೆಂಬುದು ಈ ಹೊತ್ತಿನ ತುರ್ತಾಗಿದೆ.
ಆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಅಮೃತಭೂಮಿಯಲ್ಲಿ “ಹೊಸ ತಲೆಮಾರಿನ ರೈತ ಚಳವಳಿ ಕಟ್ಟಲು” ಎಂಬ ಮೂರು ದಿನಗಳ ಯುವ ರೈತರ ಅಧ್ಯಯನ ಶಿಬಿರ ನಡೆಸಲಾಯಿತು. ಕೃಷಿಗೆ ಅಂಟಿಕೊಂಡಿರುವ ರೋಗಗಳಿಗೆ ಪರಿಹಾರದ ಹುಡುಕಾಟ ಶಿಬಿರದಲ್ಲಿ ನಡೆದಿತ್ತು. ಭಾಗವಹಿಸಿದ್ದ ಸಕ್ರಿಯ ರೈತ ಯುವ ಕಾರ್ಯಕರ್ತರಲ್ಲಿ ಕೃಷಿಯನ್ನು ಪುನರ್ ಸ್ಥಾಪಿಸಲೇಬೇಕೆಂಬ ಹೊಸ ಕನಸು ಎದ್ದು ಕಾಣುತ್ತಿತ್ತು. ಇದಾಗಬೇಕಾದರೆ ಇಂದಿನ ಯುವ ಸಮೂಹ ವೈಚಾರಿಕ ಸ್ಪಷ್ಟತೆಯೊಂದಿಗೆ ಚಳವಳಿ ರೂಪಿಸಿದಲ್ಲಿ ಮಾತ್ರ ಸಾಧ್ಯ ಎಂಬ ಎಚ್ಚರದೊಂದಿಗೆ ಈ ಮೂರೂ ದಿನಗಳು ಕಳೆದವು.
ಪ್ರೊ.ನಂಜುಂಡಸ್ವಾಮಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ, ಸಸಿನೆಡುವುದರ ಮುಖಾಂತರ ಶಿಬಿರಕ್ಕೆ ಅಧಿಕೃತವಾಗಿ ಕೆ.ಟಿ.ಗಂಗಾದರ್‍ರವರು ಚಾಲನೆ ನೀಡಿದರು. ಚುಕ್ಕಿ ನಂಜುಂಡಸ್ವಾಮಿರವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಶಿಬಿರದ ಹಿಂದಿನ ಉದ್ದೇಶ ಮತ್ತು ಅಗತ್ಯತೆಯ ಕುರಿತು ಆಶಯ ನುಡಿಯನ್ನು ತಿಳಿಸಿದರು.
ಹಿರಿಯರಾದ ಕೆಸಿ ಬಸವರಾಜು, ಬಡಗಲಪುರ ನಾಗೇಂದ್ರ, ಚಾಮರಸ ಮಾಲೀ ಪಾಟೀಲ್ ರೈತ ಚಳವಳಿಯ ಇತಿಹಾಸದ ಕುರಿತು ಮಾತನಾಡಿದರು. ಅನಂತರ ಆಹಾರ ತಜ್ಞರಾದ  ಕೆ.ಸಿ ರಘುರವರು ಮಾತನಾಡಿ ಪ್ರಸ್ತುತ ಸರ್ಕಾರದ ನೀತಿಗಳು ದೇಶದ ಆರ್ಥಿಕ ನೀತಿಯನ್ನು ದಿವಾಳಿಯೆಡೆಗೆ ಕೊಂಡೊಯ್ಯುತ್ತಿವೆ. ಆದ್ದರಿಂದ ರೈತರು ವಲಯಾದಾರಿತ ಮತ್ತು ಪಾರಂಪರಿಕ ಕೃಷಿಯನ್ನು ಅನುಸರಿಸಿ, ಆಹಾರ ಸಾರ್ವಭೌಮತ್ವವನ್ನು ಹೇಗೆ ಹೊಂದಬಹುದೆಂದು ವಿವರಿಸಿದರು.
ಕೃಷಿಯಲ್ಲಿ ಮಹಿಳೆಯರು ಎನ್ನುವ ವಿಷಯದ ಕುರಿತು ಮಾತನಾಡುತ್ತಾ ಸಾಮಾಜಿಕ ಹೋರಾಟಗಾರ್ತಿ ಕವಿತ ಕುರಗಂಟಿ ಭಾರತದಲ್ಲಿ ಕೃಷಿ ಎಂದ ಕೂಡಲೆ ಮಹಿಳೆಯರು ಕೊಡುಗೆ ಪರಿಗಣನೆಗೆ ಬರುವುದೇ ಇಲ್ಲ. ರೈತನೆಂದರೆ ಪುರುಷ ಎಂಬ ಮನಸ್ಥಿತಿ ಬಹುತೇಕರದ್ದು ಭಾರತದ ಮಹಿಳೆ ಕೃಷಿಕರ ಬಗ್ಗೆಯೂ ಚರ್ಚೆಗಳು ನಡೆಯುವುದು ಅಗತ್ಯ ಮತ್ತು ಭಾರತ ಕೃಷಿ ನಿಂತಿರುವುದು ಮಹಿಳಾ ಕೃಷಿಕರ ಕೊಡುಗೆಯಿಂದ ಇನ್ನಾದರೂ ನಾವು ರೈತ ಮಹಿಳೆಯರ ಪಾತ್ರವನ್ನು  ಗುರುತಿಸಿ ಅವರಿಗೆ ಸಮಾನ ಹಕ್ಕುಗಳು ಹಾಗೂ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮುನ್ನಡೆಯಬೇಕು ಎಂದರು.
ರಾಸಾಯನಿಕ ಕೃಷಿ ಸೃಷ್ಟಿಸಿರುವ ದುರಂತಗಳು ಕೃಷಿ ಕ್ಷೇತ್ರಕ್ಕಿರುವ ಸವಾಲುಗಳು ಮತ್ತು ಅವುಗಳನ್ನು ಹಿಮ್ಮೆಟ್ಟಿಸಿ ನಾವು ಹೇಗೆ ಕೃಷಿಯಲ್ಲಿ ಪರ್ಯಾಯಗಳನ್ನು ಸೃಷ್ಟಿಸಿ ಸ್ವಾವಲಂಬನೆ ಸಾಧಿಸಬಹುದು ಎನ್ನುವುದರ ಕುರಿತು ಸುರೇಶ್ ಕೆ.ಪಿ ಅವರು ರೈತ ಸಂಘದ ಯುವ ಕೃಷಿಕರೊಂದಿಗೆ ಚರ್ಚೆ ನಡೆಸಿದರು.
ಇಂದಿನ ಕಾಲಘಟ್ಟಕ್ಕೆ ಹೊಸ ಆಶಯ ವಿಷಯಗಳೊಂದಿಗೆ ರಚನಾತ್ಮಕವಾಗಿ ಹೊಸ ತಲೆಮಾರಿನ ರೈತ ಚಳವಳಿಯನ್ನು ಹೇಗೆ ಕಟ್ಟಿಕೊಂಡು ಮುನ್ನಡೆಯಬೇಕು ಎನ್ನುವುದರ ಬಗ್ಗೆ ಕುರಿತು ಮಲ್ಲಿಗೆ ಸಿರಿಮನೆಯವರು ಯುವ ಕೃಷಿಕರೊಂದಿಗೆ ಸಂವಾದ ನಡೆಸಿದರು. ದೇಶದಲ್ಲಿ ಉಲ್ಬಣಿಸುತ್ತಿರುವ ನಿರುದ್ಯೋಗ ಸಮಸ್ಯೆ ಕುರಿತು ಮಾತನಾಡುತ್ತಾಮುತ್ತುರಾಜ್ ಅವರು  ಗ್ರಾಮೀಣ ಪ್ರದೇಶದಲ್ಲೆ ಉದ್ಯೋಗ ಸೃಷ್ಟಿಸುವ ಸಾಧ್ಯತೆಗಳ ಬಗ್ಗೆ ಇಂದಿನ ಯುವಜನಾಂಗ  ಚಿಂತಿಸಬೇಕು ಎನ್ನುವ ಆಶಯ ವ್ಯಕ್ತಪಡಿಸಿದರು. ಜನಶಕ್ತಿಯ ಡಾ.ವಾಸು ಹೊಸ ತಲೆಮಾರಿನ ರೈತ ಚಳವಳಿ ಕಟ್ಟಲು ನಾವೇನು ಮಾಡಬೇಕು ಎನ್ನುವುದರ ಕುರಿತು ಸವಿವರವಾಗಿ ಮಾತನಾಡುತ್ತಾ ಮುಂದಿನ ರೋಪುರೇಷೆಗಳನ್ನು ತಯಾರಿಸುವ ಕುರಿತು ಚರ್ಚೆ ನಡೆಸಿದರು.
ರೈತ ಸಂಘ ಉದಯವಾದ ಸಮಯದಲ್ಲಿ ರೈತ ಸಂಘಟನೆಯೊಳಗೆ ಸಾಂಸ್ಕೃತಿಕ ವಿಭಾಗ ತುಂಬಾ ಸಕ್ರಿಯವಾಗಿತ್ತು. ಅಂದು ಯುವ ರೈತ ಹೋರಾಟಗಾರರು ರಚಿಸಿದ ಅನೇಕ ಹಾಡುಗಳು ರೈತಸಂಘದೊಳಗೆ ಕ್ರಾಂತಿಯ ಕಿಚ್ಚನ್ನು ಹೆಚ್ಚಿಸಿದ್ದವು. ಈ ಗೀತೆಗಳು ಅಂದಿನ ಸಮಯದಲ್ಲಿ ರೈತ ಸಂಘದ ಅವಿಭಾಜ್ಯ ಅಂಗವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಮರೆಯಾಗಿದ ಅವನ್ನು ಮತ್ತೆ ನಮಗೆ ತಲುಪಿಸಿಕೊಡುವ ಕೆಲಸವನ್ನು ಹಿರಿಯರಾದ ಹಿ.ಶಿ.ರಾಮಚಂದ್ರಗೌಡರು ಶಿಬಿರದಲ್ಲಿ ಹಾಡು ಹಾಡಿಸುವ ಮೂಲಕ ಮಾಡಿದರು. ಶಿಬಿರದಲ್ಲಿ ಕುವೆಂಪು ಅವರ ರೈತಗೀತೆ -ನೇಗಿಲಯೋಗಿ,  ಮೈಲಾರಪ್ಪ ಸಗರ ಅವರು ಬರೆದಿರುವ ‘ನಮ್ಮ ಹಸಿರು ಬಾವುಟ’ ಹಾಗೂ ‘ಹಾರಿಸೋಣ ಕರ್ನಾಟಕ ರಾಜ್ಯ ರೈತ ಬಾವುಟ’ ಮತ್ತು ಹಿ.ಶಿ.ರಾಮಚಂದ್ರಗೌಡರ ‘ಬಾ ತಂಗಿ ಬಾರವ್ವ’, ‘ಕೂತಂಡವರ ಮಾತು ಕೇಳಿ’, ‘ಏನು ಮಾಡಿ ಏನು ಬಂತಣ್ಣ’ ಗೀತೆಗಳನ್ನು ಶಿಬಿರಾರ್ಥಿಗಳು  ಅಬ್ಯಾಸಿಸಿ ಹಾಡಿದರು.
ಸಮಾರೋಪ ಕಾರ್ಯಕ್ರಮದಲ್ಲಿ ಕೈಗೊಂಡ ದೇಶ ನಿರ್ಮಾಣದ ನಿರ್ಣಯಗಳು:
– ರೈತ ಯುವ ವಿಭಾಗವನ್ನು ರಾಜ್ಯಾದ್ಯಂತ ಬಲವಾಗಿ ಮತ್ತು ಪರಿಣಾಮಕಾರಿಯಾಗಿ ಕಟ್ಟಲು ನಿರ್ಧರಿಸಲಾಗಿದೆ.
– ಆರು ತಿಂಗಳ ಕಾಲ ವ್ಯವಸ್ಥಿತ ತಯಾರಿ ನಡೆಸಿ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ತಂಡಗಳನ್ನು ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಹಂಗಾಮಿ ಸಮಿತಿಗಳನ್ನು ರಚಿಸುವುದು.
– ಆ ತಯಾರಿಯ ನಂತರ 2019 ಫೆಬ್ರವರಿ 13ರ ಪ್ರೋ.ಎಂ.ಡಿ.ಎನ್ ಜನ್ಮದಿನದಂದೂ ರಾಜ್ಯ ರೈತ ಸಂಘದ ಅಡಿಯಲ್ಲಿ ಅದರ ಅಂಗ ಸಂಘಟನೆಯಾಗಿ ಉದ್ಘಾಟಿಸುವುದು.
– ಹಂಗಾಮಿ ರಾಜ್ಯಸಮಿತಿಯನ್ನು ಆಯ್ಕೆಮಾಡಲಾಯಿತು.
– ಮೊದಲ ಹಂತದಲ್ಲಿ ಎಲ್ಲಾ ವಿಭಾಗಮಟ್ಟದಲ್ಲಿ ರಾಜ್ಯ ಶಿಬಿರದ ಮಾದರಿಯಲ್ಲಿ ಶಿಬಿರಗಳನ್ನು ಆಯೋಜಿಸುವುದು.
– ರಾಜ್ಯದ ವಿವಿಧ ಗ್ರಾಮಗಳಲ್ಲಿ ಉದ್ಯೋಗ ಸೃಷ್ಠಿಯ ಸಾಧ್ಯತೆಗಳು ಮತ್ತು ರಚನಾತ್ಮಕ ಕಾರ್ಯಕ್ರಮಗಳ ಸಾಧ್ಯತೆಗಳನ್ನು ಗುರುತಿಸಿ ಅದನ್ನು ಜಾರಿಮಾಡಲು ಬೇಕಾದ ತಯಾರಿಯನ್ನು ನಡೆಸುವುದು.
– ಗ್ರಾಮೀಣ ಭಾಗದ ಯುವತಿಯರು ಹಾಗೂ ಯುವಕರನ್ನು ಸಂಘಟಿಸುವುದಲ್ಲದೆ ರಾಜ್ಯದ ನಗರಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಆಸಕ್ತರು ಪರಿಣಿತರು ಮತ್ತು ಸಂಘಟನೆಗಳನ್ನು ನಮ್ಮ ಬಳಗವಾಗಿ ಒಳಗೊಳ್ಳುವ ಪ್ರಯತ್ನ ಮಾಡಲಾಗುವುದು.
– ನವಾಜ್ ಮತ್ತು ಮಹೇಶ್ 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...