Homeಕರ್ನಾಟಕರೋಷನ್ ಬೇಗ್ ಉಚ್ಛಾಟನೆ: ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದ ಕಾಂಗ್ರೆಸ್

ರೋಷನ್ ಬೇಗ್ ಉಚ್ಛಾಟನೆ: ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದ ಕಾಂಗ್ರೆಸ್

- Advertisement -
- Advertisement -

| ನಾನು ಗೌರಿ ಡೆಸ್ಕ್ |

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಮತ್ತು ಹಾಲಿ ಶಾಸಕ ಹಾಗೂ ಭಿನ್ನಮತೀಯ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಆ ಮೂಲಕ ಪಕ್ಷದ ರಾಜ್ಯ ಚುಕ್ಕಾಣಿ ಹಿಡಿದಿರುವ ನಾಯಕರು ಒಂದೇ ಏಟಿಗೆ ಹಲವು ಹಕ್ಕಿಗಳನ್ನು ಹೊಡೆದಂತಾಗಿದೆ. ಆದರೆ, ಈ ಏಟು ಹೊಡೆಯುವ ಮುನ್ನವೇ, ರೋಷನ್ ಬೇಗ್‍ರನ್ನು ಸಂಪೂರ್ಣ ಮಕಾಡೆ ಮಲಗಿಸಲಾಗಿತ್ತು ಎಂಬುದು ಅಸಲೀ ವಿಚಾರ.

ಐಎಂಎ ಎಂಬ ನಕಲಿ ಕಂಪೆನಿಯೊಂದರ ಜೊತೆ ಸಖ್ಯ ಹೊಂದಿದ್ದ ರೋಷನ್ ಬೇಗ್‍ರನ್ನು ಹಣಿಯಲೆಂದೇ, ಸದರಿ ಹಗರಣವನ್ನು ವ್ಯವಸ್ಥಿತವಾಗಿ ಹೊರತೆಗೆಯಲಾಯಿತು. ಅದರ ಮೂಲಕ ಯಾವ ರೀತಿ ಸನ್ನಿವೇಶ ಸೃಷ್ಟಿಯಾಯಿತೆಂದರೆ, ರೋಷನ್ ಬೇಗ್‍ರಂತಹ ನಾಯಕ ಬರುತ್ತೇನೆಂದರೂ ಇತರ ಪಕ್ಷಗಳು ಬೇಡ ಎಂದು ಹೇಳಬೇಕು, ಆ ರೀತಿಯಲ್ಲಿ. ಸಿದ್ದರಾಮಯ್ಯನವರನ್ನು ಅಹಂಕಾರಿ, ದಿನೇಶ್ ಗುಂಡೂರಾವ್ ನಾಲಾಯಕ್ ಮತ್ತು ಕೆ.ಸಿ.ವೇಣುಗೋಪಾಲ್‍ರನ್ನು ಬಫೂನ್ ಎಂದು ಕರೆದ ವ್ಯಕ್ತಿಯೊಬ್ಬರನ್ನು ಪಕ್ಷದಲ್ಲಿ ಮುಂದುವರೆಸಿದ್ದರೆ, ಪಕ್ಷವೇ ನಾಲಾಯಕ್ ಆಗಿರುತ್ತಿತ್ತು.

ಆದರೆ, ಮೋದಿಯನ್ನು ಹೊಗಳಲು ಶುರು ಮಾಡಿದ್ದ ಬೇಗ್‍ರನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲವೆಂಬ ಗ್ಯಾರಂಟಿ ಇರಲಿಲ್ಲ. ಹಾಗೇನಾದರೂ ಆಗಿದ್ದರೆ ಕಾಂಗ್ರೆಸ್‍ಗೆ ಕಷ್ಟವಾಗುತ್ತಿತ್ತು. ಆದರೆ, ಯಾವಾಗ ಲೋಕಸಭಾ ಚುನಾವಣೆಯಲ್ಲಿ ಬೇಗ್‍ರ ಅಸಹಕಾರದ ನಡುವೆಯೂ, ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್‍ಗೆ ಲೀಡ್ ಬಂದಿತ್ತೋ ಆಗಲೇ ಬೇಗ್ ಮತ್ತೆ ಕಾಂಗ್ರೆಸ್ಸೇತರ ಅಭ್ಯರ್ಥಿಯಾಗಿ ಶಿವಾಜಿನಗರದಲ್ಲಿ ಗೆಲ್ಲಲಾರರು ಎಂದು ಎಲ್ಲರಿಗೂ ಗೊತ್ತಿತ್ತು. ಆದರೂ ಏಕಾಏಕಿ ಅವರನ್ನು ಹೊರಹಾಕುವುದು ಅಷ್ಟು ಸುಲಭವಿರಲಿಲ್ಲ. ಆದರೆ, ಐಎಂಎ ಹಗರಣದ ನಂತರ, ಬೇಗ್ ಕಥೆ ಮುಗಿದಂತೆ ಎಂದಾಗಿಬಿಟ್ಟಿತ್ತು.

ಇದೀಗ ಅವರನ್ನು ಉಚ್ಛಾಟಿಸುವ ಮೂಲಕ ಕಾಂಗ್ರೆಸ್ ಹಲವು ಸಂದೇಶಗಳನ್ನು ಕೊಟ್ಟಿದೆ. ಕಾಂಗ್ರೆಸ್‍ನ ಮುಸ್ಲಿಂ ನಾಯಕರು ಜಮೀರ್, ರಿಜ್ವಾನ್‍ರೇ ಹೊರತು ಬೇಗ್ ಅಲ್ಲ ಎಂಬುದು ಒಂದು ಸಂದೇಶ. ಭಿನ್ನಮತೀಯರ ಜೊತೆ ಸಾಫ್ಟ್ ಆಗಿರುವುದಿಲ್ಲವೆಂಬ ಸಂದೇಶ. ಅದರಲ್ಲೂ ಸಿದ್ದರಾಮಯ್ಯನವರನ್ನು ಬೈದು ಪಕ್ಷದಲ್ಲಿ ಉಳಿಯುವುದು ಸಾಧ್ಯವಿಲ್ಲ ಎಂಬ ಮೆಸೇಜ್. ನಾವೂ ಯಾರ್ಯಾರನ್ನು ಹೇಗ್ಹೇಗೆ ಬಲಿ ಹಾಕಬೇಕೆಂಬುದರಲ್ಲಿ ಪಟ್ಟು ಸಾಧಿಸಿದ್ದೀವಿ ಎಂಬುದನ್ನೂ ಈ ಮೂಲಕ ಹೇಳಿದಂತಾಗಿದೆ.

ರೋಷನ್ ಬೇಗ್ ಅಮಾನತಿನಿಂದ ಅವರು ಶಾಸಕ ಸ್ಥಾನವನ್ನೇನೂ ಕಳೆದುಕೊಳ್ಳುವುದಿಲ್ಲ. ಅದರ ಅರ್ಥ ಬೇರೆ ಪಕ್ಷಕ್ಕೆ ಹೋಗುವಂತೆಯೂ ಇಲ್ಲ. ಒಂಥರಾ ತ್ರಿಶಂಕು ಸ್ಥಿತಿ. ಬೆಂಗಳೂರಿನ ಮತ್ತು ರಾಜ್ಯದ ಇತರ ಭಿನ್ನಮತೀಯರೂ ಒಂದು ಸಾರಿ ಬೆಚ್ಚಿಬೀಳುವ ಸ್ಥಿತಿ ಇದರಿಂದ ನಿರ್ಮಾಣವಾಗಿದೆ.

ಹಗರಣದಲ್ಲಿ ಭಾಗಿಯಾದವರಿಗೆ ಕಾಂಗ್ರೆಸ್‍ನಲ್ಲಿ ಸ್ಥಾನವಿಲ್ಲ ಎಂದೂ ಇದರಿಂದ ಹೇಳಿದಂತಾಗಿದೆ. ಹಾಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಹೋಗಿ ಬಂದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬೇಗ್‍ರಿಗೆ ಇದ್ದದ್ದು ರಾಜ್ಯ ನಾಯಕರ ಬಲವಲ್ಲ, ಹೈಕಮ್ಯಾಂಡ್‍ನಲ್ಲಿ ಪ್ರಬಲವಾಗಿರುವ ನಾಯಕರ ಬಲ. ಅದನ್ನು ಸೂಕ್ತವಾಗಿ ನ್ಯೂಟ್ರಲೈಸ್ ಮಾಡಿಯೇ ಈ ತೀರ್ಮಾನವನ್ನು ಘೋಷಿಸಲಾಗಿದೆ.

ಇನ್ನು ರೋಷನ್‍ಬೇಗ್‍ರ ಮುಂದಿನ ನಡೆ ಏನಾಗಿರುತ್ತದೆಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. People like Roshan baig, should be shown place. So far he has enjoyed powers as Congress MLA, minister and so on. Now he is barking against his own party superiors. If he doesn’t like to stay in Congress, let him have a graceful exit. Who cares for such an idiotic leader.Even without blaming siddaramaiah, Dinesh gundurao and venugopal he can join BJP or any other party he likes. Praising Modi shows his boot licking nature just to enjoy power under Muslim quota. Even BJP doesn’t need a boot licker and back staber. People of Karnataka should call it a day for such selfish people.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...