Homeನ್ಯಾಯ ಪಥಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ : 2026ಕ್ಕೆ ದಕ್ಷಿಣ ಭಾರತ ರಾಜ್ಯಗಳಿಗೆ ಕಾದಿದೆಯಾ ಆಘಾತ?

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ : 2026ಕ್ಕೆ ದಕ್ಷಿಣ ಭಾರತ ರಾಜ್ಯಗಳಿಗೆ ಕಾದಿದೆಯಾ ಆಘಾತ?

- Advertisement -
- Advertisement -

| ರಾಜಶೇಖರ್ ಅಕ್ಕಿ|

2026, ದಕ್ಷಿಣ ಭಾರತದ ರಾಜ್ಯಗಳ ಪಾಲಿಗೆ ಇದು ದೊಡ್ಡ ಆಘಾತ ತಂದೊಡ್ಡಲಿದೆಯಾ? ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆಯ ರೀತಿರಿವಾಜುಗಳನ್ನು ಅಧ್ಯಯನ ಮಾಡಿದವರು 2026 ದಕ್ಷಿಣ ಭಾರತದ ರಾಜ್ಯಗಳಿಗೆ ತಂದೊಡ್ಡಲಿರುವ ಆಘಾತದ ಸುಳಿವು ನೀಡುತ್ತಿದ್ದಾರೆ.

ಹೌದು, 2026ಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆ ನಡೆಯಲಿದೆ. ಹಾಗೇನಾದರು ಅದು ನಡೆದರೆ, ಜನಸಂಖ್ಯೆಯ ಆಧಾರದಲ್ಲಿ ದಕ್ಷಿಣ ರಾಜ್ಯಗಳು ಈಗಿರುವ ತಮ್ಮ ಸಂಸತ್ ಕ್ಷೇತ್ರಗಳ ಸ್ಥಾನಗಳಲ್ಲಿ ಕೆಲವನ್ನು ಕಳೆದುಕೊಂಡರೆ, ಉತ್ತರದ ರಾಜ್ಯಗಳು ಈಗಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ದಕ್ಕಿಸಿಕೊಳ್ಳಲಿವೆ. ಆಗ ಸಹಜವಾಗಿಯೇ ಸಂಸತ್ ಅಂಗಳದಲ್ಲಿ, ಅರ್ಥಾತ್ ರಾಷ್ಟ್ರ ರಾಜಕಾರಣದಲ್ಲಿ ದಕ್ಷಿಣ ರಾಜ್ಯಗಳ ದನಿ ಮತ್ತಷ್ಟು ಕ್ಷೀಣಿಸಲಿದೆ. ಈಗಲೇ ಹಿಂದಿ ಹಾರ್ಟ್‍ಲ್ಯಾಂಡ್ ರಾಜ್ಯಗಳೇ ದಿಲ್ಲಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಅಂತದ್ದರಲ್ಲಿ ದಕ್ಷಿಣ ಭಾರತೀಯರ ಸಂಸದರ ಸಂಖ್ಯೆ ಮತ್ತಷ್ಟು ಕುಸಿದರೆ, ಮುಗಿದೇಹೋಯ್ತು! ಅಂದಹಾಗೆ, ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಜನಸಂಖ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ್ದಕ್ಕೆ, ಆ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ ಮೊದಲಾದ ಕ್ಷೇತ್ರಗಳಲ್ಲಿ ತುಲನಾತ್ಮಕವಾಗಿ ಅಭಿವೃದ್ಧಿ ಸಾಧಿಸಿರೋದಕ್ಕೆ ದಕ್ಷಿಣ ರಾಜ್ಯಗಳಿಗೆ ಸಿಗಲಿರುವ ಬಹುಮಾನ ಇದು!!

ಅದು ಹೇಗೆ? ಬನ್ನಿ ಈ ಕುರಿತು ತಿಳಿದುಕೊಳ್ಳೋಣ….

ಭಾರತ 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ ಎದುರಿಸಿದಾಗ 489 ಲೋಕಸಭೆ ಕ್ಷೇತ್ರಗಳಿದ್ದವು. ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ಆಗುವುದು ಎಲ್ಲರಿಗೂ ಗೊತ್ತೇ ಇದೆ. ಅದೇ ಜನಗಣತಿಯ ಆಧಾರದ ಮೇಲೆ ಹತ್ತು ವರ್ಷಕ್ಕೊಮ್ಮೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಮರುವಿಂಗಡಣೆ ಆಗುತ್ತಿತ್ತು. ಅದರನುಗುಣವಾಗಿ 1966ರಲ್ಲಿ (1961ರ ಜನಗಣತಿ ಪ್ರಕಾರ) 489ರಿಂದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 520ಕ್ಕೆ ಏರಿದ್ದವು. ನಂತರ 1971ರಲ್ಲಿ ಜನಗಣತಿಯ ತರುವಾಯ 1976ರಲ್ಲಿ ಅವು ಪ್ರಸ್ತುತ 543ಕ್ಕೆ ಏರಿದವು. ಆದರೆ ಆನಂತರ, ಅಂದರೆ 1976ರಲ್ಲೇ (ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದಾಗ) ಕ್ಷೇತ್ರಗಳ ಪುನರ್‍ವಿಂಗಡನೆಗೆ ಮುಂದಿನ 25 ವರ್ಷಗಳವರೆಗೆ ಫ್ರೀಜ್ ಮಾಡಿ ಸಂವಿಧಾನಾತ್ಮಕ ಕಡಿವಾಣ ಹಾಕಲಾಯಿತು. ಆಗಲೇ ಜನಸಂಖ್ಯೆ ನಿಯಂತ್ರಣದ ಯೋಜನೆಗಳು ಆರಂಭವಾದವು. ಜನಗಣತಿಯ ಆಧಾರದ ಮೇಲೆ ಕ್ಷೇತ್ರವಿಂಗಡಣೆ ಮಾಡುತ್ತಾ ಹೋದಲ್ಲಿ ಜನಸಂಖ್ಯೆ ನಿಯಂತ್ರಣ ಸರಿಯಾಗಿ ಮಾಡದ (ಅಂದರೆ ಅಭಿವೃದ್ಧಿ ಆಗದೇ ಇರುವ) ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿ, ಜನಸಂಖ್ಯೆ ನಿಯಂತ್ರಿಸಿದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಇಳಿಮುಖವಾಗುವ ಸಾಧ್ಯತೆ ಇತ್ತು. ಹಾಗಾಗಿ 1976ರಲ್ಲಿ ಮುಂದಿನ 25 ವರ್ಷಗಳ ತನಕ ಕ್ಷೇತ್ರ ಪುನರ್‍ವಿಂಗಡನೆ ಮಾಡಬಾರದು ಎಂದು ನಿರ್ಣಯಿಸಲಾಯಿತು.

ಆ 25 ವರ್ಷಗಳ ಅವಧಿ 2001ರಲ್ಲಿ ಮುಗಿದು, 2006ಕ್ಕೆ ಕ್ಷೇತ್ರಗಳ ಪುನರ್‍ವಿಂಗಡನೆಯಾಗಬೇಕಿತ್ತು. ಆದರೆ ಹಾಗಾಗಲಿಲ್ಲ. ಇಪ್ಪತೈದು ವರ್ಷಗಳ ಇನ್ನೊಂದು ಅವಧಿಯವರೆಗೆ ಪುನರ್‍ವಿಂಗಡನೆ ಮಾಡಬಾರದೆಂದು 2001ರಲ್ಲಿ ಮತ್ತೆ ನಿರ್ಣಯಿಸಲಾಯಿತು. ಹಾಗೆ ಮಾಡಿದ್ದಲ್ಲಿ ಉತ್ತರಭಾರತದ ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆಯಲ್ಲಿ ವೃದ್ಧಿಯಾಗಿ, ದಕ್ಷಿಣದ ರಾಜ್ಯಗಳ ಕ್ಷೇತ್ರಗಳಲ್ಲಿ ಗಣನೀಯ ಕಡಿತ ಕಾಣಿಸಿಕೊಳ್ಳಲಿತ್ತು.  2008ರಲ್ಲಿ ಮೀಸಲು ಕ್ಷೇತ್ರಗಳ ಪುನರ್‍ವಿಂಗಡನೆ ಮತ್ತು ರಾಜ್ಯದೊಳಗೆ ವಿಧಾನಸಭೆ ಕ್ಷೇತ್ರಗಳ ಪುನರ್‍ವಿಂಗಡನೆಯಾಯಿತು ಆದರೆ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಿಲ್ಲ.

ಒಂದುವೇಳೆ, ಈಗ 2019ರಲ್ಲಿ ಜನಗಣತಿಯ (2011ರ) ಆಧಾರದ ಮೇಲೆ ಕ್ಷೇತ್ರವಿಂಗಡನೆಯಾದಲ್ಲಿ ಅತ್ಯಂತ ಹೆಚ್ಚು ಕ್ಷೇತ್ರಗಳನ್ನು ಕಳೆದುಕೊಳ್ಳುವ ರಾಜ್ಯ ತಮಿಳುನಾಡು; 39 ರಿಂದ 29ಕ್ಕೆ ಇಳಿಯುವುದು. ಕರ್ನಾಟಕ ಎರಡು ಕ್ಷೇತ್ರಗಳನ್ನು ಕಳೆದುಕೊಂಡರೆ, ಆಂಧ್ರ ಮತ್ತು ತೆಲಂಗಾಣ ಸೇರಿ 5, ಕೇರಳ ಸಹ 5, ಓರಿಸ್ಸಾ 3  ಕ್ಷೇತ್ರ ಕಳೆದುಕೊಳ್ಳುತ್ತಿದ್ದವು. ಇನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಗುಜರಾತ್ 1 ಕ್ಷೇತ್ರ ಪಡೆದುಕೊಂಡರೆ, ಮಹಾರಾಷ್ಟ್ರ 3, ದೆಹಲಿ 2, ಹರಿಯಾಣ 2, ಮಧ್ಯಪ್ರದೇಶ 3, ರಾಜಸ್ಥಾನ 6, ಬಿಹಾರ 4 ಹಾಗೂ ಉತ್ತರಪ್ರದೇಶ ಅತ್ಯಂತ ಹೆಚ್ಚು 13 ಹೆಚ್ಚುವರಿ ಕ್ಷೇತ್ರಗಳನ್ನು ಪಡೆದುಕೊಳ್ಳಲಿದೆ. ಅಂದರೆ 80 ಇರುವ ಉತ್ತರ ಪ್ರದೇಶದ ಸೀಟುಗಳು 93ಕ್ಕೆ ಏರಿಕೆಯಾಗಲಿವೆ. ಸಹಜವಾಗಿಯೇ ಅದಕ್ಕೆ ರಾಜಕೀಯ ಬೇಡಿಕೆ, ಮನ್ನಣೆಗಳೂ ಹೆಚ್ಚಾಗಲಿವೆ.

ಆದರೆ ಈಗ ಎರಡನೇ 25 ವರ್ಷದ ಫ್ರೀಜ್ ಅವಧಿಯೂ ಮುಗಿಯುತ್ತ ಬಂದಿದೆ. 2021ರ ಜನಗಣತಿಯ ಆಧಾರದ ಮೇಲೆ 2026ರಲ್ಲಿ ಕ್ಷೇತ್ರಗಳ ಪುನರ್‍ವಿಂಗಡನೆಯಾಗಬೇಕಿದೆ. ಹಾಗೆ ಆದಲ್ಲಿ ದಕ್ಷಿಣದ ರಾಜ್ಯಗಳಿಗೆ ಆಘಾತ ಕಾದಿದೆ. ಹಾಗಾಗಿ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳನ್ನು ವಿಂಗಡಿಸುವುದನ್ನು ಶಾಶ್ವತವಾಗಿ ಕೈಬಿಡಬೇಕು ಎನ್ನುವ ಬೇಡಿಕೆಯೂ ಇದೆ. ಅಮೇರಿಕದಲ್ಲಿ ಭಾರತಕ್ಕಿಂತ ಭಿನ್ನವಾಗಿ ಅಧ್ಯಕ್ಷೀಯ ಪದ್ಧತಿಯ ಚುನಾವಣೆ ಇದ್ದರೂ ಅಲ್ಲಿಯೂ ಈ ಸಮಸ್ಯೆ ಇದ್ದೇ ಇದೆ. ಕಳೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್‍ಗಿಂತ ಹಿಲರಿ ಕ್ಲಿಂಟನ್ ಹೆಚ್ಚು ಮತಗಳನ್ನು ಪಡೆದರೂ ಡೊನಾಲ್ಡ್ ಟ್ರಂಪ್ ಅಮೇರಿಕದ ಅಧ್ಯಕ್ಷರಾಗಿ ಚುನಾಯಿತರಾಗಿದ್ದನ್ನು ಗಮನಿಸಬಹುದು.

ಇನ್ನು ಆಯಾ ಪ್ರದೇಶದ ಜನಸಂಖ್ಯೆ ನಿಯಂತ್ರಣವಾಗುವದು ಆಯಾ ರಾಜ್ಯಗಳು ಕೈಗೊಂಡ ಜನಸಂಖ್ಯಾ ನಿಯಂತ್ರಣ ಕ್ರಮಗಳಿಂದ ಮಾತ್ರವೇ ಅಲ್ಲ ಎನ್ನುವುದನ್ನು ನೆನಪಲ್ಲಿಡಬೇಕಿದೆ. ಒಂದು ಪ್ರದೇಶ ಅಭಿವೃದ್ಧಿ ಹೊಂದಿದಾಗ, ಅಲ್ಲಿ ಶಿಕ್ಷಣದ, ಉದ್ಯೋಗದ ಮತ್ತು ಜೀವನಸ್ತರದಲ್ಲಿ ಅಭಿವೃದ್ಧಿ ಕಂಡುಬಂದಾಗ ಜನಸಂಖ್ಯೆ ನಿಯಂತ್ರಣ ತಾನಾಗಿಯೇ ಆಗುತ್ತದೆ.  ಅಭಿವೃದ್ಧಿ ಪಡೆದುಕೊಂಡ ತಪ್ಪಿಗೆ ಲೋಕಸಭೆಯಲ್ಲಿ ಕ್ಷೇತ್ರಗಳನ್ನು ಕಳೆದುಕೊಳ್ಳುವ ಶಿಕ್ಷೆ ಅನುಭವಿಸಬೇಕಾಗುತ್ತೆ ಎನ್ನುವ ಕಾರಣಕ್ಕಾಗಿ ಈ ಕ್ಷೇತ್ರವಿಂಗಡನೆಯ ಯೋಜನೆಯನ್ನು ಶಾಶ್ವತವಾಗಿ ಕೈಬಿಡಬೇಕೆನ್ನುವುದು ಹಲವರ ವಾದ. ಇನ್ನೊಂದು ವಾದವೇನೆಂದರೆ, ಲಕ್ಷದ್ವೀಪ ಕ್ಷೇತ್ರದಲ್ಲಿ ಕೇವಲ 47 ಸಾವಿರ ಮತದಾರರಿದ್ದರೆ ಉತ್ತರ ಭಾರತದ ಕೆಲವು ಕ್ಷೇತ್ರಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಅಂದರೆ ಪ್ರತಿ ಸಂಸದ ಪ್ರತಿನಿಧಿಸುವ ಜನರ ಸಂಖ್ಯೆಯಲ್ಲಿ ಏರಿಳಿತವಾಗುತ್ತದೆ. ಹಾಗಿರುವಾಗ ದೇಶದ ಅಧಿಕಾರದ ಚುಕ್ಕಾಣಿ ಯಾರು ಹಿಡಿಯುವರು ಎನ್ನುವ ನಿರ್ಧಾರದಲ್ಲಿ ಲಕ್ಷದ್ವೀಪದ ಒಬ್ಬ ಮತದಾರನ ತೂಕ ಉತ್ತರದ ಒಬ್ಬ ಮತದಾರನ ತೂಕಕ್ಕಿಂತ ಹೆಚ್ಚಾಗುತ್ತದೆ. ಹಾಗಾಗಿ ಕ್ಷೇತ್ರಗಳ ಪುನರ್‍ವಿಂಗಡನೆ ಆಗಲೇಬೇಕು ಎನ್ನುವುದು ಮತ್ತಿತರರ ವಾದ.

ಆದರೆ 2026 ಬಹಳ ದೂರವಿಲ್ಲ; ಈಗಿಂದಲೇ ಇದರ ಬಗ್ಗೆ ಚರ್ಚೆ ಪ್ರಾರಂಭವಾದರೆ ಮಾತ್ರ 2026 ತನಕ ಪರಿಹಾರ ಸಿಗಬಹುದು. ಅಥವಾ 2001ರಂತೆ ಇನ್ನೊಮ್ಮೆ ಕ್ಷೇತ್ರವಿಂಗಡನೆಯನ್ನು ಮುಂದೂಡಬಹುದು. ಆದರೆ ಸಾರ್ವಜನಿಕ ಚರ್ಚೆಯಾಗದೇ ಜನಗಣತಿಯ ಆಧಾರದ ಮೇಲೆ ಕ್ರಮ ತೆಗೆದುಕೊಂಡಲ್ಲಿ ದೇಶದಲ್ಲಿ ಬಿಕ್ಕಟ್ಟು ತಪ್ಪಿದ್ದಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...