Homeನ್ಯಾಯ ಪಥಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ : 2026ಕ್ಕೆ ದಕ್ಷಿಣ ಭಾರತ ರಾಜ್ಯಗಳಿಗೆ ಕಾದಿದೆಯಾ ಆಘಾತ?

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ : 2026ಕ್ಕೆ ದಕ್ಷಿಣ ಭಾರತ ರಾಜ್ಯಗಳಿಗೆ ಕಾದಿದೆಯಾ ಆಘಾತ?

- Advertisement -
- Advertisement -

| ರಾಜಶೇಖರ್ ಅಕ್ಕಿ|

2026, ದಕ್ಷಿಣ ಭಾರತದ ರಾಜ್ಯಗಳ ಪಾಲಿಗೆ ಇದು ದೊಡ್ಡ ಆಘಾತ ತಂದೊಡ್ಡಲಿದೆಯಾ? ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆಯ ರೀತಿರಿವಾಜುಗಳನ್ನು ಅಧ್ಯಯನ ಮಾಡಿದವರು 2026 ದಕ್ಷಿಣ ಭಾರತದ ರಾಜ್ಯಗಳಿಗೆ ತಂದೊಡ್ಡಲಿರುವ ಆಘಾತದ ಸುಳಿವು ನೀಡುತ್ತಿದ್ದಾರೆ.

ಹೌದು, 2026ಕ್ಕೆ ಲೋಕಸಭಾ ಕ್ಷೇತ್ರಗಳ ಪುನರ್‍ವಿಂಗಡಣೆ ನಡೆಯಲಿದೆ. ಹಾಗೇನಾದರು ಅದು ನಡೆದರೆ, ಜನಸಂಖ್ಯೆಯ ಆಧಾರದಲ್ಲಿ ದಕ್ಷಿಣ ರಾಜ್ಯಗಳು ಈಗಿರುವ ತಮ್ಮ ಸಂಸತ್ ಕ್ಷೇತ್ರಗಳ ಸ್ಥಾನಗಳಲ್ಲಿ ಕೆಲವನ್ನು ಕಳೆದುಕೊಂಡರೆ, ಉತ್ತರದ ರಾಜ್ಯಗಳು ಈಗಿರುವುದಕ್ಕಿಂತ ಹೆಚ್ಚು ಸ್ಥಾನಗಳನ್ನು ದಕ್ಕಿಸಿಕೊಳ್ಳಲಿವೆ. ಆಗ ಸಹಜವಾಗಿಯೇ ಸಂಸತ್ ಅಂಗಳದಲ್ಲಿ, ಅರ್ಥಾತ್ ರಾಷ್ಟ್ರ ರಾಜಕಾರಣದಲ್ಲಿ ದಕ್ಷಿಣ ರಾಜ್ಯಗಳ ದನಿ ಮತ್ತಷ್ಟು ಕ್ಷೀಣಿಸಲಿದೆ. ಈಗಲೇ ಹಿಂದಿ ಹಾರ್ಟ್‍ಲ್ಯಾಂಡ್ ರಾಜ್ಯಗಳೇ ದಿಲ್ಲಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಅಂತದ್ದರಲ್ಲಿ ದಕ್ಷಿಣ ಭಾರತೀಯರ ಸಂಸದರ ಸಂಖ್ಯೆ ಮತ್ತಷ್ಟು ಕುಸಿದರೆ, ಮುಗಿದೇಹೋಯ್ತು! ಅಂದಹಾಗೆ, ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಜನಸಂಖ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿದ್ದಕ್ಕೆ, ಆ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ ಮೊದಲಾದ ಕ್ಷೇತ್ರಗಳಲ್ಲಿ ತುಲನಾತ್ಮಕವಾಗಿ ಅಭಿವೃದ್ಧಿ ಸಾಧಿಸಿರೋದಕ್ಕೆ ದಕ್ಷಿಣ ರಾಜ್ಯಗಳಿಗೆ ಸಿಗಲಿರುವ ಬಹುಮಾನ ಇದು!!

ಅದು ಹೇಗೆ? ಬನ್ನಿ ಈ ಕುರಿತು ತಿಳಿದುಕೊಳ್ಳೋಣ….

ಭಾರತ 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ ಎದುರಿಸಿದಾಗ 489 ಲೋಕಸಭೆ ಕ್ಷೇತ್ರಗಳಿದ್ದವು. ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ಆಗುವುದು ಎಲ್ಲರಿಗೂ ಗೊತ್ತೇ ಇದೆ. ಅದೇ ಜನಗಣತಿಯ ಆಧಾರದ ಮೇಲೆ ಹತ್ತು ವರ್ಷಕ್ಕೊಮ್ಮೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಮರುವಿಂಗಡಣೆ ಆಗುತ್ತಿತ್ತು. ಅದರನುಗುಣವಾಗಿ 1966ರಲ್ಲಿ (1961ರ ಜನಗಣತಿ ಪ್ರಕಾರ) 489ರಿಂದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 520ಕ್ಕೆ ಏರಿದ್ದವು. ನಂತರ 1971ರಲ್ಲಿ ಜನಗಣತಿಯ ತರುವಾಯ 1976ರಲ್ಲಿ ಅವು ಪ್ರಸ್ತುತ 543ಕ್ಕೆ ಏರಿದವು. ಆದರೆ ಆನಂತರ, ಅಂದರೆ 1976ರಲ್ಲೇ (ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದಾಗ) ಕ್ಷೇತ್ರಗಳ ಪುನರ್‍ವಿಂಗಡನೆಗೆ ಮುಂದಿನ 25 ವರ್ಷಗಳವರೆಗೆ ಫ್ರೀಜ್ ಮಾಡಿ ಸಂವಿಧಾನಾತ್ಮಕ ಕಡಿವಾಣ ಹಾಕಲಾಯಿತು. ಆಗಲೇ ಜನಸಂಖ್ಯೆ ನಿಯಂತ್ರಣದ ಯೋಜನೆಗಳು ಆರಂಭವಾದವು. ಜನಗಣತಿಯ ಆಧಾರದ ಮೇಲೆ ಕ್ಷೇತ್ರವಿಂಗಡಣೆ ಮಾಡುತ್ತಾ ಹೋದಲ್ಲಿ ಜನಸಂಖ್ಯೆ ನಿಯಂತ್ರಣ ಸರಿಯಾಗಿ ಮಾಡದ (ಅಂದರೆ ಅಭಿವೃದ್ಧಿ ಆಗದೇ ಇರುವ) ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿ, ಜನಸಂಖ್ಯೆ ನಿಯಂತ್ರಿಸಿದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಇಳಿಮುಖವಾಗುವ ಸಾಧ್ಯತೆ ಇತ್ತು. ಹಾಗಾಗಿ 1976ರಲ್ಲಿ ಮುಂದಿನ 25 ವರ್ಷಗಳ ತನಕ ಕ್ಷೇತ್ರ ಪುನರ್‍ವಿಂಗಡನೆ ಮಾಡಬಾರದು ಎಂದು ನಿರ್ಣಯಿಸಲಾಯಿತು.

ಆ 25 ವರ್ಷಗಳ ಅವಧಿ 2001ರಲ್ಲಿ ಮುಗಿದು, 2006ಕ್ಕೆ ಕ್ಷೇತ್ರಗಳ ಪುನರ್‍ವಿಂಗಡನೆಯಾಗಬೇಕಿತ್ತು. ಆದರೆ ಹಾಗಾಗಲಿಲ್ಲ. ಇಪ್ಪತೈದು ವರ್ಷಗಳ ಇನ್ನೊಂದು ಅವಧಿಯವರೆಗೆ ಪುನರ್‍ವಿಂಗಡನೆ ಮಾಡಬಾರದೆಂದು 2001ರಲ್ಲಿ ಮತ್ತೆ ನಿರ್ಣಯಿಸಲಾಯಿತು. ಹಾಗೆ ಮಾಡಿದ್ದಲ್ಲಿ ಉತ್ತರಭಾರತದ ರಾಜ್ಯಗಳಲ್ಲಿ ಲೋಕಸಭೆ ಕ್ಷೇತ್ರಗಳ ಸಂಖ್ಯೆಯಲ್ಲಿ ವೃದ್ಧಿಯಾಗಿ, ದಕ್ಷಿಣದ ರಾಜ್ಯಗಳ ಕ್ಷೇತ್ರಗಳಲ್ಲಿ ಗಣನೀಯ ಕಡಿತ ಕಾಣಿಸಿಕೊಳ್ಳಲಿತ್ತು.  2008ರಲ್ಲಿ ಮೀಸಲು ಕ್ಷೇತ್ರಗಳ ಪುನರ್‍ವಿಂಗಡನೆ ಮತ್ತು ರಾಜ್ಯದೊಳಗೆ ವಿಧಾನಸಭೆ ಕ್ಷೇತ್ರಗಳ ಪುನರ್‍ವಿಂಗಡನೆಯಾಯಿತು ಆದರೆ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲಿಲ್ಲ.

ಒಂದುವೇಳೆ, ಈಗ 2019ರಲ್ಲಿ ಜನಗಣತಿಯ (2011ರ) ಆಧಾರದ ಮೇಲೆ ಕ್ಷೇತ್ರವಿಂಗಡನೆಯಾದಲ್ಲಿ ಅತ್ಯಂತ ಹೆಚ್ಚು ಕ್ಷೇತ್ರಗಳನ್ನು ಕಳೆದುಕೊಳ್ಳುವ ರಾಜ್ಯ ತಮಿಳುನಾಡು; 39 ರಿಂದ 29ಕ್ಕೆ ಇಳಿಯುವುದು. ಕರ್ನಾಟಕ ಎರಡು ಕ್ಷೇತ್ರಗಳನ್ನು ಕಳೆದುಕೊಂಡರೆ, ಆಂಧ್ರ ಮತ್ತು ತೆಲಂಗಾಣ ಸೇರಿ 5, ಕೇರಳ ಸಹ 5, ಓರಿಸ್ಸಾ 3  ಕ್ಷೇತ್ರ ಕಳೆದುಕೊಳ್ಳುತ್ತಿದ್ದವು. ಇನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಗುಜರಾತ್ 1 ಕ್ಷೇತ್ರ ಪಡೆದುಕೊಂಡರೆ, ಮಹಾರಾಷ್ಟ್ರ 3, ದೆಹಲಿ 2, ಹರಿಯಾಣ 2, ಮಧ್ಯಪ್ರದೇಶ 3, ರಾಜಸ್ಥಾನ 6, ಬಿಹಾರ 4 ಹಾಗೂ ಉತ್ತರಪ್ರದೇಶ ಅತ್ಯಂತ ಹೆಚ್ಚು 13 ಹೆಚ್ಚುವರಿ ಕ್ಷೇತ್ರಗಳನ್ನು ಪಡೆದುಕೊಳ್ಳಲಿದೆ. ಅಂದರೆ 80 ಇರುವ ಉತ್ತರ ಪ್ರದೇಶದ ಸೀಟುಗಳು 93ಕ್ಕೆ ಏರಿಕೆಯಾಗಲಿವೆ. ಸಹಜವಾಗಿಯೇ ಅದಕ್ಕೆ ರಾಜಕೀಯ ಬೇಡಿಕೆ, ಮನ್ನಣೆಗಳೂ ಹೆಚ್ಚಾಗಲಿವೆ.

ಆದರೆ ಈಗ ಎರಡನೇ 25 ವರ್ಷದ ಫ್ರೀಜ್ ಅವಧಿಯೂ ಮುಗಿಯುತ್ತ ಬಂದಿದೆ. 2021ರ ಜನಗಣತಿಯ ಆಧಾರದ ಮೇಲೆ 2026ರಲ್ಲಿ ಕ್ಷೇತ್ರಗಳ ಪುನರ್‍ವಿಂಗಡನೆಯಾಗಬೇಕಿದೆ. ಹಾಗೆ ಆದಲ್ಲಿ ದಕ್ಷಿಣದ ರಾಜ್ಯಗಳಿಗೆ ಆಘಾತ ಕಾದಿದೆ. ಹಾಗಾಗಿ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳನ್ನು ವಿಂಗಡಿಸುವುದನ್ನು ಶಾಶ್ವತವಾಗಿ ಕೈಬಿಡಬೇಕು ಎನ್ನುವ ಬೇಡಿಕೆಯೂ ಇದೆ. ಅಮೇರಿಕದಲ್ಲಿ ಭಾರತಕ್ಕಿಂತ ಭಿನ್ನವಾಗಿ ಅಧ್ಯಕ್ಷೀಯ ಪದ್ಧತಿಯ ಚುನಾವಣೆ ಇದ್ದರೂ ಅಲ್ಲಿಯೂ ಈ ಸಮಸ್ಯೆ ಇದ್ದೇ ಇದೆ. ಕಳೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್‍ಗಿಂತ ಹಿಲರಿ ಕ್ಲಿಂಟನ್ ಹೆಚ್ಚು ಮತಗಳನ್ನು ಪಡೆದರೂ ಡೊನಾಲ್ಡ್ ಟ್ರಂಪ್ ಅಮೇರಿಕದ ಅಧ್ಯಕ್ಷರಾಗಿ ಚುನಾಯಿತರಾಗಿದ್ದನ್ನು ಗಮನಿಸಬಹುದು.

ಇನ್ನು ಆಯಾ ಪ್ರದೇಶದ ಜನಸಂಖ್ಯೆ ನಿಯಂತ್ರಣವಾಗುವದು ಆಯಾ ರಾಜ್ಯಗಳು ಕೈಗೊಂಡ ಜನಸಂಖ್ಯಾ ನಿಯಂತ್ರಣ ಕ್ರಮಗಳಿಂದ ಮಾತ್ರವೇ ಅಲ್ಲ ಎನ್ನುವುದನ್ನು ನೆನಪಲ್ಲಿಡಬೇಕಿದೆ. ಒಂದು ಪ್ರದೇಶ ಅಭಿವೃದ್ಧಿ ಹೊಂದಿದಾಗ, ಅಲ್ಲಿ ಶಿಕ್ಷಣದ, ಉದ್ಯೋಗದ ಮತ್ತು ಜೀವನಸ್ತರದಲ್ಲಿ ಅಭಿವೃದ್ಧಿ ಕಂಡುಬಂದಾಗ ಜನಸಂಖ್ಯೆ ನಿಯಂತ್ರಣ ತಾನಾಗಿಯೇ ಆಗುತ್ತದೆ.  ಅಭಿವೃದ್ಧಿ ಪಡೆದುಕೊಂಡ ತಪ್ಪಿಗೆ ಲೋಕಸಭೆಯಲ್ಲಿ ಕ್ಷೇತ್ರಗಳನ್ನು ಕಳೆದುಕೊಳ್ಳುವ ಶಿಕ್ಷೆ ಅನುಭವಿಸಬೇಕಾಗುತ್ತೆ ಎನ್ನುವ ಕಾರಣಕ್ಕಾಗಿ ಈ ಕ್ಷೇತ್ರವಿಂಗಡನೆಯ ಯೋಜನೆಯನ್ನು ಶಾಶ್ವತವಾಗಿ ಕೈಬಿಡಬೇಕೆನ್ನುವುದು ಹಲವರ ವಾದ. ಇನ್ನೊಂದು ವಾದವೇನೆಂದರೆ, ಲಕ್ಷದ್ವೀಪ ಕ್ಷೇತ್ರದಲ್ಲಿ ಕೇವಲ 47 ಸಾವಿರ ಮತದಾರರಿದ್ದರೆ ಉತ್ತರ ಭಾರತದ ಕೆಲವು ಕ್ಷೇತ್ರಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಅಂದರೆ ಪ್ರತಿ ಸಂಸದ ಪ್ರತಿನಿಧಿಸುವ ಜನರ ಸಂಖ್ಯೆಯಲ್ಲಿ ಏರಿಳಿತವಾಗುತ್ತದೆ. ಹಾಗಿರುವಾಗ ದೇಶದ ಅಧಿಕಾರದ ಚುಕ್ಕಾಣಿ ಯಾರು ಹಿಡಿಯುವರು ಎನ್ನುವ ನಿರ್ಧಾರದಲ್ಲಿ ಲಕ್ಷದ್ವೀಪದ ಒಬ್ಬ ಮತದಾರನ ತೂಕ ಉತ್ತರದ ಒಬ್ಬ ಮತದಾರನ ತೂಕಕ್ಕಿಂತ ಹೆಚ್ಚಾಗುತ್ತದೆ. ಹಾಗಾಗಿ ಕ್ಷೇತ್ರಗಳ ಪುನರ್‍ವಿಂಗಡನೆ ಆಗಲೇಬೇಕು ಎನ್ನುವುದು ಮತ್ತಿತರರ ವಾದ.

ಆದರೆ 2026 ಬಹಳ ದೂರವಿಲ್ಲ; ಈಗಿಂದಲೇ ಇದರ ಬಗ್ಗೆ ಚರ್ಚೆ ಪ್ರಾರಂಭವಾದರೆ ಮಾತ್ರ 2026 ತನಕ ಪರಿಹಾರ ಸಿಗಬಹುದು. ಅಥವಾ 2001ರಂತೆ ಇನ್ನೊಮ್ಮೆ ಕ್ಷೇತ್ರವಿಂಗಡನೆಯನ್ನು ಮುಂದೂಡಬಹುದು. ಆದರೆ ಸಾರ್ವಜನಿಕ ಚರ್ಚೆಯಾಗದೇ ಜನಗಣತಿಯ ಆಧಾರದ ಮೇಲೆ ಕ್ರಮ ತೆಗೆದುಕೊಂಡಲ್ಲಿ ದೇಶದಲ್ಲಿ ಬಿಕ್ಕಟ್ಟು ತಪ್ಪಿದ್ದಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...