Homeಅಂಕಣಗಳುಕ್ವಿಟ್ ಎನ್‍ಡಿಎ 2 0 1 9

ಕ್ವಿಟ್ ಎನ್‍ಡಿಎ 2 0 1 9

- Advertisement -
- Advertisement -

ಭಾರತೀಯ ಸಂವಿಧಾನ, ಪ್ರಜಾಸತ್ತೆ ಮತ್ತು ನಾಗರೀಕ ಸಮಾಜಗಳ ರಕ್ಷಣೆಗಾಗಿ ಸೆಪ್ಟೆಂಬರ್ 10ರಂದು ಜರುಗಿದ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವವು ಜಗತ್ತಿನಲ್ಲಿ ಹೊಸ ಜೀವನ ವಿಧಾನವಾಗಿ ಪ್ರಜೆಗಳ ಸಾರ್ವಭೌಮತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವದೆಲ್ಲೆಡೆ ಉಪಯುಕ್ತವಾಗಿದೆ. ಶ್ರೇಷ್ಠ ಇತಿಹಾಸಕಾರ ಅರ್ನಾಲ್ಡ್ ಟೋಯ್ನ್‍ಬಿ ‘ಬೆದರಿಕೆಯೆಂಬುದು ಮಾನವ ಇತಿಹಾಸದಲ್ಲಿ ಹೊಸದೇನಲ್ಲ. ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸಿ ನಿಂತ ಸಮಾಜ ಮತ್ತು ಸಂಸ್ಕøತಿ ಅತಿಜಯಿಸಿದೆ. ಎದುರಿಸುವಲ್ಲಿ ವಿಫಲವಾದ ಸಮಾಜ ನಾಮಾವಶೇಷವಾಗಿದೆ. ಅಂತಹ ಬೆದರಿಕೆಗಳನ್ನು ಯಶಸ್ವಿಯಾಗಿ ಎದುರಿಸುವುದರ ಹಿಂದಿರುವುದು ಆ ಸಮಾಜದ ಸೃಜನಶೀಲರಾದ ಪ್ರಬುದ್ಧ ವ್ಯಕ್ತಿಗಳಾಗಿರುತ್ತಾರೆ. ಅವರು ತಮ್ಮ ಸಹಜೀವಿಗಳನ್ನು ಸುರಕ್ಷಿತವಾಗಿ ಪ್ರಗತಿಯತ್ತ ಮುನ್ನಡೆಸಿದ್ದಾರೆ’ ಎಂದು ಹೇಳಿರುವುದು ಭಾರತದಲ್ಲಿ ಇಂದು ಸಮಕಾಲೀನ ಮಹತ್ವ ಹೊಂದಿದೆ.
ಜಗತ್ತಿನ ಎಲ್ಲ ಧರ್ಮಗಳೂ ಒಳ್ಳೆಯದನ್ನೇ ಬಯಸು-ಒಳ್ಳೆಯದನ್ನೇ ಮಾಡು ಎಂದು ಬೋಧಿಸುತ್ತವೆ. ಯುದ್ಧ ಮತ್ತು ವಿನಾಶದೆಡೆಗೆ ಸಾಗುತ್ತಿರುವ ಜಗತ್ತನ್ನು ಪಾರು ಮಾಡುವಲ್ಲಿ ಇಂದು ಸಂಕಷ್ಟ ಅನುಭವಿಸುವವರ ವಿಮೋಚನೆಗಾಗಿ ಸಕ್ರಿಯರಾದ ಪ್ರಜ್ಞಾವಂತರು ಮತ್ತು ಮಾನವೀಯತೆಗೆ ಬದ್ಧರಾದ ಒಂದು ಪಡೆ ಕಾರ್ಯಶೀಲರಾಗಬೇಕೆಂಬುದು ಕುರ್‍ಆನ್‍ನ ಕರೆಯೂ ಆಗಿದೆ. ಬುದ್ಧ, ಬಸವ, ಸೂಫಿ ಸಂತರು ಮತ್ತು ಎಲ್ಲ ಮಾನವತಾವಾದಿಗಳು ‘ನಿಮ್ಮ ಸ್ವಾರ್ಥವನ್ನು ಕೊಂದು ಸಮಾಜವನ್ನು ಉಳಿಸಿ ಮತ್ತು ಬೆಳೆಸಿ’ ಎಂಬ ಸಂದೇಶವನ್ನು ನೀಡಿದ್ದಾರೆ. ಸತ್ತ ಮೇಲೆ ದೇವರು ಮತ್ತು ಪ್ರಕೃತಿಯ ಮಡಿಲಲ್ಲಿ ಒಂದಾಗುವ ಮನುಷ್ಯರು ಬದುಕಿರುವಾಗಲೂ ಕೂಡ ಕೂಡಿ ಬಾಳಿದರೆ ಶ್ರೇಷ್ಠ ಸಂಸ್ಕøತಿ ಮತ್ತು ನಾಗರೀಕತೆಗಳು ರೂಪುಗೊಳ್ಳುತ್ತವೆ. ಅಲ್ಲಮಪ್ರಭುವಿನ ‘ನಾನು ನಾನಲ್ಲ, ದೇವರು-ಪ್ರಕೃತಿಯೇ ಎಲ್ಲ’ ಎಂಬ ಮಾತುಗಳು ಇಂದು ನಮ್ಮನ್ನು ಆಳುತ್ತಿರುವವರಿಗೆ ಸರಿಯಾಗಿ ಅರ್ಥವಾದರೆ ಸ್ವಾರ್ಥಪರತೆ, ಮೂಲಭೂತವಾದ, ಭ್ರಷ್ಟಾಚಾರ, ಬೆದರಿಕೆ ಮೊದಲಾದ ಅನಿಷ್ಟಗಳನ್ನು ಮೀರಿ ಮಾನವೀಯತೆಯೆಡೆಗೆ ಜಗತ್ತನ್ನು ಮುನ್ನಡೆಸಲು ಸಾಧ್ಯವಾಗುತ್ತದೆ.
ಭಾರತೀಯ ಸಂಸ್ಕøತಿ ಹಲವಾರು ಸಂಕೀರ್ಣತೆಗಳು ಮತ್ತು ಸವಾಲುಗಳ ನಡುವೆಯೂ ತನ್ನ ನೈಜತೆ ಮತ್ತು ಶ್ರೇಷ್ಠತೆಗಳನ್ನು ಉಳಿಸಿಕೊಂಡು ಹೋಗಲು ಬುದ್ಧ, ಮಹಾವೀರ, ಬಸವ, ಫುಲೆ, ರಾಮಾನುಜ, ಕಬೀರ, ದಯಾನಂದ ಸರಸ್ವತಿ, ರಾಜಾರಾಮ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾಸಾಗರ್, ಲಾಲಾ ಲಜಪತರಾಯ್, ಬಿಪಿನ್ ಚಂದ್ರಪಾಲ್, ಬಾಲಗಂಗಾಧರ ತಿಲಕ್, ಮೋತಿಲಾಲ್ ನೆಹರು, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ಪಂಡಿತ್ ನೆಹರು, ಅಂಬೇಡ್ಕರ್, ಪೆರಿಯಾರ್, ಲೋಹಿಯಾ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಶಿಕ್ಷಣ ಸಂತ ಕುವೆಂಪು ಮೊದಲಾದ ಮಹನೀಯರು ನಡೆಸಿದ ಸಾಮಾಜಿಕ ಸುಧಾರಣೆ ಕಾರ್ಯಗಳು ಪ್ರಮುಖ ಕಾರಣವಾಗಿವೆ. ಇಂತಹ ಮಹಾ ಸಂತರು ಮತ್ತು ಸಾಧಕರು ಕಟ್ಟಿ ಬೆಳೆಸಿರುವ ಭಾರತೀಯ ಸಂಸ್ಕøತಿಯನ್ನು ನಾಶಪಡಿಸಿ ಅರಾಜಕತೆ ಸೃಷ್ಟಿ ಮಾಡುವ ಕೆಲಸವನ್ನು ಜಾಗತಿಕವಾಗಿ ಮಾರುಕಟ್ಟೆ ಶಕ್ತಿಗಳು ಮತ್ತು ಸ್ಥಳೀಯವಾಗಿ ಹಿಂದುತ್ವವಾದಿಗಳು ನಡೆಸುತ್ತಿರುವುದನ್ನು ಪ್ರಜ್ಞಾವಂತರು ತಡೆಯಲೇ ಬೇಕಿದೆ. ಮೊನ್ನೆ ನಡೆದ ಭಾರತ್ ಬಂದ್ ಕೇವಲ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಲಷ್ಟೇ ಸೀಮಿತಗೊಂಡಿಲ್ಲ. ಇದು ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಗೆ ಬದ್ಧವಾದ ವಿಶಾಲ ಕಾರ್ಯಸೂಚಿಯನ್ನು ಆಧರಿಸಿದೆ.
ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ-2 ಸರ್ಕಾರ ಕಾಂಗ್ರೆಸ್ ಪಕ್ಷದೊಳಗಿನ ಕುಟುಂಬ ರಾಜಕಾರಣ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಸ್ವಾರ್ಥಪರತೆಯಿಂದಾಗಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನೀಡಲು ವಿಫಲವಾಯಿತು. ದೇಶದ ಜನರಿಗೆ ಬದಲಾವಣೆ ಅನಿವಾರ್ಯವಾಗಿತ್ತು. ಕುರುಡುಗಣ್ಣಿನವನಿಗಿಂತ ಮೆಳ್ಳಗಣ್ಣಿನವನು (ಸುಮಾರಾಗಿ ನೋಡುವವನು) ಎಷ್ಟೋ ವಾಸಿಯೆಂಬ ಅರಿವಿಗೆ ಜನರು ಶರಣಾಗಿದ್ದರು. ಇಂತಹ ಮೆಳ್ಳಗಣ್ಣಿನವರ ನಾಯಕನಾಗಿ ನರೇಂದ್ರ ಮೋದಿ 2014ರಲ್ಲಿ ಹಲವಾರು ಹುಸಿ ಭರವಸೆಗಳನ್ನು ಜನರಿಗೆ ನೀಡಿ ಅಧಿಕಾರ ಚುಕ್ಕಾಣಿಯನ್ನು ಹಿಡಿದರು.
ಅಂದು ಪಂಡಿತ್ ಜವಾಹರಲಾಲ್ ನೆಹರು ಸಾರ್ವಜನಿಕ ಸಂಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭೂಮಿ, ಬಂಡವಾಳ, ಉದ್ಯೋಗ, ಲಾಭ ಎಲ್ಲವೂ ದೇಶದ ಸ್ವತ್ತಾಗಿ ಉಳಿಯುವಂತೆ ನೋಡಿಕೊಂಡಿದ್ದರು. ಇಂದು ಮೋದಿಜಿ ಖಾಸಗೀಕರಣವನ್ನು ಉತ್ತೇಜಿಸಿ ಶ್ರೀಮಂತರು ಮಾತ್ರ ಪ್ರಕಾಶಿಸುವಂತೆ ನೋಡಿಕೊಂಡರು. ಕೋಟ್ಯಾಂತರ ವಿದ್ಯಾವಂತ ಯುವಜನರು ಆತ್ಮಹತ್ಯೆಯೆಡೆಗೆ ಮುಖ ಮಾಡುವಂತಹ ದುಸ್ಥಿತಿಯನ್ನು ಇವರು ಸೃಷ್ಟಿಸಿದರು. ನೆಹರೂರವರ ಮಗಳು ಇಂದಿರಾಜಿ ಬ್ಯಾಂಕುಗಳ ರಾಷ್ಟ್ರೀಕರಣ, ಭೂಸುಧಾರಣೆ, 20 ಅಂಶಗಳ ಕಾರ್ಯಕ್ರಮ, ಕನಿಷ್ಟ ಅಗತ್ಯಗಳ ಪೂರೈಕೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮೊದಲಾದವುಗಳ ಮೂಲಕ ದೇಶದ ಜನರಿಗೆ ಒಳ್ಳೆಯದನ್ನು ಮಾಡಿ ‘ಗರೀಬಿ ಹಟಾವೋ’ (ಬಡತನ ನಿರ್ಮೂಲನೆ) ದಿಕ್ಕಿನಲ್ಲಿ ದಿಟ್ಟತನದಿಂದ ಸಾಗಿದರೆ ಮೋದಿಜಿ ಖಾಸಗೀಕರಣದ ಮೂಲಕ ಮೀಸಲಾತಿ ಮತ್ತು ಉದ್ಯೋಗ ಸೌಲಭ್ಯಗಳನ್ನು ಕಿತ್ತುಕೊಂಡು ‘ಗರೀಭೋಂಕೊ ಹಟಾವೋ’ (ಬಡವರ ನಿರ್ಮೂಲನೆ) ಮಾಡುತ್ತಿರುವುದು ಸರಿಯಲ್ಲ.
ಹೆಸರಾಂತ ಇತಿಹಾಸಕಾರರಾದ ರೊಮಿಲಾ ಥಾಪರ್ ‘ಒಂದು ದೇಶದ ಅಭಿವೃದ್ಧಿ ಪ್ರಧಾನಿಯಾದವರ ವಿಶಾಲ ಎದೆ ಅಳತೆಯನ್ನು ಅವಲಂಬಿಸಿಲ್ಲ, ವಿಶಾಲ ಹೃದಯ ಮತ್ತು ಸಮಷ್ಟಿ ಪ್ರಜ್ಞೆಗಳನ್ನು ಆಧರಿಸಿದ ದೇಶ ಸೇವೆಯನ್ನು ಅವಲಂಬಿಸಿದೆ’ ಎಂದು ಹೇಳಿರುವ ಮಾತುಗಳು ಮೋದಿಯವರಿಗೆ ಆತ್ಮಾವಲೋಕನಕ್ಕೆ ಎಡೆಮಾಡಿಕೊಡಬೇಕು.
ದೇಶದ ಜನರನ್ನು ಅವನತಿಯೆಡೆಗೆ ಕೊಂಡೊಯ್ಯುತ್ತಿರುವ ‘ರಾಷ್ಟ್ರೀಯ ವಿದ್ವಂಸಕರ ಕೂಟ’ ಮೋದಿ ನೇತೃತ್ವದಲ್ಲಿ ಇಂದು ವಿಜೃಂಭಿಸುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಸಂವಿಧಾನದ ಹೆಸರಿನಲ್ಲಿ ಮಂತ್ರಿಯಾದ ಮತ್ತೊಬ್ಬ ಹುಂಬ ‘ಸಂವಿಧಾನವನ್ನು ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿದ್ದೇವೆ’ ಎಂದು ಹೇಳಿ ಜನರಿಂದ ಉಗಿಸಿಕೊಂಡಿರುವ ಸಂಗತಿ ಇನ್ನೂ ನೆನಪಿನಲ್ಲಿದೆ. ಗೋಡ್ಸೆಗಿಂತ ಮೊದಲೇ ಹುಟ್ಟಿದ್ದರೆ ನಾನೇ ಗಾಂಧಿಯನ್ನು ಕೊಲ್ಲುತ್ತಿದ್ದೆ’ ಎಂದು ಇನ್ನೊಬ್ಬ ಹಿಂದುತ್ವವಾದಿ ಪುಂಡ ಹೆಂಗಸು ಹೇಳಿರುವುದನ್ನು ಖಂಡಿಸಿ ಜೈಲಿಗೆ ಹಾಕುವುದರ ಬದಲು ಮೋದಿ ಮತ್ತು ಬಳಗ ಮೌನವಾಗಿ ರಕ್ಷಿಸುತ್ತಿರುವುದು ದೇಶದ್ರೋಹಿಗಳ ಪಡೆ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಮ್ಮನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿರುವ ಸಂಕೇತವಾಗಿದೆ.
ಮೊನ್ನೆ ನಡೆದ ಭಾರತ್ ಬಂದ್ ‘ಸರ್ಕಾರಿ ಪ್ರಾಯೋಜಿತ ಬಂದ್’ ಎಂದು ಹೇಳಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿ ಕೊಡಗಿನ ನೊಂದವರಿಗೆ ಆರ್ಥಿಕ ನೆರವು ಕೇಳಲು ಹೋದಾಗ ಬೇಕಂತಲೇ ತಪ್ಪಿಸಿಕೊಂಡ ಈ ಭಾಗದ ಸಂಸದನಿಗೆ ಹೃದಯವಂತಿಕೆಯೂ ಇಲ್ಲ, ಎದೆಗಾರಿಕೆ ಇಲ್ಲವೇ ಇಲ್ಲ ಎಂಬ ಸತ್ಯ ನಮಗೆ ಮನವರಿಕೆಯಾಗಿದೆ. ಈತನಿಗೆ ಮುಂದಿನ ಮಹಾಚುನಾವಣೆಯಲ್ಲಿ ಮತದಾರ ಬಂಧುಗಳು ಗೇಟ್ ಪಾಸ್ ನೀಡುವುದು ಅನಿವಾರ್ಯವಾಗಿದೆ. ‘ಕೋಮುವಾದಿ ಬಿಜೆಪಿಯಿಂದ ದೇಶವನ್ನು ರಕ್ಷಿಸಬೇಕೆಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೇಳಿರುವ ಮಾತುಗಳು ಇಂದು ಪ್ರಗತಿಪರರು ಮತ್ತು ಜಾತ್ಯಾತೀತರಿಗೆ ಅರ್ಥವಾಗಬೇಕಿದೆ. ತುರ್ತು ಪರಿಸ್ಥಿತಿ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ರಾಜನೀತಿಯನ್ನು ಉಗ್ರವಾಗಿ ವಿರೋಧಿಸಿದ ಶೋಷಿತರ ಧ್ವನಿ ದೇವನೂರು ಮಹಾದೇವ ‘ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳು, ಕಮ್ಯುನಿಷ್ಟ್‍ರು, ರೈತ ಸಂಘಟನೆಗಳು, ದಲಿತ ಸಂಘಟನೆಗಳು ಮೊದಲಾದ ಬಿಜೆಪಿಯೇತರ ಬಣಗಳನ್ನು ಬೆಂಬಲಿಸುವುದು ಬಹುಸಂಸ್ಕøತಿ ಮತ್ತು ಬಹುಜನರ ರಕ್ಷಣೆಗೆ ಅನಿವಾರ್ಯ’ ಎಂದು ಹೇಳಿರುವ ಮಾತುಗಳನ್ನು ನಾವು ಒಪ್ಪಲೇಬೇಕು.
ಇತ್ತೀಚೆಗೆ ಮೋದಿ ಬಳಗ ‘ನಯಿ ಭಾರತ್’ (ಹೊಸ ಭಾರತ) ನಿರ್ಮಿಸುವುದು ನಮ್ಮ ಗುರಿ ಎಂದು ಹೇಳುತ್ತಿದೆ. ಪ್ರಕೃತಿ ಮತ್ತು ಮಾನವೀಯತೆಗಳನ್ನು ನಿರ್ಲಕ್ಷಿಸಿದ ಫಲವಾಗಿ ಕೊಡಗು, ಕೇರಳ, ಉತ್ತರ ಭಾರತ, ಈಶಾನ್ಯ ಭಾರತ ಮೊದಲಾದೆಡೆ ಪ್ರವಾಹ ಉಂಟಾಗಿ ಭಾರತವೇ ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಮೋದಿ ಬಳಗ ತನ್ನ ಸಂವಿಧಾನ ವಿರೋಧಿ, ಪ್ರಜಾಸತ್ತೆ ವಿರೋಧಿ, ಮಾನವ ವಿರೋಧಿ, ಪ್ರಕೃತಿ ವಿರೋಧಿ ಹಾಗೂ ಸಾಮಾಜಿಕ ನ್ಯಾಯ ವಿರೋಧಿ ಧೋರಣೆಗಳು ಮತ್ತು ನಡವಳಿಕೆಗಳಿಂದ ‘ನೋ ಭಾರತ್’ ದಿಕ್ಕಿನತ್ತ ದೇಶವನ್ನು ಕೊಂಡೊಯ್ಯುತ್ತಿದೆ. ಅಂದು ಗಾಂಧಿ ಬ್ರಿಟೀಷರನ್ನು ದೇಶದಿಂದ ತೊಲಗಿಸಲು ‘ಕ್ವಿಟ್ ಇಂಡಿಯಾ ಚಳುವಳಿ’ಯನ್ನು 1942ರಲ್ಲಿ ನಡೆಸಿದ ರೀತಿಯಲ್ಲೇ 2019ರಲ್ಲಿ ‘ಕ್ವಿಟ್ ಎನ್‍ಡಿಎ’ ಚಳುವಳಿಯನ್ನು ನಡೆಸಿ ಭಾರತ ಮುಳುಗುವುದನ್ನು ತಪ್ಪಿಸಬೇಕಾದ ಸಾಮಾಜಿಕ ಜವಾಬ್ದಾರಿಯನ್ನು ಪ್ರಗತಿಪರರು, ಜಾತ್ಯಾತೀತರು, ಮಾನವತಾವಾದಿಗಳು ಮತ್ತು ಪ್ರಜಾಪ್ರಭುತ್ವವಾದಿಗಳು ನಿರ್ವಹಿಸಲೇಬೇಕಿದೆ.

– ಡಾ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...