Homeಸತ್ಯ ಮಿಥ್ಯವಾಯುಸೇನೆ ದಾಳಿಯ ವಿಡಿಯೋ ಅಲ್ಲ, ಅದು ವಿಡಿಯೋ ಗೇಮ್ ಕ್ಲಿಪ್!

ವಾಯುಸೇನೆ ದಾಳಿಯ ವಿಡಿಯೋ ಅಲ್ಲ, ಅದು ವಿಡಿಯೋ ಗೇಮ್ ಕ್ಲಿಪ್!

- Advertisement -
- Advertisement -

ಮಿಥ್ಯ: ಭಾರತೀಯ ವಾಯುಪಡೆ ಫೆಬ್ರವರಿ 26ರಂದು ಪಾಕಿಸ್ತಾನದ ಬಲಾಕೊಟ್ ಮೇಲೆ ನಡೆಸಿದ ದಾಳಿಯ ವಿಡಿಯೋ ಇದು ಎಂದು ಒಂದು ವಿಡಿಯೋವನ್ನು ಹರಿಬಿಡಲಾಗಿದೆ.

ಸತ್ಯ: ಈ ದಾಳಿ ಯಾವ ಬಲಾಕೋಟ್‌ನಲ್ಲಿ (ಈ ಹೆಸರಿನ ಎರಡು ಗ್ರಾಮಗಳಿವೆ. ಒಂದು ನಿಯಂತ್ರಣ ರೇಖೆಗೆ ಹೊಂದಿಕೊಂಡಿದ್ದರೆ, ಇನ್ನೊಂದು ಪಾಕಿಸ್ತಾನ ಪ್ರದೇಶದಲ್ಲಿದೆ) ಆಯಿತು? ನಿಜಕ್ಕೂ ಆ ವೇಳೆಯಲ್ಲಿ ಅಲ್ಲಿ ಭಯೋತ್ಪಾದಕರು ಇದ್ದರೆ? ಪಾಕ್ ಹೇಳಿದಂತೆ ಅವರ ವಾಯುಸೇನೆ ನಮ್ಮ ವಿಮಾನಗಳನ್ನು ಹಿಮ್ಮೆಟ್ಟಿಸಿತೇ? ನಮ್ಮ ಸೇನೆ ಬಾಂಬ್ ಎಸಿದಿದ್ದು ಭಯೋತ್ಪಾದಕರ ಕ್ಯಾಂಪ್ ಮೇಲೋ ಅಥವಾ ಖಾಲಿ ಜಾಗದಲ್ಲೋ?- ಈ ಎಲ್ಲ ಪ್ರಶ್ನೆಗಳಿಗೆ ಇನ್ನೂ ಸ್ಪಷ್ಟವಾದ, ಅಧಿಕೃತ ಉತ್ತರಗಳಿಲ್ಲ. ಎರಡೂ ದೇಶಗಳ ಅಧಿಕೃತ ಹೇಳಿಕೆಗಳು ಅಸ್ಪಷ್ಟತಿಯಿಂದ ಕೂಡಿದ್ದು, ಗೊದಲ ಹುಟ್ಟಿಸು ರೀತಿಯಲ್ಲಿವೆ, ಆದರೆ ಚಾನೆಲ್‌ಗಳು ಅಲ್ಲಿ 300-400 ಉಗ್ರರ ಹತ್ಯೆಯಾಗಿದೆ ಎನ್ನುತ್ತಿವೆ. ಯಾವುದಕ್ಕೂ ದಾಖಲೆಯಿಲ್ಲ.

ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಸೇನೆಯ ದಾಳಿ ಎಂದು ಸುಳ್ಳನ್ನು ಹರಡಲಾಗುತ್ತಿದೆ. ವಿಡಿಯೊ ವಿಳಾಸ:

https://www.facebook.com/NaMoFansKarunadu/videos/424845351597546/?t=4

‘ನಮೋ ಫ್ಯಾನ್ಸ್ ಕರುನಾಡು’ ಎಂಬ ’ಬಲಪಂಥಿಯ’ ಗುಂಪು ಕೂಡ ಈ ಫೇಕ್ ವಿಡಿಯೋವನ್ನು ಪ್ರಸಾರ ಮಾಡಿದೆ. ಆದರೆ, ಮೇಲುನೋಟಕ್ಕೇ ಈ ವಿಡಿಯೋ ಸಂಶಯಾತ್ಮಕವಾಗಿದೆ. ಇದರ ಜಾಡು ಹಿಡಿದು ಬೆನ್ನು ಹತ್ತಿದ ಅಲ್ಟ್‌ನ್ಯೂಸ್, ಇದೊಂದು ವಿಡಿಯೋ ಗೇಮ್‌ನ ಕ್ಲಿಪ್ಪಿಂಗ್ ಎಂಬುದನ್ನು ಸಾಬೀತು ಮಾಡಿದೆ. ಇದು 2015ರಲ್ಲಿ ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಆದ ’ಅರ್ಮಾ 2’ ಎಂಬ ವಿಡಿಯೋ ಕ್ಲಿಪ್‌ನ ಒಂದು ತುಣುಕು ಅಷ್ಟೇ! ಮೂಲ ವಿಡಿಯೊದಲ್ಲಿ 20 ಸೆಕೆಂಡುಗಳ ನಂತರ ಬರುವ ದೃಶ್ಯಾವಳಿಯನ್ನು ಕಾಪಿ ಮಾಡಿ, ಸೇನಾ ದಾಳಿಯ ವಿಡಿಯೋ ಎಂದು ದಾರಿ ತಪ್ಪಿಸಲಾಗುತ್ತಿದೆ.

ಮೂಲ ವಿಡಿಯೋ ಗೇಮ್ ವಿಳಾಸ: https://youtu.be/E7CnMEhF54o

ನಮಮ ಸೇನೆ ನಿಜಕ್ಕೂ ಭಯೋತ್ಪಾದಕರನ್ನು ಹೊಡೆದು ಹಾಕಿದ್ದರೆ, ಅದಕ್ಕಿಂತ ಹೆಮ್ಮೆಯ ವಿಷಯ ಯಾವುದಿದೆ? ಆದರೆ ಇಡೀ ಘಟನೆಯ ಸುತ್ತದ ವಿವರಗಳೇ ಅಸ್ಪಷ್ಟವಾಗಿವೆ. ಅಂಥದ್ದರಲ್ಲಿ ’ಭಕ್ತರು’ ಫೇಕ್ ವಿಡಿಯೋ ಹಾಕುತ್ತ ಇನ್ನಷ್ಟು ಗೊಂದಲ ಮೂಡಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...