Homeಕರ್ನಾಟಕವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ಅನರ್ಹರಾಗಲಿ, ಸರ್ಕಾರ ಉಳಿಯೋದು ಬೇಡ ಎಂಬುದು ಸ್ಪೀಕರ್ ಅಪೇಕ್ಷೆಯಾಗಿತ್ತು

- Advertisement -
- Advertisement -

ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್ ಒಂದಿಂಚೂ ಬಗ್ಗಿರಲಿಲ್ಲ. ‘ನಿಮಗೆ ಇಷ್ಟು ಸಮಯ ಸಿಕ್ಕಿದ್ದರೂ ಒಬ್ಬರೂ ಬಂದಿಲ್ಲ. ಸದನದಲ್ಲಿ ನಡೆದ ಚರ್ಚೆಯು ಈಗಾಗಲೇ ಬಿಜೆಪಿಯವರು ಮಾಡಿದ್ದು ತಪ್ಪು ಎಂಬ ಭಾವನೆಯು ಬರುವಂತೆ ಆಗಿದೆ. ಆದರೆ, ಇದನ್ನು ಮತ್ತಷ್ಟು ಎಳೆಯುವುದು ಒಳ್ಳೆಯದಲ್ಲ. ನಾನೂ ಸಹಾ ಶುಕ್ರವಾರ ಸದನದಲ್ಲಿ ಸೋಮವಾರ ಮುಗಿಸುವ ವಿಚಾರ ಹೇಳಿದ್ದೇನೆ. ಒಂದು ವೇಳೆ ನೀವು ನನ್ನ ಮೇಲೆ ಒತ್ತಡ ತರುವುದಾದಲ್ಲಿ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಸ್ಪೀಕರ್ ಹೇಳಿದರೆಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರದ ಮೇಲೆ ವಿಶ್ವಾಸಮತ ಯಾಚನೆ ಯಾವಾಗ ಆಗುತ್ತದೆಂಬುದು ತೀರ್ಮಾನವಾಗಲಿದೆ. ಇಂದು ಸಂಜೆಯವರೆಗೂ ಅವರ ಕಟು ನಿರ್ಧಾರ ‘ಆಪರೇಷನ್ ಕಮಲದ ಆಮಿಷಕ್ಕೆ ಪಕ್ಷಾಂತರ ಮಾಡಿರುವ ಶಾಸಕರನ್ನು ಅನರ್ಹಗೊಳಿಸಲೇಬೇಕು. ಅವರಿಗಾಗಿ ಕಾಯುತ್ತಾ ವಿಶ್ವಾಸಮತವನ್ನು ಎಳೆಯುವ ಸಮ್ಮಿಶ್ರ ಪಕ್ಷಗಳ ಉದ್ದೇಶವನ್ನು ತಾನು ಒಪ್ಪುವುದಿಲ್ಲ’ ಎಂದೇ ಆಗಿತ್ತು. ಆದರೆ, ‘ಗುರುವಾರದವರೆಗೆ ಕಾದರೆ ಗ್ರಹಗತಿಗಳು ಸರಿ ಹೋಗುತ್ತವೆ, ಸರ್ಕಾರ ಉಳಿಯುತ್ತದೆ’ ಎಂಬ ಮೌಢ್ಯಕ್ಕೆ ಬಲಿ ಬಿದ್ದಿರುವ ಗೌಡರ ಕುಟುಂಬವು ಅವರನ್ನು ಒಲಿಸುವ ಪ್ರಯತ್ನಕ್ಕೆ ಕೈ ಹಾಕಿ ಸಫಲವಾಗಿರಲಿಲ್ಲ. ಕನಿಷ್ಠ ಪಕ್ಷ ನಾಳೆ ಒಂದು ದಿನದ ಮಟ್ಟಿಗಾದರೂ ಮುಂದೂಡಿ ಎಂಬುದು ಅವರ ಆಗ್ರಹವಾಗಿತ್ತು. ಮೊದಮೊದಲು ಅವರ ದನಿಗೆ ಹ್ಞೂಂಗುಡದಿದ್ದ ಸಿದ್ದರಾಮಯ್ಯನವರೂ ನಂತರ ಸ್ಪೀಕರ್ ಅವರಿಗೆ ‘ಒಂದು ದಿನ ನೋಡೋಣ’ ಎಂಬ ಸಂದೇಶ ಕಳಿಸಿದ್ದಾರೆ.

ಅಂತಿಮವಾಗಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಫೋನ್ ಮಾಡಿಸಿ, ಸ್ಪೀಕರ್ ಮೇಲೆ ಇನ್ನಿಲ್ಲದ ಒತ್ತಡ ತಂದರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ‘ರೆಬೆಲ್ ಶಾಸಕರು ಬೇಗ ತೀರ್ಮಾನ ತೆಗೆದುಕೊಂಡು ಬೆಳಿಗ್ಗೆ 11 ಗಂಟೆ ಒಳಗೆ ವಾಪಸ್ ಬರಲಿ. ಇಲ್ಲವಾದರೆ ಅನರ್ಹತೆ ಖಚಿತ. ಬಿಜೆಪಿಯವರು ನಿಮ್ಮ ತಲೆಗೆ ಮಂಗನ ಟೋಪಿ ತೊಡಿಸುತ್ತಾರೆ ಅಷ್ಟೇ’ ಎಂದು ಹೇಳಿದರು.

ಇವೆಲ್ಲದರ ಕಾರಣದಿಂದ ಒತ್ತಡಕ್ಕೆ ಒಳಗಾದ ಸ್ಪೀಕರ್ ಯಾವ ತೀರ್ಮಾನ ತೆಗೆದುಕೊಳ್ಳುವುದು ಎಂಬ ತೂಗುಯ್ಯಾಲೆಯಲ್ಲಿ ಬಿದ್ದಿರುವುದರಿಂದಲೇ ಯಾವ ನಿರ್ಧಾರವನ್ನೂ ಘೋಷಿಸದೇ ಮ್ಲಾನವದನರಾಗಿ ಕುಳಿತಿದ್ದಾರೆ. ಯಾರಿಗೂ ಚೈತನ್ಯದಿಂದ ಮಾತನಾಡುವ ಉಮೇದೂ ಇಲ್ಲದೇ, ಎಳೆಯುವ ಉದ್ದೇಶದಿಂದ ಮಾತ್ರ ಮಾತನಾಡುತ್ತಿರುವಾಗ ಅನಗತ್ಯವಾಗಿ ಮುಂದೂಡುವ ಮೂಲಕ ಮೈತ್ರಿ ಪಕ್ಷಗಳ ಒತ್ತಡಕ್ಕೆ ಗುರಿಯಾಗುತ್ತಾರಾ, ಇಲ್ಲವೇ ಅವರ ಮೂಲ ನಿಲುವಿಗೆ ಬದ್ಧರಾಗಿ ವಿಶ್ವಾಸಮತಯಾಚನೆಗೆ ಹಾಕುತ್ತಾರಾ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...