Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...