Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...