Homeಕರ್ನಾಟಕಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

ಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

- Advertisement -
- Advertisement -

| ಅನಿಲ್.ಎಸ್ ಚಲ್ಯ |

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ

ತುತ್ತು ಅನ್ನ ತಿನ್ನೋಕೆ, ಬೊಗಸೆ ನೀರು ಕುಡಿಯೋಕೆ, ತುಂಡುಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ, ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ ಎಂದು ಹಾಡಿ ಜೀವನದ ಸೂಕ್ಷ್ಮತೆಯನ್ನು ಸಾರಿದ್ದ ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳನ್ನಗಲಿ ಹತ್ತು ವರ್ಷಗಳೇ ಕಳೆದಿವೆ. ವಿಷ್ಣುವಿನ ಸ್ಮಾರಕಕ್ಕೆ ಅಂಗೈ ಅಗಲ ಜಾಗವೂ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಶೋಚÀನೀಯ. ಸರ್ಕಾರ, ಅಭಿಮಾನಿಗಳು ಮತ್ತು ಕುಟುಂಬದವರ ಅಸಮಾಧಾನ ಅಸಹಕಾರಗಳಿಂದ ಒಬ್ಬ ಧೀಮಂತ ನಟ ದಿನನಿತ್ಯದ ಚರ್ಚೆಯ ವಿಷಯವಾಗಿದ್ದಾರೆ. ವಿಷ್ಣು ಕುಚುಕು ಗೆಳೆಯ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಇಹಲೋಕ ತ್ಯಜಿಸಿದಾಗ ಅಂಬರೀಶ್ ಸ್ಮಾರಕ ನಿರ್ಮಾಣದ ವಿಷಯ ಪ್ರಸ್ತಾಪವಾಗಿತ್ತು. ಆಗಲೂ ಸಹ ವಿಷ್ಣು ಸ್ಮಾರಕ ನಿರ್ಮಾಣದ ಚರ್ಚೆ ಮುನ್ನೆಲೆಗೆ ಬಂದಿತ್ತು..

ಅಂಬರೀಶ್ ಸ್ಮಾರಕದ ಜೊತೆಗೆ ಕಂಠೀರವ ಸ್ಟುಡಿಯೋದಲ್ಲೇ ವಿಷ್ಣು ಸ್ಮಾರಕವನ್ನು ನಿರ್ಮಿಸುವ ನಿರ್ಧಾರವನ್ನು ಸರ್ಕಾರ ವ್ಯಕ್ತಪಡಿಸಿತ್ತು. ಇದಕ್ಕೆ ಅಭಿಮಾನಿಗಳು ಮತ್ತು ವಿಷ್ಣು ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾದ ಮೇಲೆ ಸರ್ಕಾರ ಆ ವಿಚಾರದಲ್ಲಿ ತುಟಿ ಬಿಚ್ಚಲಿಲ್ಲ. ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ನೋಡಿ ಬೇಸರಗೊಂಡ ಅಭಿಮಾನಿಯೊಬ್ಬ ತಾನೆ ಸ್ಮಾರಕಕ್ಕೆ ಜಾಗ ಕೊಡುವುದಾಗಿ ಹೇಳಿ ಸರ್ಕಾರದ ಮೇಲಿನ ಆಕ್ರೋಶ ವ್ಯಕ್ತಪಡಿಸಿದ್ದ. ಈ ಮಧ್ಯೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ದಿಢೀರನೆ ಭೂಮಿ ಪೂಜೆಗೆ ಮುಂದಾಗಿರುವುದರಿಂದ ಸ್ಮಾರಕದ ವಿಚಾರ ಮತ್ತೆ ವಿವಾದದ ರೂಪ ಪಡೆದಿದೆ..

ಬೆಂಗಳೂರಿನ ಅಭಿಮಾನ್ ಸ್ಟೂಡಿಯೋದಲ್ಲಿ 2009ರಲ್ಲಿ ವಿಷ್ಣು ಅಂತಿಮ ಸಂಸ್ಕಾರವನ್ನು ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋ ನಿರ್ಮಾಣಕ್ಕಾಗಿ 20 ಎಕರೆ ಜಾಗವನ್ನು ಸರ್ಕಾರವೇ ಬಾಲಕೃಷ್ಣವರಿಗೆ ಮಂಜೂರು ಮಾಡಿತ್ತು. ಅದರಲ್ಲಿ 10 ಎಕರೆ ಜಾಗವನ್ನು ಬಾಲಕೃಷ್ಣರ ಮಗ ಮಾರಾಟ ಮಾಡಲು ಮುಂದಾಗಿದ್ದರು. ಹಾಗಾಗಿ ಅಭಿಮಾನ್ ಸ್ಟುಡಿಯೋ ಬಾಲಣ್ಣನ ಕುಟುಂಬದ ವ್ಯಾಜ್ಯವಾಗಿ ಹೈ ಕೋರ್ಟ್ ಮೆಟ್ಟಿಲೇರಿತ್ತು. ಆದರೂ ಅಭಿಮಾನ್ ಸ್ಟುಡಿಯೋದಲ್ಲೇ ಸಂಸ್ಕಾರ ಮಾಡಿದ್ದರಿಂದ ವಿಷ್ಣು ಸ್ಮಾರಕವನ್ನು ಅಲ್ಲಯೇ ಕಟ್ಟಲು ಸರ್ಕಾರ ಮುಂದಾಗಿತ್ತು. ವ್ಯಾಜ್ಯವಿದ್ದರಿಂದ ಹೈ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿತ್ತು. ಹೀಗಾಗಿ ವಿಷ್ಣು ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಕೋರಿಕೆ ಸಲ್ಲಿಸಿತ್ತು. ಅದರಂತೆ 2016 ಮೈಸೂರಿನಲ್ಲಿ 5 ಎಕರೆ ಜಾಗವನ್ನು ಸರ್ಕಾರ ಮಂಜೂರು ಮಾಡಿತ್ತು. ಹೀಗೆ ಅವರ್ ಬಿಟ್ ಇವರ್ ಬಿಟ್ ಇನ್ಯಾರು ಎಂಬಂತೆ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡಿಸುತ್ತಾ ಸರ್ಕಾರ ಕಣ್ಣಾಮುಚ್ಚಾಲೆಯ ಆಟವಾಡುತ್ತಿದರೆ, ಇತ್ತ ಮೈಸೂರಿನಲ್ಲಿ ರೈತರು ತಮ್ಮ ಜಾಗವನ್ನು ಬಿಟ್ಟುಕೊಡಲು ನಿರಾಕರಿಸಿ, ಕೋರ್ಟ್ ಮೆಟ್ಟಿಲೇರಿದ್ದರು.

ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾದರೆ ರೈತರ ಅನುಮತಿಯೊಂದಿಗೆ, ಆ ಜಾಗದ ಮಾರುಕಟ್ಟೆ ಬೆಲೆಗಿಂತ ನಾಲ್ಕು ಪಟ್ಟು ಹೆಚ್ಚು ಬೆಲೆಕೊಟ್ಟು, ಅದು ಕೃಷಿ ಭೂಮಿಯಾಗಿದ್ದಲ್ಲಿ ಬೇರೆಡೆ ಭೂಮಿಯನ್ನೂ ಕೊಟ್ಟು ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಆ ಜಾಗಕ್ಕೆ ಇದಾವುದೂ ಅಪ್ಲೈ ಆಗಿಲ್ಲ. ಕಡಿಮೆ ಬೆಲೆ ಕೊಟ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಹೆಚ್ಚಿನ ಕಾಂಪೆನ್ಸೇಷನ್ ಕೊಡಬೇಕು ಎಂದು ಆ ಭೂಮಿಯ ಮಾಲೀಕರಾದ ರೈತರು ಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಿದ್ದಾರೆ.

ಸದ್ಯಕ್ಕೆ ಆ ವಿಚಾರ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೆಲ್ಲದರ ನಡುವೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ಭೂಮಿ ಪೂಜೆ ಮಾಡಲು ಹೋಗಿದ್ದರಿಂದ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಕೋರ್ಟ್‍ನಲ್ಲಿ ಕೇಸು ನಡೆಯುತ್ತಿರುವಾಗಲೇ ಭೂಮಿ ಪೂಜೆ ಮಾಡಲು ಹೇಗೆ ಸಾಧ್ಯ ಎಂದು ರೈತರು ತಡೆಯೊಡ್ಡಿದ್ದಾರೆ. ಇಲ್ಲ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದು ಅನಿರುದ್ ಇಂಗ್ಲಿಷ್‍ನಲ್ಲಿದ್ದ ಒಂದು ಲೆಟರ್ ತೋರಿಸಿದ್ದಾರೆ. ಅದು ಕೋರ್ಟ್ ಆದೇಶ ಅಲ್ಲ, ಆಗಿದ್ದರೂ ನಮಗೆ ಇಂಗ್ಲಿಷ್ ಅರ್ಥವಾಗುವುದಿಲ್ಲ ಕನ್ನಡದಲ್ಲಿ ಲೆಟರ್ ತೆಗೆದುಕೊಂಡು ಬನ್ನಿ ಎಂದು ರೈತರು ವಾಪಸ್ ಕಳಿಸಿದ್ದಾರೆ.

ಕೋರ್ಟ್ ಆದೇಶ ಬರದೆ, ತಮಗೆ ಕಾಂಪೆನ್ಸೇಷನ್ ಸಿಗದೆ ಭೂಮಿ ಪೂಜೆ ಮಾಡಿ ಸ್ಮಾರಕ ಕಟ್ಟಿದರೆ ತಮಗೆ ನ್ಯಾಯ ಸಿಗುವುದಿಲ್ಲ, ಪರಿಹಾರವೂ ಬರುವುದಿಲ್ಲ, ಆ ವಿಚಾರ ಹಾಗೇ ಮುಚ್ಚಿಹೋಗುತ್ತದೆ ಎಂಬುದು ರೈತರ ಆತಂಕ. ಅದಷ್ಟೇ ಅಲ್ಲದೆ ಕೋರ್ಟ್ ಆದೇಶ ನೀಡಿದ್ದೇ ಆದಲ್ಲಿ ಪ್ರತಿವಾದಿಗೂ ಆದೇಶದ ಕಾಪಿ ನೀಡಲಾಗುತ್ತದೆ. ಆದರೆ ರೈತರಿಗೆ ಕೋರ್ಟ್‍ನಿಂದಾಗಲಿ ಅಥವಾ ತಮ್ಮ ಲಾಯರ್‍ನಿಂದಗಲೀ ಯಾವುದೇ ಆದೇಶದ ಪ್ರತಿ ದೊರೆತಿಲ್ಲ. ಇದು ಅನಿರುದ್ ಯಾವುದೋ ಅರ್ಥವಾಗದ ಲೆಟರ್ ತಂದು ನಮ್ಮನ್ನು ಯಾಮಾರಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಬಹುಶಃ ರೈತರ ಆತಂಕ ಸತ್ಯವೂ ಆಗಿರಬಹುದು. ಹಾಗೊಂದು ವೇಳೆ ಅನಿರುದ್ ರೈತರಿಗೆ ಯಾವುದೋ ಪತ್ರವನ್ನು ತೋರಿಸಿದ್ದೇ ಆಗಿದ್ದಲ್ಲಿ ಅದು ರೈತರಿಗಷ್ಟೇ ಅಲ್ಲ ವಿಷ್ಣು ಜೀವಿಸಿದ್ದ ಆದರ್ಶದ ಬದುಕಿಗೆ ಮಾಡುವ ಮೋಸವೂ, ಅವಮಾನವೂ ಆಗಿರುತ್ತದೆ. ಈಗಾಗಲೇ 10 ವರ್ಷ ಕಳೆದಿದ್ದು ಇನ್ನೂ ಸ್ಮಾರಕ ನಿರ್ಮಾಣವಾಗದೇ ಇರುವುದು ವಿಷ್ಣು ಕುಟುಂಬ ಮತ್ತು ಅಭಿಮಾನಿಗಳಿಗೆ ಬೇಸರದ ವಿಚಾರವೇ ಆಗಿದ್ದರೂ, ಆ ಕಾರಣಕ್ಕೆ ಮೋಸ ಮಾಡಿ ಸ್ಮಾರಕ ಕಟ್ಟುವುದರಿಂದ ಯಾವ ಪ್ರಯೋಜನವೂ ಆಗುವುದಿಲ್ಲ.

ರೈತರೂ ಭೂಮಿಯನ್ನು ಕೊಡುವುದೇ ಇಲ್ಲ ಎಂದೇನು ಹೇಳುತ್ತಿಲ್ಲ, ಇನ್ನೂ ಹೆಚ್ಚಿನ ಪರಿಹಾರವನ್ನಷ್ಟೇ ಕೇಳುತ್ತಿದ್ದಾರೆ. ಹಾಗಾಗಿ ಕೋರ್ಟ್‍ನಲ್ಲಿ ಆ ವಿಚಾರ ತೀರ್ಮಾನವಾಗಬೇಕಿದೆ. ಹೀಗಿರುವಾಗ ದುಡುಕಿನ ತೀರ್ಮಾನದಲ್ಲಿ ಕೋರ್ಟ್ ವಿಚಾರಣೆಯಲ್ಲಿರುವಾಗಲೇ ಭೂಮಿ ಪೂಜೆಗೆ ಮುಂದಾಗಿರುವುದು ಕಾನೂನು ಉಲ್ಲಂಘನೆಯೂ ಆಗುತ್ತದೆ. ಹಾಗಾಗಿ ಕಾನೂನು ಉಲ್ಲಂಘಿಸುವುದು, ರೈತರಿಗೆ ಮೋಸ ಮಾಡುವುದು ವಿಷ್ಣು ಬದುಕಿನ ಘನತೆಗೆ ಕಪ್ಪು ಚುಕ್ಕೆಯನ್ನು ತಂದೊಡ್ಡುತ್ತದೆ. ಕೋರ್ಟ್ ವ್ಯಾಜ್ಯ ಮುಗಿಯುವವರೆಗೆ ವಿಷ್ಣು ಕುಟುಂಬ ಕಾಯಬೇಕು.

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ.

ವಿಷ್ಣು ನಿಧನದ ಸಮಯದಲ್ಲಿ ನಮ್ಮ ಗೌರಿ ಮೇಡಂ ‘ವಿಷ್ಣು ಬಗ್ಗೆ ಜಗತ್ತು ಇನ್ನಷ್ಟು ಔದಾರ್ಯ ತೋರಬೇಕಿತ್ತು’ ಎಂದು ಬರೆದಿದ್ದರು. ಅಂತೆಯೇ ಸರ್ಕಾರ ವಿಷ್ಣು ಸ್ಮಾರಕಕ್ಕೂ ಔದಾರ್ಯ ತೋರಬೇಕಾಗಿದೆ ಎಂದೆನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...