Homeಅಂಕಣಗಳುಆಘಾತವಾಣಿ | ವೃದ್ಧಕೋಣದ ಮೂಗಿಗೆ ಹಗ್ಗ ಹಾಕುವ ಆಟ

ಆಘಾತವಾಣಿ | ವೃದ್ಧಕೋಣದ ಮೂಗಿಗೆ ಹಗ್ಗ ಹಾಕುವ ಆಟ

- Advertisement -
- Advertisement -

ಅಟ್ಯಾಕ್ ಹನ್ಮಂತ |

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ. ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ.

ಮಿಷಿನ್ 150, ಮಿಷಿನ್ 150 ಎಂದು ಹೋದಲ್ಲಿ ಬಂದಲ್ಲಿ ಊಳಿಡುತ್ತಿದ್ದ ಬಿಜೇಪೀಪಿ ಪಕ್ಷದ ಧಡಿಯೂರಪ್ಪನ ಮುಸುಡಿಗೆ ಕರ್ನಾಟಕದ ಮತದಾರರು ಎಗರಿಸಿ ಎಡಗಾಲಲ್ಲಿ ಒದ್ದಿರುವ ಸುದ್ದಿ ಇದೀಗಷ್ಟೇ ಲಭ್ಯವಾಗಿದೆ. 150 ಮಿಷೀನು ಅಡ್ಡಡ್ಡ ಮಲಗಿಕೊಂಡು 104 ಸೀಟುಗಳನ್ನ ಮಾತ್ರ ಗೆಲ್ಲಲು ಶಕ್ತವಾದ ಧಡಿಯೂರಪ್ಪನ ಗೋಳಾಟ ಚಾಮರಾಜಪೇಟೆ ಸ್ಮಶಾಣದವರೆಗೂ ತಲುಪಿದೆ. ಅಲ್ಲೇ ಸ್ಮಶಾಣದ ಪಕ್ಕದಲ್ಲಿ `ಹೇ ಶವ ಕೃಪ’ ಎಂಬ ಲಡಾಸು ಮುದುಕರ ಅನಾಥಾಶ್ರಮದಲ್ಲಿ ಚೌಕಾಬಾರ ಆಡುತ್ತಿದ್ದ ಕಂತ್ರಿ-ಕುತಂತ್ರಿಗಳಿಗೂ ಹಾರ್ಟ್ ಅಟ್ಯಾಕ್ ಆಗಿ, ಜೈ ಶ್ರೀಮಾಮ್ ಎಂಬ ಉದ್ಘೋಷದೊಂದಿಗೆ ತಲೆತಿರುಗಿ ಬಿದ್ದಿದ್ದಾರೆಂದು ಬ್ರೇಕಿಂಗ್ ನ್ಯೂಸ್ ಲಭ್ಯವಾಗಿದೆ.

* * * * *

ಬಡವರ ಪರವಾದ ಹತ್ತಾರು ಯೋಜನೆಗಳನ್ನು ಕೊಟ್ಟು, ಸಮಾಜವಾದದ ಆಲದಮರದಂತೆ ಗಟ್ಟಿಯಾಗಿ ನಿಂತಿದ್ದ ಶಿದ್ರಾಮಯ್ಯನ ಪಾರ್ಟಿಗೂ ಈ ಚುನಾವಣೆಯಲ್ಲಿ ಜನರ ಆಶೀರ್ವಾದ ಅರ್ಧಕ್ಕರ್ಧ ಸಿಕ್ಕಿರುವುದು ಆಶ್ಚರ್ಯ ಹುಟ್ಟಿಸಿದೆ. ಎತ್ತಲೂ ಇಲ್ಲದಂತೆ ಇರೋ ಮೂರು ಪಾರ್ಟಿಗಳಿಗೂ ಇಷ್ಟಿಷ್ಟು ಎಂದು ಓಟು ಹಂಚಿರುವ ಮತದಾರರ ಪ್ಲಾನು ಅಸಲಿಗೆ ಏನಾಗಿತ್ತೆಂಬುದು ಯಾರಿಗೂ ತಿಳಿಯದೆ ಎಲ್ಲರೂ ಅವರವರ ಸ್ವಂತ ತಲೆಯ ಮೇಲೆ ಅವರದ್ದೇ ಕೈ ಹೊತ್ತುಕೊಂಡು ಕುಂತಿರುವ ಸನ್ನಿವೇಶ ನಿರ್ಮಾಣವಾಗಿದೆ. ಆಗಿದ್ದಾಗಲೆಂದು ಕೈ ಪಾರ್ಟಿ ಮತ್ತು ದೊಡ್ಡಗೌಡರ ಪಾರ್ಟಿಯು ಫ್ರೆಂಡ್ಶಿಪ್ ಮಾಡಿಕೊಂಡು ಬಿಜೆಪೀಪಿ ಪಕ್ಷಕ್ಕೆ ಈ ಸಲ ಉಣ್ಣಬಾರದ್ದನ್ನು ಉಣ್ಣಿಸೋಣವೆಂದು ತೊಡೆ ತಟ್ಟಿ ನಿಂತ ಸಂದರ್ಭವೂ ಜನರಲ್ಲಿ ಆತಂಕಭರಿತ ಸಂತೋಷವನ್ನು ಹುಟ್ಟಿಸಿದೆ.

* * * * *

ನಾನು ಗೆದ್ದರೆ ಮೋದಿ ಗೆದ್ದಂತೆ, ನಾನು ಗೆದ್ದರೆ ಹಿಂದೂ ಗೆದ್ದಂತೆ, ನಾನು ಗೆದ್ದರೆ ಗುಡೇಮಾರನಳ್ಳಿ ಬಾರ್ ಸಪ್ಲೈಯರ್ ಯಂಕಟಣ್ಣ ಗೆದ್ದಂತೆ ಅಂತ ಕೂಗಾಡಿಕೊಂಡು ತಿರುಗುತ್ತಿದ್ದ ಚಿತ್ರನಟ ಗುಗ್ಗೇಶ್ ಚುನಾವಣೆಯಲ್ಲಿ ಮಕಾಡೆ ಮಲಗಿಕೊಂಡಿದ್ದಾರೆ. ಮೊದಲಿಗೆ ಕೈ ಪಕ್ಷದಲ್ಲಿದ್ದು ನಂತರ ವ್ಯಾಸೆಕ್ಟಮಿ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡು ಬಿಜೆಪೀಪಿಗೆ ಪಲ್ಟಿ ಹೊಡೆದಿದ್ದ ನಟ ಗುಗ್ಗೇಶ್ ಪೃಷ್ಠಕ್ಕೆ ಬೆಂಗಳೂರಿನ ಯಶವಂತಪುರದ ಮತದಾರರು ಹಾರೆಕೋಲು ಹೆಟ್ಟಿದ್ದಲ್ಲದೇ ಗಾಯಕ್ಕೆ ಬ್ಯಾಂಡೇಜನ್ನೂ ಹಾಕಿಸದೆ ಮನೆಗೆ ಕಳಿಸಿದ್ದಾರೆ. ಎಲ್ಲ ರಾಯರ ಆಶೀರ್ವಾದ ಅಂತ ತಮ್ಮ ಹೀನಾಯ ಸೋಲನ್ನು ಮಂತ್ರಾಲಯಕ್ಕೆ ಅರ್ಪಿಸಿರುವ ಗುಗ್ಗೇಶ್ ಸದ್ಯಕ್ಕೆ ಯಾರಿಗೂ ಮುಖ ತೋರಿಸುವುದು ಬೇಡವೆಂದು ಆಫಘನಿಸ್ಥಾನಕ್ಕೆ ಬೊಬ್ಬೆಯೆದ್ದ ಕಾಲುಗಳಲ್ಲಿ ಪಾದಯಾತ್ರೆ ಹೊರಟಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

* * * * *

ಗೋವಾ, ನಾಗಾಲ್ಯಾಂಡ್, ಮೇಘಾಲಯ, ಬಿಹಾರ ಇವೆಲ್ಲ ಕಡೆಗಳಲ್ಲಿ ಜುಜುಬಿ ಸೀಟು ಗೆದ್ದ ಬಿಜೆಪೀಪಿ ಪಕ್ಷವು ಒಬ್ಬನಿಗೇ ಹುಟ್ಟಿದ ಹಲ್ಕಾ ಆಟವಾಡಿ ಆ ರಾಜ್ಯಗಳಲ್ಲಿ ಸರ್ಕಾರ ರಚಿಸಿರುವುದನ್ನು ಮರೆತಂತೆ ಕಾಣುತ್ತಿದೆಯೆಂದು ಹಾದಿಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆಂಬ ಸುದ್ದಿ ಬಂದಿದೆ. ಅದೆಲ್ಲವನ್ನೂ ಮರೆತು, ಇದೀಗ ಕೈ ಮತ್ತು ತೆನೆಮಹಿಳೆ ಪಕ್ಷಗಳು ಒಟ್ಟಿಗೇ ಹೋಗುವುದನ್ನು ಸಹಿಸದ ಬಿಜೆಪೀಪಿ ಪಕ್ಷವು ಇದು ಹೊಲಸು ರಾಜಕೀಯ ಎಂದು ಅರಚಾಡುತ್ತಿದೆ. ಇದೇ ಹೊಲಸು ಸೆಗಣಿಯನ್ನು 4 ರಾಜ್ಯಗಳಲ್ಲಿ ಬಾಚಿಬಾಚಿ ತಿನ್ನುವಾಗ ಏನೂ ಅನ್ನಿಸದಿದ್ದ ಈ ಪಕ್ಷಕ್ಕೆ ಇದೀಗ ನಾಚಿಕೆ-ಮಾನ-ಮರ್ಯಾದೆಗಳು ಸಟಾರೆಂದು ನೆನಪಾಗಿರುವುದು ಜಗತ್ತಿನ 9ನೇ ಅದ್ಭುತ ಎಂದು ಭಾವೀ ಪ್ರಧಾನಿ `ಹುಚ್ಚ ಸಂಕಟ್’ ಅಳುತ್ತ ನುಡಿದಿದ್ದಾರೆ. ಈಗಿರುವ ಪಕೋಡೇಂದ್ರನನ್ನು ಕಿಡ್ನಾಪ್ ಮಾಡಿ ಅರಬ್ಬೀಸಮುದ್ರದಲ್ಲಿ ಬಚ್ಚಿಟ್ಟು ತಾನೇ ಪ್ರಧಾನಿಯಾಗುತ್ತೇನೆಂದು ಹೊರಟಿರುವ ಹುಚ್ಚ ಸಂಕಟ್ ಅವರ ಗೋಳಾಟಕ್ಕೆ ನಾಡಿನ ಎಲ್ಲ ಮಾನಸಿಕ ಅಸ್ವಸ್ಥರೂ ತಮ್ಮ ಸಹಮತ ವ್ಯಕ್ತಪಡಿಸಿದ್ದಾರೆ.

* * * * *

ತಾನು ಈ ಬಾರಿ ಮುಖ್ಯಮಂತ್ರಿಯಾಗದೆ ಇದ್ದರೆ ನಿನ್ನ ಬುರುಡೆಗೆ ನನ್ನ ಬುರುಡೆಯನ್ನು ಜಜ್ಜಿ ಜಜ್ಜಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿದ ಧಡಿಯೂರಪ್ಪನನ್ನು ಸಂಭಾಳಿಸುವುದು ಹೇಗೆಂದು ತಿಳಿಯದೆ ಬಿಜೆಪೀಪಿ ಪಕ್ಷದ ಏಕೈಕ ಕುಮಾರಿ ಕೋಭಾ ಶರಂದ್ಲಾಜೆಯವರು ಚಿಂತೆಗೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಇದೇ ದುಃಖದಲ್ಲಿ ತನ್ನ ಸಂಕಟವನ್ನು ಚೀಟಿ ರವಿ ಜೊತೆಗೆ ವಾಟ್ಸಾಪ್ ಚಾಟ್ ಮಾಡುವಾಗ ಚೀಟಿ ರವಿಯು `ಚಿಂತೆ ಮಾಡಬೇಡ, ನಾನಿದ್ದೇನೆ… … …’ ಎಂದು ಕೋಭಕ್ಕನಿಗೆ ಪ್ರಾಮಿಸ್ ಮಾಡಿರುವುದು ಬಯಲಾಗಿದೆ. ಈ ವಾಟ್ಸಾಪ್ ಚಾಟ್‍ನ ಸ್ಕ್ರೀನ್ ಶಾಟನ್ನು ಯಾರೋ ದುರುಳರು ಧಡಿಯೂರಪ್ಪನಿಗೆ ಕಳಿಸಲು ಸಕಲ ತಯಾರಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

* * * * *

ಬಿಜೆಪೀಪಿಯ ವಯೋವೃದ್ಧ ಕೋಣದಂತಿರುವ ಗುಜರಾತಿ ಗುಜ್ಜೂವಾಲಾನನ್ನು ವ್ಯಾಜ್ಯಪಾಲನೆಂದು ಕರ್ನಾಟಕಕ್ಕೆ ಕುಕ್ಕರಿಸಿದ್ದ ಭಂಡಾಟ ಜನರ ಪಕ್ಷದವರು ಇದೀಗ ಅದೇ ವೃದ್ಧಕೋಣದ ಮೂಗಿಗೆ ಹಗ್ಗ ಹಾಕಿ ಕರ್ನಾಟಕದ ಗದ್ದುಗೆ ಹಿಡಿಯಲು ಮುಂದಾಗಿದ್ದಾರೆ. ಈ ಅವಕಾಶ ಕೈಜಾರಿ ಹೋಗಲು ಬಿಟ್ಟರೆ, ವೃದ್ದಾಪ್ಯದಲ್ಲಿ ಪುನರ್ವಸತಿ ಕಲ್ಪಿಸಿದ ತನ್ನವರ ಋಣ ತೀರಿಸಲು ಇದಕ್ಕಿಂತ ಸದಾವಕಾಶ ಈ ಜನ್ಮದಲ್ಲೇ ಮತ್ತೆ ಸಿಗುವುದಿಲ್ಲ ಎಂದು ಮನದಲ್ಲೇ ಲೆಕ್ಕ ಹಾಕಿದ ಈ ಗುಜ್ಜು ಋಣ ತೀರಿಸಲು ಮುಂದಾಗಿದ್ದಾರೆಂದು ವರದಿಯಾಗಿದೆ. ಇವರ ಒಳಮರ್ಮ ಏನೆಂದು ಹಿನ್ನೆಲೆ ಕೆದಕಿ ನೋಡಲಾಗಿ ಈ ಆಸಾಮಿಯ ಜಾತಕವೂ, ಜೈಲುಹಕ್ಕಿಗಳ ಬ್ಲೂಜೇಪಿಗಳ ಜಾತಕವೂ ಒಂದೇ ಆಗಿದೆಯೆಂಬ ಮಾಹಿತಿ ಲಭ್ಯವಾಗಿದೆ.

* * * * *

ತಾನು ನಡೆಸಿದ ಕೊಲೆಗಳ ವಿರುದ್ಧ ತೀರ್ಪು ಕೊಡಲು ಹೊರಟ ನ್ಯಾಯಾಧೀಶರನ್ನೇ ಕೊಂದು ಬಿಸಾಕಿದ ಆರೋಪ ಹೊತ್ತಿರುವ ಗುಜರಾತ್ ಮಾರ್ವಾಡಿ, ಹಳೇ ರೌಡಿ ಶೀಟರ್ `ಸುಮಿತ್ ಶಾ’ ಕುದುರೆಲದ್ದಿ ವ್ಯಾಪಾರ ಮಾಡಲು ಕರ್ನಾಟಕಕ್ಕೆ ಬರುತ್ತಿರುವ ಸುದ್ದಿ ತಿಳಿದುಬಂದಿದೆ. ಈ ಸುದ್ದಿ ತಿಳಿದ ಕುಮಾರಣ್ಣನಿಗೆ ಪಿತ್ಥ ಕೆದರಿ ತಲೆಯೊಳಗಿನ ಹುಳುಗಳೆಲ್ಲ ಥಕಥಕಥಕನೆಂದು ಕುಣಿದು, ನನ್ನ ಪಕ್ಷದ ಒಬ್ಬನನ್ನು ಕದ್ದೊಯ್ದರೆ ಬಿಜೆಪೀಪಿಯ ಒಬ್ಬ ನರಪಿಳ್ಳೆಯನ್ನೂ ಬಿಡದೆ ಕಸತುಂಬಿಕೊಂಡು ಬಂದಂತೆ ಲಾರಿಯಲ್ಲಿ ಅಪಹರಿಸಿಬಿಡುತ್ತೇನೆಂದು ಗುಟುರು ಹಾಕಿದ್ದಾರೆ. ಈ ಗುಟುರಿಗೆ ಉಟ್ಟ ಲಂಗೋಟಿ ಒದ್ದೆ ಮಾಡಿಕೊಂಡ ಸುಮಿತ್‍ಶಾಗೆ ವಾಂತಿ-ಬೇಧಿ ಎರಡೂ ಒಟ್ಟಿಗೇ ಆದ ಸುದ್ದಿ ಇನ್ನೂ ಲಭ್ಯವಾಗಿಲ್ಲ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಇನ್ನೊಂದಷ್ಟು ಎದೆಯೊಡುವ ಸುದ್ದಿಗಳೊಂದಿಗೆ ಮತ್ತೆ ಮುಂದಿನ ವಾರ ಭೇಟಿಯಾಗೋಣ. ಜೈ ಶ್ರೀಮಾಮ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...