Homeಮುಖಪುಟವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ

- Advertisement -
- Advertisement -

| ನಾನುಗೌರಿ |

ಪ್ರಪಂಚಾದ್ಯಂತ ಗಾಂಧಿ ಪ್ರತಿಮೆಗಳನ್ನು ನಿರ್ನಾಮ ಮಾಡಲು ಇದು ಸಕಾಲ, ಹಾಗೆಯೇ ಭಾರತದ ಕರೆನ್ಸಿ ನೋಟುಗಳಿಂದಲೂ ಸಹ ಗಾಂಧಿ ಭಾವಚಿತ್ರ ತೆಗೆದುಬಿಡಿ’ ಎಂದು ವ್ಯಂಗ್ಯದಿಂದ ಅಣಕ ಮಾಡಿ ಮೇ 17ರಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿಯವರ ಹುದ್ದೆಗೆ ಸಂಚಕಾರ ಬಂದಿದೆ. ಈ ಕುರಿತು ತ್ವರಿತ ಕ್ರಮಕ್ಕೆ ಮಹಾರಾಷ್ಟ್ರ ಸರ್ಕಾರ ಸೂಚಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ನಿಧಿ ಚೌಧರಿಯವರು ಸರಣಿ ಟ್ವೀಟ್‍ಗಳನ್ನು ಮಾಡಿ ತನ್ನ ಗಾಂಧಿ ಪ್ರೇಮವನ್ನು ತೋರಿಸಬೇಕಾಗಿ ಬಂದಿದೆ. ಗಾಂಧಿಯವರ ಹೇಳಿಕೆಗಳನ್ನು ಉಲ್ಲೇಖಿಸಿ ಮಾಡಿರುವ ಹಳೆಯ ಟ್ವೀಟ್‍ಗಳನ್ನು ಮತ್ತೆ ಷೇರ್ ಮಾಡಿರುವ ಅವರು ‘ನಾನೆಂದೂ ಗಾಂಧೀಜಿಯವರನ್ನು ಅವಮಾನಿಸುವುದಿಲ್ಲ, ಅವರ ನನ್ನ ಸತ್ಯಾನ್ವೇಷಣೆ ಪುಸ್ತಕ ನನ್ನ ಎಲ್ಲಾ ಕಾಲದ ನೆಚ್ಚಿನ ಪುಸ್ತಕ’ ಎಂತಲೂ ಟ್ವೀಟ್ ಮಾಡಿದ್ದಾರೆ.

ಆದರೆ ಮೇ 17ರಂದು ನಿಧಿ ಚೌದರಿಯವರು ಟ್ವೀಟ್ ಮಾಡಿದ್ದನ್ನು ಸುದ್ದಿ ಮಾಡುವ ಭರದಲ್ಲಿ ಕೆಲ ಮಾಧ್ಯಮಗಳು ಅದರೊಳಗಿನ ವ್ಯಂಗ್ಯ, ಅಣಕವನ್ನು ಗುರುತಿಸಿರಲಿಲ್ಲ. ಇನ್ನು ಕೆಲವು ಮಾಧ್ಯಮಗಳಿಗೆ ಗೊತ್ತಿದ್ದರೂ ಸಹ ಆಕೆಯನ್ನು ದೇಶದ್ರೋಹಿ ರೀತಿಯಲ್ಲಿ ಚಿತ್ರಿಸಲಾಯಿತು. ಈಗ ಸರ್ಕಾರ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸುವಷ್ಟರ ಮಟ್ಟಿಗೆ ಪ್ರಕರಣ ಬಂದು ನಿಂತಿದೆ.

ಇದೇ ಸಂದರ್ಭದಲ್ಲಿ ಚುನಾವಣಾ ಸಮಯದಲ್ಲಿ ಪ್ರಗ್ಯಾ ಸಿಂಗ್ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿದ್ದರು. ಅದನ್ನೇ ದಕ್ಷಿಣ ಕನ್ನಡದ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಉತ್ತರ ಕನ್ನಡದ ಅನಂತ್ ಕುಮಾರ್ ಹೆಗ್ಡೆ ಪುನಾರಾವರ್ತಿಸಿದ್ದರು. ಆ ಮೂವರು ಈಗ ಲಕ್ಷ ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿರುವುದನ್ನು ನಾವು ನೆನಪಿಸಿಕೊಳ್ಳಬೇಕಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪತ್ರಕರ್ತ ಗಿರೀಶ್ ತಾಳಿಕಟ್ಟೆ ಅವರು ಹೀಗೆಂದರು. ‘ಇಂದಿನ ಕಾಲ ಎತ್ತ ಸಾಗುತ್ತಿದೆ ಎಂಬುದಕ್ಕೆ ಈ ಘಟನೆ ನಿದರ್ಶನ. ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ’.

ಈ ಕುರಿತು ಮೊದಲು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿತ್ತು. ನಂತರ ಅವರ ಸ್ಪಷ್ಟೀಕರಣವನ್ನು ಸೇರಿಸಿ ವರದಿ ಪ್ರಕಟಿಸಿದೆ. ಈ ಕುರಿತು ಕನ್ನಡದ ಪ್ರಮುಖ ಬರಹಗಾರರಾದ ಕೆ.ಪಿ ನಟರಾಜ್‍ರವರು ಮೊದಲು ಆ ಐಎಎಸ್ ಅಧಿಕಾರಿಯ ವಿರುದ್ಧ ಷೇರ್ ಮಾಡಿದ್ದ ಲೇಖನವನ್ನು ಅಳಿಸಿ ಪೂರ್ತಿ ಗಮನಿಸದೇ ಷೇರ್ ಮಾಡಿದ್ದಕ್ಕೆ ಕ್ಷಮೆ ಕೇಳುವ ಮೂಲಕ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...