Homeಸಾಮಾಜಿಕಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

ಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

- Advertisement -
- Advertisement -

ಗೌರವಾನ್ವಿತ ಸ್ವಾಮೀಜಿಗಳೆ,

ಬಸವ ತತ್ವ ಅಸ್ತಿತ್ವಕ್ಕೆ ಬಂದ ಮೇಲೆ ಬಸವ ಅನುಯಾಯಿಗಳು ಜಾತಿ, ಮತ, ಪಂಥಗಳನ್ನು ತೊರೆದು ನಿಜ ಮಾನವರಾಗಿ ಬಾಳಬೇಕೆಂದು ತೀರ್ಮಾನಿಸಿದರೆಂಬುದು ತಿಳಿದ ಸಂಗತಿ. ಆದರೆ ಬಸವ ತತ್ವದ ಅಸ್ತಿತ್ವಕ್ಕೆ ಮುಂಚೆಯೇ ನಮ್ಮದು ಲಿಂಗಾಯತ ಮತ ಇತ್ತೆಂಬ ವಾದವನ್ನು ಪಂಚಾಚಾರ್ಯರು ಮುಂದಿಟ್ಟಿದ್ದಾರೆ. ಈಗ ಬಸವ ತತ್ವದವರಿಗೂ ತಮ್ಮ ರಂಭಾಪುರಿ ಮಠದವರಿಗೂ ನಡುವೆ ಹೋರಾಟ ಶುರುವಾಗಿದೆ. ಈ ಭಿನ್ನಾಭಿಪ್ರಾಯದ ವಿಚಾರವನ್ನು ಉಭಯತ್ರರೂ ಕೂತು, ಗೌರವಯುತವಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಬಹುದಿತ್ತು. ಬದಲಿಗೆ ನಿಮ್ಮ ಜಗಳ ಈಗ ಬೀದಿಗೆ ಬಂದಿದೆ.

ತಾವುಗಳು ಶಿವನ ಭಕ್ತರಿಗೂ ಹಾಗೂ ಬಸವನ ಅನುಯಾಯಿಗಳಿಗೂ ನಡುವೆ ಸಾಮರಸ್ಯ ಮೂಡಿಸುವ ಬದಲಿಗೆ ವೈಮನಸ್ಯ ಹೆಚ್ಚಾಗಲು ಕಾರಣರಾಗಿದ್ದೀರಿ ಎಂಬುದನ್ನು ಅತ್ಯಂತ ನೋವಿನಿಂದ ಹೇಳಲೇಬೇಕಿದೆ. ಮಠಾಧಿಪತಿಗಳು ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬಿತ್ತಬೇಕು. ಅದು ಬಿಟ್ಟು ನಿಮ್ಮ ಪರಸ್ಪರರ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ನೀವೇ ಬೀದಿ ಹೋರಾಟಕ್ಕಿಳಿದರೆ ತಾವು ಭಕ್ತರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?

ತಮ್ಮ ಅನುಯಾಯಿಗಳ ನಡುವೆಯೇ ತಾವು ಸಾಮರಸ್ಯ ಸಾಧಿಸಲಾಗದಿದ್ದ ಮೇಲೆ ಮತ್ತೇನನ್ನು ಸಾಧಿಸುತ್ತೀರಿ? ಹೋಗಲಿ, ಇಂಥ ಮಠಗಳಿದ್ದು ಸಮಾಜಕ್ಕೆ ಪ್ರಯೋಜನವಾದರೂ ಏನು?

ಭಿನ್ನಮತಗಳ ಕಾರಣಕ್ಕೆ ಮಠಾಧೀಶರಾದ ತಾವುಗಳೇ ಬೀದಿಗಿಳಿದಿರುವ ಸನ್ನಿವೇಶದಲ್ಲಿ ಜನಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾರ ಬಳಿಗೆ ಹೋಗಬೇಕು?

ಇದು ನಿಮಗೆ ಸಲ್ಲದು. ಇದು ಮಠಾಧೀಶರಿಗೆ ತಕ್ಕುನಾದ ನಡೆಯಲ್ಲ. ನಿಮ್ಮ ಮಾತುಗಳು ಹಾಗೂ ನಡವಳಿಕೆ ಜನರಿಗೆ ಅಸಹ್ಯ ಉಂಟುಮಾಡುತ್ತಿವೆ. ಹೆಂಡ, ಹಣ ಹಂಚಿ ಓಟು ಗಳಿಸುವ ರಾಜಕಾರಣಿಗಳ ಮಟ್ಟಕ್ಕೆ ಕೆಲವು ಮಠಾಧೀಶರು ಇಳಿದಿರುವುದು ಜನರಲ್ಲಿ ಜಿಗುಪ್ಸೆ ಮೂಡಿಸಿದೆ.

ನಿಮಗೆ ರಾಜ್ಯಾಂಗದ ಪರಿಕಲ್ಪನೆಯೇ ಇಲ್ಲವೇ? ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಸಾರುವ ರಾಜ್ಯಾಂಗದ ಮಹತ್ವದ ಬಗ್ಗೆ ಅರಿವಿದೆಯೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡುತ್ತವೆ. ಮಠಾಧೀಶರೆನಿಸಿಕೊಂಡ ತಾವು ಸಮಾಜದಲ್ಲಿ ಉನ್ನತ ಮೌಲ್ಯಗಳನ್ನು, ಆದರ್ಶಗಳನ್ನು ಬೋಧಿಸಬೇಕೆಂಬುದು ಶ್ರೀಸಾಮಾನ್ಯರ ಅಪೇಕ್ಷೆ.

ಈ ಹಿಂದೆ ಸಿರಿಗೆರೆ ಮಠದವರು ಜಗಳೂರು ಕ್ಷೇತ್ರದಲ್ಲಿ ಭ್ರಷ್ಟಾಚಾರರಹಿತವಾಗಿ, ಸೌಹಾರ್ದಯುತವಾಗಿ ಚುನಾವಣೆ ನಡೆಸುವ ಪ್ರಯೋಗ ಮಾಡಿದ್ದಾರೆ. ಜನರ ನಡುವೆ ಸಾಮರಸ್ಯ ಮೂಡಿಸಲು ಪ್ರಯತ್ನಿಸಿದ್ದಾರೆ. ಇದು ಸಂತರು, ಸನ್ಯಾಸಿಗಳು ಮಾಡಬೇಕಾದ ಮಾದರಿ ಕೆಲಸ. ಆದರೆ ತಾವು ಇಂಥಾ ಸನ್ಮಾರ್ಗವನ್ನು ಬಿಟ್ಟು ದುರ್ಮಾರ್ಗವನ್ನು ತುಳಿದಿದ್ದೀರಿ. ತಮ್ಮ ಮೇಲೆ ವಿಶ್ವಾಸವಿರಿಸಿರುವ ಭಕ್ತರನ್ನು ದಿಕ್ಕುತಪ್ಪಿಸುವ ಕೃತ್ಯದಲ್ಲಿ ತೊಡಗಿದ್ದೀರಿ.

ಸ್ವಾಮಿಗಳೇ,
ಇಂದಿನ ರಾಜಕೀಯ ಯಾವ ಹಂತಕ್ಕೆ ತಲುಪಿದೆಯೆಂಬುದು ಪಾಮರರಿಗೂ ತಿಳಿದಿರುವ ವಿಚಾರ. ಹೀಗಿರುವಾಗ ನಿತ್ಯವೂ ಜನರಿಗೆ ಉಪದೇಶ ಮಾಡುವ ತಮಗೆ ಈ ವಿಷಯ ತಿಳಿಯದೇ ಹೋಗಿರುವುದು ವಿಷಾದಕರ. ಅಧೋಗತಿಗಿಳಿದಿರುವ ರಾಜಕೀಯದ ಜೊತೆಗೆ ಧರ್ಮವನ್ನು ಬೆರೆಸುವ ನಿಮ್ಮ ಕೃತ್ಯದಿಂದ ಸಮಾಜವನ್ನು ಮತ್ತಷ್ಟು ವಿಪ್ಪತ್ತಿಗೆ ದೂಡಿದಂತಾಗುತ್ತದೆ.

ಮಠಾಧೀಶರೆನಿಸಿಕೊಂಡವರು ಜನರಿಗೆ ಸಾತ್ವಿಕ ಮಾರ್ಗ ಸೂಚಿಸುವ ಮಹತ್ಕಾರ್ಯ ಮಾಡಬೇಕಿತ್ತು. ಆದರೆ ಅದು ಬಿಟ್ಟು ರಾಜಕೀಯ ಪಕ್ಷಗಳಿಗೆ ಓಟು ಹಾಕಿಸುವ ಏಜೆಂಟರಂತೆ ವರ್ತಿಸುತ್ತಿರುವ ನಿಮ್ಮ ನಡೆ ಖಂಡನಾರ್ಹವಾದುದು. ಇದು `ಮಠಾಧೀಶ’ರ ಸ್ಥಾನಮಾನಕ್ಕೆ ಎಸಗುವ ಮಹಾಪರಾಧವಾಗುತ್ತದೆ. ಪೀಠಕ್ಕೆ ಮಾಡುವ ದ್ರೋಹವಾಗುತ್ತದೆ.

ಆದ್ದರಿಂದ ತಮ್ಮಲ್ಲಿ ನನ್ನ ಕಳಕಳಿಯ ಮನವಿ ಇಷ್ಟೆ. ಜನರ ಭಾವನೆಗಳಿಗೆ ಬೆಲೆ ಕೊಟ್ಟು ದಯಮಾಡಿ ತಮ್ಮ ಬೀದಿ ಕಚ್ಚಾಟವನ್ನು ಕೂಡಲೇ ನಿಲ್ಲಿಸಿ, ತಮ್ಮ ತಾತ್ವಿಕ ಭಿನ್ನಮತವನ್ನು ಸೌಹಾರ್ದಯುತ ಚರ್ಚೆಯ ಮೂಲಕ ಪರಿಹರಿಸಿಕೊಳ್ಳಿ. ಹಾಗೆಯೆ ತಮ್ಮ ರಾಜಕೀಯ ಪ್ರೇರಿತ ನಡವಳಿಕೆಗಳನ್ನು ಬದಲಿಸಿಕೊಂಡು ಪೀಠದ ಗೌರವವನ್ನು ಹಾಗೂ ತಮ್ಮ ಸ್ಥಾನಮಾನದ ಘನತೆಯನ್ನು ಕಾಪಾಡುತ್ತೀರೆಂದು ಆಶಿಸುತ್ತೇನೆ.

ವಂದನೆಗಳೊಂದಿಗೆ,
ಎಚ್.ಎಸ್.ದೊರೆಸ್ವಾಮಿ
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...