Homeಮುಖಪುಟಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

- Advertisement -
- Advertisement -

| ಬಿ.ಚಂದ್ರೇಗೌಡ |

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‍ಗೆ ನೆಲೆ ಇಲ್ಲದಿದ್ದರೂ ದೇವೇಗೌಡರು ಆರೇಳು ವರ್ಷ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಿಸಿದ್ದಲ್ಲದೆ, ಶ್ರೀಕಾಂತರನ್ನು ಇಲ್ಲಿಗೆ ತಂದು ಜೆಡಿಎಸ್ ನಾಯಕರಾಗುವಂತೆ ಮಾಡಿದ್ದರು. ಶ್ರೀಕಾಂತ್ ದಳದ ಪಾರ್ಟಿ ಕಟ್ಟುವುದರ ಜೊತೆಗೆ ಶಿವಣ್ಣನವರ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿದ್ದರು.

ಶಿವಣ್ಣನವರು ಸಮಾಜವಾದಿಗಳು ಉತ್ತುಂಗದಲ್ಲಿದ್ದ ಕಾಲದವರು. ಪಟೇಲರಾದಿಯಾಗಿ ಅಂದಿನ ಘಟಾನುಘಟಿಗಳು ಚರ್ಚಿಸುತ್ತಿದ್ದ ಕಾಲದಲ್ಲಿ ಅವರ ಮಾತುಗಳಿಗೆ ಸಾಕ್ಷಿಯಾಗಿದ್ದವರು. ಆದ್ದರಿಂದ ಅವರನ್ನು ಭೇಟಿಯಾದರೆ ಸಾಕು ಲೋಹಿಯಾ, ಕಿಷನ್ ಪಟ್ನಾಯಕ್, ಪಟೇಲರು ಮತ್ತು ಅಂದಿನ ಕರ್ನಾಟಕದ ಸೋಷಿಲಿಸ್ಟರ ಚರಿತ್ರೆಯೇ ತೆರೆದುಕೊಳ್ಳುತ್ತಿತ್ತು. ಅಲ್ಲದೆ ಲೋಹಿಯಾ ಗೆದ್ದು ಪಾರ್ಲಿಮೆಂಟಿಗೆ ಹೋದಾಗ ಬಂದ ಪತ್ರಿಕಾ ವರದಿಗಳು, ಸಂಪಾದಕೀಯಗಳು, ಅವರ ಬಾಯಲ್ಲೇ ಇದ್ದವು. ಖಾದ್ರಿ ಶಾಮಣ್ಣನ ಸಂಪಾದಕೀಯವಂತೂ ಬಾಯಿಪಾಠವಾಗಿದ್ದವು. ಇದು ರಾಜಕಾರಣದ ಮಾತಾಯಿತು. ಇನ್ನ ಆಧ್ಯಾತ್ಮದ ವಿಷಯಕ್ಕೆ ಬಂದರೆ ಅಕ್ಕನ ವಚನಗಳು ಸಂದರ್ಭೋಚಕವಾಗಿ ಅವರ ಬಾಯಿಂದ ಬರುತ್ತಿದ್ದವು. ಅಲ್ಲದೆ ಬಸವಣ್ಣ, ಅಲ್ಲಮರ ವಚನಗಳೂ ಬರುತ್ತಿದ್ದವು. ಕೇವಲ ಒಂದು ಸಿಕ್ಸ್‍ಟಿಗೆ ಸಮಾಜವಾದದ ಚರ್ಚೆ ಹೊರಬಂದರೆ, ಎರಡು ಸಿಕ್ಸ್‍ಟಿಗೆ ಹನ್ನೆರಡನೇ ಶತಮಾನಕ್ಕೆ ಹೊರಳುತ್ತಿದ್ದರು. ಜಾತ್ಯಾತೀತ ಜನತಾದಳವೆಂಬ ಪಾರ್ಟಿಗೆ ನಿಷ್ಟರಾಗಿದ್ದ ಶಿವಣ್ಣ, ಅದರ ಜೋತಿಷ್ಯ ಯಜ್ಞ ಹೋಮ ಹವನದ ವಿರೋಧಿಯಾಗಿದ್ದರು. ಅದನ್ನೆಲ್ಲಾ ಅವರವರ ವೈಯಕ್ತಿಕ ವಿಷಯಕ್ಕೆ ಬಿಟ್ಟಿದ್ದರು.

ಶಿವಣ್ಣ ಅಜಾತಶತ್ರು, ಎಲ್ಲಾ ಪಾರ್ಟಿಯಲ್ಲೂ ಅವರ ಗೆಳೆಯರಿದ್ದರು. ಅವರಿಗೆ ತುಂಬ ಒಲವಿದ್ದುದು ರೈತ ಸಂಘದ ಕಡೆಗೆ, ಆದ್ದರಿಂದ ಮಣ್ಣಿನ ಮಗ ದೇವೇಗೌಡರ ಪಾರ್ಟಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ಬಿಜೆಪಿ ಜತೆಗೂಡಿ ಸರಕಾರ ಮಾಡಿದಾಗ ಶಿವಣ್ಣನಿಗೆ ಅದೊಂದು ಅನೈತಿಕ ಸಂಬಂಧದಂತೆ ಕಂಡಿತ್ತು. ಹಾಗಾಗಿ ಎಡೂರಪ್ಪನವರು ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗಕ್ಕೆ ಬಂದಾಗ, ಅವರು ಜೆಡಿಎಸ್ ಪಾರ್ಟಿ ಆಫೀಸಿಗೆ ಬಂದಾರೆಂದು ಪಾರ್ಟಿ ಆಫೀಸಿನ ಬಾಗಿಲಿಗೆ ಬೀಗ ಜಡಿದು ಪರಾರಿಯಾಗಿದ್ದರು. ಶಿವಣ್ಣ ಮೂಲತಃ ಶಿವಮೊಗ್ಗದವರಲ್ಲ. ಹಾಸನ ಕಡೆಯವರು. ಅಲ್ಲಿಂದ ಬಂದ ವ್ಯಕ್ತಿ ಶಿವಮೊಗ್ಗದಲ್ಲಿ ಬೇರೂರಿದ ಪರಿ ಅಚ್ಚರಿ ಹುಟ್ಟಿಸುವಂತದ್ದು. ಯಾಕೆಂದರೆ ಅವರ ಜಾತಿ ಯಾವುದೆಂಬುದೇ ಹಲವರಿಗೆ ಗೊತ್ತಿಲ್ಲ. ಹೀಗೆ ಜಾತಿ, ವರ್ಗಗಳ ಚೌಕಟ್ಟಿಗೆ ನಿಲುಕದೆ ಎಲ್ಲಾ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಬಹಳ ದಿನಗಳಿಂದ ಡಯಾಲಿಸಿಸ್‍ಗೆ ತುತ್ತಾಗಿದ್ದ ಶಿವಣ್ಣನವರನ್ನು ಚೆನ್ನಾಗಿ ನೋಡಿಕೊಂಡವರು ಶ್ರೀಕಾಂತ್ ಎಂದೇ ಹೇಳಬೇಕು. ಯಾಕೊ ದೇವೇಗೌಡರ ಪಾರ್ಟಿ ಅಧ್ಯಕ್ಷರಾದವರಿಗೆ ಆಯಸ್ಸಿಲ್ಲ ಅಂತ ಕಾಣಿಸುತ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...