Homeಮುಖಪುಟಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

- Advertisement -
- Advertisement -

| ಬಿ.ಚಂದ್ರೇಗೌಡ |

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‍ಗೆ ನೆಲೆ ಇಲ್ಲದಿದ್ದರೂ ದೇವೇಗೌಡರು ಆರೇಳು ವರ್ಷ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಿಸಿದ್ದಲ್ಲದೆ, ಶ್ರೀಕಾಂತರನ್ನು ಇಲ್ಲಿಗೆ ತಂದು ಜೆಡಿಎಸ್ ನಾಯಕರಾಗುವಂತೆ ಮಾಡಿದ್ದರು. ಶ್ರೀಕಾಂತ್ ದಳದ ಪಾರ್ಟಿ ಕಟ್ಟುವುದರ ಜೊತೆಗೆ ಶಿವಣ್ಣನವರ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿದ್ದರು.

ಶಿವಣ್ಣನವರು ಸಮಾಜವಾದಿಗಳು ಉತ್ತುಂಗದಲ್ಲಿದ್ದ ಕಾಲದವರು. ಪಟೇಲರಾದಿಯಾಗಿ ಅಂದಿನ ಘಟಾನುಘಟಿಗಳು ಚರ್ಚಿಸುತ್ತಿದ್ದ ಕಾಲದಲ್ಲಿ ಅವರ ಮಾತುಗಳಿಗೆ ಸಾಕ್ಷಿಯಾಗಿದ್ದವರು. ಆದ್ದರಿಂದ ಅವರನ್ನು ಭೇಟಿಯಾದರೆ ಸಾಕು ಲೋಹಿಯಾ, ಕಿಷನ್ ಪಟ್ನಾಯಕ್, ಪಟೇಲರು ಮತ್ತು ಅಂದಿನ ಕರ್ನಾಟಕದ ಸೋಷಿಲಿಸ್ಟರ ಚರಿತ್ರೆಯೇ ತೆರೆದುಕೊಳ್ಳುತ್ತಿತ್ತು. ಅಲ್ಲದೆ ಲೋಹಿಯಾ ಗೆದ್ದು ಪಾರ್ಲಿಮೆಂಟಿಗೆ ಹೋದಾಗ ಬಂದ ಪತ್ರಿಕಾ ವರದಿಗಳು, ಸಂಪಾದಕೀಯಗಳು, ಅವರ ಬಾಯಲ್ಲೇ ಇದ್ದವು. ಖಾದ್ರಿ ಶಾಮಣ್ಣನ ಸಂಪಾದಕೀಯವಂತೂ ಬಾಯಿಪಾಠವಾಗಿದ್ದವು. ಇದು ರಾಜಕಾರಣದ ಮಾತಾಯಿತು. ಇನ್ನ ಆಧ್ಯಾತ್ಮದ ವಿಷಯಕ್ಕೆ ಬಂದರೆ ಅಕ್ಕನ ವಚನಗಳು ಸಂದರ್ಭೋಚಕವಾಗಿ ಅವರ ಬಾಯಿಂದ ಬರುತ್ತಿದ್ದವು. ಅಲ್ಲದೆ ಬಸವಣ್ಣ, ಅಲ್ಲಮರ ವಚನಗಳೂ ಬರುತ್ತಿದ್ದವು. ಕೇವಲ ಒಂದು ಸಿಕ್ಸ್‍ಟಿಗೆ ಸಮಾಜವಾದದ ಚರ್ಚೆ ಹೊರಬಂದರೆ, ಎರಡು ಸಿಕ್ಸ್‍ಟಿಗೆ ಹನ್ನೆರಡನೇ ಶತಮಾನಕ್ಕೆ ಹೊರಳುತ್ತಿದ್ದರು. ಜಾತ್ಯಾತೀತ ಜನತಾದಳವೆಂಬ ಪಾರ್ಟಿಗೆ ನಿಷ್ಟರಾಗಿದ್ದ ಶಿವಣ್ಣ, ಅದರ ಜೋತಿಷ್ಯ ಯಜ್ಞ ಹೋಮ ಹವನದ ವಿರೋಧಿಯಾಗಿದ್ದರು. ಅದನ್ನೆಲ್ಲಾ ಅವರವರ ವೈಯಕ್ತಿಕ ವಿಷಯಕ್ಕೆ ಬಿಟ್ಟಿದ್ದರು.

ಶಿವಣ್ಣ ಅಜಾತಶತ್ರು, ಎಲ್ಲಾ ಪಾರ್ಟಿಯಲ್ಲೂ ಅವರ ಗೆಳೆಯರಿದ್ದರು. ಅವರಿಗೆ ತುಂಬ ಒಲವಿದ್ದುದು ರೈತ ಸಂಘದ ಕಡೆಗೆ, ಆದ್ದರಿಂದ ಮಣ್ಣಿನ ಮಗ ದೇವೇಗೌಡರ ಪಾರ್ಟಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ಬಿಜೆಪಿ ಜತೆಗೂಡಿ ಸರಕಾರ ಮಾಡಿದಾಗ ಶಿವಣ್ಣನಿಗೆ ಅದೊಂದು ಅನೈತಿಕ ಸಂಬಂಧದಂತೆ ಕಂಡಿತ್ತು. ಹಾಗಾಗಿ ಎಡೂರಪ್ಪನವರು ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗಕ್ಕೆ ಬಂದಾಗ, ಅವರು ಜೆಡಿಎಸ್ ಪಾರ್ಟಿ ಆಫೀಸಿಗೆ ಬಂದಾರೆಂದು ಪಾರ್ಟಿ ಆಫೀಸಿನ ಬಾಗಿಲಿಗೆ ಬೀಗ ಜಡಿದು ಪರಾರಿಯಾಗಿದ್ದರು. ಶಿವಣ್ಣ ಮೂಲತಃ ಶಿವಮೊಗ್ಗದವರಲ್ಲ. ಹಾಸನ ಕಡೆಯವರು. ಅಲ್ಲಿಂದ ಬಂದ ವ್ಯಕ್ತಿ ಶಿವಮೊಗ್ಗದಲ್ಲಿ ಬೇರೂರಿದ ಪರಿ ಅಚ್ಚರಿ ಹುಟ್ಟಿಸುವಂತದ್ದು. ಯಾಕೆಂದರೆ ಅವರ ಜಾತಿ ಯಾವುದೆಂಬುದೇ ಹಲವರಿಗೆ ಗೊತ್ತಿಲ್ಲ. ಹೀಗೆ ಜಾತಿ, ವರ್ಗಗಳ ಚೌಕಟ್ಟಿಗೆ ನಿಲುಕದೆ ಎಲ್ಲಾ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಬಹಳ ದಿನಗಳಿಂದ ಡಯಾಲಿಸಿಸ್‍ಗೆ ತುತ್ತಾಗಿದ್ದ ಶಿವಣ್ಣನವರನ್ನು ಚೆನ್ನಾಗಿ ನೋಡಿಕೊಂಡವರು ಶ್ರೀಕಾಂತ್ ಎಂದೇ ಹೇಳಬೇಕು. ಯಾಕೊ ದೇವೇಗೌಡರ ಪಾರ್ಟಿ ಅಧ್ಯಕ್ಷರಾದವರಿಗೆ ಆಯಸ್ಸಿಲ್ಲ ಅಂತ ಕಾಣಿಸುತ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...