Homeಮುಖಪುಟಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

- Advertisement -
- Advertisement -

| ಬಿ.ಚಂದ್ರೇಗೌಡ |

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‍ಗೆ ನೆಲೆ ಇಲ್ಲದಿದ್ದರೂ ದೇವೇಗೌಡರು ಆರೇಳು ವರ್ಷ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಿಸಿದ್ದಲ್ಲದೆ, ಶ್ರೀಕಾಂತರನ್ನು ಇಲ್ಲಿಗೆ ತಂದು ಜೆಡಿಎಸ್ ನಾಯಕರಾಗುವಂತೆ ಮಾಡಿದ್ದರು. ಶ್ರೀಕಾಂತ್ ದಳದ ಪಾರ್ಟಿ ಕಟ್ಟುವುದರ ಜೊತೆಗೆ ಶಿವಣ್ಣನವರ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿದ್ದರು.

ಶಿವಣ್ಣನವರು ಸಮಾಜವಾದಿಗಳು ಉತ್ತುಂಗದಲ್ಲಿದ್ದ ಕಾಲದವರು. ಪಟೇಲರಾದಿಯಾಗಿ ಅಂದಿನ ಘಟಾನುಘಟಿಗಳು ಚರ್ಚಿಸುತ್ತಿದ್ದ ಕಾಲದಲ್ಲಿ ಅವರ ಮಾತುಗಳಿಗೆ ಸಾಕ್ಷಿಯಾಗಿದ್ದವರು. ಆದ್ದರಿಂದ ಅವರನ್ನು ಭೇಟಿಯಾದರೆ ಸಾಕು ಲೋಹಿಯಾ, ಕಿಷನ್ ಪಟ್ನಾಯಕ್, ಪಟೇಲರು ಮತ್ತು ಅಂದಿನ ಕರ್ನಾಟಕದ ಸೋಷಿಲಿಸ್ಟರ ಚರಿತ್ರೆಯೇ ತೆರೆದುಕೊಳ್ಳುತ್ತಿತ್ತು. ಅಲ್ಲದೆ ಲೋಹಿಯಾ ಗೆದ್ದು ಪಾರ್ಲಿಮೆಂಟಿಗೆ ಹೋದಾಗ ಬಂದ ಪತ್ರಿಕಾ ವರದಿಗಳು, ಸಂಪಾದಕೀಯಗಳು, ಅವರ ಬಾಯಲ್ಲೇ ಇದ್ದವು. ಖಾದ್ರಿ ಶಾಮಣ್ಣನ ಸಂಪಾದಕೀಯವಂತೂ ಬಾಯಿಪಾಠವಾಗಿದ್ದವು. ಇದು ರಾಜಕಾರಣದ ಮಾತಾಯಿತು. ಇನ್ನ ಆಧ್ಯಾತ್ಮದ ವಿಷಯಕ್ಕೆ ಬಂದರೆ ಅಕ್ಕನ ವಚನಗಳು ಸಂದರ್ಭೋಚಕವಾಗಿ ಅವರ ಬಾಯಿಂದ ಬರುತ್ತಿದ್ದವು. ಅಲ್ಲದೆ ಬಸವಣ್ಣ, ಅಲ್ಲಮರ ವಚನಗಳೂ ಬರುತ್ತಿದ್ದವು. ಕೇವಲ ಒಂದು ಸಿಕ್ಸ್‍ಟಿಗೆ ಸಮಾಜವಾದದ ಚರ್ಚೆ ಹೊರಬಂದರೆ, ಎರಡು ಸಿಕ್ಸ್‍ಟಿಗೆ ಹನ್ನೆರಡನೇ ಶತಮಾನಕ್ಕೆ ಹೊರಳುತ್ತಿದ್ದರು. ಜಾತ್ಯಾತೀತ ಜನತಾದಳವೆಂಬ ಪಾರ್ಟಿಗೆ ನಿಷ್ಟರಾಗಿದ್ದ ಶಿವಣ್ಣ, ಅದರ ಜೋತಿಷ್ಯ ಯಜ್ಞ ಹೋಮ ಹವನದ ವಿರೋಧಿಯಾಗಿದ್ದರು. ಅದನ್ನೆಲ್ಲಾ ಅವರವರ ವೈಯಕ್ತಿಕ ವಿಷಯಕ್ಕೆ ಬಿಟ್ಟಿದ್ದರು.

ಶಿವಣ್ಣ ಅಜಾತಶತ್ರು, ಎಲ್ಲಾ ಪಾರ್ಟಿಯಲ್ಲೂ ಅವರ ಗೆಳೆಯರಿದ್ದರು. ಅವರಿಗೆ ತುಂಬ ಒಲವಿದ್ದುದು ರೈತ ಸಂಘದ ಕಡೆಗೆ, ಆದ್ದರಿಂದ ಮಣ್ಣಿನ ಮಗ ದೇವೇಗೌಡರ ಪಾರ್ಟಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ಬಿಜೆಪಿ ಜತೆಗೂಡಿ ಸರಕಾರ ಮಾಡಿದಾಗ ಶಿವಣ್ಣನಿಗೆ ಅದೊಂದು ಅನೈತಿಕ ಸಂಬಂಧದಂತೆ ಕಂಡಿತ್ತು. ಹಾಗಾಗಿ ಎಡೂರಪ್ಪನವರು ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗಕ್ಕೆ ಬಂದಾಗ, ಅವರು ಜೆಡಿಎಸ್ ಪಾರ್ಟಿ ಆಫೀಸಿಗೆ ಬಂದಾರೆಂದು ಪಾರ್ಟಿ ಆಫೀಸಿನ ಬಾಗಿಲಿಗೆ ಬೀಗ ಜಡಿದು ಪರಾರಿಯಾಗಿದ್ದರು. ಶಿವಣ್ಣ ಮೂಲತಃ ಶಿವಮೊಗ್ಗದವರಲ್ಲ. ಹಾಸನ ಕಡೆಯವರು. ಅಲ್ಲಿಂದ ಬಂದ ವ್ಯಕ್ತಿ ಶಿವಮೊಗ್ಗದಲ್ಲಿ ಬೇರೂರಿದ ಪರಿ ಅಚ್ಚರಿ ಹುಟ್ಟಿಸುವಂತದ್ದು. ಯಾಕೆಂದರೆ ಅವರ ಜಾತಿ ಯಾವುದೆಂಬುದೇ ಹಲವರಿಗೆ ಗೊತ್ತಿಲ್ಲ. ಹೀಗೆ ಜಾತಿ, ವರ್ಗಗಳ ಚೌಕಟ್ಟಿಗೆ ನಿಲುಕದೆ ಎಲ್ಲಾ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಬಹಳ ದಿನಗಳಿಂದ ಡಯಾಲಿಸಿಸ್‍ಗೆ ತುತ್ತಾಗಿದ್ದ ಶಿವಣ್ಣನವರನ್ನು ಚೆನ್ನಾಗಿ ನೋಡಿಕೊಂಡವರು ಶ್ರೀಕಾಂತ್ ಎಂದೇ ಹೇಳಬೇಕು. ಯಾಕೊ ದೇವೇಗೌಡರ ಪಾರ್ಟಿ ಅಧ್ಯಕ್ಷರಾದವರಿಗೆ ಆಯಸ್ಸಿಲ್ಲ ಅಂತ ಕಾಣಿಸುತ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...