Homeಮುಖಪುಟಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

- Advertisement -
- Advertisement -

| ಬಿ.ಚಂದ್ರೇಗೌಡ |

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‍ಗೆ ನೆಲೆ ಇಲ್ಲದಿದ್ದರೂ ದೇವೇಗೌಡರು ಆರೇಳು ವರ್ಷ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಿಸಿದ್ದಲ್ಲದೆ, ಶ್ರೀಕಾಂತರನ್ನು ಇಲ್ಲಿಗೆ ತಂದು ಜೆಡಿಎಸ್ ನಾಯಕರಾಗುವಂತೆ ಮಾಡಿದ್ದರು. ಶ್ರೀಕಾಂತ್ ದಳದ ಪಾರ್ಟಿ ಕಟ್ಟುವುದರ ಜೊತೆಗೆ ಶಿವಣ್ಣನವರ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿದ್ದರು.

ಶಿವಣ್ಣನವರು ಸಮಾಜವಾದಿಗಳು ಉತ್ತುಂಗದಲ್ಲಿದ್ದ ಕಾಲದವರು. ಪಟೇಲರಾದಿಯಾಗಿ ಅಂದಿನ ಘಟಾನುಘಟಿಗಳು ಚರ್ಚಿಸುತ್ತಿದ್ದ ಕಾಲದಲ್ಲಿ ಅವರ ಮಾತುಗಳಿಗೆ ಸಾಕ್ಷಿಯಾಗಿದ್ದವರು. ಆದ್ದರಿಂದ ಅವರನ್ನು ಭೇಟಿಯಾದರೆ ಸಾಕು ಲೋಹಿಯಾ, ಕಿಷನ್ ಪಟ್ನಾಯಕ್, ಪಟೇಲರು ಮತ್ತು ಅಂದಿನ ಕರ್ನಾಟಕದ ಸೋಷಿಲಿಸ್ಟರ ಚರಿತ್ರೆಯೇ ತೆರೆದುಕೊಳ್ಳುತ್ತಿತ್ತು. ಅಲ್ಲದೆ ಲೋಹಿಯಾ ಗೆದ್ದು ಪಾರ್ಲಿಮೆಂಟಿಗೆ ಹೋದಾಗ ಬಂದ ಪತ್ರಿಕಾ ವರದಿಗಳು, ಸಂಪಾದಕೀಯಗಳು, ಅವರ ಬಾಯಲ್ಲೇ ಇದ್ದವು. ಖಾದ್ರಿ ಶಾಮಣ್ಣನ ಸಂಪಾದಕೀಯವಂತೂ ಬಾಯಿಪಾಠವಾಗಿದ್ದವು. ಇದು ರಾಜಕಾರಣದ ಮಾತಾಯಿತು. ಇನ್ನ ಆಧ್ಯಾತ್ಮದ ವಿಷಯಕ್ಕೆ ಬಂದರೆ ಅಕ್ಕನ ವಚನಗಳು ಸಂದರ್ಭೋಚಕವಾಗಿ ಅವರ ಬಾಯಿಂದ ಬರುತ್ತಿದ್ದವು. ಅಲ್ಲದೆ ಬಸವಣ್ಣ, ಅಲ್ಲಮರ ವಚನಗಳೂ ಬರುತ್ತಿದ್ದವು. ಕೇವಲ ಒಂದು ಸಿಕ್ಸ್‍ಟಿಗೆ ಸಮಾಜವಾದದ ಚರ್ಚೆ ಹೊರಬಂದರೆ, ಎರಡು ಸಿಕ್ಸ್‍ಟಿಗೆ ಹನ್ನೆರಡನೇ ಶತಮಾನಕ್ಕೆ ಹೊರಳುತ್ತಿದ್ದರು. ಜಾತ್ಯಾತೀತ ಜನತಾದಳವೆಂಬ ಪಾರ್ಟಿಗೆ ನಿಷ್ಟರಾಗಿದ್ದ ಶಿವಣ್ಣ, ಅದರ ಜೋತಿಷ್ಯ ಯಜ್ಞ ಹೋಮ ಹವನದ ವಿರೋಧಿಯಾಗಿದ್ದರು. ಅದನ್ನೆಲ್ಲಾ ಅವರವರ ವೈಯಕ್ತಿಕ ವಿಷಯಕ್ಕೆ ಬಿಟ್ಟಿದ್ದರು.

ಶಿವಣ್ಣ ಅಜಾತಶತ್ರು, ಎಲ್ಲಾ ಪಾರ್ಟಿಯಲ್ಲೂ ಅವರ ಗೆಳೆಯರಿದ್ದರು. ಅವರಿಗೆ ತುಂಬ ಒಲವಿದ್ದುದು ರೈತ ಸಂಘದ ಕಡೆಗೆ, ಆದ್ದರಿಂದ ಮಣ್ಣಿನ ಮಗ ದೇವೇಗೌಡರ ಪಾರ್ಟಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ಬಿಜೆಪಿ ಜತೆಗೂಡಿ ಸರಕಾರ ಮಾಡಿದಾಗ ಶಿವಣ್ಣನಿಗೆ ಅದೊಂದು ಅನೈತಿಕ ಸಂಬಂಧದಂತೆ ಕಂಡಿತ್ತು. ಹಾಗಾಗಿ ಎಡೂರಪ್ಪನವರು ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗಕ್ಕೆ ಬಂದಾಗ, ಅವರು ಜೆಡಿಎಸ್ ಪಾರ್ಟಿ ಆಫೀಸಿಗೆ ಬಂದಾರೆಂದು ಪಾರ್ಟಿ ಆಫೀಸಿನ ಬಾಗಿಲಿಗೆ ಬೀಗ ಜಡಿದು ಪರಾರಿಯಾಗಿದ್ದರು. ಶಿವಣ್ಣ ಮೂಲತಃ ಶಿವಮೊಗ್ಗದವರಲ್ಲ. ಹಾಸನ ಕಡೆಯವರು. ಅಲ್ಲಿಂದ ಬಂದ ವ್ಯಕ್ತಿ ಶಿವಮೊಗ್ಗದಲ್ಲಿ ಬೇರೂರಿದ ಪರಿ ಅಚ್ಚರಿ ಹುಟ್ಟಿಸುವಂತದ್ದು. ಯಾಕೆಂದರೆ ಅವರ ಜಾತಿ ಯಾವುದೆಂಬುದೇ ಹಲವರಿಗೆ ಗೊತ್ತಿಲ್ಲ. ಹೀಗೆ ಜಾತಿ, ವರ್ಗಗಳ ಚೌಕಟ್ಟಿಗೆ ನಿಲುಕದೆ ಎಲ್ಲಾ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಬಹಳ ದಿನಗಳಿಂದ ಡಯಾಲಿಸಿಸ್‍ಗೆ ತುತ್ತಾಗಿದ್ದ ಶಿವಣ್ಣನವರನ್ನು ಚೆನ್ನಾಗಿ ನೋಡಿಕೊಂಡವರು ಶ್ರೀಕಾಂತ್ ಎಂದೇ ಹೇಳಬೇಕು. ಯಾಕೊ ದೇವೇಗೌಡರ ಪಾರ್ಟಿ ಅಧ್ಯಕ್ಷರಾದವರಿಗೆ ಆಯಸ್ಸಿಲ್ಲ ಅಂತ ಕಾಣಿಸುತ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...