Homeಮುಖಪುಟಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

- Advertisement -
- Advertisement -

| ಬಿ.ಚಂದ್ರೇಗೌಡ |

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‍ಗೆ ನೆಲೆ ಇಲ್ಲದಿದ್ದರೂ ದೇವೇಗೌಡರು ಆರೇಳು ವರ್ಷ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಿಸಿದ್ದಲ್ಲದೆ, ಶ್ರೀಕಾಂತರನ್ನು ಇಲ್ಲಿಗೆ ತಂದು ಜೆಡಿಎಸ್ ನಾಯಕರಾಗುವಂತೆ ಮಾಡಿದ್ದರು. ಶ್ರೀಕಾಂತ್ ದಳದ ಪಾರ್ಟಿ ಕಟ್ಟುವುದರ ಜೊತೆಗೆ ಶಿವಣ್ಣನವರ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿದ್ದರು.

ಶಿವಣ್ಣನವರು ಸಮಾಜವಾದಿಗಳು ಉತ್ತುಂಗದಲ್ಲಿದ್ದ ಕಾಲದವರು. ಪಟೇಲರಾದಿಯಾಗಿ ಅಂದಿನ ಘಟಾನುಘಟಿಗಳು ಚರ್ಚಿಸುತ್ತಿದ್ದ ಕಾಲದಲ್ಲಿ ಅವರ ಮಾತುಗಳಿಗೆ ಸಾಕ್ಷಿಯಾಗಿದ್ದವರು. ಆದ್ದರಿಂದ ಅವರನ್ನು ಭೇಟಿಯಾದರೆ ಸಾಕು ಲೋಹಿಯಾ, ಕಿಷನ್ ಪಟ್ನಾಯಕ್, ಪಟೇಲರು ಮತ್ತು ಅಂದಿನ ಕರ್ನಾಟಕದ ಸೋಷಿಲಿಸ್ಟರ ಚರಿತ್ರೆಯೇ ತೆರೆದುಕೊಳ್ಳುತ್ತಿತ್ತು. ಅಲ್ಲದೆ ಲೋಹಿಯಾ ಗೆದ್ದು ಪಾರ್ಲಿಮೆಂಟಿಗೆ ಹೋದಾಗ ಬಂದ ಪತ್ರಿಕಾ ವರದಿಗಳು, ಸಂಪಾದಕೀಯಗಳು, ಅವರ ಬಾಯಲ್ಲೇ ಇದ್ದವು. ಖಾದ್ರಿ ಶಾಮಣ್ಣನ ಸಂಪಾದಕೀಯವಂತೂ ಬಾಯಿಪಾಠವಾಗಿದ್ದವು. ಇದು ರಾಜಕಾರಣದ ಮಾತಾಯಿತು. ಇನ್ನ ಆಧ್ಯಾತ್ಮದ ವಿಷಯಕ್ಕೆ ಬಂದರೆ ಅಕ್ಕನ ವಚನಗಳು ಸಂದರ್ಭೋಚಕವಾಗಿ ಅವರ ಬಾಯಿಂದ ಬರುತ್ತಿದ್ದವು. ಅಲ್ಲದೆ ಬಸವಣ್ಣ, ಅಲ್ಲಮರ ವಚನಗಳೂ ಬರುತ್ತಿದ್ದವು. ಕೇವಲ ಒಂದು ಸಿಕ್ಸ್‍ಟಿಗೆ ಸಮಾಜವಾದದ ಚರ್ಚೆ ಹೊರಬಂದರೆ, ಎರಡು ಸಿಕ್ಸ್‍ಟಿಗೆ ಹನ್ನೆರಡನೇ ಶತಮಾನಕ್ಕೆ ಹೊರಳುತ್ತಿದ್ದರು. ಜಾತ್ಯಾತೀತ ಜನತಾದಳವೆಂಬ ಪಾರ್ಟಿಗೆ ನಿಷ್ಟರಾಗಿದ್ದ ಶಿವಣ್ಣ, ಅದರ ಜೋತಿಷ್ಯ ಯಜ್ಞ ಹೋಮ ಹವನದ ವಿರೋಧಿಯಾಗಿದ್ದರು. ಅದನ್ನೆಲ್ಲಾ ಅವರವರ ವೈಯಕ್ತಿಕ ವಿಷಯಕ್ಕೆ ಬಿಟ್ಟಿದ್ದರು.

ಶಿವಣ್ಣ ಅಜಾತಶತ್ರು, ಎಲ್ಲಾ ಪಾರ್ಟಿಯಲ್ಲೂ ಅವರ ಗೆಳೆಯರಿದ್ದರು. ಅವರಿಗೆ ತುಂಬ ಒಲವಿದ್ದುದು ರೈತ ಸಂಘದ ಕಡೆಗೆ, ಆದ್ದರಿಂದ ಮಣ್ಣಿನ ಮಗ ದೇವೇಗೌಡರ ಪಾರ್ಟಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ಬಿಜೆಪಿ ಜತೆಗೂಡಿ ಸರಕಾರ ಮಾಡಿದಾಗ ಶಿವಣ್ಣನಿಗೆ ಅದೊಂದು ಅನೈತಿಕ ಸಂಬಂಧದಂತೆ ಕಂಡಿತ್ತು. ಹಾಗಾಗಿ ಎಡೂರಪ್ಪನವರು ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗಕ್ಕೆ ಬಂದಾಗ, ಅವರು ಜೆಡಿಎಸ್ ಪಾರ್ಟಿ ಆಫೀಸಿಗೆ ಬಂದಾರೆಂದು ಪಾರ್ಟಿ ಆಫೀಸಿನ ಬಾಗಿಲಿಗೆ ಬೀಗ ಜಡಿದು ಪರಾರಿಯಾಗಿದ್ದರು. ಶಿವಣ್ಣ ಮೂಲತಃ ಶಿವಮೊಗ್ಗದವರಲ್ಲ. ಹಾಸನ ಕಡೆಯವರು. ಅಲ್ಲಿಂದ ಬಂದ ವ್ಯಕ್ತಿ ಶಿವಮೊಗ್ಗದಲ್ಲಿ ಬೇರೂರಿದ ಪರಿ ಅಚ್ಚರಿ ಹುಟ್ಟಿಸುವಂತದ್ದು. ಯಾಕೆಂದರೆ ಅವರ ಜಾತಿ ಯಾವುದೆಂಬುದೇ ಹಲವರಿಗೆ ಗೊತ್ತಿಲ್ಲ. ಹೀಗೆ ಜಾತಿ, ವರ್ಗಗಳ ಚೌಕಟ್ಟಿಗೆ ನಿಲುಕದೆ ಎಲ್ಲಾ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಬಹಳ ದಿನಗಳಿಂದ ಡಯಾಲಿಸಿಸ್‍ಗೆ ತುತ್ತಾಗಿದ್ದ ಶಿವಣ್ಣನವರನ್ನು ಚೆನ್ನಾಗಿ ನೋಡಿಕೊಂಡವರು ಶ್ರೀಕಾಂತ್ ಎಂದೇ ಹೇಳಬೇಕು. ಯಾಕೊ ದೇವೇಗೌಡರ ಪಾರ್ಟಿ ಅಧ್ಯಕ್ಷರಾದವರಿಗೆ ಆಯಸ್ಸಿಲ್ಲ ಅಂತ ಕಾಣಿಸುತ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...