Homeರಾಜಕೀಯಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

ಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

- Advertisement -
- Advertisement -
  • ಈಶ್ವರ್ |

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತದಾರ ಕೊಂಚ ಉಸಿರಾಡುವಷ್ಟು ಅವಕಾಶ ನೀಡುವ ಸಾಧ್ಯತೆ ಕಾಣಿಸುತ್ತಿದೆ. ಯಡ್ಡಿ-ಈಶು ಗ್ಯಾಂಗಿನ ಪರಸ್ಪರ ಜಗಳದ ನಡುವೆ ಬಿಜೆಪಿಯನ್ನು ಬಚಾವು ಮಾಡಲು ಆರೆಸ್ಸೆಸ್ ಧಾವಿಸಿದೆ. ಬಡಾಯಿ ಭಾಷಣದ ನರೇಂದ್ರ ಮೋದಿ ಬಂದು ಹೋದಮೇಲೆ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಕಂಡುಬರುತ್ತಿದೆ.
ಮುಖ್ಯವಾಗಿ ಸಾಗರ, ಶಿವಮೊಗ್ಗ ಗ್ರಾಮಾಂತರ ಹಾಗು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬ ವಾತಾವರಣ ಬದಲಾಗಿದೆ.

ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ ಮೇಲೆ ಕಾಗೋಡು ತಿಮ್ಮಪ್ಪರ ಗೆಲುವು ನಿಚ್ಚಳವಾಯಿತು ಎಂಬ ವಾತಾವರಣವಿತ್ತು. ಆದರೆ ಚುನಾವಣೆ 4 ದಿನವಿರುವಾಗ ಗುಪ್ತಚರ ಇಲಾಖೆ ನೀಡುತ್ತಿರುವ ವರದಿ ಹೇಳುವಂತೆ ಹಾಲಪ್ಪಗಿಂತ ಕಾಗೋಡು ಕೇವಲ 5 ಸಾವಿರ ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಇದು ಮತದಾನದ ಹೊತ್ತಿಗೆ ಬದಲಾಗಬಹುದು. 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಾಗೋಡು ಬೆಂಬಲಕ್ಕೆ 23 ಸಾವಿರ ಮತ ಪಡೆದು ಸೋತಿದ್ದ ಬೇಳೂರು ಇರುವಾಗಲೂ ಸಾಗರದಲ್ಲಿ ಹರತಾಳ ಹಾಲಪ್ಪ ಎಲ್ಲರ ನಿರೀಕ್ಷೆ ಮೀರಿ ಮತ ಪಡೆಯುವತ್ತ ಮುಂದೆ ಸಾಗಿದ್ದಾರೆ. ಸ್ವರಾಜ್ ಇಂಡಿಯಾದ ಅಭ್ಯರ್ಥಿ ದೂಗೂರು ಪರಮೇಶ್ವರ್ ಕೂಡ ಕಾಂಗ್ರೆಸ್ ಮತಗಳಿಗೆ ಲಗ್ಗೆ ಹಾಕುತ್ತಿರೋದು ಕೈಗೆ ನುಂಗಲಾರದ ತುತ್ತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಿಜೆಪಿಯಲ್ಲೇ ಭಾರೀ ವಿರೋಧವಿತ್ತು. ಲಿಂಗಾಯತರು ಸಿಟ್ಟು ಮಾಡಿಕೊಂಡಿದ್ದರು. ಯಡಿಯೂರಪ್ಪ ಸುತ್ತಾಟ ಆರಂಭಿಸಿದ ನಂತರ ಅಶೋಕನಾಯ್ಕನ ಕುದುರೆ ಕುಂಟುವುದನ್ನು ಬಿಟ್ಟು ಓಡ ತೊಡಗಿತು. ಗೆಲ್ಲಬೇಕಾದ ಜೆಡಿಎಸ್‍ನ ಶಾರದ ಪೂರ್ಯನಾಯ್ಕ ಏದುಸಿರು ಬಿಡತೊಡಗಿದ್ದಾರೆ. ಕಾಂಗ್ರೆಸ್‍ನ ಡಾ.ಶ್ರೀನಿವಾಸ್ ಡಮ್ಮಿಯಾಗುವ ಸಾಧ್ಯತೆಯೇ ಹೆಚ್ಚು.

ಸೊರಬದಲ್ಲೂ ಇದೇ ಕತೆ. ಜೆಡಿಎಸ್‍ನ ಮಧು ಬಂಗಾರಪ್ಪರೆದುರು ಅವರ ಸೋದರ ಬಿಜೆಪಿಯ ಕುಮಾರ ಬಂಗಾರಪ್ಪ ಡಮ್ಮಿಯಾಗಿ ಹೋಗುವ ವಾತಾವರಣವಿತ್ತು. ಆದರಿಲ್ಲಿ ಯಡ್ಡಿ ಮ್ಯಾಜಿಕ್ ನಡೆಯತೊಡಗಿದೆ. ಸೋದರರ ನಡುವೆ ನೇರ ಹಣಾಹಣಿ ಇದೆ. ಕುಮಾರ ಬಂಗಾರಪ್ಪ ನಿರೀಕ್ಷೆಗಿಂತ ಹೆಚ್ಚು ಮತ ಪಡೆವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಅಂದರೆ ಗೆಲುವಿನ ಸಾಧಯತೆಯೇ ಇಲ್ಲವೆಂದು ಭಾವಿಸಲಾಗಿದ್ದ ಸೊರಬ, ಸಾಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಯಡ್ಡಿಯ ಛಾಯೆ ಸ್ಪಷ್ಟವಾಗಿ ಗೋಚರವಾಗ ತೊಡಗಿದ್ದು ಬಿಜೆಪಿ ಗೆಲುವಿನ ಆಶಾವಾದ ಮೂಡತೊಡಗಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಲೀಡ್ ಕಡಿಮೆಯಾಗಲಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್‍ನ ಸಂಗಮೇಶ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ತೀರ್ಥಹಳ್ಳಿಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಈ ಬಾರಿಯೂ 3ನೇ ಸ್ಥಾನ ಪಡೆಯುವ ಸಾಧ್ಯತೆ ಇದ್ದು ಕಾಂಗ್ರೆಸ್‍ನ ಕಿಮ್ಮನೆ ರತ್ನಾಕರ್, ಜೆಡಿಎಸ್‍ನ ಆರ್.ಎಂ. ಮಂಜುನಾಥ್ ಗೌಡರ ನಡುವೆ ನೇರ ಹಣಾಹಣಿ ಇದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ದುಡ್ಡಿನ ಹೊಳೆ ಹರಿಸುತ್ತಿದ್ದಾರಾದರೂ ಅವರ ಸೋಲು ಕಟ್ಟಿಟ್ಟ ಬುತ್ತಿ. ಚುನಾವಣಾ ತಂತ್ರ ಗೊತ್ತಿಲ್ಲದ ಜೆಡಿಎಸ್‍ನ ನಿರಂಜನ್ ಡಮ್ಮಿಯಾಗುತ್ತಾರೆ ಅಂತ ಭಾವಿಸಿದವರು ಅಚ್ಚರಿ ಪಡುವಷ್ಟು ಸ್ಪರ್ಧೆ ಗಟ್ಟಿಗೊಳ್ಳತೊಡಗಿದೆ. ಕಾಂಗ್ರೆಸ್‍ನ ಪ್ರಸನ್ನಕುಮಾರ್ ಗೆಲುವು ನಿಶ್ಚಿತವಾಗಿದೆ.

ಹೀಗೆ ಭದ್ರಾವತಿ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲ್ಲಲಿದ್ದಾರೆ. ಉಳಿದಂತೆ ಸೊರಬ, ಸಾಗರ, ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಲಿದೆ. ಮಧು, ಕಾಗೋಡು ಹಾಗು ಶಾರದ ಪೂರ್ಯ ನಾಯ್ಕರ ಭವಿಷ್ಯ ಡೋಲಾಯಮಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...