Homeಕರ್ನಾಟಕಹೆಬ್ಬಾರ್ ಹಿಕಮತ್ತಿನ ಹಕೀಕತ್!!

ಹೆಬ್ಬಾರ್ ಹಿಕಮತ್ತಿನ ಹಕೀಕತ್!!

- Advertisement -
- Advertisement -

| ನಹುಷ |

ಉತ್ತರ ಕನ್ನಡದ ರಾಜಕಾರಣದ ರಂಗು ಬದಲಾಗುತ್ತಿದೆ. ಕಾರಣವಿಷ್ಟೆ ಆಪರೇಷನ್ ಕಮಲಕ್ಕೆ ಬಿಕರಿಗೊಂಡು ರಾಜೀನಾಮೆ ಕೊಟ್ಟಿರುವ ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಒಬ್ಬರೇ ಅಲ್ಲದೆ ಮಿನಿಸ್ಟರ್ ಆರ್.ವಿ.ದೇಶ್‍ಪಾಂಡೆಯೂ ಬಿಜೆಪಿ ಸೆಳೆತಕ್ಕೆ ಸಿಲುಕಿದ್ದಾರೆಂಬ ಸುದ್ದಿ ದೊಡ್ಡ ಚರ್ಚೆಗೀಡಾಗಿ ಹೋಗಿದೆ. ಮಜಾ ಎಂದರೆ, ಕಾಂಗ್ರೆಸಲ್ಲಿದ್ದರೆ ತನ್ನ ಆಸೆಗೆಲ್ಲ ದೇಶಪಾಂಡೆ ಕಲ್ಲು ಹಾಕುತ್ತಾರೆಂಬ ಸಿಟ್ಟಿಂದ ಬಿಜೆಪಿ ಪಾಳೆಯಕ್ಕೆ ಎಂಟ್ರಿ ಹೊಡೆದಿದ್ದ ಹೆಬ್ಬಾರ್ ಅದೇ ಹಿತಶತ್ರು ದೇಶಪಾಂಡೆ ತನ್ನ ಬೆನ್ನಟ್ಟಿ ಬರುತ್ತಿರುವುದು ಕೇಳಿ ಬೆಚ್ಚಿಬಿದ್ದಿದ್ದಾರೆ!!

ಕಾಂಗ್ರೆಸ್‍ನಿಂದಲೇ ಸ್ಪರ್ಧಿಸಿ ಏದುಸಿರು ಬಿಡುತ್ತಲೇ ಗೆಲ್ಲುತ್ತಿದ್ದಂತೆಯೇ ಹೆಬ್ಬಾರ್, ದೇಶಪಾಂಡೆಗೆ ಸೆಡ್ಡು ಹೊಡೆದು ಮಂತ್ರಿಗಿರಿಗೆ ಲಾಬಿ ಮಾಡಿದರು. ಮತ್ತೊಂದೆಡೆ ಬಿಜೆಪಿಯವರಿಂದ ಆಪರೇಷನ್ ಮಾಡಿಸಿಕೊಳ್ಳಲು ಪ್ರಯತ್ನಿಸಿದರು. ಯಡ್ಡಿ ಮಗ ಹೆಬ್ಬಾರ್ ಹೆಂಡತಿಯೊಂದಿಗೆ ಲೇವಾದೇವಿ ವ್ಯವಹಾರಕ್ಕಿಳಿದ ಆಡಿಯೋ ಕೂಡ ಆಗ ಹೊರಬಂದಿತ್ತು. ಹೆಬ್ಬಾರ್ ಪರಿವಾರ ಮಾನ ಹರಾಜಾದರೂ ಇದೇ ಸಾಹಸ ಎಂಬಂತೆ ಬೀಗಿದರು. ಮಂತ್ರಿಗಿರಿಗಾಗಿ ಕಾಂಗ್ರೆಸ್ ಹೈಕಮಾಂಡನ್ನು ಬ್ಲಾಕ್‍ಮೇಲ್ ಮಾಡುತ್ತಲೇ ಇದ್ದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷತೆ ಕೊಟ್ಟರೂ ಬೇಡವೆನ್ನಲಿಲ್ಲ ಈ ಆಸೆಬುರುಕ!!

ಕೇವಲ ಒಂದು ಸಾವಿರದ ನಾಲ್ಕುನೂರು ಮತಗಳಂತರದಿಂದ ಬಚಾವಾಗಿರುವ ಹೆಬ್ಬಾರ್‍ಗೆ ಮತ್ತೆ ಅದೇ ಕಾಂಗ್ರೆಸ್‍ನಿಂದ ಗೆಲ್ಲುತ್ತೇನೆಂಬ ಧೈರ್ಯ ಉಳಿದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಬಳ್ಳಾರಿಯ ಕಬ್ಬಿಣದ ಅದಿರು ಕದ್ದು ವಿದೇಶಕ್ಕೆ ರಪ್ತು ಮಾಡಿದ ಕೇಸಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಹೆಬ್ಬಾರ್ ಹಾಗೂ ಆತನ ಕುಲೋದ್ಧಾರಕ ವಿವೇಕ್ ಹೆಬ್ಬಾರ್ ಆ ಕುಣಿಕೆಯಿಂದ ಪಾರಾಗಲು ಬಲಾಢ್ಯ ಬಿಜೆಪಿ ಸೇರುವುದು ಅನಿವಾರ್ಯವಾಗಿದೆ. ಒಂದು ಕಾಲದಲ್ಲಿ ಪ್ರಾಥಮಿಕ ಶಿಕ್ಷಣವೂ ಮುಗಿಸಲಾಗದೆ ಲಾರಿ ಡ್ರೈವರಿಕೆ ಮಾಡಿಕೊಂಡಿದ್ದ ಹೆಬ್ಬಾರ್ ಇವತ್ತು ಕೋಟಿ-ಕೋಟಿ ತೂಗುವ ಅದಿರು ಉದ್ಯಮಿಯಾಗಿ, ರಾಜ್ಯ ಸರ್ಕಾರವನ್ನೇ ಉರುಳಿಸುವ ಪ್ರಭಲ ಶಾಸಕ ಸಾಹೇಬನಾಗಿ ಬೆಳೆದಿರುವುದು ಪ್ರಜಾಪ್ರಭುತ್ವದ ದುರಂತವೇ ಸರಿ!

ಹೆಬ್ಬಾರ್‍ಗೆ ಬಿಜೆಪಿ “ಸಂಸ್ಕೃತಿ” ಹೊಸತೇನೂ ಅಲ್ಲ. 1990ರ ದಶಕದ ಅಂತ್ಯದಲ್ಲಿ ಆತ ಜಿಲ್ಲಾ ಬಿಜೆಪಿ ಅಧ್ಯಕ್ಷತೆ ನಿಭಾಯಿಸಿದ್ದ. ಆದರೆ ಬಿಜೆಪಿಯಲ್ಲಿ ಆತನಿಗೆ ಕಾಗೇರಿ ಮಾಣಿ, ಅನಂತ್ಮಾಣಿ ಜತೆ ಏಗಲಾಗಲಿಲ್ಲ. ಸಂಸದ ಅನಂತ್ಮಾಣಿ ಶಿರಸಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲೇ ಈ ಹೆಬ್ಬಾರ್‍ಗೆ ಅಂದು ಕೆನ್‍ಕೆನ್ನೆಗೆ ಬಾರಿಸಿದ್ದ. ತಾನು ಬಿಜೆಪಿಯಲ್ಲಿನ್ನೂ ಬಚಾವಾಗಲಾರೆನೆಂದು ಅರಿತ ಹೆಬ್ಬಾರ್ ಕಾಂಗ್ರೆಸ್‍ನ ಪವರ್‍ಫುಲ್ ನಾಯಕಿಯಾಗಿದ್ದ ಮ್ಯಾಗಿಯ ಸೆರಗು ಹಿಡಿದು ಕಾಂಗ್ರೆಸ್‍ಗೆ ನುಸುಳಿದ್ದ. ಬಂದವನೇ ಡಬಲ್‍ಗೇಮ್ ಶುರುಹಚ್ಚಿಕೊಂಡಿದ್ದ. ಹಗಲು ಮ್ಯಾಗಿ ಬಿಡಾರದಲ್ಲಿದ್ದರೆ ರಾತ್ರಿ ದೇಶ್‍ಪಾಂಡೆ ಕ್ಯಾಂಪಿನಲ್ಲಿ ಕಾಣಿಸುತ್ತಿದ್ದ. ಇದರಿಂದ ಕೆರಳಿದ ದೇಶಪಾಂಡೆ ಆತನ ಬಾಲ ಕಟ್ ಮಾಡಲು ಮುಂದಾದರು. ಮ್ಯಾಗಿ ಕಾಂಗ್ರೆಸಲ್ಲಿ ಕಾವು ಕಳಕೊಳ್ಳುತ್ತಿದ್ದಂತೆಯೇ ಹೆಬ್ಬಾರ್ ದೇಶಪಾಂಡೆಗೆ ಆಹಾರವಾಗಿ ಹೋದ!!
ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಹೆಬ್ಬಾರ್ ಎದುರು ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ.ಎಸ್.ಪಾಟೀಲ್ ತಲೆ ಕಂಡರೆ ಸಂಸದ ಮಾಣಿಗೆ ಆಗದು. ಹಾಗಾಗಿ ಆತ ಹಳೆ ವೈರತ್ವ ಮರೆತು ಸ್ವ-ಜಾತಿಯ ಹೆಬ್ಬಾರ್‍ಗೆ ಸಹಕರಿಸಿದ್ದ. ಈ ಹವ್ಯಕ ಹಿತಾಸಕ್ತಿಯ ರಾಜಕಾರಣದಲ್ಲಿ ಸ್ವರ್ಣವಲ್ಲಿ ಸ್ವಾಮಿಯ “ಮಂತ್ರಾಕ್ಷತೆ”ಯೂ ಕೆಲಸ ಮಾಡಿತ್ತು.

ರಾಮಕೃಷ್ಣ ಹೆಗಡೆ ಕಾಲದಿಂದ ನಿರಂತರವಾಗಿ ಒಂದಿಲ್ಲೊಂದು ಅಧಿಕಾರ ಅನುಭವಿಸುತ್ತಿರುವ ದೇಶಪಾಂಡೆ ಈಗ ಹಣ್ಣಾಗಿದ್ದಾರೆ. ಈ ಮುದಿ ಕಾಲದಲ್ಲಿ ಎರಡು ಆಸೆ ಆತನಲ್ಲಿದೆ. ಒಂದು ತಾನು ಮುಖ್ಯಮಂತ್ರಿ ಆಗಬೇಕೆಂಬುದು. ಮತ್ತೊಂದು, ತನ್ನ ಸುಪುತ್ರ ಪ್ರಶಾಂತನನ್ನು ಎಂಪಿ ಅಥವಾ ಎಮ್ಮೆಲ್ಲೆ ಮಾಡಬೇಕೆಂಬುದು. ಬಿಜೆಪಿ ಸೇರಿದರೆ ಸಿಎಂ ಆಗುವುದು ಕಷ್ಟ. ಹಾಗೆಯೇ ಕಾಂಗ್ರೆಸಲ್ಲುಳಿದರೆ ಮಗನ ಭವಿಷ್ಯಕ್ಕೆ ಮಾರಕ. ಹೀಗಾಗಿ ದೇಶಪಾಂಡೆ ಎರಡು ದೋಣಿಯ ಮೇಲೆ ಕಾಲಿಟ್ಟು ಹೊಯ್ದಾಡುತ್ತಿದ್ದಾರೆ. ಈಗೀಗ ಕಾಂಗ್ರೆಸಲ್ಲೂ ದೇಶಪಾಂಡೆಗೆ ಅಂಥ ಪ್ರಾಮುಖ್ಯತೆ ಸಿಗುತ್ತಿಲ್ಲ. ಆದರೂ ತಾನೇನಾದರೂ ರಾಜಿ ಅಭ್ಯರ್ಥಿಯಾಗಿ ಸಮ್ಮಿಶ್ರದ ಸಿಎಂ ಆಗಬಹುದೆಂಬ ಯೋಚನೆಯಿಂದ ದೇಶಪಾಂಡೆ ಗಡಿಬಿಡಿಗೆ ಬಿದ್ದಿದ್ದಾರೆ. ದೇವೇಗೌಡರ ಮನೆಗೆ ಹೋಗಿ ಗಂಟೆಗಟ್ಟಲೆ ಮಾತಾಡುತ್ತಿದ್ದಾರೆ. ಅತ್ತ ಕಾಂಗ್ರೆಸ್ ಹೈಕಮಾಂಡ್‍ಗೆ ತನ್ನನ್ನು ಸಿಎಂ ಕ್ಯಾಂಡಿಡೇಟ್ ಮಾಡಿದರೆ ಓಡಿಹೋಗಿರುವ ಶಾಸಕರಲ್ಲಿ ಕೆಲವರನ್ನಾದರೂ ಖರೀದಿಸಿ ತರುತ್ತೇನೆಂದು ಭರವಸೆ ಕೊಡುತ್ತಿದ್ದಾರೆ.
ಈ ನೈಚ್ಯಾನುಸಂಧಾನದಲ್ಲಿ ಸೋತರೆ ದೇಶಪಾಂಡೆಗೆ ಮಗನ ಭವಿಷ್ಯ ಮುಖ್ಯವಾಗುತ್ತಿದೆ. ಅಂದರೆ ಆತ ಬಿಜೆಪಿ ಪಾಲಾಗುವುದು ಪಕ್ಕಾ. ಅಮಿತ್ ಶಾ ಈಚೆಗೆ ಗೋವಾಕ್ಕೆ ಬಂದಾಗ ದೇಶಪಾಂಡೆ ರಹಸ್ಯವಾಗಿ ಸಂಧಿಸಿ ಬಂದಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗುತ್ತಲೇ ಆತ ಬಿಜೆಪಿಗೆ ಅಧಿಕೃತವಾಗಿ ಪ್ರವೇಶ ಪಡೆಯುತ್ತಾರೆ. ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಮಂತ್ರಿಯಾಗುವ ಯೋಗದ ದೇಶಪಾಂಡೆ ಈ ಬಾರಿ ಬಿಜೆಪಿಯಲ್ಲಿ ಮಂತ್ರಿಗಿರಿ ಕೇಳುತ್ತಿಲ್ಲ. ಬದಲಿಗೆ ತನ್ನ ಮಗ ಪ್ರಶಾಂತನಿಗೆ ಎಂಪಿ ಅಥವಾ ಹಳಿಯಾಳದ ಎಮ್ಮೆಲ್ಲೆ ಟಿಕೆಟ್ ಕೇಸರಿ ಪಕ್ಷದಿಂದ ಬಯಸುತ್ತಿದ್ದಾರೆ. ಹಳಿಯಾಳದಲ್ಲಿ ಬಗಲಲ್ಲಿರುವವ ದುಷ್ಮನ್-ಎಮ್ಮೆಲ್ಲೆ ಎಸ್.ಎಲ್.ಘೋಟನೇಕರ್ ತಿರುಗಿ ಬಿದ್ದರೆ ಬಿಜೆಪಿಯಿಂದಲೂ ತನ್ನ ಮಗ ಗೆಲುವು ಕಷ್ಟವೆಂಬ ಲೆಕ್ಕಾಚಾರವೂ ಆತ ಹಾಕಿದ್ದಾರೆ. ಬಹುಸಂಖ್ಯಾತ ಮರಾಠ ಸಮಾಜದ ಘೋಟನೇಕರ್ ತನ್ನ ಮಗನನ್ನು ಹಳಿಯಾಳದ ಭಾವಿ ಎಮ್ಮೆಲ್ಲೆ ಎಂದೇ ದೃಢವಾಗಿ ನಂಬಿದ್ದಾರೆ. ಹೀಗಾಗಿ ದೇಶಪಾಂಡೆ ತನ್ನ ಬೀಗ, ಪ್ರಶಾಂತನಿಗೆ ಹೆಣ್ಣುಕೊಟ್ಟು ಮಾವ ಮುಂಬೈನ ಪ್ರಭಾವಿ ರಾಜಕಾರಣಿ ಪ್ರಫುಲ್ ಪಟೇಲ್ ಬಲವೂ ಸೇರಿಸಿಕೊಂಡು ಮಗನಿಗೆ ಎಂಪಿ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.
ದೇಶಪಾಂಡೆ ಬಿಜೆಪಿ ಸೇರಿದರೆ ಏನಾಗುತ್ತದೆ? ಆತನ ಮಗನ ಭವಿಷ್ಯ ಬೆಳಗುತ್ತದೆ. ಶಿವರಾಮ ಹೆಬ್ಬಾರನ ಗ್ರಹಚಾರ ಮತ್ತೆ ಕೆಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....