Homeಮುಖಪುಟ"ಶೌಚಾಲಯಗಳನ್ನು ಸ್ವಚ್ಚಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ" : ಪ್ರಗ್ಯಾ ಠಾಕೂರ್

“ಶೌಚಾಲಯಗಳನ್ನು ಸ್ವಚ್ಚಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ” : ಪ್ರಗ್ಯಾ ಠಾಕೂರ್

- Advertisement -
- Advertisement -

ಮಧ್ಯಪ್ರದೇಶದಿಂದ ಮೊದಲ ಬಾರಿಗೆ ಬಿಜೆಪಿ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿರುವ ಪ್ರಗ್ಯಾ ಸಿಂಗ್ ಠಾಕೂರ್ ಅವರು “ಚರಂಡಿಗಳು ಮತ್ತು ಶೌಚಾಲಯಗಳನ್ನು ಸ್ವಚ್ಚಗೊಳಿಸಲು ಆಯ್ಕೆಯಾಗಿಲ್ಲ” ಎಂದು ಪಕ್ಷದ ಕಾರ್ಯಕರ್ತರಿಗೆ ಖಾರವಾಗಿ ತಿಳಿಸಿದ್ದಾರೆ. ಇದು ಸೊಕ್ಕಿನ ಮತ್ತು ಪ್ರಧಾನಿ ನರೇಂದ್ರ ಮೋದಿಯವರ “ಸ್ವಚ್ಚ ಭಾರತ್ ಅಭಿಯಾನ್”ಕ್ಕೆ ವಿರುದ್ಧವಾದ ಹೇಳಿಕೆಯೆಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಭೋಪಾಲ್‌ನ ಸಂಸತ್ ವ್ಯಾಪ್ತಿಗೆ ಬರುವ ಸೆಹೋರ್‌ನಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡಿದ ಪ್ರಗ್ಯಾ ಠಾಕೂರ್, “ನಿಮ್ಮ ಚರಂಡಿಗಳನ್ನು ಸ್ವಚ್ಚಗೊಳಿಸಲು ನಾವು ಆಯ್ಕೆಯಾಗಿಲ್ಲ, ದಯವಿಟ್ಟು ಅರ್ಥಮಾಡಿಕೊಳ್ಳಿ. ಸಂಸತ್ ನಲ್ಲಿ  ಕೆಲಸ ಮಾಡುತ್ತೇನೆ ಮತ್ತು  ಇದಕ್ಕಾಗಿ ನಾನು ಆಯ್ಕೆಯಾಗಿದ್ದೇನೆ, ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ, ಮೊದಲೇ ಹೇಳಿದ್ದೇನೆ ಮತ್ತು ಅದನ್ನು ಮತ್ತೆ ಹೇಳುತ್ತೇನೆ.” ಎಂದಿದ್ದಾರೆ.

“ಕ್ಷೇತ್ರದ ಒಟ್ಟಾರೆ ಅಭಿವೃದ್ಧಿಗೆ ಸ್ಥಳೀಯ ಶಾಸಕರು (ಶಾಸಕರು) ಮತ್ತು ಪುರಸಭೆಯ ಕೌನ್ಸಿಲರ್‌ಗಳು ಸೇರಿದಂತೆ ಸ್ಥಳೀಯ ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡುವುದು ಸಂಸತ್ ಸದಸ್ಯರ ಕರ್ತವ್ಯ. ಪ್ರತಿನಿತ್ಯ ನನಗೆ ಫೋನ್ ಮಾಡಿ ಸಮಸ್ಯೆ ಹೇಳುವ ಬದಲು ನಿಮ್ಮ ಸ್ಥಳೀಯ ಸಮಸ್ಯೆಗಳನ್ನು, ಸ್ಥಳೀಯ ಪ್ರತಿನಿಧಿಗಳ ಮೂಲಕ ಕೆಲಸ ಮಾಡಿಸಿ ಕೊಳ್ಳಿ” ಎಂದು ಪ್ರಗ್ಯಾ ಠಾಕೂರ್ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು.

49 ವರ್ಷದ ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ಪ್ರದೇಶದಲ್ಲಿ ನೈರ್ಮಲ್ಯ ಮತ್ತು ಸ್ವಚ್ಚತೆಯ ಕೊರತೆಯ ಬಗ್ಗೆ ಪದೇ ಪದೇ ದೂರು ನೀಡಿದ್ದಕ್ಕಾಗಿ ಈ ರೀತಿ ಪ್ರಗ್ಯಾ ಪ್ರತ್ಯುತ್ತರ ನೀಡಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಲೋಕಸಭಾ ಚುನಾವಣೆಗೆ ಪ್ರಚಾರ ಮಾಡುವಾಗ, 2008 ರ ಮಾಲೆಗಾಂವ್ ಸ್ಫೋಟದ ಆರೋಪಿ ಪ್ರಗ್ಯಾ, ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಬಣ್ಣಿಸುವಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಅವರ ಹೇಳಿಕೆಗಳು ಪಿಎಂ ಮೋದಿಯನ್ನು ಕೆರಳಿಸಿದ್ದವು. ಆಗ ಅವರು ಗಾಂಧಿಯನ್ನು ಕೊಂದ ವ್ಯಕ್ತಿಯನ್ನು”ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಪ್ರಗ್ಯಾ ಠಾಕೂರ್ ಅವರ ಇತ್ತೀಚಿನ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಕಾಂಗ್ರೆಸ್ ಮುಖಂಡ ತಾರಿಕ್ ಅನ್ವರ್ “ಅವರ ಮಾತುಗಳು ಸ್ವಚ್ಚ ಭಾರತ್ ಅಭಿಯಾನದ ಬಗ್ಗೆ ಅವರಿಗಿರುವ ಅಸಡ್ಡೆಯನ್ನು ತೋರಿಸುತ್ತಿದೆ. ಪ್ರಧಾನಿ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...