Homeಕರ್ನಾಟಕಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ "ಮತ್ತೆ ಕಲ್ಯಾಣ"

ಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ “ಮತ್ತೆ ಕಲ್ಯಾಣ”

ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ

- Advertisement -
- Advertisement -

| ಅನಿಲ್‍ಕುಮಾರ್ ಚಿಕ್ಕದಾಳವಟ್ಟ |

ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾಗುತ್ತಿರುವ “ಮತ್ತೆ ಕಲ್ಯಾಣ” ಕಾರ್ಯಕ್ರಮವು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ತುಮಕೂರಿನ ಅನಿಲ್‍ಕುಮಾರ್ ಚಿಕ್ಕದಾಳವಟ್ಟ ಬರೆದಿದ್ದಾರೆ.

ಹನ್ನೆರಡನೆಯ ಶತಮಾನದ ಕರ್ನಾಟಕದ ವಿದ್ಯಮಾನವನ್ನು ನೆನೆಸಿಕೊಂಡರೆ ಇತಿಹಾಸ ಗೊತ್ತಿರುವ ಪ್ರತಿಯೊಬ್ಬರು ರೋಮಾಂಚಿತರಾಗುತ್ತಾರೆ. ಅಂದು ನಡೆದ ಶರಣ ಚಳುವಳಿಯು ಇಡೀ ಜಗತ್ತೇ ಪಾಠ ಕಲಿಯುವಂತಹ ಆಂಶಗಳನ್ನು ಒಳಗೊಂಡಿದೆ. ಜಾತಿಯ ಆಧಾರದಲ್ಲಿ ತೋರುತ್ತಿದ್ದ ತಾರತಮ್ಯದ ವಿರುದ್ಧ ಶರಣರು ಸಿಡಿದೆದ್ದು ಪ್ರತಿಯೊಂದು ಕಾಯಕ ಮಾಡುವವರು ಸಮಾನ ಘನತೆ, ಗೌರವ ಉಳ್ಳವರೆಂದು ಸಾರಿದರು. ಸಮಾಜದಲ್ಲಿನ ಜಾತಿ ತಾರತಮ್ಯ ಲಿಂಗತಾರತಮ್ಯದಂತಹ ಅನಿಷ್ಟಗಳನ್ನು ತೊಲಗಿಸಲು ಚಿಂತನೆಗಳನ್ನು ನಡೆಸಿದರು. ಪ್ರತಿಯೊಂದು ಜಾತಿ, ವರ್ಗದ ಜನ ಒಂದು ಕಡೆ ಕೂತು ಅವರ ಅನುಭವಕ್ಕೆ ಬಂದ ವಿಚಾರಗಳನ್ನು ವಚನಗಳ ರೂಪದಲ್ಲಿ ಹೇಳಿ ಚರ್ಚಿಸಲಾರಂಭಿಸಿದರು. ಅವರು ಪ್ರತಿಪಾದಿಸಿದ ಸಮಾನತೆಯ ಆಶಯಗಳು ಅಂದಿನ ಸಮಾಜದಲ್ಲಿ ತಲ್ಲಣವುಂಟು ಮಾಡಿ ಪರಿವರ್ತನೆಗೆ ಕಾರಣವಾದವು.

ಇಂದು ಇದನ್ನು ಮುಂದುವರೆಸಬೇಕಾದ ನಾಡಿನ ಜನರು ಮೌಢ್ಯಗಳ ದಾಸರಾಗಿರುವುದು ಈ ಕಾಲದ ವ್ಯಂಗ್ಯವಾಗಿದೆ. ಆದರೂ ಮರುಭೂಮಿಯಲ್ಲಿ ಓಯಸಿಸ್‍ನಂತೆ ನಮ್ಮ ರಾಜ್ಯದಲ್ಲಿ ಹಲವು ಪ್ರಗತಿಪರ ಮಠಗಳು ಇಂದಿಗೂ ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿದೆ. ಅಂತಹ ಮಠಗಳಲ್ಲಿ ಒಂದಾದ ಸಾಣೇಹಳ್ಳಿ ಮಠದ ಗುರುಗಳಾದ ಪಂಡಿತಾರಾಧ್ಯ ಸ್ವಾಮೀಜಿಯವರು ಸಮಾನ ಮನಸ್ಕ ಚಿಂತಕರು, ವಿವಿಧ ಮಠದ ಸ್ವಾಮೀಜಿಗಳು, ಹೋರಾಟಗಾರರು, ಯುವಜನರನ್ನು ಒಳಗೊಂಡು “ಮತ್ತೆ ಕಲ್ಯಾಣ” ಎಂಬ ಅಭಿಯಾನ ಆರಂಭಿಸುತ್ತಿದ್ದಾರೆ. ಅದರ ಮೂಲಕ ಜನಸಾಮಾನ್ಯರು ಮತ್ತು ಮುಖ್ಯವಾಗಿ ವಿದ್ಯಾರ್ಥಿ ಯುವಜನರ ಬಳಿಗೆ ಬಸವಾದಿ ಶಿವಶರಣರ ಆಶಯಗಳನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಶುರು ಮಾಡಿದ್ದಾರೆ.

ಮೇ 19ರಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಸವಸಮಿತಿಯ ಸಭಾಂಗಣದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಕುರಿತು ಚಿಂತಕರು, ಜನಪರ ಹೋರಾಟಗಾರರು, ರಂಗಕರ್ಮಿಗಳು, ಸಂಘಟಕರ, “ಮತ್ತೆ ಕಲ್ಯಾಣ”ದ ಸಂಯೋಜಕರನ್ನೊಳಗೊಂಡ ರಾಜ್ಯಮಟ್ಟದ ಸಭೆಯೊಂದು ನಡೆಯಿತು.

ಸದ್ಯಕ್ಕೆ ಇದು ಒಂದು ತಿಂಗಳ ಕಾರ್ಯಕ್ರಮವಾಗಿ ಶುರುವಾಗಲಿದ್ದು, ಮುಂದೆ ನಿರಂತರ ಅರಿವಿನ ಮತ್ತು ಪರಿವರ್ತನೆಯ ಚಳುವಳಿಯಾಗಿ ರೂಪುಗೊಳ್ಳುವ ಭರವಸೆ ಕಾಣಿಸುತ್ತಿದೆ. ಸಾಣೇಹಳ್ಳಿ ಮಠವು ಪ್ರಗತಿಪರವಾದಂತಹ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಪ್ರಮುಖವಾಗಿ ರಂಗಭೂಮಿಗಾಗಿ ಒಂದು ಶಾಲೆಯನ್ನು ಸ್ಥಾಪಿಸಿ, ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ನಡೆಸುತ್ತಿರುವುದು ಮಠದ ವೈಚಾರಿಕ ಒಲವನ್ನು ತೋರುತ್ತದೆ. ಪ್ರತಿವರ್ಷ ಮಠದಿಂದ ಶಿವಸಂಚಾರದ ಹೆಸರಿನಲ್ಲಿ ರಾಜ್ಯಾದ್ಯಂತ ಮೂರುನಾಟಕಗಳ ತಿರುಗಾಟ ನಡೆಯುತ್ತದೆ. ಈ ಎಲ್ಲಾ ಚಟುವಟಿಕೆಗಳಿಗೆ ಮಾರ್ಗದರ್ಶಕರಾಗಿರುವ ಪಂಡಿತಾರಾಧ್ಯ ಸ್ವಾಮೀಜಿಯವರುರೀ ಆಂದೋಲನದಲ್ಲಿ ಸಕ್ರಿಯವಾಗಿರುವುದು ಸಾಕಷ್ಟು ಜನ ಚಿಂತಕರ ಉತ್ಸಾಹವನ್ನು ಹೆಚ್ಚಿಸಿದೆ

ವೀರಮಾತೆ ಅಕ್ಕನಾಗಮ್ಮನವರ ಐಕ್ಯ ಸ್ಥಳವಾದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಿಂದ ಆರಂಭವಾಗುವ ಆಂದೋಲನವು, ಆಗಸ್ಟ್ 29ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮುಕ್ತಾಯವಾಗಲಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಈ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಲು ಸಿದ್ಧತೆ ನಡೆಯುತ್ತಿದೆ. ಪ್ರತಿಜಿಲ್ಲೆಯಲ್ಲೂ ಮತ್ತೆಕಲ್ಯಾಣದ ಕಾರ್ಯಕ್ರಮಗಳು ನಡೆಯಲಿದೆ. ಈ ಆಂದೋಲನಕ್ಕೆ ಪೂರಕವಾಗಿ ಒಂದು ಸಕ್ರಿಯ ತಂಡ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದು ಮತ್ತೆ ಕಲ್ಯಾಣದ ಪರಿಕಲ್ಪನೆ ಪರಿಚಯಸಿದ ರೀತಿ ಹಿರಿಯರ ಮೆಚ್ಚುಗೆ ಗಳಿಸಿದೆ.

ಒಟ್ಟಾರೆ ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ. ನುಡಿದಂತೆ ನಡೆದ ಶರಣರ ಜೀವನದ ಮೂಲಭೂತ ವಿಚಾರಗಳನ್ನು ಯುವಜನರಲ್ಲಿ ಬಿತ್ತುವ ಮೂಲಕ ಪರಸ್ಪರ ದ್ವೇಷಿಸುವ ಮನಸ್ಥಿತಿಯನ್ನು ಹೋಗಲಾಡಿಸಲಿ. ಪರಸ್ಪರ ಪ್ರೀತಿಸುವ ಪ್ರತಿಯೊಬ್ಬರ ಬದುಕನ್ನು ಗೌರವಿಸುವ ಶರಣರ ಚಿಂತನೆಗಳನ್ನು ಬೆಳೆಸುವಂತಾಗಲಿ. ಈ ಆಂದೋಲನವು ಯಶಸ್ವಿಗೊಂಡರೆ ನಮ್ಮದೇ ನೆಲದಲ್ಲಿ ಹುಟ್ಟಿದ ಚಳವಳಿಯನ್ನು ಸಮಕಾಲೀನಗೊಳಿಸುವ ಅಪರೂಪದ ಪ್ರಯೋಗವಾಗಿ ಎಲ್ಲರಿಗೂ ಮಾದರಿಯಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...