Homeಕರ್ನಾಟಕಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ "ಮತ್ತೆ ಕಲ್ಯಾಣ"

ಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ “ಮತ್ತೆ ಕಲ್ಯಾಣ”

ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ

- Advertisement -
- Advertisement -

| ಅನಿಲ್‍ಕುಮಾರ್ ಚಿಕ್ಕದಾಳವಟ್ಟ |

ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾಗುತ್ತಿರುವ “ಮತ್ತೆ ಕಲ್ಯಾಣ” ಕಾರ್ಯಕ್ರಮವು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ತುಮಕೂರಿನ ಅನಿಲ್‍ಕುಮಾರ್ ಚಿಕ್ಕದಾಳವಟ್ಟ ಬರೆದಿದ್ದಾರೆ.

ಹನ್ನೆರಡನೆಯ ಶತಮಾನದ ಕರ್ನಾಟಕದ ವಿದ್ಯಮಾನವನ್ನು ನೆನೆಸಿಕೊಂಡರೆ ಇತಿಹಾಸ ಗೊತ್ತಿರುವ ಪ್ರತಿಯೊಬ್ಬರು ರೋಮಾಂಚಿತರಾಗುತ್ತಾರೆ. ಅಂದು ನಡೆದ ಶರಣ ಚಳುವಳಿಯು ಇಡೀ ಜಗತ್ತೇ ಪಾಠ ಕಲಿಯುವಂತಹ ಆಂಶಗಳನ್ನು ಒಳಗೊಂಡಿದೆ. ಜಾತಿಯ ಆಧಾರದಲ್ಲಿ ತೋರುತ್ತಿದ್ದ ತಾರತಮ್ಯದ ವಿರುದ್ಧ ಶರಣರು ಸಿಡಿದೆದ್ದು ಪ್ರತಿಯೊಂದು ಕಾಯಕ ಮಾಡುವವರು ಸಮಾನ ಘನತೆ, ಗೌರವ ಉಳ್ಳವರೆಂದು ಸಾರಿದರು. ಸಮಾಜದಲ್ಲಿನ ಜಾತಿ ತಾರತಮ್ಯ ಲಿಂಗತಾರತಮ್ಯದಂತಹ ಅನಿಷ್ಟಗಳನ್ನು ತೊಲಗಿಸಲು ಚಿಂತನೆಗಳನ್ನು ನಡೆಸಿದರು. ಪ್ರತಿಯೊಂದು ಜಾತಿ, ವರ್ಗದ ಜನ ಒಂದು ಕಡೆ ಕೂತು ಅವರ ಅನುಭವಕ್ಕೆ ಬಂದ ವಿಚಾರಗಳನ್ನು ವಚನಗಳ ರೂಪದಲ್ಲಿ ಹೇಳಿ ಚರ್ಚಿಸಲಾರಂಭಿಸಿದರು. ಅವರು ಪ್ರತಿಪಾದಿಸಿದ ಸಮಾನತೆಯ ಆಶಯಗಳು ಅಂದಿನ ಸಮಾಜದಲ್ಲಿ ತಲ್ಲಣವುಂಟು ಮಾಡಿ ಪರಿವರ್ತನೆಗೆ ಕಾರಣವಾದವು.

ಇಂದು ಇದನ್ನು ಮುಂದುವರೆಸಬೇಕಾದ ನಾಡಿನ ಜನರು ಮೌಢ್ಯಗಳ ದಾಸರಾಗಿರುವುದು ಈ ಕಾಲದ ವ್ಯಂಗ್ಯವಾಗಿದೆ. ಆದರೂ ಮರುಭೂಮಿಯಲ್ಲಿ ಓಯಸಿಸ್‍ನಂತೆ ನಮ್ಮ ರಾಜ್ಯದಲ್ಲಿ ಹಲವು ಪ್ರಗತಿಪರ ಮಠಗಳು ಇಂದಿಗೂ ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿದೆ. ಅಂತಹ ಮಠಗಳಲ್ಲಿ ಒಂದಾದ ಸಾಣೇಹಳ್ಳಿ ಮಠದ ಗುರುಗಳಾದ ಪಂಡಿತಾರಾಧ್ಯ ಸ್ವಾಮೀಜಿಯವರು ಸಮಾನ ಮನಸ್ಕ ಚಿಂತಕರು, ವಿವಿಧ ಮಠದ ಸ್ವಾಮೀಜಿಗಳು, ಹೋರಾಟಗಾರರು, ಯುವಜನರನ್ನು ಒಳಗೊಂಡು “ಮತ್ತೆ ಕಲ್ಯಾಣ” ಎಂಬ ಅಭಿಯಾನ ಆರಂಭಿಸುತ್ತಿದ್ದಾರೆ. ಅದರ ಮೂಲಕ ಜನಸಾಮಾನ್ಯರು ಮತ್ತು ಮುಖ್ಯವಾಗಿ ವಿದ್ಯಾರ್ಥಿ ಯುವಜನರ ಬಳಿಗೆ ಬಸವಾದಿ ಶಿವಶರಣರ ಆಶಯಗಳನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಶುರು ಮಾಡಿದ್ದಾರೆ.

ಮೇ 19ರಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಸವಸಮಿತಿಯ ಸಭಾಂಗಣದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಕುರಿತು ಚಿಂತಕರು, ಜನಪರ ಹೋರಾಟಗಾರರು, ರಂಗಕರ್ಮಿಗಳು, ಸಂಘಟಕರ, “ಮತ್ತೆ ಕಲ್ಯಾಣ”ದ ಸಂಯೋಜಕರನ್ನೊಳಗೊಂಡ ರಾಜ್ಯಮಟ್ಟದ ಸಭೆಯೊಂದು ನಡೆಯಿತು.

ಸದ್ಯಕ್ಕೆ ಇದು ಒಂದು ತಿಂಗಳ ಕಾರ್ಯಕ್ರಮವಾಗಿ ಶುರುವಾಗಲಿದ್ದು, ಮುಂದೆ ನಿರಂತರ ಅರಿವಿನ ಮತ್ತು ಪರಿವರ್ತನೆಯ ಚಳುವಳಿಯಾಗಿ ರೂಪುಗೊಳ್ಳುವ ಭರವಸೆ ಕಾಣಿಸುತ್ತಿದೆ. ಸಾಣೇಹಳ್ಳಿ ಮಠವು ಪ್ರಗತಿಪರವಾದಂತಹ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಪ್ರಮುಖವಾಗಿ ರಂಗಭೂಮಿಗಾಗಿ ಒಂದು ಶಾಲೆಯನ್ನು ಸ್ಥಾಪಿಸಿ, ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ನಡೆಸುತ್ತಿರುವುದು ಮಠದ ವೈಚಾರಿಕ ಒಲವನ್ನು ತೋರುತ್ತದೆ. ಪ್ರತಿವರ್ಷ ಮಠದಿಂದ ಶಿವಸಂಚಾರದ ಹೆಸರಿನಲ್ಲಿ ರಾಜ್ಯಾದ್ಯಂತ ಮೂರುನಾಟಕಗಳ ತಿರುಗಾಟ ನಡೆಯುತ್ತದೆ. ಈ ಎಲ್ಲಾ ಚಟುವಟಿಕೆಗಳಿಗೆ ಮಾರ್ಗದರ್ಶಕರಾಗಿರುವ ಪಂಡಿತಾರಾಧ್ಯ ಸ್ವಾಮೀಜಿಯವರುರೀ ಆಂದೋಲನದಲ್ಲಿ ಸಕ್ರಿಯವಾಗಿರುವುದು ಸಾಕಷ್ಟು ಜನ ಚಿಂತಕರ ಉತ್ಸಾಹವನ್ನು ಹೆಚ್ಚಿಸಿದೆ

ವೀರಮಾತೆ ಅಕ್ಕನಾಗಮ್ಮನವರ ಐಕ್ಯ ಸ್ಥಳವಾದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಿಂದ ಆರಂಭವಾಗುವ ಆಂದೋಲನವು, ಆಗಸ್ಟ್ 29ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮುಕ್ತಾಯವಾಗಲಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಈ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಲು ಸಿದ್ಧತೆ ನಡೆಯುತ್ತಿದೆ. ಪ್ರತಿಜಿಲ್ಲೆಯಲ್ಲೂ ಮತ್ತೆಕಲ್ಯಾಣದ ಕಾರ್ಯಕ್ರಮಗಳು ನಡೆಯಲಿದೆ. ಈ ಆಂದೋಲನಕ್ಕೆ ಪೂರಕವಾಗಿ ಒಂದು ಸಕ್ರಿಯ ತಂಡ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದು ಮತ್ತೆ ಕಲ್ಯಾಣದ ಪರಿಕಲ್ಪನೆ ಪರಿಚಯಸಿದ ರೀತಿ ಹಿರಿಯರ ಮೆಚ್ಚುಗೆ ಗಳಿಸಿದೆ.

ಒಟ್ಟಾರೆ ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ. ನುಡಿದಂತೆ ನಡೆದ ಶರಣರ ಜೀವನದ ಮೂಲಭೂತ ವಿಚಾರಗಳನ್ನು ಯುವಜನರಲ್ಲಿ ಬಿತ್ತುವ ಮೂಲಕ ಪರಸ್ಪರ ದ್ವೇಷಿಸುವ ಮನಸ್ಥಿತಿಯನ್ನು ಹೋಗಲಾಡಿಸಲಿ. ಪರಸ್ಪರ ಪ್ರೀತಿಸುವ ಪ್ರತಿಯೊಬ್ಬರ ಬದುಕನ್ನು ಗೌರವಿಸುವ ಶರಣರ ಚಿಂತನೆಗಳನ್ನು ಬೆಳೆಸುವಂತಾಗಲಿ. ಈ ಆಂದೋಲನವು ಯಶಸ್ವಿಗೊಂಡರೆ ನಮ್ಮದೇ ನೆಲದಲ್ಲಿ ಹುಟ್ಟಿದ ಚಳವಳಿಯನ್ನು ಸಮಕಾಲೀನಗೊಳಿಸುವ ಅಪರೂಪದ ಪ್ರಯೋಗವಾಗಿ ಎಲ್ಲರಿಗೂ ಮಾದರಿಯಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...