Homeಅಂಕಣಗಳು'ಅವರ ಅರಿವಿನ ಪಾದಕ್ಕೆ ಶರಣು'

‘ಅವರ ಅರಿವಿನ ಪಾದಕ್ಕೆ ಶರಣು’

- Advertisement -
- Advertisement -

 

ಅಂಕಿ ಅಂಶಗಳು ಯಾವಾಗಲೂ ಬೋರ್‍ಹೊಡೆಸುತ್ತವೆ. ಕ್ಷಮಿಸಿ, ಈ ಅಂಕಿಅಂಶಗಳನ್ನು ಹೇಳಲೇಬೇಕಾಗಿದೆ.

2017ರ ಫೆಬ್ರವರಿ ಮೊದಲ ವಾರದಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಗೃಹಖಾತೆಯ ರಾಜ್ಯಸಚಿವ ಕಿರಣ್ ರಿಜಿಜು ಈ ಅಂಕಿ-ಅಂಶಗಳನ್ನು ನೀಡಿದರು. ಆ ಪ್ರಕಾರ ಉತ್ತರಪ್ರದೇಶದ ಕೋಮುಗಲಭೆಗಳ ಸಂಖ್ಯೆಯಲ್ಲಿ ಏರಿಕೆಯಾಗಿತ್ತು. 2015ರಲ್ಲಿ ನಡೆದ 155 ಗಲಭೆಗಳಲ್ಲಿ 22 ಜನರು ಬಲಿಯಾಗಿ, 419 ಮಂದಿ ಗಾಯಗೊಂಡಿದ್ದರು. 2016ರಲ್ಲಿ ಒಟ್ಟು 162 ಗಲಭೆಗಳು ನಡೆದು 29 ಮಂದಿ ಸತ್ತು, 488 ಮಂದಿ ಗಾಯಗೊಂಡಿದ್ದರು. 2017ರ ಅಧಿಕೃತ ಅಂಕಿಅಂಶಗಳ ಪ್ರಕಾರ 195 ಕೋಮುಗಲಭೆಗಳು ನಡೆದಿದ್ದು 44 ಮಂದಿ ಕೊಲೆಯಾಗಿ 452 ಮಂದಿ ಗಾಯಗೊಂಡಿದ್ದರು. ದೇಶದಾದ್ಯಂತ ಕೋಮುಗಲಭೆಗಳಲ್ಲಾದ ಸಾವುಗಳಲ್ಲಿ ಶೇ.40ರಷ್ಟು ಸಾವುಗಳು ಉತ್ತರಪ್ರದೇಶದಲ್ಲೇ ನಡೆದಿದ್ದವು.

ಈ ಸರಣಿ ಗಲಭೆಗಳನ್ನು ಅನುಸರಿಸುತ್ತಾ 2017ರ ಫೆಬ್ರವರಿ 11ರಿಂದ ಮಾರ್ಚ್ 8ರವರೆಗೆ ಅಲ್ಲಿ ಚುನಾವಣೆ ನಡೆಯಿತು. ಫಲಿತಾಂಶ ಹೊರಬಿದ್ದಾಗ ಒಟ್ಟು 403 ಸೀಟುಗಳ ವಿಧಾನಸಭೆಯಲ್ಲಿ 312 ಸೀಟುಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಇದು ಕೇವಲ ಉತ್ತರಪ್ರದೇಶದ ಕತೆ ಮಾತ್ರವಲ್ಲ. ಇತ್ತೀಚಿನ ವರ್ಷಗಳಲ್ಲಿ ಚುನಾವಣೆಗಳ ಹೊಸ್ತಿಲಲ್ಲಿ ಕೋಮುಗಲಭೆಗಳು ನಡೆಯುವುದು ಒಂದು ವಾಡಿಕೆಯಂತಾಗಿ ಹೋಗಿದೆ.

ಆದರೆ ಕರ್ನಾಟಕದ ನೆಲದಲ್ಲಿ ಈ ಸ್ಟ್ರಾಟೆಜಿ ಫಲಿಸಲಿಲ್ಲ. ಮಾತ್ರವಲ್ಲ, ಕಳೆದ ಕೆಲವು ತಿಂಗಳ ವಿದ್ಯಮಾನಗಳನ್ನು ಅವಲೋಕಿಸಿದರೆ ಈ ಷಡ್ಯಂತ್ರ ಮತೀಯ ಶಕ್ತಿಗೆ ತಿರುಗುಬಾಣವಾಗಿ ಪರಿಣಮಿಸಿದೆ ಎಂಬುದು ವೇದ್ಯವಾಗುತ್ತದೆ.

ಹೆಣ ರಾಜಕಾರಣ..

ಚುನಾವಣೆಯ ಪೂರ್ವತಯಾರಿಯೆಂಬಂತೆ ಈ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆಯ ಕಾರ್ಮೋಡಗಳು ಕವಿದುಕೊಂಡಿದ್ದು, ನಾಡಿನ ಸೌಹಾರ್ದಪ್ರಿಯ ಜನತೆಯಲ್ಲಿ ಸಹಜವಾಗಿಯೇ ಆತಂಕ ಸೃಷ್ಟಿಸಿತ್ತು. ಹೆಣಗಳನ್ನು ಮುಂದಿಟ್ಟುಕೊಂಡು ಕೋಮು ದಳ್ಳುರಿ ಎಬ್ಬಿಸಲು ಸ್ವತಃ ಶಾಸಕರು, ಸಂಸದರು, ಅಷ್ಟೇ ಏಕೆ? ಕೇಂದ್ರದ ಮಂತ್ರಿ ಅನಂತಕುಮಾರ್ ಹೆಗಡೆಯವರೇ ಅಖಾಡಕ್ಕಿಳಿದರು. ಜನರಿಂದ ಬಂದ ಸ್ಪಂದನೆ ಅವರ ಲೆಕ್ಕಾಚಾರಕ್ಕೆ ವಿರುದ್ಧವಾಗಿತ್ತು.

ಮಂಗಳೂರಿನಲ್ಲಿ ಕೊಲೆಯಾದ ನತದೃಷ್ಟ ಯುವಕ ದೀಪಕ್ ರಾವ್ ಕೆಲಸ ಮಾಡುತ್ತಿದ್ದ ಮೊಬೈಲ್ ಅಂಗಡಿಯ ಮಾಲಿಕ ಒಬ್ಬ ಮುಸ್ಲಿಂ. ಆತ ದೀಪಕ್‍ನ ಕುಟುಂಬದವರಂತೆಯೇ ದುಃಖಿತನಾಗಿದ್ದ. ಆ ಮಾಲಿಕನ ಹೆಂಡತಿ ದೀಪಕ್‍ನ ತಾಯಿಯನ್ನು ತಬ್ಬಿ ಸಂತೈಸಿದ್ದು, ತನ್ನ ಸ್ವಂತ ಮಗನೇ ಸತ್ತಂತೆ ಆ ತಾಯಿ ಹೃದಯ ರೋದಿಸಿದ್ದು ಬಹುಜನರ ಅಂತಃಕರಣವನ್ನು ಕಲಕಿತ್ತು. ಕೊಲೆಯಾದ ಶರತ್ ಮಡಿವಾಳ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದಾಗ ಆತನ ನೆರವಿಗೆ ಧಾವಿಸಿ, ಆತನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದವನು ಒಬ್ಬ ಮಸಲ್ಮಾನ ಆಟೋ ಚಾಲಕನಾಗಿದ್ದ. ಈ ಘಟನೆಗಳು ಒಟ್ಟಾರೆ ನಾಡಿನ ಜನಸ್ಪಂದನೆಯ ಕೆಲ ಬಿಡಿ ಚಿತ್ರಗಳಷ್ಟೆ.

ಚುನಾವಣೆಗೆ ತಯಾರಿಯೆಂಬಂತೆ ಅನಾವರಣಗೊಳ್ಳಲಿದ್ದ ಮತೀಯ ಜ್ವಾಲೆಯ ಅಪಾಯದ ವಿರುದ್ದ ಹಲವಾರು ಸಂಘಟನೆಗಳು, ಸಾಹಿತಿ, ಕಲಾವಿದರು, ಚಿಂತಕರು ದನಿಯೆತ್ತಿದರು. ಜನಸಾಮಾನ್ಯರು ಕೂಡ ಈ ಷಡ್ಯಂತ್ರವನ್ನು ಮನಗಂಡು ಈ ಕೋಮುವ್ಯಾಧಿಗಳನ್ನು ಪ್ರಶ್ನಿಸಿದರು, ಅವರ ಮತೀಯ ಕರೆಗಳನ್ನು ತಿರಸ್ಕರಿಸಿದರು. ಬಹುಶಃ ಇದು ನಮ್ಮ ಮಣ್ಣಿನ ಗುಣ ಅನಿಸುತ್ತೆ.

ಅತ್ತ ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಇಂಥದೇ ಅಜೆಂಡಾ ಜಾರಿ ಮಾಡಲು ಹೊರಟಿದ್ದು, ಮೈಮೇಲೆ ದೆವ್ವ ಬಂದವನಂತೆ ಕೂಗಾಡಿ ಪೊಲೀಸರ ಬ್ಯಾರಿಕೇಡ್ ಮೇಲೆಯೇ ಕಾರು ಚಲಾಯಿಸಿ, ಪೊಲೀಸರನ್ನು ಗಾಯಗೊಳಿಸಿದ್ದೂ ಆಯ್ತು. ಈತನ ಈ ಗೂಂಡಾ ವರ್ತನೆಗೆ ಸ್ಪಷ್ಟೀಕರಣ ಎಂಬಂತೆ ತದನಂತರ ಒಂದು ವಾಟ್ಸಪ್ ವಿಡಿಯೋ ವೈರಲ್ ಆಗಿತ್ತು. ಅದು ಬಿಜೆಪಿಯ ಹುನ್ನಾರವನ್ನು ಬಟಾಬಯಲಾಗಿಸಿತ್ತು. ಕರ್ನಾಟಕದ ಬಿಜೆಪಿ ಕಾರ್ಯಕರ್ತರ ‘ದುರ್ಬಲ’ ಚಟುವಟಿಕೆಗಳನ್ನು ವಿಮರ್ಶಿಸಿದ ಅಮಿತ್ ಶಾ ‘ನೀವು ಎಷ್ಟು ಲಾಠಿ ಚಾರ್ಜ್ ಮಾಡಿಸಿದ್ದೀರಿ? ಎಷ್ಟು ಟಿಯರ್ ಗ್ಯಾಸ್ ಹೋರಾಟ ಮಾಡಿದ್ದೀರಿ? ಎಷ್ಟು ಕಫ್ರ್ಯೂ ಬೀಳುವ ಹೋರಾಟ ಮಾಡಿದ್ದೀರಿ?’ ಅಂತ ಪ್ರಶ್ನೆ ಮಾಡಿ, ಉಗ್ರವಾದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವಂತೆ ಬೋಧಿಸಿದ್ದರೆಂದೂ, ಅದರ ಪ್ರಕಾರವೇ ನಾವು ಇಂತಹ ಹೋರಾಟ ನಡೆಸುತ್ತಿದ್ದೇವೆಂದೂ ಸ್ವತಃ ಪ್ರತಾಪ ಸಿಂಹ ವಿವರಣೆ ಕೊಟ್ಟಿದ್ದ! ಈ ವಿಡಿಯೋ ಬಹಿರಂಗವಾದ ನಂತರ ಈ ಸಿಮ್ಮ ತಲೆತಪ್ಪಿಸಿಕೊಂಡು ತಿರುಗಾಡಬೇಕಾಯ್ತು.

ಹೀಗೆ ಬೆಂಕಿ ಹಚ್ಚಿ ಮತಗಳನ್ನು ದೃವೀಕರಣ ಮಾಡುವ ಅಮಿತ್ ಶಾನ ಈ ‘ಮಾಸ್ಟರ್ ಸ್ಟ್ರಾಟೆಜಿ’ಗಳು ಕರ್ನಾಟಕದಲ್ಲಿ ಮಕಾಡೆ ಬಿದ್ದಿವೆ. ಇವರು ಹೆಚ್ಚೆಚ್ಚು ಆಕ್ರಮಣಶಾಲಿಯಾಗಿ ವರ್ತಿಸಿದಷ್ಟೂ ಜನರು ಇವರಿಂದ ದೂರ ಸರಿದಿದ್ದು ಮಾತ್ರ ನಿಜ. ಹೀಗಾಗಿ ವಿಧಿಯಿಲ್ಲದೆ ಇವರು ಪ್ಲೇಟು ಬದಲಿಸಬೇಕಾಯ್ತು. ನಂತರ ಜನಪ್ರಿಯ ಯೋಜನೆಗಳಾದ ಅನ್ನ ಭಾಗ್ಯದ ಯಶಸ್ಸು ಮೋದಿಯದು ಎಂದರು. ನುಡಿದಂತೆ ನಡೆದಿದ್ದೇವೆ ಎಂಬ ಕಾಂಗ್ರೆಸ್ ಘೋಷಣೆಯನ್ನೇ ಹೈಜಾಕ್ ಮಾಡುವ ಹತಾಶ ಪ್ರಯತ್ನ ಮಾಡಿದರು. ಊಹೂಂ, ಯಾವುದೂ ವರ್ಕ್‍ಔಟ್ ಆಗುತ್ತಿಲ್ಲ.

ಗತಿಯಿಲ್ಲದೆ ಈಗ ಸಮ್ಮಿಶ್ರ ಸರ್ಕಾರದ ಸಾಧ್ಯತೆಯನ್ನು ವರ್ಕ್‍ಔಟ್ ಮಾಡುತ್ತಿದ್ದಾರೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ನಾನಾ ಸುದ್ದಿಗಳು ಹರಿದಾಡುತ್ತಿವೆ. ಸದ್ಯ ಯಾವ ಸ್ಥಿತಿಗೆ ದೂಡಲ್ಪಟ್ಟಿದ್ದಾರೆಂದರೆ ತಮ್ಮ ಉಡುಪಿಯ ಸಮಾವೇಶದಲ್ಲಿ ಸ್ವತಃ ಪ್ರಧಾನಿ ಮೋದಿಯೇ ದೇವೇಗೌಡರನ್ನು ಯದ್ವಾತದ್ವಾ ಹೊಗಳಿದ್ದಾರೆ. ‘ದೇವೇಗೌಡರು ವೃದ್ಧಾಶ್ರಮ ಸೇರಿಕೊಳ್ಳಲಿ’ ಎಂದು ಹೀಯಾಳಿಸಿ ಇದೇ ಮೋದಿ ಮಾತಾಡಿದ್ದರೆಂಬುದನ್ನು ಮರೆಮಾಚಿದ ದೊಡ್ಡಗೌಡರು ಮೋದಿಯ ‘ಮುತ್ಸದ್ದಿತನ’ ಮೆಚ್ಚಿ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ವಿರುದ್ಧ ಎಂದು ತೋರಿಸಿಕೊಳ್ಳಲು ಅವರು ನಡೆಸುತ್ತಿರುವ ಹತಾಶ ಕಸರತ್ತುಗಳು ಜನರಿಗೆ ಪುಕ್ಕಟ್ಟೆ ಮನರಂಜನೆ ಒದಗಿಸುತ್ತಿವೆಯಷ್ಟೆ. ಒಂದೆಡೆ ಅಕ್ರಮ ಗಣಿದಣಿ ‘ಜನಾರ್ಧನರೆಡ್ಡಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ವೆಂದು ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹೇಳುತ್ತಿದ್ದರೆ, ಅದರ ಬೆನ್ನಿಗೇ ಯಡ್ಯೂರಪ್ಪನವರು ‘ರೆಡ್ಡಿ ನಮ್ಮ ಪಕ್ಷದ ದೊಡ್ಡ ಶಕ್ತಿ, ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ಅಮಿತ್‍ಶಾ ಅವರೇ ಹೇಳಿದ್ದಾರೆ’ ಅಂದುಬಿಡೋದೇ? ಇವರ ಇಂಥಾ ಗೋಸುಂಬೆ ಬಣ್ಣ ಆಡಿಕೊಳ್ಳುವವರಿಗೆ ಸರಕಾಗಿದೆ.

ಫೆಬ್ರವರಿ 19ರಂದು ಶ್ರವಣಬೆಳಗೊಳದಲ್ಲಿ ಮಾತಾಡಿದ ಮೋದಿ ‘ಸಮಾಜದಲ್ಲಿ ಅನಾಚಾರ ವ್ಯಾಪಿಸಿದಾಗ ಸಂತರು, ಮುನಿಗಳು ಜನ್ಮತಾಳಿ ಸಮಾಜವನ್ನು ಸರಿದಾರಿಗೆ ತಂದಿದ್ದಾರೆ. ಅನಾಗರಿಕತೆಯಿಂದ ನಾಗರಿಕತೆಯ ಕಡೆ ಬದುಕಲು ಪ್ರೇರಣೆ ನೀಡಿದ್ದಾರೆ’ ಎಂದು ಭರ್ಜರಿ ಭಾಷಣ ಮಾಡಿ ಚಪ್ಪಾಳೆ ಗಿಟ್ಟಿಸಿದ್ದರು. ಮೊನ್ನೆಯ ದಿನ ಸಚಿವ ಅನಂತಕುಮಾರ್ ಹೆಗಡೆ, ರಾಹುಲ್‍ಗಾಂಧಿಯನ್ನು ಟೀಕಿಸುವ ಭರದಲ್ಲಿ ಶ್ರವಣಬೆಳಗೊಳದ ಬಾಹುಬಲಿಯನ್ನು ಅಪಹಾಸ್ಯ ಮಾಡಿ ತನ್ನ ನಿಜ ಬಣ್ಣ ತೋರಿಸಿಯೇಬಿಟ್ಟರು. ಇದರಿಂದ ಆಕ್ರೋಶಗೊಂಡ ಜೈನರು ಈ ಹರಕುಬಾಯಿ ಸಚಿವನ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ್ದಾರೆ.

ಹಾಗೆಯೇ ಕನ್ನಡ ಸೆಂಟಿಮೆಂಟನ್ನು ಎನ್‍ಕ್ಯಾಷ್ ಮಾಡಿಕೊಳ್ಳಲು ಹೋದ ಮೋದಿ ಮಹಾಶಯ ‘ನಾನೊಬ್ಬ ಕನ್ನಡಿಗ’ ಎಂದು ಹೇಳಿದ್ದು ಇನ್ನಷ್ಟು ಪೀಕಲಾಟಕ್ಕೆ ಇಟ್ಟುಕೊಂಡಿದೆ. ‘ನೀವು ನಿಜವಾದ ಕನ್ನಡಿಗನೇ ಆಗಿದ್ದರೆ ಕನ್ನಡ ನಾಡ ದ್ವಜಕ್ಕೆ ಮಾನ್ಯತೆ ಕೊಡಿ’ ಎಂದರೆ ಅವರಲ್ಲಿ ಉತ್ತರವಿಲ್ಲ. ಹೀಗೆ ಅವರ ಪ್ರತಿಯೊಂದು ತಂತ್ರವೂ ಬೂಮರಾಂಗ್ ಆಗುತ್ತಿದೆ; ಉಗ್ರ ಆಟಾಟೋಪ ದಿನೇದಿನೇ ಕ್ಷೀಣವಾಗುತ್ತಿದೆ. ಸ್ವತಃ ಮೋದಿಯ ಮಾತುಗಳೇ ಆಕರ್ಷಣೆ ಕಳೆದುಕೊಂಡಿವೆ.

ಹೀಗೆ ಕರ್ನಾಟಕದಲ್ಲಿ ಸೋ ಕಾಲ್ಡ್ ಚಾಣಕ್ಯ ಅಮಿತ್ ಶಾ ಹೆಣೆಯುತ್ತಿರುವ ತಂತ್ರಗಳು ಒಂದೊಂದಾಗಿ ಫ್ಲಾಪ್ ಆಗಿದ್ದು ನಾಡಿನ ಶಾಂತಿ, ಸೌಹಾರ್ದ ಪರಂಪರೆ ಸದ್ಯಕ್ಕೆ ಮೇಲುಗೈ ಸಾಧಿಸಿದಂತೆ ಕಾಣುತ್ತದೆ. ಇದು ಬಸವಣ್ಣನ ನಾಡು, ಶರೀಫಜ್ಜ, ಕುವೆಂಪು ಅವರ ನಾಡು. ಇಲ್ಲಿ ಸೌಹಾರ್ದ ಪರಂಪರೆಗೆ ದೊಡ್ಡ ಇತಿಹಾಸವೇ ಇದೆ. ನಮ್ಮ ಸೌಹಾರ್ದ ಪರಂಪರೆಯನ್ನು ಉಳಿಸಿ, ಬೆಳೆಸಲಿಕ್ಕಾಗಿ ಅನೇಕ ಚೇತನಗಳು ದುಡಿಯುತ್ತಿವೆ. ಅವರೆಲ್ಲರ ಅರಿವಿನ ಪಾದಕ್ಕೆ ಶರಣು ಎನ್ನೋಣ.

  • ಸಂಪಾದಕೀಯ ತಂಡದ ಪರವಾಗಿ
    ದೊಡ್ಡಿಪಾಳ್ಯ ನರಸಿಂಹಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...