Homeಅಂಕಣಗಳುಸಂಪಾದಕೀಯ | ಆಶಾಭ್ರಾಂತಿಯ ಆಚೆಗೆ ಸಾಗುವ ಸಮಯ

ಸಂಪಾದಕೀಯ | ಆಶಾಭ್ರಾಂತಿಯ ಆಚೆಗೆ ಸಾಗುವ ಸಮಯ

- Advertisement -
- Advertisement -

ಸಿನೆಮಾ ಕುರಿತ ವಿಶೇಷ ಒಳನೋಟ ಇರುವ ಗೆಳೆಯರೊಬ್ಬರು ಅಮೀರ್ ಖಾನ್‍ರ ‘ಪಿಕೆ’ ಸಿನೆಮಾ ಬಂದ ಸಂದರ್ಭದಲ್ಲಿ ಹೇಳಿದ ಮಾತು ಆಶ್ಚರ್ಯಕರವಾಗಿತ್ತು. ‘ಈ ಸಿನೆಮಾ ನನಗೆ ಇಷ್ಟವಾಗಲಿಲ್ಲ’, ‘ಅಲ್ಲಾರೀ ಇಷ್ಟೊಂದು ಪಾಪ್ಯುಲರ್ ಶೈಲಿಯಲ್ಲಿ ಹುಸಿ ಧಾರ್ಮಿಕತೆಯನ್ನು ಬಯಲುಗೊಳಿಸಿದೆ. ನಿಮಗೆ ಇಷ್ಟವಾಗದ ಅಂಶ ಏನು ಇದರಲ್ಲಿ?’, ‘ಅದೇ ನನಗೆ ಸಮಸ್ಯೆ ಅನ್ನಿಸಿದ್ದು. ಇದನ್ನು ಹೊಗಳುತ್ತಿರುವ ಸೆಕ್ಯುಲರ್‍ಗಳೆಲ್ಲರೂ, ತಮ್ಮ ಜವಾಬ್ದಾರಿಯನ್ನು ಮರೆತು ಅವೆಲ್ಲವನ್ನೂ ಅಮೀರ್ ಖಾನ್ ಮೇಲೆ ಅಥವಾ ಸಿನೆಮಾ ನಿರ್ದೇಶಕರ ಮೇಲೆ ಹಾಕುತ್ತಿದ್ದಾರೆ. ಸಿನೆಮಾ ಒಂದರಿಂದ ಇದನ್ನು ಮಾಡಲು ಸಾಧ್ಯವೇ?’ ಸಿನೆಮಾ ಚೆನ್ನಾಗಿದ್ದರೆ ಮೆಚ್ಚಿಕೊಳ್ಳಬೇಕು. ಇದ್ಯಾಕೋ ವಿಚಿತ್ರ ವಾದ ಎನಿಸಿತ್ತು.

ಈಗ ಇದು ನೆನಪಾಗಲು ಕಾರಣವಿದೆ. ಉತ್ತರ ದೇಶದಿಂದ ಹೊರಟಿರುವ ಬಿಜೆಪಿಯ ರಥವನ್ನು ಮತ್ತು ಫ್ಯಾಸಿಸ್ಟರ ಓಟವನ್ನು ದಕ್ಷಿಣಾಪಥದಲ್ಲಿ ಕಟ್ಟಿಹಾಕಲು ಸಿದ್ದರಾಮಯ್ಯ ವಿಫಲರಾದರು ಎಂದು ನಾವು ದೂರುತ್ತಾ ಕೂತರೆ? ಈ ಸಂಚಿಕೆಯ ಒಂದು ವರದಿಯಲ್ಲಿ ಸಿದ್ದರಾಮಯ್ಯನವರ ಮಿತಿಗಳೇನಾಗಿದ್ದವು ಮತ್ತು ಬಿಜೆಪಿಯ ಅನೈತಿಕ ಆಕ್ರಮಣಕಾರಿ ನಡೆಗಳೇನಾಗಿದ್ದವು ಎಂಬುದನ್ನು ವಿಸ್ತಾರವಾಗಿ ಬರೆಯಲಾಗಿದೆ. ಸಿದ್ದರಾಮಯ್ಯನವರ ಮಿತಿಗಳ ಬಗ್ಗೆ ಅದರಲ್ಲಿ ಬರೆದಿರುವ ಅಂಶಗಳು ಸರಿಯಾಗಿಯೇ ಇವೆ. ಅವರೂ ಮಿತಿಗಳಿರುವ ಮನುಷ್ಯರೇ. ಆ ಮಿತಿಗಳು ಅವರಲ್ಲಿ ಮುಖ್ಯಮಂತ್ರಿಯಾಗುವುದಕ್ಕಿಂತ ಮುಂಚೆಯಿಂದಲೂ ಇತ್ತು, ಬಹುಶಃ ರಾಜಕಾರಣಕ್ಕೆ ಬಂದಾಗಿನಿಂದಲೂ ಇದ್ದವು. ಅವೆಲ್ಲದರ ನಡುವೆಯೂ, ಕಳೆದ ಮೂರ್ನಾಲ್ಕು ದಶಕಗಳ ಈ ರಾಜ್ಯದ ಮುಖ್ಯಮಂತ್ರಿಗಳಲ್ಲೇ ಉತ್ತಮ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ತಮ್ಮ ಆಡಳಿತವನ್ನು ಘನತೆಯಿಂದಲೇ ನಡೆಸಿದ್ದಾರೆ.

ಪ್ರಜಾತಂತ್ರವನ್ನು ನಾಶ ಮಾಡಲು ಹೊರಟಿರುವ ಬಿಜೆಪಿಯ ರಥವನ್ನು ಕಟ್ಟಿ ಹಾಕುವ ಜವಾಬ್ದಾರಿ, ಅದನ್ನು ಬಯಸುವ ನಮ್ಮೆಲ್ಲರದ್ದೂ ಆಗಿದೆ. ಸಾಮಾಜಿಕ ನ್ಯಾಯ, ಜಾತ್ಯಾತೀತ ಮೌಲ್ಯಗಳ ಬಗ್ಗೆ ಬದ್ಧತೆಯಿಟ್ಟುಕೊಂಡಿರುವ ಜನಪ್ರಿಯ ರಾಜಕಾರಣಿ ಸಿದ್ದರಾಮಯ್ಯನವರಿಗೂ ಅದರಲ್ಲಿ ಒಂದು ಮುಖ್ಯ ಪಾತ್ರವಿರುತ್ತದೆ. ಆದರೆ, ಸಿದ್ದರಾಮಯ್ಯನವರು ನಡೆಸಿದ ಈ ಪ್ರಯೋಗವು ನಮಗೆ ಒಂದು ಬಹುಮುಖ್ಯವಾದ ಅಂಶವನ್ನು ಮನವರಿಕೆ ಮಾಡಿಕೊಟ್ಟಿದೆ. ಅದೇನೆಂದರೆ, ಈ ಚುನಾವಣೆ ಮತ್ತು ಚುನಾವಣೋತ್ತರ ಬೆಳವಣಿಗೆಗಳು ನಮ್ಮ ಇಂದಿನ ಪರಿಸ್ಥಿತಿಯನ್ನು, ನಮ್ಮ ಮುಂದಿರುವ ಕರ್ತವ್ಯವನ್ನು ಸ್ಫುಟವಾಗಿ ತೆರೆದಿಟ್ಟಿವೆ. ನಾವು ಎಚ್ಚೆತ್ತುಕೊಳ್ಳಲೇ ಬೇಕಾದ ಅಂತಿಮ ಕರೆ ಕೇಳುತ್ತಿದೆ.

ಹಾಗೆ ನೋಡಿದರೆ ಬಿಜೆಪಿ ಪಕ್ಷ ಮುಖ್ಯಮಂತ್ರಿಯಾಗಿ ಮುಂದುವರೆದರೆ ಕರ್ನಾಟಕಕ್ಕೆ, ದೇಶಕ್ಕೆ ಎಷ್ಟು ಅಪಾಯ ಎಂಬುದರ ಬಗ್ಗೆ ಚರ್ಚೆಯ ಅಗತ್ಯವೇ ಇಲ್ಲ. ಈ ವಿಷಯ ಮಂಡನೆಯಲ್ಲಿ ಪಟ್ಟು ಸಾಧಿಸಿರುವ ಡಜನ್‍ಗಟ್ಟಲೆ ಚಿಂತಕರು, ವಾಗ್ಮಿಗಳು ನಮ್ಮ ನಡುವೆ ಇದ್ದಾರೆ. ಅಸಲಿ ಪ್ರಶ್ನೆ ಇರುವುದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಅದು ಉಂಟುಮಾಡಬಹುದಾದ ಅಪಾಯದ ಕುರಿತಾದದ್ದು. ಇಲ್ಲಿ ಸಮಸ್ಯೆಯಿರುವುದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದೂ ಅಲ್ಲ; ಸರ್ಕಾರ ರಚಿಸುವುದು ಅಲ್ಲ. ಅದು ನಾಡಿನ ಪ್ರಜಾತಂತ್ರವಾದಿಗಳಲ್ಲಿ, ಸಾಮಾಜಿಕ ಕಾರ್ಯಕರ್ತರಲ್ಲಿ ತರುವ ನಿರಾಳತೆಗೆ ಹಾಗೂ ಆ ಮೂಲಕ ಬರಬಹುದಾದ ನಿಷ್ಕ್ರಿಯತೆಗೆ ಸಂಬಂಧಿಸಿದ್ದು. ಫ್ಯಾಸಿಸಂನ ಅಪಾಯಗಳ ಕುರಿತು ಇತಿಹಾಸದ ಉದಾಹರಣೆಗಳನ್ನೂ ಹೆಕ್ಕಿ ಹೆಕ್ಕಿ ಮಾತನಾಡುತ್ತಾ ಹೋಗುವ ನಾವು, ಅದನ್ನು ಎದುರಿಸಲು ಬೇಕಾದ ತಯಾರಿ ಮಾಡಿಕೊಳ್ಳುವಲ್ಲಿ ಮಾತ್ರ ಪದೇ ಪದೇ ಸೋಲುತ್ತಿದ್ದೇವೆ. ಇದು ನಮ್ಮೆಲ್ಲರ ಮುಂದಿರುವ ಕಟು ಸತ್ಯ.

ಇಂಗ್ಲಿಷಿನಲ್ಲೊಂದು ಪದ-ಪರಿಕಲ್ಪನೆ ಇದೆ. wishful thinking ಎಂದು. ಕನ್ನಡದಲ್ಲಿ ಇದಕ್ಕೆ ಸೂಕ್ತ ಪದವಿಲ್ಲ. ಗೂಗಲ್ ಟ್ರಾನ್ಸ್‍ಲೇಟ್‍ನ ಮೂರನೇ ಆಯ್ಕೆ ಆಶಾಭ್ರಾಂತಿ ಎಂದಿತ್ತು. ಬಹಳ ಸೂಕ್ತವಾದ ಅನುವಾದ. 2014ರ ಚುನಾವಣೆಯಲ್ಲಿ ಮೋದಿ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ನಾವು ತರ್ಕಬದ್ಧವಾಗಿÀ ವಾದಗಳನ್ನು ಮಂಡಿಸಿದೆವು. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಪುನರಾಯ್ಕೆ ಬಗ್ಗೆ ಕೂಡ ನಾವು ವಾದ, ತರ್ಕಗಳನ್ನು ಮುಂದಿಟ್ಟೆವು. ತರ್ಕ ಸರಿಯಿರಲಿಲ್ಲವೆಂದೇನಲ್ಲ. ಜೊತೆಗೆ ಇವಿಎಂನ ಕುರಿತು ಇನ್ನೂ ಅಂತಿಮ ಅನಿಸಿಕೆಗೆ ಬರುವುದಕ್ಕೂ ಸಾಧ್ಯವಾಗಿಲ್ಲ. ಆದರೂ, ಅವು ತರ್ಕಕ್ಕಿಂತಲೂ ನಮ್ಮ ನಿರೀಕ್ಷೆ ಅಥವಾ ಬಯಕೆಯಾಗಿತ್ತು. Actually the writing on the wall was clear in one way or the other.
.

ಬಿಜೆಪಿ ಮತ್ತದರ ಪರಿವಾರವು ಸ್ವಾತಂತ್ರ್ಯೋತ್ತರ ಭಾರತದ ಅತೀ ದೊಡ್ಡ ದುಷ್ಟಕೂಟವಾಗಿ ರೂಪುತಳೆದಿದೆ. ಲಕ್ಷಾಂತರ ಕೋಟಿಗಳ ಅಕ್ರಮ ಸಂಪತ್ತನ್ನು ಬಾಚಿ ಗುಡ್ಡೆ ಹಾಕಿಕೊಂಡಿರುವ ಕಾರ್ಪೊರೇಟ್ ಕುಳಗಳು ಇವರ ಬೆನ್ನೆಲುಬಾಗಿ ನಿಂತಿವೆ. ಒಂದಲ್ಲಾ ಒಂದು ರೀತಿಯಲ್ಲಿ ಇದೇ ಕಾರ್ಪೊರೇಟ್ ಶಕ್ತಿಗಳ ಹಿಡಿತದಲ್ಲಿ ಸಿಲುಕಿರುವ ಮಾಧ್ಯಮಗಳು ಈ ದುಷ್ಟಕೂಟದ ಪರವಾಗಿ ಸಾಮಾಜದ ಮನೋಭೂಮಿಕೆಯನ್ನು ಸಿದ್ಧಪಡಿಸಲು ಬಹಿರಂಗವಾಗಿಯೇ ಇಳಿದಿವೆ. ಫ್ಯಾಸಿಸ್ಟರು ಏನೆಲ್ಲಾ ಮಾಡಬಹುದೆಂಬುದನ್ನು ಇತಿಹಾಸವು ನಮಗೆ ತೋರಿಸಿಕೊಟ್ಟಿದೆಯೋ ಅವೆಲ್ಲವನ್ನೂ ಮಾಡಲು ಅವರು ಇಳಿದಾಗಿದೆ. ಹಾಗಾಗಿ ನಾವು ಕೂಡಲೇ ಕಾರ್ಯೋನ್ಮುಖರಾಗಬೇಕು; ಮುಂದಿನ ಚುನಾವಣೆಗೆ ನಾವು ಈಗಿನಿಂದಲೇ ತಯಾರಿ ನಡೆಸಬೇಕಿದೆ. ಇದು ಕೇವಲ ಚುನಾವಣೆಯ ವಿಚಾರವೂ ಅಲ್ಲ. ಏಕೆಂದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷದ ಚಟುವಟಿಕೆಗಳು ವಿಪರೀತವಿದ್ದ 2013ರ ಸಂದರ್ಭದಲ್ಲಿ ಒಂದು ಕ್ಷೇತ್ರ ಹೊರತುಪಡಿಸಿ ಎಲ್ಲಾ ಸೋತಿದ್ದ ಬಿಜೆಪಿ, 5 ವರ್ಷಗಳ ಕಾಂಗ್ರೆಸ್ ಆಡಳಿತ ಮತ್ತು ಕೋಮುದ್ವೇಷದ ಚಟುವಟಿಕೆಗಳು ಸಾಪೇಕ್ಷವಾಗಿ ಕಡಿಮೆಯಿರುವ 2018ರ ಈ ಚುನಾವಣೆಯಲ್ಲಿ ಒಂದನ್ನು ಬಿಟ್ಟು ಎಲ್ಲಾ ಕ್ಷೇತ್ರಗಳಲ್ಲೂ ಗೆದ್ದಿದೆ. ಅದೂ ಹೊಸ, ದುರ್ಬಲ ಅಭ್ಯರ್ಥಿಗಳನ್ನು ನಿಲ್ಲಿಸಿ! ಹೊರಗೆ ಕೋಮುಗಲಭೆಗಳು ಎಷ್ಟು ನಡೆಯುತ್ತಿವೆ ಎಂಬುದಕ್ಕಿಂತ ವಿಷ ಹಾಗೂ ವಿಷಪೂರಿತ ಸಂಘಟನೆಯನ್ನು ಎಷ್ಟು ಸಬಲವಾಗಿ ಹಾಗೂ ವ್ಯಾಪಕವಾಗಿ ಹರಡುವುದು ಸಾಧ್ಯವಾಗಿದೆ ಎಂಬುದೇ ನಿರ್ಣಾಯಕವಾಗುತ್ತಿದೆ.

ಅದಕ್ಕೆ ವಿರುದ್ಧವಾಗಿ ಪ್ರಜಾತಂತ್ರದ – ಅಂದರೆ ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಸೋದರತೆಯ – ಅರಿವನ್ನು ಸಮಾಜದ ತಳಮಟ್ಟದಿಂದ ಬೆಳೆಸುವ ಮತ್ತು ಬಲಿಷ್ಢ ಸಂಘಟನೆಯನ್ನು ಕಟ್ಟುವ ನಿಟ್ಟಿನಲ್ಲಿ ನಾವೆಷ್ಟು ಕಾರ್ಯಪ್ರವೃತ್ತಾರಾಗಿದ್ದೇವೆ ಅಥವ ಕಾರ್ಯಪ್ರವೃತ್ತರಾಗಲಿದ್ದೇವೆ? ನಮ್ಮ ಪ್ರಜಾತಂತ್ರವಾದಿಗಳಲ್ಲಿ ಗಣನೀಯ ವಿಭಾಗದ ಕಾಳಜಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾರಿಕೊಳ್ಳುವುದು ಅಥವಾ ನಮ್ಮದೇ ವರ್ತುಲದಲ್ಲಿ ತಂತಮ್ಮ ವಾದವನ್ನು ಗೆಲ್ಲಿಸಿಕೊಳ್ಳುವುದು ಅಥವ ಇನ್ನಾವುದೋ ವಾದವನ್ನು ಸೋಲಿಸುವುದರಲ್ಲಿ ಪರ್ಯಾವಸಾನಗೊಳ್ಳುತ್ತಿವೆ. ಹೀಗೆ ನಮ್ಮ ಶಕ್ತಿ ಸಾಮಥ್ರ್ಯ ಹರಿದು ಹಳ್ಳಹಿಡಿಯುತ್ತಿದೆ ಅನಿಸುತ್ತಿದೆ.

ಇವೆಲ್ಲದರ ಅರ್ಥ, ಪರಿಸ್ಥಿತಿ ಅತ್ಯಂತ ನಿರಾಶಾದಾಯಕವಾಗಿದೆ ಎಂದೇನೂ ಅಲ್ಲ. ಬಿಜೆಪಿ ನಡೆಸಿದ ಬಹುಮುಖೀ ಆಕ್ರಮಣಕಾರಿ ದಾಳಿಯ ನಂತರವೂ ರಾಜ್ಯದಲ್ಲಿ ಅತ್ಯಂತ ಹೆಚ್ಚು ಮತ ಪಡೆದ ಪಕ್ಷ ಅದಾಗಲಿಲ್ಲ. ಆಯಾ ಕ್ಷೇತ್ರದಲ್ಲಿ ಗೆಲುವಾಗಿ ಪರಿಣಮಿಸುವ ರೀತಿಯಲ್ಲಿ ಮತಗಳು ಕ್ರೋಢೀಕೃತವಾಗಲಿಲ್ಲ ಅಷ್ಟೇ. ಈ ಸನ್ನಿವೇಶದಲ್ಲಿ ಜೆಡಿಎಸ್‍ನೊಂದಿಗೆ ಕಾಂಗ್ರೆಸ್ ಹೃತ್ಪೂರ್ವಕವಾಗಿ ಕೈ ಜೋಡಿಸಿರುವುದು ಒಂದು ಒಳ್ಳೆಯ ಬೆಳವಣಿಗೆಯೇ. ಈ ರಾಜ್ಯದ ರಾಜಕಾರಣದಲ್ಲಿ ಜಾತ್ಯತೀತತೆಯನ್ನು ನೆಲೆಗೊಳಿಸಲು ಇದಕ್ಕಿಂತ ಉತ್ತಮ ಅವಕಾಶ ಸಿಗಲಾರದು. ಆದರೆ ಇಂದಿನ ಪರಿಸ್ಥಿತಿಯನ್ನು ಅಂತಿಮ ಕರೆಗಂಟೆ ಎಂದು ಗಂಭೀರವಾಗಿ ಪರಿಗಣಿಸಬೇಕು ಅಷ್ಟೇ. ಹಾಗೆಯೇ ಯಾವ ರೀತಿಯ ಆಶಾಭ್ರಾಂತಿಯೂ ನಮ್ಮನ್ನು ಆವರಿಸದಂತೆ ಕಾಪಾಡಿಕೊಳ್ಳಬೇಕು.

ಪರ್ಯಾಯ ಮಾಧ್ಯಮಗಳನ್ನು ಕಟ್ಟಲು ಬೇಕಾದ ಸಂವಾದವನ್ನು ಶುರು ಮಾಡೋಣವೆಂಬ ಕರೆಯನ್ನು ಈ ನಿಮ್ಮ ಪತ್ರಿಕೆ ಕೊಟ್ಟಿದೆ. ಅದನ್ನು ಓದಬೇಕೆಂದು ಕೋರುತ್ತೇವೆ ಮತ್ತು ಕಟ್ಟುವ ಪ್ರಕ್ರಿಯೆಯಲ್ಲಿ ಮುಂದೆ ಬರುವವರನ್ನು ಉತ್ತೇಜಿಸಲು, ಸೂಕ್ತ ಅವಕಾಶ ಕಲ್ಪಿಸಿಕೊಡಲು ಗೌರಿ ಮೀಡಿಯಾ ಟ್ರಸ್ಟ್ ಪ್ರಯತ್ನ ಹಾಕುತ್ತದೆಂದು ಹೇಳಬಯಸುತ್ತೇವೆ. ಗೌರಿ ಲಂಕೇಶರಿಗೆ ಇದಕ್ಕಿಂತ ಉತ್ತಮವಾದ ಶ್ರದ್ಧಾಂಜಲಿ ಇನ್ನೇನಿರಲು ಸಾಧ್ಯ?

ಸಂಪಾದಕೀಯ ತಂಡದ ಪರವಾಗಿ
ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...