Homeಅಂಕಣಗಳುಸಂಪಾದಕೀಯ: ಕಿಸಾನ್ ಮುಕ್ತಿ ಮಾರ್ಚ್ ಆಂದೋಲನದ ಪಾಠಗಳು

ಸಂಪಾದಕೀಯ: ಕಿಸಾನ್ ಮುಕ್ತಿ ಮಾರ್ಚ್ ಆಂದೋಲನದ ಪಾಠಗಳು

- Advertisement -
- Advertisement -

ನವೆಂಬರ್ 30ರಂದು ದೆಹಲಿಯಲ್ಲಿ ನಡೆಯಲಿರುವ ರೈತ ಹೋರಾಟದ ಕುರಿತು ಕಳೆದ ವಾರವೇ ಪತ್ರಿಕೆಯಲ್ಲಿ ಕಾದಂಬಿನಿಯವರು ಬರೆದಿದ್ದರು. ಅದೀಗ ಮುಗಿದಿದೆ. ಆ ಹೋರಾಟ ನಡೆಯಲು 4-5 ದಿನಗಳಿರುವವರೆಗೂ ಏನೂ ಮಾತಾಡದಿದ್ದ ದೊಡ್ಡ ಮಾಧ್ಯಮಗಳೂ ತಿರುಗಿ ನೋಡುವಂತೆ, ಇದು ದೇಶದೆಲ್ಲೆಡೆ ಸದ್ದು ಮಾಡಿದೆ. ನಮ್ಮ ಪತ್ರಿಕಾ ತಂಡವೂ ಇದರ ಬಗ್ಗೆ ಕುತೂಹಲದಿಂದ ಎದುರು ನೋಡುತ್ತಿತ್ತು ಮತ್ತು ನಮ್ಮ ಬಳಗದ ಹಲವರು ಖುದ್ದಾಗಿ ಭಾಗವಹಿಸಿದ್ದರು. ಅವರಿಂದ ನೇರವಾಗಿ ತಿಳಿದುಕೊಂಡ ಕೆಲವು ಅಂಶಗಳು ಆಸಕ್ತಿದಾಯಕವಾಗಿವೆ. ದೊಡ್ಡ ಹೋರಾಟಗಳಿಲ್ಲ ಎಂಬ ಭಾವನೆ ಸ್ಥಿರಗೊಂಡಿರುವ ಸಂದರ್ಭದಲ್ಲಿ ಈ ಪ್ರಯೋಗವು ಕೆಲವು ಸಂಗತಿಗಳನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಆ ಕಾಲಕ್ಕೆ ತಕ್ಕುನಾದ ರೀತಿಯಲ್ಲಿ ಕಟ್ಟುವ ಹೋರಾಟದಿಂದ ಇರುವ ಸ್ಥಗಿತ ಪರಿಸ್ಥಿತಿಯಲ್ಲಿ ಬದಲಾವಣೆ ತರಲು ಸಾಧ್ಯ ಎಂಬುದು ಬಹಳ ಮುಖ್ಯವಾದ ಸಂಗತಿ.

ಹಲವರ ಅನಿಸಿಕೆಗಳಿಗೆ ವಿರುದ್ಧ ರೀತಿಯಲ್ಲಿ, ಈ ದೆಹಲಿ ಹೋರಾಟವು ಇದ್ದಕ್ಕಿದ್ದಂತೆ ಆರಂಭವಾದ ಒಂದು ದಿನದ ಪ್ರತಿಭಟನೆಯಲ್ಲ. ಅದು ಸುಮಾರು ಒಂದೂವರೆ ವರ್ಷಗಳ ಪ್ರಕ್ರಿಯೆ. ಅದರಲ್ಲೂ ಮಧ್ಯಪ್ರದೇಶದ ಮಂಡಸೂರಿನಲ್ಲಿ ಆದ ಗೋಲೀಬಾರ್ ಸಂದರ್ಭದಲ್ಲಿ ಅಲ್ಲಿಗೆ ಹೋಗಿ ಭೇಟಿಯಿತ್ತು ಹೋರಾಟದಲ್ಲಿ ಭಾಗಿಯಾದ ಸಂಘಟನೆಗಳು ಸಂಕಲ್ಪ ತೊಟ್ಟಂದಿನಿಂದ ಇದು ಆರಂಭವಾಯಿತು. ಅಲ್ಲಿಂದ ಇಲ್ಲಿಯವರೆಗೆ ಅತ್ಯಂತ ವ್ಯವಸ್ಥಿತವಾದ ರೀತಿಯಲ್ಲಿ ಹಂತ ಹಂತವಾಗಿ ಬೆಳೆದು ಬಂದ ಈ ಆಂದೋಲನದ ಕುರಿತು ಯಾರೂ ಬೆರಳು ಮಾಡಿ ತೋರಿಸಲಾಗದಂತೆ ಗಟ್ಟಿ ನೆಲೆಯಲ್ಲಿ ಅದನ್ನು ಕಟ್ಟಲಾಯಿತು.

ಸ್ವರಾಜ್ ಅಭಿಯಾನದ ಭಾಗವಾಗಿರುವ ಜೈಕಿಸಾನ್ ಆಂದೋಲನದವರು ಈ ಪ್ರಕ್ರಿಯೆಯನ್ನು ಆರಂಭಿಸಿದರಾದರೂ, ಬಹುಬೇಗನೇ ಸುಮಾರು ನೂರಕ್ಕೂ ಹೆಚ್ಚು ರೈತ ಸಂಘಟನೆಗಳು ಒಟ್ಟಾದವು. ಸಮಿತಿಗಳು ರಚನೆಯಾಗುವ ಹೊತ್ತಿಗೆ ಅದರ ಸಂಖ್ಯೆ 175 ಮುಟ್ಟಿತ್ತು. ಅಂತಿಮವಾಗಿ ಸುಮಾರು 200 ಸಂಘಟನೆಗಳು ಜೊತೆಯಾಗಿದ್ದವು. ಸಾಂಪ್ರದಾಯಿಕ ರೈತ ಸಂಘಟನೆಗಳಲ್ಲದೇ, ಎಡಪಕ್ಷಗಳ ಜೊತೆಗಿರುವ ರೈತ, ಕೃಷಿಕಾರ್ಮಿಕ ಸಂಘಟನೆಗಳೂ ಇದರ ಭಾಗವಾದವು.

ರೈತರ ನೂರಾರು ಸಮಸ್ಯೆಗಳ ಕೇಂದ್ರದಲ್ಲಿರುವ ಎರಡು ಅಂಶಗಳನ್ನು ಪಟ್ಟಿ ಮಾಡಲಾಯಿತು. ಇದುವರೆಗಿನ ಬಿಕ್ಕಟ್ಟಿನ ಕಾರಣದಿಂದ ಸಂಚಯಿತವಾಗಿರುವ ಸಾಲಮನ್ನಾ, ಮುಂದೆ ಸಾಲ ಮಾಡದಂತಹ, ಲಾಭ ಕಾಣಲು ಸಾಧ್ಯವಾಗುವಂತೆ ಎಲ್ಲಾ ಬೆಳೆಗಳಿಗೂ ಲಾಭದಾಯಕವಾದ ಬೆಲೆ ಖಾತರಿ. ಇದನ್ನು ಮೇಲ್ನೋಟದ ಘೋಷಣೆಯಾಗಿಯಷ್ಟೇ ಅಲ್ಲದೇ, ಕಾಯ್ದೆ ಬದ್ಧವಾಗಿ ಇವು ಸರಿಯಾಗಿ ಜಾರಿಗೊಳ್ಳಲು ಋಣ ಮುಕ್ತ ಕಾಯ್ದೆ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸ್ಸಾಗಿರುವ ಸಿ 2 + 50% ಬೆಲೆಗಿಂತ ಕಡಿಮೆ ಮಾರಾಟವಾಗದಂತೆ ತಡೆದು ಬೆಂಬಲ ಬೆಲೆಯನ್ನು ಖಾತರಿಗೊಳಿಸುವ ಕಾಯ್ದೆ ಜಾರಿಗೆ ಬರಬೇಕೆಂಬುದು ಪ್ರಮುಖ ಒತ್ತಾಯವಾಗಿತ್ತು.

ಇದಕ್ಕಾಗಿ ತಜ್ಞರ ತಂಡಗಳು ರೂಪುಗೊಂಡವು ಮತ್ತು ಅವರು ಆ ಕಾಯ್ದೆಯ ಕರಡುಗಳನ್ನೂ ರೂಪಿಸಿಕೊಟ್ಟರು. ಈ ಹೊತ್ತಿಗೆ ಇದರ ಸಕ್ರಿಯ ಸಹಭಾಗಿಗಳಾಗಿದ್ದ ಮಹಾರಾಷ್ಟ್ರದ ರೈತ ಸಂಘಟನೆಯ ನಾಯಕ ಮತ್ತು ಲೋಕಸಭಾ ಸದಸ್ಯ ರಾಜುಶೆಟ್ಟಿ ಮತ್ತು ಸಿಪಿಎಂನ ರಾಜ್ಯಸಭಾ ಸದಸ್ಯ ರಾಜೇಶ್ ಅವರುಗಳು ತಮ್ಮ ಸದನಗಳ ಮುಖ್ಯಸ್ಥರಿಗೆ ಖಾಸಗಿ ಮಸೂದೆಗಳಾಗಿ ಇವನ್ನು ಸಲ್ಲಿಸಿಯೂ ಬಿಟ್ಟರು. ಆದರೆ, ಮೋದಿ ಸರ್ಕಾರವು ಈ ಸಾರಿ ಬಜೆಟ್‌ನಲ್ಲಿ ಉತ್ಪಾದನಾ ವೆಚ್ಚದ ಮೇಲೆ 50­%ನಷ್ಟು ಲಾಭದಾಯಕ ಬೆಲೆಯನ್ನು ಖಾತರಿಗೊಳಿಸುವುದಾಗಿ ಬುರುಡೆ ಬಿಟ್ಟಿದ್ದರು. ಸ್ವರಾಜ್ ಅಭಿಯಾನವು ಇದನ್ನೊಂದು ಸವಾಲಾಗಿ ಸ್ವೀಕರಿಸಿ, ಈಗಾಗಲೇ ಘೋಷಿಸಲಾಗಿರುವ ಕನಿಷ್ಠ ಬೆಂಬಲ ಬೆಲೆಯೂ ಹೇಗೆ ನೂರಕ್ಕೆ 95 ಎಪಿಎಂಸಿ ಮಂಡಿಗಳಲ್ಲಿ ಲಭ್ಯವಿಲ್ಲ ಎಂಬುದನ್ನು ತನಿಖೆ/ಸಮೀಕ್ಷೆಯ ಮೂಲಕ ಸಾಬೀತುಪಡಿಸಿತು.

ಹಾಗೆಯೇ ರೈತರು ಮತ್ತು ಕೃಷಿಯ ವಿಚಾರದಲ್ಲಿ ಮೋದಿ ಸರ್ಕಾರ ಹೇಳಿದ್ದೇನು, ಮಾಡಿದ್ದೇನು ಎಂಬುದನ್ನು ದಾಖಲೆಗಳೊಂದಿಗೆ ವಿವರಿಸುವ ಪುಸ್ತಕವನ್ನು ತಂದರು. ದೀರ್ಘವಾಗಿ ಓದಲು ಸಾಧ್ಯವಾಗದವರಿಗೆ ಜೇಬಿನಲ್ಲಿಟ್ಟುಕೊಳ್ಳಬಹುದಾದ ಪುಸ್ತಕವನ್ನೂ ಹೊರತಂದರು.

ಎಡಪಕ್ಷಗಳು ಮತ್ತು ರೈತ ಸಂಘಟನೆಗಳು ಈ ರೀತಿಯಲ್ಲಿ ಒಂದಾಗಿ ಕೆಲಸ ಮಾಡಿ ಒಂದು ತಕ್ಷಣದ ಗುರಿ ಮುಟ್ಟಲು ದುಡಿದ ಉದಾಹರಣೆಗಳು ಹೆಚ್ಚಿಲ್ಲ. ಆದರೆ, ಈ ಸಾರಿ ಅದು ಸಾಧ್ಯವಾಯಿತು. ಮಹಾರಾಷ್ಟ್ರ, ರಾಜಸ್ತಾನ, ಉತ್ತರಖಂಡ್‌ಗಳಲ್ಲಿ ಭಾರೀ ಬೃಹತ್ ಪ್ರಮಾಣದ ಕಾಲ್ನಡಿಗೆಗಳನ್ನು ಆಯೋಜಿಸಿದ್ದ ಎಡಪಕ್ಷಗಳು ಈ ಸಮಿತಿಯ ಜೊತೆಗೂ ಸಕ್ರಿಯವಾಗಿ ಕೆಲಸ ಮಾಡಿದವು. ವಿಜು ಕೃಷ್ಣನ್‌ರಂತಹ ಯುವ ನಾಯಕರು ಅದರ ನಾಯಕತ್ವ ವಹಿಸಿದ್ದರಿಂದಾಗಿಯೂ ಇದು ಸಾಧ್ಯವಾಗಿರಬಹುದು. ಆದರೆ, ಸಾಧ್ಯವಾಗಿದ್ದು ವಾಸ್ತವ.

ವಿವಿಧ ಧಾರೆಗಳ ಕನಿಷ್ಠ 25 ಸಂಘಟನೆಗಳನ್ನೂ ಒಂದೆಡೆ ಸೇರಿಸಿ ನಿರಂತರವಾಗಿ ಕೆಲಸ ಮಾಡುವುದು ಸುಲಭವಲ್ಲವೆಂಬುದು ಅದರಲ್ಲಿ ತೊಡಗಿಕೊಂಡಿರುವ ಯಾರಿಗೇ ಆಗಲಿ ಗೊತ್ತಿರುತ್ತದೆ. ಅಂತಹ ಕಷ್ಟದ ಕೆಲಸವನ್ನು ಸಾಧ್ಯವಾಗಿಸಿಕೊಂಡ ಎಲ್ಲರೂ ಅಭಿನಂದನಾರ್ಹರು. ಹಾಗೆಂದು ಇದರಲ್ಲಿ ಸಮಸ್ಯೆಗಳಿರುವುದಿಲ್ಲವೆಂದೇನಲ್ಲ. ನೂರೆಂಟು ಬಗೆಯ ಕಿತ್ತಾಟಗಳು ಇದರಲ್ಲಿ ಸಹಜವಾಗಿಯೇ ಇರುತ್ತವೆ. ಅವೆಲ್ಲವನ್ನೂ ಹೊರಗೆ ಬರದೇ ನಿಭಾಯಿಸಿದ ಜಾಣ್ಮೆಗೆ ‘ಅಖಿಲ ಭಾರತ ರೈತ ಹೋರಾಟ ಸಮನ್ವಯ ಸಮಿತಿ’ಯ ನಾಯಕತ್ವವನ್ನು ಅಭಿನಂದಿಸಲೇಬೇಕು.

ರೈತರ ಹೋರಾಟಕ್ಕೆ ಇತರ ಸಮುದಾಯಗಳ ಬೆಂಬಲವನ್ನು ಸಂಘಟಿಸಿದ್ದು ಇನ್ನೊಂದು ಜಾಣ್ಮೆಯ ನಡೆ. ಕರ್ನಾಟಕದಲ್ಲೂ ಸಿಪಿಎಂ ಪಕ್ಷದ ಮುತುವರ್ಜಿಯಿಂದ ಅದು ನಡೆದದ್ದನ್ನು ಎಲ್ಲರೂ ಗಮನಿಸಿರಬಹುದು. ದೆಹಲಿಯಲ್ಲಿ ನೇಷನ್ ಫಾರ್ ಫಾiರ‍್ಸ್, ಡಿಯು ಫಾರ್ ಫಾರ್ಮರ್ಸ್, ವಕೀಲರು, ಪತ್ರಕರ್ತರು, ವೈದ್ಯರು ಇತ್ಯಾದಿ ಪ್ರಯತ್ನಗಳು ನಡೆದವು. ಇಷ್ಟೇ ಪ್ರಮುಖವಾಗಿ ಮಾಡಿದ ಮತ್ತೊಂದು ಪ್ರಯತ್ನವೆಂದರೆ, ಕೇವಲ ಆಡಳಿತ ಪಕ್ಷವನ್ನು ಗುರಿ ಮಾಡಿದ್ದಲ್ಲದೇ, ವಿರೋಧ ಪಕ್ಷಗಳ ಸಭೆ ಕರೆದು ಅವರ ನಿಲುವನ್ನು ಸ್ಪಷ್ಟಮಾಡಲು ಆಗ್ರಹಿಸಲಾಯಿತು. ಅಂತಿಮವಾಗಿ ಅವರುಗಳು ನ.೩೦ರಂದು ಬಂದು ವೇದಿಕೆಯ ಮೇಲೆಯೇ ತಮ್ಮ ನಿಲುವನ್ನು ಬಹಿರಂಗಪಡಿಸಬೇಕಾಯಿತು.

ವಿರೋಧ ಪಕ್ಷಗಳ ನಾಯಕರುಗಳು ರೈತರ ಪ್ರಮುಖ ಹಕ್ಕೊತ್ತಾಯಗಳ ಮೇಲೆ ಕೇಂದ್ರೀಕರಿಸದೇ ಮೋದಿ ಸರ್ಕಾರವನ್ನು ಬಯ್ಯುವುದರಲ್ಲೇ ಕಾಲ ಕಳೆದರು ಮತ್ತು ಇದು ರೈತ ಸಂಘಟನೆಗಳು ಶ್ರಮದಿಂದ ಸಂಘಟಿಸಿದ ಘನತೆಯುಳ್ಳ ಹೋರಾಟವೆಂಬುದನ್ನು ಮರೆತು, ತಮ್ಮ ‘ಮಹಾಘಟಬಂಧನ್’ ರ‍್ಯಾಲಿಯೇನೋ ಎಂಬಂತೆ ಕೈ ಮೇಲೆತ್ತಿ ಹಿಡಿದು ನಿಂತರು! ಇವೇ ಪಕ್ಷಗಳು (ಶರದ್‌ಪವಾರ್‌ರಂತಹ ವ್ಯಕ್ತಿ ವೇದಿಕೆಯ ಮೇಲೆ ರೈತ ಪರವಾಗಿ ಮಾತಾಡುವುದನ್ನು ನೋಡುವುದು ಕಷ್ಟವಾಗುತ್ತಿತ್ತು) ತಮ್ಮ ಅವಧಿಯಲ್ಲಾದ ಸಮಸ್ಯೆಗಳ ಕುರಿತ ಕನಿಷ್ಠ ಆತ್ಮಾವಲೋಕನವನ್ನೂ ಮಾಡಿಕೊಳ್ಳಲಿಲ್ಲ. ಯುಪಿಎ ಅವಧಿಯಲ್ಲಿ ಸಾಲಮನ್ನಾ ಮಾಡಿದುದರ ಕುರಿತು ರಾಹುಲ್‌ಗಾಂಧಿ ಮಾತನಾಡಿದರಾದರೂ, ಸ್ವಾಮಿನಾಥನ್ ಆಯೋಗದ ಶಿಫಾರಸ್ಸನ್ನು ತಾವೇಕೆ ಜಾರಿ ಮಾಡಲಿಲ್ಲ ಎಂಬುದರ ಕುರಿತು ಹೇಳಲಿಲ್ಲ.

ಇಂತಹ ಕೆಲವು ಸಂಗತಿಗಳ ಹೊರತಾಗಿ ದೆಹಲಿಯ ರೈತ ಹೋರಾಟವು ಈ ಸಂದರ್ಭದ ಅತ್ಯಂತ ಮಹತ್ವದ ವಿದ್ಯಮಾನಗಳಲ್ಲೊಂದಾಗಿದೆ. ಇದರ ಆಧಾರದ ಮೇಲೆಯೇ ದೇಶಾದ್ಯಂತ ರೈತರು ಮತ ಚಲಾಯಿಸುತ್ತಾರೆಂದೇನೂ ಹೇಳಲಾಗದು. ಆದರೆ, ಮೋದಿ ಸರ್ಕಾರದ ಅತ್ಯಂತ ಕರಾಳ ರೈತವಿರೋಧಿ ನೀತಿಗಳನ್ನು ದೇಶದ ರೈತರು ಒಪ್ಪಿಲ್ಲವೆಂದು ಈ ಹೋರಾಟವು ದೇಶಕ್ಕೆ ತೋರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...