Homeಅಂಕಣಗಳುಸಂಪಾದಕೀಯ: ಕಿಸಾನ್ ಮುಕ್ತಿ ಮಾರ್ಚ್ ಆಂದೋಲನದ ಪಾಠಗಳು

ಸಂಪಾದಕೀಯ: ಕಿಸಾನ್ ಮುಕ್ತಿ ಮಾರ್ಚ್ ಆಂದೋಲನದ ಪಾಠಗಳು

- Advertisement -
- Advertisement -

ನವೆಂಬರ್ 30ರಂದು ದೆಹಲಿಯಲ್ಲಿ ನಡೆಯಲಿರುವ ರೈತ ಹೋರಾಟದ ಕುರಿತು ಕಳೆದ ವಾರವೇ ಪತ್ರಿಕೆಯಲ್ಲಿ ಕಾದಂಬಿನಿಯವರು ಬರೆದಿದ್ದರು. ಅದೀಗ ಮುಗಿದಿದೆ. ಆ ಹೋರಾಟ ನಡೆಯಲು 4-5 ದಿನಗಳಿರುವವರೆಗೂ ಏನೂ ಮಾತಾಡದಿದ್ದ ದೊಡ್ಡ ಮಾಧ್ಯಮಗಳೂ ತಿರುಗಿ ನೋಡುವಂತೆ, ಇದು ದೇಶದೆಲ್ಲೆಡೆ ಸದ್ದು ಮಾಡಿದೆ. ನಮ್ಮ ಪತ್ರಿಕಾ ತಂಡವೂ ಇದರ ಬಗ್ಗೆ ಕುತೂಹಲದಿಂದ ಎದುರು ನೋಡುತ್ತಿತ್ತು ಮತ್ತು ನಮ್ಮ ಬಳಗದ ಹಲವರು ಖುದ್ದಾಗಿ ಭಾಗವಹಿಸಿದ್ದರು. ಅವರಿಂದ ನೇರವಾಗಿ ತಿಳಿದುಕೊಂಡ ಕೆಲವು ಅಂಶಗಳು ಆಸಕ್ತಿದಾಯಕವಾಗಿವೆ. ದೊಡ್ಡ ಹೋರಾಟಗಳಿಲ್ಲ ಎಂಬ ಭಾವನೆ ಸ್ಥಿರಗೊಂಡಿರುವ ಸಂದರ್ಭದಲ್ಲಿ ಈ ಪ್ರಯೋಗವು ಕೆಲವು ಸಂಗತಿಗಳನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಆ ಕಾಲಕ್ಕೆ ತಕ್ಕುನಾದ ರೀತಿಯಲ್ಲಿ ಕಟ್ಟುವ ಹೋರಾಟದಿಂದ ಇರುವ ಸ್ಥಗಿತ ಪರಿಸ್ಥಿತಿಯಲ್ಲಿ ಬದಲಾವಣೆ ತರಲು ಸಾಧ್ಯ ಎಂಬುದು ಬಹಳ ಮುಖ್ಯವಾದ ಸಂಗತಿ.

ಹಲವರ ಅನಿಸಿಕೆಗಳಿಗೆ ವಿರುದ್ಧ ರೀತಿಯಲ್ಲಿ, ಈ ದೆಹಲಿ ಹೋರಾಟವು ಇದ್ದಕ್ಕಿದ್ದಂತೆ ಆರಂಭವಾದ ಒಂದು ದಿನದ ಪ್ರತಿಭಟನೆಯಲ್ಲ. ಅದು ಸುಮಾರು ಒಂದೂವರೆ ವರ್ಷಗಳ ಪ್ರಕ್ರಿಯೆ. ಅದರಲ್ಲೂ ಮಧ್ಯಪ್ರದೇಶದ ಮಂಡಸೂರಿನಲ್ಲಿ ಆದ ಗೋಲೀಬಾರ್ ಸಂದರ್ಭದಲ್ಲಿ ಅಲ್ಲಿಗೆ ಹೋಗಿ ಭೇಟಿಯಿತ್ತು ಹೋರಾಟದಲ್ಲಿ ಭಾಗಿಯಾದ ಸಂಘಟನೆಗಳು ಸಂಕಲ್ಪ ತೊಟ್ಟಂದಿನಿಂದ ಇದು ಆರಂಭವಾಯಿತು. ಅಲ್ಲಿಂದ ಇಲ್ಲಿಯವರೆಗೆ ಅತ್ಯಂತ ವ್ಯವಸ್ಥಿತವಾದ ರೀತಿಯಲ್ಲಿ ಹಂತ ಹಂತವಾಗಿ ಬೆಳೆದು ಬಂದ ಈ ಆಂದೋಲನದ ಕುರಿತು ಯಾರೂ ಬೆರಳು ಮಾಡಿ ತೋರಿಸಲಾಗದಂತೆ ಗಟ್ಟಿ ನೆಲೆಯಲ್ಲಿ ಅದನ್ನು ಕಟ್ಟಲಾಯಿತು.

ಸ್ವರಾಜ್ ಅಭಿಯಾನದ ಭಾಗವಾಗಿರುವ ಜೈಕಿಸಾನ್ ಆಂದೋಲನದವರು ಈ ಪ್ರಕ್ರಿಯೆಯನ್ನು ಆರಂಭಿಸಿದರಾದರೂ, ಬಹುಬೇಗನೇ ಸುಮಾರು ನೂರಕ್ಕೂ ಹೆಚ್ಚು ರೈತ ಸಂಘಟನೆಗಳು ಒಟ್ಟಾದವು. ಸಮಿತಿಗಳು ರಚನೆಯಾಗುವ ಹೊತ್ತಿಗೆ ಅದರ ಸಂಖ್ಯೆ 175 ಮುಟ್ಟಿತ್ತು. ಅಂತಿಮವಾಗಿ ಸುಮಾರು 200 ಸಂಘಟನೆಗಳು ಜೊತೆಯಾಗಿದ್ದವು. ಸಾಂಪ್ರದಾಯಿಕ ರೈತ ಸಂಘಟನೆಗಳಲ್ಲದೇ, ಎಡಪಕ್ಷಗಳ ಜೊತೆಗಿರುವ ರೈತ, ಕೃಷಿಕಾರ್ಮಿಕ ಸಂಘಟನೆಗಳೂ ಇದರ ಭಾಗವಾದವು.

ರೈತರ ನೂರಾರು ಸಮಸ್ಯೆಗಳ ಕೇಂದ್ರದಲ್ಲಿರುವ ಎರಡು ಅಂಶಗಳನ್ನು ಪಟ್ಟಿ ಮಾಡಲಾಯಿತು. ಇದುವರೆಗಿನ ಬಿಕ್ಕಟ್ಟಿನ ಕಾರಣದಿಂದ ಸಂಚಯಿತವಾಗಿರುವ ಸಾಲಮನ್ನಾ, ಮುಂದೆ ಸಾಲ ಮಾಡದಂತಹ, ಲಾಭ ಕಾಣಲು ಸಾಧ್ಯವಾಗುವಂತೆ ಎಲ್ಲಾ ಬೆಳೆಗಳಿಗೂ ಲಾಭದಾಯಕವಾದ ಬೆಲೆ ಖಾತರಿ. ಇದನ್ನು ಮೇಲ್ನೋಟದ ಘೋಷಣೆಯಾಗಿಯಷ್ಟೇ ಅಲ್ಲದೇ, ಕಾಯ್ದೆ ಬದ್ಧವಾಗಿ ಇವು ಸರಿಯಾಗಿ ಜಾರಿಗೊಳ್ಳಲು ಋಣ ಮುಕ್ತ ಕಾಯ್ದೆ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸ್ಸಾಗಿರುವ ಸಿ 2 + 50% ಬೆಲೆಗಿಂತ ಕಡಿಮೆ ಮಾರಾಟವಾಗದಂತೆ ತಡೆದು ಬೆಂಬಲ ಬೆಲೆಯನ್ನು ಖಾತರಿಗೊಳಿಸುವ ಕಾಯ್ದೆ ಜಾರಿಗೆ ಬರಬೇಕೆಂಬುದು ಪ್ರಮುಖ ಒತ್ತಾಯವಾಗಿತ್ತು.

ಇದಕ್ಕಾಗಿ ತಜ್ಞರ ತಂಡಗಳು ರೂಪುಗೊಂಡವು ಮತ್ತು ಅವರು ಆ ಕಾಯ್ದೆಯ ಕರಡುಗಳನ್ನೂ ರೂಪಿಸಿಕೊಟ್ಟರು. ಈ ಹೊತ್ತಿಗೆ ಇದರ ಸಕ್ರಿಯ ಸಹಭಾಗಿಗಳಾಗಿದ್ದ ಮಹಾರಾಷ್ಟ್ರದ ರೈತ ಸಂಘಟನೆಯ ನಾಯಕ ಮತ್ತು ಲೋಕಸಭಾ ಸದಸ್ಯ ರಾಜುಶೆಟ್ಟಿ ಮತ್ತು ಸಿಪಿಎಂನ ರಾಜ್ಯಸಭಾ ಸದಸ್ಯ ರಾಜೇಶ್ ಅವರುಗಳು ತಮ್ಮ ಸದನಗಳ ಮುಖ್ಯಸ್ಥರಿಗೆ ಖಾಸಗಿ ಮಸೂದೆಗಳಾಗಿ ಇವನ್ನು ಸಲ್ಲಿಸಿಯೂ ಬಿಟ್ಟರು. ಆದರೆ, ಮೋದಿ ಸರ್ಕಾರವು ಈ ಸಾರಿ ಬಜೆಟ್‌ನಲ್ಲಿ ಉತ್ಪಾದನಾ ವೆಚ್ಚದ ಮೇಲೆ 50­%ನಷ್ಟು ಲಾಭದಾಯಕ ಬೆಲೆಯನ್ನು ಖಾತರಿಗೊಳಿಸುವುದಾಗಿ ಬುರುಡೆ ಬಿಟ್ಟಿದ್ದರು. ಸ್ವರಾಜ್ ಅಭಿಯಾನವು ಇದನ್ನೊಂದು ಸವಾಲಾಗಿ ಸ್ವೀಕರಿಸಿ, ಈಗಾಗಲೇ ಘೋಷಿಸಲಾಗಿರುವ ಕನಿಷ್ಠ ಬೆಂಬಲ ಬೆಲೆಯೂ ಹೇಗೆ ನೂರಕ್ಕೆ 95 ಎಪಿಎಂಸಿ ಮಂಡಿಗಳಲ್ಲಿ ಲಭ್ಯವಿಲ್ಲ ಎಂಬುದನ್ನು ತನಿಖೆ/ಸಮೀಕ್ಷೆಯ ಮೂಲಕ ಸಾಬೀತುಪಡಿಸಿತು.

ಹಾಗೆಯೇ ರೈತರು ಮತ್ತು ಕೃಷಿಯ ವಿಚಾರದಲ್ಲಿ ಮೋದಿ ಸರ್ಕಾರ ಹೇಳಿದ್ದೇನು, ಮಾಡಿದ್ದೇನು ಎಂಬುದನ್ನು ದಾಖಲೆಗಳೊಂದಿಗೆ ವಿವರಿಸುವ ಪುಸ್ತಕವನ್ನು ತಂದರು. ದೀರ್ಘವಾಗಿ ಓದಲು ಸಾಧ್ಯವಾಗದವರಿಗೆ ಜೇಬಿನಲ್ಲಿಟ್ಟುಕೊಳ್ಳಬಹುದಾದ ಪುಸ್ತಕವನ್ನೂ ಹೊರತಂದರು.

ಎಡಪಕ್ಷಗಳು ಮತ್ತು ರೈತ ಸಂಘಟನೆಗಳು ಈ ರೀತಿಯಲ್ಲಿ ಒಂದಾಗಿ ಕೆಲಸ ಮಾಡಿ ಒಂದು ತಕ್ಷಣದ ಗುರಿ ಮುಟ್ಟಲು ದುಡಿದ ಉದಾಹರಣೆಗಳು ಹೆಚ್ಚಿಲ್ಲ. ಆದರೆ, ಈ ಸಾರಿ ಅದು ಸಾಧ್ಯವಾಯಿತು. ಮಹಾರಾಷ್ಟ್ರ, ರಾಜಸ್ತಾನ, ಉತ್ತರಖಂಡ್‌ಗಳಲ್ಲಿ ಭಾರೀ ಬೃಹತ್ ಪ್ರಮಾಣದ ಕಾಲ್ನಡಿಗೆಗಳನ್ನು ಆಯೋಜಿಸಿದ್ದ ಎಡಪಕ್ಷಗಳು ಈ ಸಮಿತಿಯ ಜೊತೆಗೂ ಸಕ್ರಿಯವಾಗಿ ಕೆಲಸ ಮಾಡಿದವು. ವಿಜು ಕೃಷ್ಣನ್‌ರಂತಹ ಯುವ ನಾಯಕರು ಅದರ ನಾಯಕತ್ವ ವಹಿಸಿದ್ದರಿಂದಾಗಿಯೂ ಇದು ಸಾಧ್ಯವಾಗಿರಬಹುದು. ಆದರೆ, ಸಾಧ್ಯವಾಗಿದ್ದು ವಾಸ್ತವ.

ವಿವಿಧ ಧಾರೆಗಳ ಕನಿಷ್ಠ 25 ಸಂಘಟನೆಗಳನ್ನೂ ಒಂದೆಡೆ ಸೇರಿಸಿ ನಿರಂತರವಾಗಿ ಕೆಲಸ ಮಾಡುವುದು ಸುಲಭವಲ್ಲವೆಂಬುದು ಅದರಲ್ಲಿ ತೊಡಗಿಕೊಂಡಿರುವ ಯಾರಿಗೇ ಆಗಲಿ ಗೊತ್ತಿರುತ್ತದೆ. ಅಂತಹ ಕಷ್ಟದ ಕೆಲಸವನ್ನು ಸಾಧ್ಯವಾಗಿಸಿಕೊಂಡ ಎಲ್ಲರೂ ಅಭಿನಂದನಾರ್ಹರು. ಹಾಗೆಂದು ಇದರಲ್ಲಿ ಸಮಸ್ಯೆಗಳಿರುವುದಿಲ್ಲವೆಂದೇನಲ್ಲ. ನೂರೆಂಟು ಬಗೆಯ ಕಿತ್ತಾಟಗಳು ಇದರಲ್ಲಿ ಸಹಜವಾಗಿಯೇ ಇರುತ್ತವೆ. ಅವೆಲ್ಲವನ್ನೂ ಹೊರಗೆ ಬರದೇ ನಿಭಾಯಿಸಿದ ಜಾಣ್ಮೆಗೆ ‘ಅಖಿಲ ಭಾರತ ರೈತ ಹೋರಾಟ ಸಮನ್ವಯ ಸಮಿತಿ’ಯ ನಾಯಕತ್ವವನ್ನು ಅಭಿನಂದಿಸಲೇಬೇಕು.

ರೈತರ ಹೋರಾಟಕ್ಕೆ ಇತರ ಸಮುದಾಯಗಳ ಬೆಂಬಲವನ್ನು ಸಂಘಟಿಸಿದ್ದು ಇನ್ನೊಂದು ಜಾಣ್ಮೆಯ ನಡೆ. ಕರ್ನಾಟಕದಲ್ಲೂ ಸಿಪಿಎಂ ಪಕ್ಷದ ಮುತುವರ್ಜಿಯಿಂದ ಅದು ನಡೆದದ್ದನ್ನು ಎಲ್ಲರೂ ಗಮನಿಸಿರಬಹುದು. ದೆಹಲಿಯಲ್ಲಿ ನೇಷನ್ ಫಾರ್ ಫಾiರ‍್ಸ್, ಡಿಯು ಫಾರ್ ಫಾರ್ಮರ್ಸ್, ವಕೀಲರು, ಪತ್ರಕರ್ತರು, ವೈದ್ಯರು ಇತ್ಯಾದಿ ಪ್ರಯತ್ನಗಳು ನಡೆದವು. ಇಷ್ಟೇ ಪ್ರಮುಖವಾಗಿ ಮಾಡಿದ ಮತ್ತೊಂದು ಪ್ರಯತ್ನವೆಂದರೆ, ಕೇವಲ ಆಡಳಿತ ಪಕ್ಷವನ್ನು ಗುರಿ ಮಾಡಿದ್ದಲ್ಲದೇ, ವಿರೋಧ ಪಕ್ಷಗಳ ಸಭೆ ಕರೆದು ಅವರ ನಿಲುವನ್ನು ಸ್ಪಷ್ಟಮಾಡಲು ಆಗ್ರಹಿಸಲಾಯಿತು. ಅಂತಿಮವಾಗಿ ಅವರುಗಳು ನ.೩೦ರಂದು ಬಂದು ವೇದಿಕೆಯ ಮೇಲೆಯೇ ತಮ್ಮ ನಿಲುವನ್ನು ಬಹಿರಂಗಪಡಿಸಬೇಕಾಯಿತು.

ವಿರೋಧ ಪಕ್ಷಗಳ ನಾಯಕರುಗಳು ರೈತರ ಪ್ರಮುಖ ಹಕ್ಕೊತ್ತಾಯಗಳ ಮೇಲೆ ಕೇಂದ್ರೀಕರಿಸದೇ ಮೋದಿ ಸರ್ಕಾರವನ್ನು ಬಯ್ಯುವುದರಲ್ಲೇ ಕಾಲ ಕಳೆದರು ಮತ್ತು ಇದು ರೈತ ಸಂಘಟನೆಗಳು ಶ್ರಮದಿಂದ ಸಂಘಟಿಸಿದ ಘನತೆಯುಳ್ಳ ಹೋರಾಟವೆಂಬುದನ್ನು ಮರೆತು, ತಮ್ಮ ‘ಮಹಾಘಟಬಂಧನ್’ ರ‍್ಯಾಲಿಯೇನೋ ಎಂಬಂತೆ ಕೈ ಮೇಲೆತ್ತಿ ಹಿಡಿದು ನಿಂತರು! ಇವೇ ಪಕ್ಷಗಳು (ಶರದ್‌ಪವಾರ್‌ರಂತಹ ವ್ಯಕ್ತಿ ವೇದಿಕೆಯ ಮೇಲೆ ರೈತ ಪರವಾಗಿ ಮಾತಾಡುವುದನ್ನು ನೋಡುವುದು ಕಷ್ಟವಾಗುತ್ತಿತ್ತು) ತಮ್ಮ ಅವಧಿಯಲ್ಲಾದ ಸಮಸ್ಯೆಗಳ ಕುರಿತ ಕನಿಷ್ಠ ಆತ್ಮಾವಲೋಕನವನ್ನೂ ಮಾಡಿಕೊಳ್ಳಲಿಲ್ಲ. ಯುಪಿಎ ಅವಧಿಯಲ್ಲಿ ಸಾಲಮನ್ನಾ ಮಾಡಿದುದರ ಕುರಿತು ರಾಹುಲ್‌ಗಾಂಧಿ ಮಾತನಾಡಿದರಾದರೂ, ಸ್ವಾಮಿನಾಥನ್ ಆಯೋಗದ ಶಿಫಾರಸ್ಸನ್ನು ತಾವೇಕೆ ಜಾರಿ ಮಾಡಲಿಲ್ಲ ಎಂಬುದರ ಕುರಿತು ಹೇಳಲಿಲ್ಲ.

ಇಂತಹ ಕೆಲವು ಸಂಗತಿಗಳ ಹೊರತಾಗಿ ದೆಹಲಿಯ ರೈತ ಹೋರಾಟವು ಈ ಸಂದರ್ಭದ ಅತ್ಯಂತ ಮಹತ್ವದ ವಿದ್ಯಮಾನಗಳಲ್ಲೊಂದಾಗಿದೆ. ಇದರ ಆಧಾರದ ಮೇಲೆಯೇ ದೇಶಾದ್ಯಂತ ರೈತರು ಮತ ಚಲಾಯಿಸುತ್ತಾರೆಂದೇನೂ ಹೇಳಲಾಗದು. ಆದರೆ, ಮೋದಿ ಸರ್ಕಾರದ ಅತ್ಯಂತ ಕರಾಳ ರೈತವಿರೋಧಿ ನೀತಿಗಳನ್ನು ದೇಶದ ರೈತರು ಒಪ್ಪಿಲ್ಲವೆಂದು ಈ ಹೋರಾಟವು ದೇಶಕ್ಕೆ ತೋರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...