Homeಮುಖಪುಟಸಕ್ಕರೆ ದಾಹಕ್ಕೆ ಕಾರ್ಮಿಕರಿಗೇ ಬೆಂಕಿಯಿಟ್ಟ ನಿರಾಣಿ!

ಸಕ್ಕರೆ ದಾಹಕ್ಕೆ ಕಾರ್ಮಿಕರಿಗೇ ಬೆಂಕಿಯಿಟ್ಟ ನಿರಾಣಿ!

- Advertisement -
- Advertisement -

 ಮಹಾಲಿಂಗಪ್ಪ ಆಲಬಾಳ |

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ ಹೊಂದಿಕೊಂಡಿರುವ ಬಿಜೆಪಿಯ ಮಾಜಿ ಮಂತ್ರಿ ಹಾಲಿ ಬೀಳಗಿಯ ಶಾಸಕ ಮುರುಗೇಶ್ ನಿರಾಣಿ ಒಡೆತನದ ನಿರಾಣಿ ಶುಗರ್ಸ್ ಕಾರ್ಖಾನೆಯಲ್ಲಿ ನಡೆದ ದುರಂತದಲ್ಲಿ ಹಲವಾರು ಅಮಾಯಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಖಾನೆಯ ಮಾಲೀಕರು ಮತ್ತು ಸರಕಾರದ ಅಧಿಕಾರಿಗಳು ನಾಲ್ಕು ಜನ ಕಾರ್ಮಿಕರು ಸಾವಿಗೀಡಾಗಿ ಮೂರು ಜನ ತೀವ್ರವಾಗಿ ಗಾಯಗೊಂಡಿದ್ದಾರೆಂದು ಹೇಳುತ್ತಿದ್ದರಾದರೂ ಅಲ್ಲಿನ ದುರಂತದ ತೀವ್ರತೆ ಈ ಅಂಕಿಸಂಖ್ಯೆಗಳ ಬಗ್ಗೆಯೇ ಸಂಶಯ ಮೂಡುವಂತೆ ಮಾಡಿದೆ.
ವಾಸ್ತವದಲ್ಲಿ ಇದು ಮುರುಗೇಶ ನಿರಾಣಿಯ ಹಪಾಹಪಿ ಮತ್ತು ನಿರ್ಲಕ್ಷತನ ಪರಿಣಾಮ. ಅಂದು ಎಂದಿನಂತೆ ಕಾರ್ಖಾನೆ ನೂರಾರು ಕಾರ್ಮಿಕರು ಮತ್ತು ರೈತರಿಂದ ತುಂಬಿಹೋಗಿದೆ. ಕಾರ್ಖಾನೆಯಿಂದ ಸುಮಾರು 300 ಮೀಟರ್ ಅಂತರದಲ್ಲಿ ಸ್ಪಿರಿಟ್ ತಯಾರಿಸುವ ಘಟಕ ಇದೆ. ಸಕ್ಕರೆ ತಯಾರಿಸುವಾಗ ಹೊರಬರುವ ಮೊಲ್ಯಾಸಿಸ್ ಎಂಬ ಕಚ್ಚಾವಸ್ತುವಿನಿಂದ ಸ್ಪಿರಿಟ್ ತಯಾರಿಸುವ ಘಟಕ ಇದೆ. ಈ ಸ್ಪಿರಿಟ್ ಅನ್ನು ಸರಾಯಿ ತಯಾರಿಕೆಗೆ ಬಳಸಲಾಗುತ್ತದೆ.
ಈ ಸ್ಪಿರಿಟ್ ತಯಾರಿಕೆಯ ನಂತರ ಅದನ್ನು ನೀರಿನಿಂದ ಶುದ್ಧಿಕರಿಸಿ ಮತ್ತೇ ಅದೇ ನೀರನ್ನು ಮರುಬಳಕೆ ಮಾಡಲಾಗುತ್ತದೆ. ಈ ಸ್ಪಿರಿಟ್‍ನ್ನು ಶುದ್ಧಿಕರಿಸಿದ ನೀರಿನಲ್ಲಿ ಮಿಥೇನ್ ಅಂಶ ಉಳಿದಿರುತ್ತದೆ. ಈ ಮಿಥೇನ್‍ಅನ್ನು ಪ್ರತ್ಯೇಕಗೊಳಿಸಿ ಅದನ್ನು ವಿದ್ಯುತ್ ತಯಾರಿಕೆಗೆ ಬಳಸುವ ಘಟಕವೊಂದು ಸಮೀಪದಲ್ಲಿದೆ. ಅಂದು 16ರ ಮಧ್ಯಾಹ್ನ 12 ಗಂಟೆಗೆ ಈ ಮಿಥೇನ್‍ನ್ನು ಪ್ರತ್ಯೇಕಿಸುವ ಘಟಕದಲ್ಲಿನ ಬಾಯ್ಲರ್ ಸ್ಪೋಟಗೊಂಡಿದೆ. ಈ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಇಡೀ ಮೂರಂತಸ್ತಿನ ಕಟ್ಟಡ ನೆಲಸಮವಾಗಿ ಅದರ ಅವಶೇಷಗಳು ನೂರಾರು ಮೀಟರ್ ದೂರದವರೆಗೂ ಚದುರಿಹೋಗಿವೆ. ಸ್ಫೋಟದ ಶಬ್ದ ಕಿಲೋ ಮೀಟರ್‍ವರೆಗೂ ಕೇಳಿ ಅಕ್ಕ-ಪಕ್ಕದ ಹಳ್ಳಿಗಳ ನೆಲ ನಡುಗಿದ ಅನುಭವವಾಗಿದೆ. ಇವರು ಹೇಳುವ ಪ್ರಕಾರ ಅಂಥ ದೊಡ್ಡ ಘಟಕ ಕೇವಲ ಏಳುಜನ ಕಾರ್ಮಿಕರಿಂದ ನಡೆಯಲು ಸಾಧ್ಯವಿಲ್ಲ. ಅಲ್ಲಿನ ಪರಿಸ್ಥಿತಿ ಗಮನಿಸಿದರೆ ಅದರಲ್ಲಿರುವವರ್ಯಾರೂ ಬದುಕಿ ಉಳಿದಿರುವ ಸಾಧ್ಯತೆಗಳೇ ಇಲ್ಲ.
ಹಾಗೆ ನೋಡಿದರೆ ಈ ಮುರುಗೇಶ ನಿರಾಣಿಯ ಎಡವಟ್ಟುಗಳು ಒಂದೆರಡಲ್ಲ ಈತನ ಶ್ರೀಮಂತಿಕೆಯ ದಾಹಕ್ಕೆ ಬಲಿಯಾಗಿ ಬದುಕು ಕಳೆದುಕೊಂಡವರ ಸಂಖ್ಯೆ ಬಹಳ ದೊಡ್ಡದಿದೆ.
ಮೂಲತಃ ಬೀಳಗಿ ತಾಲ್ಲೂಕಿನ ಇನಾಮ ಹಂಚನಾಳ ಗ್ರಾಮದ ರುದ್ರಪ್ಪ ಎಂಬುವವರಿಗೆ ಮುರುಗೇಶ ನಿರಾಣಿ ಸೇರಿದಂತೆ ಐದುಜನ ಮಕ್ಕಳು ಸುಮಾರು 100 ಎಕರೆಯಷ್ಟು ಜಮೀನು ಹೊಂದಿದ್ದ ಈ ರುದ್ರಪ್ಪ ಈ ಭಾಗದ ಕುಖ್ಯಾತ “ಬಡ್ಡಿಕುಳ” ಜನರ ಕಪ್ಪಕ್ಕೆ ಹಣ ನೀಡಿ ದೊಡ್ಡಮಟ್ಟದ ಬಡ್ಡಿ ಸುಲುಗೆ ಮಾಡುವ ಈ ಹಣದ ಹಪಾಹಪಿ ಮಕ್ಕಳಿಗೂ ಬಳುವಳಿಯಾಗಿ ಬಂದಿದೆ. ಡಿಪ್ಲೊಮಾ ಪದವಿ ಪಡೆದು ಬಂದ ಮುರುಗೇಶ ನಿರಾಣಿ ಆರಂಭದಲ್ಲಿ ತೊಡಗಿಸಿ ಕೊಂಡದ್ದು ಟ್ರ್ಯಾಕ್ಟರ್ ಟ್ರೇಲರ್ ತಯಾರಿಕೆ ದಂಧೆಯಲ್ಲಿ ಎಂಆರ್‍ಎನ್ ಹೆಸರಿನ ಟ್ರೇಲರ್ ತಯಾರಿಸಿ ರೈತರಿಗೆ ಮಾರುತ್ತ ಒಂದಷ್ಟು ಹಣ ಕೂಡಿದ ಮೇಲೆ ಕೈ ಹಾಕಿದ್ದು ಈ ಸಕ್ಕರೆ ಉದ್ಯಮಕ್ಕೆ ಶ್ರೀಕಾಂತ ಬಾಹೋತಿ ಎಂಬ ಮಹಾರಾಷ್ಟ್ರದ ವ್ಯಾಪಾರಿಯೊಬ್ಬನನ್ನು ಪಾಲುದಾರಿಕೆಗೆ ಒಪ್ಪಿಸಿ ಮುಧೋಳ ನಗರದ ಸಮೀಪ ತನ್ನ ಚಿಕ್ಕಪ್ಪನ ಮಗ ಶಿವಪ್ಪ ಅವರಿಗೆ ಸೇರಿದ್ದ ಜಮೀನಿನಲ್ಲಿ ಸಣ್ಣದೊಂದು ಕಚ್ಚಾ ಸಕ್ಕರೆ ತಯಾರಿಕೆ ಘಟಕವನ್ನು ಪಾಲುದಾರಿಕೆಯಲ್ಲಿ ಶುರುಮಾಡಿದ ಮೊದಲಿನಿಂದಲೂ ಬಿಜೆಪಿ ಸಂಘಪರಿವಾರ ಅಂತ ಓಡಾಡಿಕೊಂಡಿದ್ದ ಈತ 2004ರಲ್ಲಿ ಬೀಳಗಿ ಕ್ಷೇತ್ರದಿಂದ ಎಂಎಲ್‍ಎ ಆಗಿಬಿಟ್ಟ. ಅಧಿಕಾರ ಸಿಕ್ಕಿದ್ದೇ ತಡ ಪಾಲುದಾರ ಬಾಹೇತಿಯನ್ನು ಕೊಡಬಾರದ ಕಿರುಕುಳ ಕೊಟ್ಟು ಹೊರಹಾಕಿ ಕಾರ್ಖಾನೆಯನ್ನು ಸ್ವಂತ ಮಾಡಿಕೊಂಡು ನಂತರ ರಾಜಕೀಯದಲ್ಲಿ ನುಂಗಿದ್ದನೆಲ್ಲ ಅದಕ್ಕೆ ಸುರಿದು ವಿಸ್ತರಣೆ ಮಾಡುತ್ತ ಹೋದ,. 2008ರಲ್ಲಿ ಮತ್ತೊಮ್ಮೆ ಗೆದ್ದು ಯಡಿಯೂರಪ್ಪ ಸಂಪುಟದಲ್ಲಿ ಭಾರಿ ಕೈಗಾರಿಕಾ ಸಚಿವನಾಗಿದದ್ದೇ ಈತನ ಕುಟುಂಬದ ಖದರ್ರೇ ಬದಲಾಗಿಹೋಯಿತು. ಹಣದ ಹೊಳೆ ಹರಿದು ಬರಲಾರಂಭಿಸಿತು. ಒಂದರತ್ತೆಲ್ಲ ಕಾರ್ಖಾನೆ ದೇಶದ ಅತೀ ದೊಡ್ಡ ಕಾರ್ಖಾನೆಗಳ ಸಾಲಿಗೆ ಬಂದು ನಿಂತಿದ್ದಲ್ಲದೆ, ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಸಾಂಬಿಪ್ರಿಯಾ ಶುಗರ್ಸ್, ಬದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಬಳಿ ಸಂಗಮೇಶ ಶುಗರ್ಸ್, ಸಿಮೆಂಟ್ ಕಾರ್ಖಾನೆ ಹೀಗೆ ಹಲವಾರು ಕಾರ್ಖಾನೆಗಳು ತಲೆಎತ್ತಿ ನಿಂತವು.
ಹೀಗೆ ನೋಡನೋಡುತ್ತಿದ್ದಂತೆ ಕೆಲವೇ ವರ್ಷಗಳಲ್ಲಿ ಜಿಲ್ಲೆಯ ಸಕ್ಕರೆ ಸಾಮ್ರಾಜ್ಯವನ್ನೇ ನಿಯಂತ್ರಿಸುವ ಮಟ್ಟಕ್ಕೆ ಬೆಳೆದು ನಿಂತ ಮುರುಗೇಶ ನಿರಾಣಿಯ ಹಸಿವು ಮಾತ್ರ ತಣಿಸಲೇ ಇಲ್ಲ. ಮಾಡಬಾರದ ಕೆಲಸಗಳು, ಹಿಡಿಯಬಾರದ ಅಡ್ಡದಾರಿಗಳನ್ನೆಲ್ಲ ಹಿಡಿದು ಜನರನ್ನು ಪೀಡಿಸತೊಡಗಿದ, ರೈತರನ್ನು ಮೋಸಗೊಳಿಸತೊಡಗಿದ ಎಂಬ ಪ್ರಾಮಾಣಿಕ ರೈತ ನಾಯಕನ ನೇತೃತ್ವದಲ್ಲಿ ಆರಂಭವಾದ ಈತನ ಅನಾವಾರಗಳ ವಿರುದ್ಧದ ಹೋರಾಟ ಎಷ್ಟು ತೀವ್ರವಾಗಿತ್ತೆಂದರೆ ಈ ಕಾರ್ಖಾನೆ ನಡೆಯುವುದೇ ದುಸ್ತರವಾಯಿತು.
ಕಾರ್ಖಾನೆಯಿಂದಾಗುವ ಪರಿಸರ ಮಾಲಿನ್ಯ ರೈತರ ಕಬ್ಬು ತೂಕದಲ್ಲಿನ ಮೋಸ, ಕಾರ್ಮಿಕರ ಕೆಲಸದ ಒತ್ತಡ, ಕಬ್ಬಿನ ಬೆಲೆ, ಈತನ ಗೂಂಡಾಗಿರಿ ಎಲ್ಲದರ ವಿರುದ್ಧ ರೈತಸಂಘ ನಿರ್ಣಾಯಕ ಹೋರಾಟ ನಡೆಸಿತ್ತು. ಆಗಲೂ ರೈತ ಮುಖಂಡರನ್ನು ಹೆಸರಿಸುವುದು, ಖರೀದಿಸುವುದು ಎಲ್ಲ ಪ್ರಯತ್ನಗಳನ್ನು ನಡೆಸಿದ್ದ ಈತ ಅದರಲ್ಲಿ ವಿಫಲನಾಗಿದ್ದ. ಆದರೆ ಈ ಭಾಗದ ರೈತರು ಜನರ ದುರದೃಷ್ಟವೆಂಬಂತೆ ರಮೇಶ್ ಗಡದನ್ನವರ ತೀರಿಹೋದರು. ಆಗ ಮತ್ತೆ ಈತನ ಅಂಧ ದರ್ಬಾರ್ ಶುರುವಾಯಿತು. ಸ್ವನತಿ ಜನರನ್ನು ಬೆನ್ನಿಗಿಟ್ಟು ಕೊಂಡು ತನ್ನನ್ನು ವಿರೋಧಿಸುವವರನ್ನೆಲ್ಲ ಹೆದರಿಸುವುದು ಕಾರ್ಖಾನೆಯ ಅಕ್ಕಪಕ್ಕದ ಜಮೀನುಗಳನ್ನೆಲ್ಲ ಪುಡಿಗಾಸಿಗೆ ಖರೀದಿಸುವುದು ಕೊಡಲು ಒಪ್ಪದವರನ್ನು ಕಿರುಕುಳ ನೀಡಿ ನೆಮ್ಮದಿಯಿಂದ ಬದುಕದಂತೆ ಮಾಡುವುದು ಇದೆಲ್ಲ ಮಾಮೂಲಿಯಾಗಿ ಹೋಯ್ತು. ಮುಧೋಳ ನಗರಕ್ಕೆ ಹೊಂದಿಕೊಂಡೇ ಇರುವುದರಿಂದ ಜಾರುವ ಬೂದಿ ಇಡೀ ನಗರ ತುಂಬ ಹರಡುತ್ತಿದ್ದರೂ ಜನ ಸಹಿಸಿಕೊಂಡು ಬದುಕುವ ಸ್ಥಿತಿ ನಿರ್ಮಾಣವಾಯಿತು.
Image result for niraniಕಳೆದ ಸಾರಿ ಬೀಳಗಿ ಕ್ಷೇತ್ರದಿಂದ ಜೆ.ಟಿ.ಪಾಟೀಲ ವಿರುದ್ಧ ಸೋತು ಹೋದಾಗ ಮುಧೋಳದ ಈ ಕಾರ್ಖಾನೆಯ ಸ್ಥಳಾಂತರದ ಬಗ್ಗೆ ಕೂಡ ಚರ್ಚೆ ನಡೆದಿತ್ತು. ಆದರೆ ಈ ಸಾರಿ ಮತ್ತೆ ಬೀಳಗಿಯಿಂದ ಶಾಸಕನಾಗಿ ಆರಿಸಿ ಬಂದ ನಂತರ ಮತ್ತೇ ಇಲ್ಲಿ ಕಾರ್ಖಾನೆಯ ವಿಸ್ತರಣೆಯನ್ನು ಆರಂಭಿಸಿದ್ದಾನೆ. ಈಗ ನಡೆದ ದುರಂತ ಕೂಡ ಹಪಾಹಪಿಗೆ ಬಿದ್ದು ಅದನ್ನು ವಿಸ್ತರಿಸುತ್ತಿರುವ ಕಾರಣಕ್ಕಾಗಿಯೇ ನಡೆದದ್ದು, ಕಡಿಮೆ ಕಾರ್ಮಿಕರನ್ನು ನೇಮಕ ಮಾಡಿಕೊಂಡು ಕೆಲಸ ತೆಗೆಯುವ ಕುತಂತ್ರದಿಂದಾಗಿ ಕಾರ್ಮಿಕರು ಜೀವ ಕಳೆದುಕೊಳ್ಳುವಂತಾಗಿದೆ. ಮಿಥೇನ್‍ನಂಥ ಸ್ಪೋಟಕ ವಸ್ತುವನ್ನು ಸಂಗ್ರಹಿಸುವ ಘಟಕದಲ್ಲಿ ಕೇವಲ ಏಳು ಜನ ಕಾರ್ಮಿಕರು ಮಾತ್ರ ಕೆಲಸ ಮಾಡುತ್ತಿದ್ದರು ಎಂದರೆ ನಂಬಲು ಸಾಧ್ಯವೇ? ಸ್ಥಳೀಯರ ಮಾಹಿತಿ ಪ್ರಕಾರ ಹೊರರಾಜ್ಯದ ಹಲವಾರು ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದು ಅವರ ಬಗ್ಗೆ ಈವರೆಗೂ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಸ್ಥಳೀಯರನ್ನು ಮಾತ್ರ ಗುರುತಿಸಿ ಹೊರರಾಜ್ಯ ಕಾರ್ಮಿಕರ ಸಾವನ್ನು ಮುಚ್ಚಿಡುತ್ತಿದ್ದಾರೆ ಎಂಬ ಗುಮಾನಿ ಕೂಡ ದಟ್ಟವಾಗಿದೆ. ಒಟ್ಟಾರೆ ಸರಿಯಾದ ತಾಂತ್ರಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳದೇ ಲಾಭ ಹೆಚ್ಚಿಸಿಕೊಳ್ಳುವ ದಾಹಕ್ಕೆ ಅಮಾಯಕ ಜೀವಗಳು ಬಲಿಯಾಗುವಂತಾಗಿದೆ.
ಆಶ್ಚರ್ಯವೆಂದರೆ ಈ ಘಟನೆಯ ಬಗ್ಗೆ ಸರಿಯಾದ ತನಿಖೆ ನಡೆಸಿ, ಮಾಹಿತಿ ಸಂಗ್ರಹಿಸಿ ಅಮಾಯಕರ ಸಾವಿಗೆ ಕಾರಣನಾದ ನಿರಾಣಿಯನ್ನು ಕಾನೂನಾತ್ಮಕವಾಗಿ ಶಿಕ್ಷೆ ಅನುಭವಿಸುವಂತೆ ಮಾಡಬೇಕಿರುವ ಜಿಲ್ಲಾಡಳಿತ, ಕಾರ್ಮಿಕರ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಈತನ ಆಣತಿಗೆ ಕುಣಿಯುತ್ತಿದ್ದಾರೆ. ಯಾವುದೇ ನಗರ ಅಥವಾ ಜನವಸತಿ ಪ್ರದೇಶದಿಂದ ಚಿಷ ಸೂಸುವ ಅಪಾಯಕಾರಿ ವಸ್ತುಗಳನ್ನು ಉತ್ಪಾದಿಸುವ, ಪರಿಸರ ಮಾಲಿನ್ಯಕ್ಕೆ ಕಾರಣವಾಗಿ ಜನರ ಆರೋಗ್ಯ ಅಥವಾ ಬದುಕಿಗೆ ಅಪಾಯ ತರಬಲ್ಲ ಕಾರ್ಖಾನೆಗಳು ದೂರವಿರಬೇಕೆಂಬ ಕಾನೂನು ಇದೆ. ಈ ಕಾರ್ಖಾನೆ ಮುಧೋಳ ನಗರಕ್ಕೆ ಹೊಂದಿಕೊಂಡಿದೆ. ಇಡೀ ಮುಧೋಳ ನಗರದ ಜನತೆ ಪರಿಸರ ಮಾಲಿನ್ಯದಿಂದಾಗಿ ಕಲುಷಿತ ಗಾಳಿಗೆ ಉಸಿರಾಟದಿಂದಾಗಿ ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಜೊತೆಗೆ ಈ ಕಾರ್ಖಾನೆಯಿಂದ ಕೆಲವೇ ದೂರದ ಅಂತರದಲ್ಲಿ ಘಟಪ್ರಭ ನದಿ ಹರಿಯುತ್ತಿದೆ. ಇದು ಹಲವಾರು ಹಳ್ಳಿಗಳ ಜನರಿಗೆ ಜಾನುವಾರುಗಳಿಗೆ ಕುಡಿಯುವ ನೀರಿಗೆ ಆಧಾರ. ಈ ಕಾರ್ಖಾನೆಯಿಂದ ಹಾರುವ ಬೂದಿ ಮತ್ತು ಕಲುಷಿತ ನೀರು ನದಿಯನ್ನು ಸೇರುತ್ತಿದೆ. ರೈತ ಸಂಘದವರು, ನಾಗರಿಕರು ಸಾಕಷ್ಟು ಹೋರಾಟ ಮಾಡಿ ಗಮನ ಸೆಳೆದರೂ ಅಧಿಕಾರಿಗಳ ಕಾಯ್ದೆಗೆ ವಿರುದ್ಧವಾಗಿ ನಿಂತಿರುವ ಕಾರ್ಖಾನೆಯ ಮೇಲೆ ಕ್ರಮ ಕೈಗೊಳ್ಳುವ ನದಲು ಮಾಲಿಕರೊಂದಿಗೆ ಶಾಮಿಲಾಗಿ ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಪರಿಸರ ಮಾಲಿನ್ಯ ತಡೆಗಟ್ಟುವ ಸಲಹೆಗಳನ್ನು ಕೊಡುತ್ತಿದ್ದಾರೆ ಹೊರತು ಕ್ರಮಕ್ಕೆ ಮುಂದಾಗುತ್ತಿಲ್ಲ. ಈ ರೀತಿ ತ್ಯಾಜ್ಯ ವಸ್ತುವಿನ ಉಪ ಉತ್ಪನ್ನ ತಯಾರಿಸಿ ಕಾರ್ಖಾನೆ ಉಳಿಸಿಕೊಳ್ಳುವ ಈತನ ಅಡ್ಡ ಮಾರ್ಗವೇ ಈಗ ಕಾರ್ಮಿಕರ ಸಾವಿಗೆ ಕಾರಣವಾಗಿದೆ. ಇಲ್ಲಿ ಇನ್ನೂ ಒಂದು ಮುಖ್ಯವಾದ ಅಂಶವೆಂದರೆ ಕೃಷಿ ವಲಯವಿರುವ ಪ್ರದೇಶದಲ್ಲಿ ಕೈಗಾರಿಕೆಗಳು ಇರಬಾರದೆಂಬ ನೀತಿ ಇದ್ದರೂ ಇಲ್ಲಿ ಅದನ್ನು ಗಾಳಿಗೆ ತೂರಲಾಗಿದೆ. ಈ ಕಾರ್ಖಾನೆ ಯ ಸುತ್ತಮುತ್ತ ಫಲವತ್ತಾದ ಕೃಷಿ ಜಮೀನು ಇದೆ. ಈ ಕಾರ್ಖಾನೆಯಿಂದಾಗಿ ಸುತ್ತಮುತ್ತಲಿರುವ ರೈತರ ಬದುಕು ನರಕ ಸದೃಶವಾಗಿದೆ. ಗಾಳಿಯ ತುಂಬ ಕಾರ್ಬನ್ ತುಂಬಿಹೋಗಿರುವುದರಿಂದ ಕುಡಿಯುವ ನೀರಿಗೂ ಆಹಾಕಾರವಿದೆ. ಬೂದಿ ಬೀಳುವುದರಿಂದ ಯಾವ ಬೆಳೆ ಬೆಳೆದರೂ ಮೊಳಕೆಯೊಡೆಯುವ ಹಂತದಲ್ಲಿಯೇ ಅದು ಸುಟ್ಟುಹೋಗುತ್ತಿದೆ. ಈ ಅಸಹಾಯಕತೆಯನ್ನು ಬಳಸಿಕೊಳ್ಳುತ್ತಿರುವ ನಿರಾಣಿ ಅಂಥವರ ಜಮೀನುಗಳನ್ನು ಪುಡಿಗಳನ್ನು ಪುಡಿಗಾಸಿಗೆ ಖರೀದಿಸಿ ಕಾರ್ಖಾನೆಯ ವಿಸ್ತರಣೆಯಲ್ಲಿ ತೊಡಗಿದ್ದಾನೆ. ತಾನು ಮಂತ್ರಿಯಾಗಿದ್ದಾಗ ನಡೆಸಿದ ಲೂಟಿಯಿಂದ ಬಂದ ಹಣವನ್ನೆಲ್ಲ ಬೇನಾಮಿ ಆಸ್ತಿ ಮತ್ತು ಕಾರ್ಖಾನೆಗಳಲ್ಲಿ ಸುರಿಯುತ್ತ ಇಂದು ಜಿಲ್ಲೆಯಲ್ಲಿ ತನ್ನದೇ ಅಧಿಪತ್ಯ ಸ್ಥಾಪಿಸಿಕೊಂಡಿದ್ದಾನೆ. ಅದನ್ನು ಬಳಸಿಕೊಂಡು ರಾಜಕೀಯದಲ್ಲಿ ಪ್ರಭಾವ ಬೆಳೆಸಿಕೊಂಡಿದ್ದಾನೆ. ಅಧಿಕಾರಿಗಳನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಾನೆ.
ಒಟ್ಟಾರೆ ಈತನ ಅಧಿಕಾರ ಹಾಗೂ ಹಣದ ಹಪಾಹಪಿ ಮತ್ತು ಕಾರ್ಖಾನೆಗಳ ವಿಸ್ತರಣೆಯ ದಾಹಕ್ಕೆ ಅಮಾಯಕ ಕಾರ್ಮಿಕ ಜೀವಗಳು ಬಲಿಯಾಗಿವೆ. ಕೇಳಬೇಕಾದ ಅಧಿಕಾರಿಗಳು ಹಾಗೂ ಸ್ಥಳೀಯ ವಿರೋಧ ಪಕ್ಷದ ನಾಯಕರು ಈತನ ಋಣಭಾರದಲ್ಲಿ ಬದುಕುತ್ತಿದ್ದಾರೆ. ಇನ್ನು ಈ ಸಾವುಗಳ ಬಗ್ಗೆ ಕೇಳುವವರ್ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...