Homeಅಂಕಣಗಳುಸನಾತನ ಸಂಸ್ಥೆಯೋ? ಸೈತಾನ ಪಡೆಯೋ??

ಸನಾತನ ಸಂಸ್ಥೆಯೋ? ಸೈತಾನ ಪಡೆಯೋ??

- Advertisement -
- Advertisement -

ಆಧ್ಯಾತ್ಮಿಕ ಚಿಂತನೆಗಳನ್ನು ಬೆಳೆಸುವ ಉದ್ದೇಶದಿಂದ ಸಭೆ, ಸಮಾರಂಭ, ಅಧ್ಯಯನ ಶಿಬಿರ, ಉಪನ್ಯಾಸ ಮುಂತಾದ ಕಾರ್ಯಕ್ರಮಗಳನ್ನು ನಡೆಸುವ ‘ಸನಾತನ ಸಂಸ್ಥೆ’ ಬಾಂಬ್ ಸ್ಫೋಟಿಸುವ, ಕೊಲೆಗಳನ್ನು ನಡೆಸುವ ಹೀನ ಕೃತ್ಯದಲ್ಲಿ ತೊಡಗಿಕೊಂಡಿದೆಯೆಂದರೆ ಯಾರೂ ನಂಬುವುದಿಲ್ಲ. ಯಾಕೆಂದರೆ ಅದರ ಹೆಸರನ್ನು ಕೇಳಿದರೆ ಇದೊಂದು ಹರಿಕಥಾ ಪ್ರಸಂಗಗಳನ್ನು ನಡೆಸುತ್ತಾ, ರಾಮ ಭಜನೆ ಮಾಡುತ್ತಾ ಕಾಲಕ್ಷೇಪ ಮಾಡುವ ಸಂಸ್ಥೆಯೆಂದೇ ಅನಿಸುತ್ತದೆ. ಆದರೆ ಗೋವಾದಲ್ಲಿ ತನ್ನ ಹೆಡ್‍ಕ್ವಾರ್ಟರ್ ಹೊಂದಿದ್ದು ಇಡೀ ದೇಶದಲ್ಲಿ, ನೂರಾರು ಶಾಖೆಗಳನ್ನು ಹಾಗೂ ಜಾಲವನ್ನು ಹೊಂದಿರುವ ಈ ಸಂಸ್ಥೆಯ ಇತಿಹಾಸದ ಕೆದಕಿದರೆ ಭಾರೀ ರಕ್ತಸಿಕ್ತ ಹೀನ ಚರಿತ್ರೆಯೇ ಅಡಗಿದೆ.
ಕೆಲವೊಂದು ಘಟನಾವಳಿಗಳನ್ನು ನೋಡೋಣ.
2009ರ ಅಕ್ಟೋಬರ್ 16ರಂದು ಗೋವಾದ ಮಾರ್ಗೊ ಪಟ್ಟಣದಲ್ಲಿ ಭೀಕರ ಸ್ಫೋಟವೊಂದು ಸಂಭವಿಸಿ ಇಬ್ಬರು ಮೃತಪಟ್ಟಿದ್ದರು. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಆಶ್ಚರ್ಯ ಕಾದಿತ್ತು. ಮೃತಪಟ್ಟ ಆ ಇಬ್ಬರು ಆಗಂತುಕರು ಅಂದು ನಡೆಯಲಿದ್ದ ಉತ್ಸವದಲ್ಲಿ ಬಾಂಬ್ ಸ್ಪೋಟಗೊಳಿಸಲು ಸ್ಕೂಟರ್‍ನಲ್ಲಿ ಸಾಗಿಸುತ್ತಿದ್ದರು ವೇಳೆಯಲ್ಲಿ ಆಕಸ್ಮಿಕವಾಗಿ ಬಾಂಬ್ ಸ್ಫೊಟಗೊಂಡು ತಾವೇ ಬಲಿಯಾಗಿದ್ದರು. ಮೃತಪಟ್ಟ ಮಲ್ಗೊಂಡ ಪಾಟೀಲ್ ಮತ್ತು ಯೋಗೇಶ್ ನಾಯಕ್ ಎಂಬ ಈ ಇಬ್ಬರು ಯುವಕರು ಸನಾತನ ಸಂಸ್ಥೆಯ ಸದಸ್ಯರಾಗಿದ್ದರು. ತನಿಖೆ ಮುಂದುವರೆದಂತೆ ಈ ಸ್ಫೋಟಕ್ಕೆ ಸಂಬಂಧಿಸಿದಂತೆ ವಿನಾಯಕ ಪಾಟೀಲ್ ಮತ್ತು ವಿನಯ್ ತಾಲೇಕರ್ ಎಂಬ ಮತ್ತಿಬ್ಬರು ಸದಸ್ಯರನ್ನು ಬಂಧಿಸಲಾಯ್ತು. ಇವರು ರಾಮನಾಥಿಯಲ್ಲಿರುವ ಆಶ್ರಮವೊಂದರ ಮೂಲಕ ಸನಾತನ ಸಂಸ್ಥೆಯ ಸಂಬಂಧ ಹೊಂದಿದ್ದರು. ಈ ಪ್ರಕರಣದಲ್ಲಿ ಬಂದಿತನಾದ ಮತ್ತೊಬ್ಬ ಆರೋಪಿ 20 ವರ್ಷ ವಯಸ್ಸಿನ ಧನಂಜಯ್ ಅಷ್ಟೇಕರ್, ಈಚಲಕಾರಂಜಿಯಲ್ಲಿರುವ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯಾಗಿದ್ದ. ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಉತ್ಸವವೊಂದು ನಡೆಯಲಿದ್ದು ಸಾವಿರಾರು ಜನರು ಭಾಗವಹಿಸಲಿದ್ದರು. ಬಾಂಬ್ ಸ್ಪೋಟಿಸಿ, ಈ ಸ್ಫೋಟಕ್ಕೆ ಮುಸ್ಲಿಮರು ಕಾರಣವೆಂದು ಆರೋಪಿಸಿ, ನಂತರ ಕೋಮು ಗಲಭೆಗಳನ್ನು ನಡೆಸುವ ಯೋಜನೆ ತಯಾರಾಗಿತ್ತು. ಅದಕ್ಕಾಗಿ ದೆಹಲಿಯ ಖಾನ್ ಮಾರ್ಕೆಟ್ ಎಂಬ ಹೆಸರು ಮುದ್ರಿತವಾಗಿರುವ ಒಂದು ಬ್ಯಾಗ್ ಮತ್ತು ಅದರಲ್ಲಿ ಮುಸ್ಲಿಮರು ಬಳಸುವ ಸುಗಂಧ ದ್ರವ್ಯದ ಒಂದು ಬಾಟಲ್, ಸಂಪೂರ್ಣ ಉರ್ದು ಅಕ್ಷರಗಳಲ್ಲಿ ಪ್ರಿಂಟ್ ಆಗಿರುವ ಬಾಸ್ಮತಿ ಅಕ್ಕಿಯ ಒಂದು ಖಾಲಿ ಚೀಲ ಮುಂತಾದ ವಸ್ತುಗಳನ್ನು ಸ್ಪೋಟದ ಸ್ಥಳದಲ್ಲಿ ಬಿಟ್ಟು ಹೋಗಲಿಕ್ಕೆಂದು ತಂದಿದ್ದರು. ಕಾರಣ ಸ್ಪಷ್ಟವಿತ್ತು. ಸಹಜವಾಗಿ ಇದು ಮುಸ್ಲಿಮರ ಕೃತ್ಯ ಎಂದು ಮಾಧ್ಯಮಗಳ ಮೂಲಕ ಬಿಂಬಿಸುವುದು ಮತ್ತು ಕೋಮು ಗಲಭೆ ಸೃಷ್ಟಿಸುವುದು. ಆದರೆ ಅವರ ದುರಾದೃಷ್ಟ. ತಾವೇ ಬಲಿಯಾಗಿ ಹೋಗಿದ್ದರು.
2008ರಲ್ಲಿ ನಡೆದ ಬಾಂಬ್ ಬ್ಲಾಸ್ಟ್‍ನಲ್ಲಿ ಕೆಲವು ಸಾಧಕರು ಅರೆಸ್ಟ್ ಆಗಿದ್ದರು. ನವಿಮುಂಬೈ ಮತ್ತು ಥಾಣೆಗಳಲ್ಲಿ ‘ಅಮ್ಹಿ ಪಚ್‍ಪುಟೆ’ ಎಂಬ ನಾಟಕ ಪ್ರದರ್ಶನವಿತ್ತು. ಈ ನಾಟಕ ಹಿಂದೂಗಳ ಭಾವನೆಗಳಿಗೆ ದಕ್ಕೆಯಾಗುತ್ತಿದೆಯೆಂದು ಸನಾತನ ಸಂಸ್ಥೆ ಹುಯಿಲೆಬ್ಬಿಸಿತ್ತು. ನಂತರ ಈ ನಾಟಕ ಪ್ರದರ್ಶನ ನಡೆಯುತ್ತಿದ್ದ ಆಡಿಟೋರಿಯಂಗಳಲ್ಲಿ ಬಾಂಬ್‍ಗಳನ್ನು ಸ್ಫೋಟಿಸಲಾಯಿತು.
‘ಜೋಧಾ ಅಕ್ಬರ್’ ಹಿಂದಿ ಸಿನಿಮಾದಲ್ಲಿ ಹಿಂದೂ ಮಹಿಳೆಯನ್ನು ಕೆಟ್ಟದಾಗಿ ಚಿತ್ರಿಸಲಾಗಿದೆಯೆಂದು ಸನಾತನ ಸಂಸ್ಥೆ ಬೊಬ್ಬೆ ಹಾಕಿತ್ತು. ಪನ್ವೇಲ್‍ನಲ್ಲಿರುವ ಥಿಯೇಟರ್‍ನಲ್ಲಿ ಈ ಸಿನಿಮಾ ಪ್ರದರ್ಶನ ನಡೆಯುತ್ತಿದ್ದ ಸಂದರ್ಭದಲ್ಲೇ ಬಾಂಬ್ ಸ್ಫೋಟಿಸಿತ್ತು.
ಈ ಸ್ಫೋಟಗಳಿಗೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ವಿಕ್ರಮ್ ಭಾವೆ ಮತ್ತು ರಮೇಶ್ ಗಡ್ಕರಿ ಎಂಬ ಇಬ್ಬರು ಇಬ್ಬರು ಸನಾತನಿಗಳಿಗೆ ನ್ಯಾಯಾಲಯ ಹತ್ತು ವರ್ಷ ಜೈಲು ವಾಸದ ಶಿಕ್ಷೆ ವಿಧಿಸಿತ್ತು. ನಂತರದ ದಿನಗಳಲ್ಲಿ ಬಾಂಬೆ ಹೈಕೋರ್ಟ್ ಈ ಶಿಕ್ಷೆಯನ್ನು ರದ್ದುಪಡಿಸಿ, ಜಾಮೀನು ಮುಂಜೂರು ಮಾಡಿದೆ. ಬಾಂಬ್ ಸ್ಫೋಟದಲ್ಲಿ ಶಿಕ್ಷೆಗೊಳಗಾದವರಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂಬ ಮಾಮೂಲಿ ರಾಗವನ್ನು ಸಂಸ್ಥೆ ಹಾಡುತ್ತಲೇ ಬಂದಿದೆ.
ಮಹಾರಾಷ್ಟ್ರದಲ್ಲಿ 2013ರಲ್ಲಿ ನರೇಂದ್ರ ದಾಬೋಲ್ಕರ್ ಎಂಬ ವಿಚಾರವಾದಿಯೊಬ್ಬರ ಕೊಲೆಯಾಯಿತು. ಕೊಲೆಯಾದ ಸುದ್ದಿ ಹೊರಬೀಳುತ್ತಿದ್ದಂತೆಯೇ ಸನಾತನ ಸಂಸ್ಥೆಯ ಒಂದು ಅಂಗ ಸಂಸ್ಥೆ ‘ಹಿಂದೂ ಜನಜಾಗೃತಿ ಸಮಿತಿ’ ತನ್ನ ವೆಬ್‍ಸೈಟ್‍ನಲ್ಲಿ ದಾಬೋಲ್ಕರ್ ಫೋಟೋ ಅಪ್‍ಲೋಡ್ ಮಾಡಿ, ಮುಖದ ಮೇಲೆ ಘಿ ಮಾರ್ಕ್ ಹಾಕಿ ಪ್ರಕಟಿಸಿದರು. ಈ ಬಗ್ಗೆ ಎಲ್ಲೆಡೆ ಟೀಕೆಗಳು ಕೇಳಿಬಂದವು. ಪೂನಾ ಪೊಲೀಸರ ಸೈಬರ್ ಕ್ರೈಮ್ ಇಲಾಖೆಯವರು ಆ ಫೊಟೋ ಡಿಲೀಟ್ ಮಾಡುವಂತೆ ಸನಾತನ ಸಂಸ್ಥೆಗೆ ಸೂಚಿಸಿದರು. ಅಷ್ಟೇ, ಪೊಲೀಸರು ಕೈತೊಳೆದುಕೊಂಡರು.
ವಾಸ್ತವದಲ್ಲಿ, ನರೇಂದ್ರ ದಾಬೋಲ್ಕರ್ ಮೇಲೆ ಸನಾತನ ಸಂಸ್ಥೆ ನಿರಂತರ ದಾಳಿಗಳನ್ನು ನಡೆಸುತ್ತಲೇ ಬಂದಿತ್ತು. ಅವರ ಸಾರ್ವಜನಿಕ ಸಭೆಗಳಲ್ಲಿ ಗದ್ದಲವೆಬ್ಬಿಸುವುದು ಮಾಮೂಲಿಯಾಗಿ ಹೋಗಿತ್ತು. ಅವರನ್ನು ‘ಹಿಂದೂ ದ್ರೋಹಿ’ ಎಂದು ಘೋಷಿಸಿ ತನ್ನ ವೆಬ್‍ಸೈಟ್ ಮತ್ತಿತರ ಪ್ರಕಟಣೆಗಳಲ್ಲಿ ಘೋಷಿಸಲಾಗಿತ್ತು. ಹೀಗೆ ಬಹಿರಂಗ ಪ್ರಕಟಣೆ ಬಂದ ನಂತರ ಅನಾಮಧೇಯರಿಂದ ಬೆದರಿಕೆ ಕರೆಗಳು ಮಾಮೂಲಿಯಾಗಿ ಹೋದವು. ಅವರ ಕೊಲೆಯಾಗುವ ಮುನ್ನ ಬಂದ ಬೆದರಿಕೆ ಕರೆ ಈ ಸನಾತನ ಸಂಸ್ಥೆ ಹಾಗೂ ಅದರ ಹಿಂದಿರುವ ಇತರೆ ಶಕ್ತಿಗಳ ಚಾರಿತ್ರಿಕ ಪಾತ್ರವನ್ನು ಬಟಾಬಯಲು ಮಾಡುತ್ತದೆ. “ಗಾಂಧಿಯನ್ನು ನೆನಪಿಸಿಕೋ, ನಾವು ಅವನಿಗೆ ಏನು ಮಾಡಿದ್ದೀವೋ ಅದೇ ಕತೆ ನಿಂಗೂ ಕಾದಿದೆ” ಎಂಬ ಬೆದರಿಕೆಯನ್ನು ಅನಾಮಧೇಯರು ಹಾಕಿದ್ದರು. ಕೆಲವೊಮ್ಮೆ ಬೆದರಿಕೆಗಳು ಬಹಿರಂಗ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಸಂದರ್ಭದಲ್ಲೇ ಬಂದಿದ್ದವು. ಅಂದರೆ ಕೊಲೆಪಾತಕಿಗಳಿಗೆ ಯಾವುದೇ ಕಾನೂನಿನ ಭಯವೂ ಇದ್ದಂತಿರಲಿಲ್ಲ.
ದಾಬೋಲ್ಕರ್ ಹತ್ಯೆಯಾದ ದಿನ ಅವರ ವೆಬ್‍ಸೈಟ್‍ನ ಮುಖಪುಟದಲ್ಲಿ ಜಯಂತ್ ಅಠಾವಳೆ ಹೀಗೆ ಬರೆದಿದ್ದರು. “ಹುಟ್ಟು ಮತ್ತು ಸಾವುಗಳು ಮೊದಲೇ ನಿರ್ಧರಿತವಾಗಿರುತ್ತವೆ ಹಾಗೂ ಪ್ರತಿಯೊಬ್ಬರೂ ಅವರವರ ಕರ್ಮಕ್ಕೆ ತಕ್ಕಂತಹ ಫಲಗಳನ್ನು ಪಡೆದೇ ಪಡೆಯುತ್ತಾರೆ. ಕಾಯಿಲೆ ಬಿದ್ದು ಹಾಸಿಗೆ ಹಿಡಿದು ನರಳಿ ಸಾಯುವುದರ ಬದಲು, ಯಾವುದೋ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸಾಯುವುದರ ಬದಲಿಗೆ ದಾಬೋಲ್ಕರ್ ಅವರಿಗೆ ಪರಮಾತ್ಮ ಒಳ್ಳೆಯ ಸಾವನ್ನೇ ಕೊಟ್ಟಿದ್ದಾನೆ.”
ಮಹಾರಾಷ್ಟ್ರದ ಕಮ್ಯುನಿಸ್ಟ್ ಮುಖಂಡ ಗೋವಿಂದ್ ಪನ್ಸಾರೆ ಕೊಲೆ ಕೇಸಿನಲ್ಲಿ ಸನಾತನ ಸಂಸ್ಥೆಯ ಸಮೀರ್ ಗಾಯಕ್‍ವಾಡ್ ಅರೆಸ್ಟ್ ಎಂಬುವವನನ್ನು ಅರೆಸ್ಟ್ ಮಾಡಲಾಗಿದೆ. ಆತನ ಮೂಲಕ ಈ ಸಂಸ್ಥೆಯ ಮತ್ತಷ್ಟು ಪಾತಕ ಕೃತ್ಯಗಳು ಹೊರಬಿದ್ದಿವೆ.
ಅಫಿಷಿಯಲ್ ಲಿಂಕ್ಸ್
ಈ ಸಂಸ್ಥೆಗೆ ಮತ್ತೊಂದು ಅಪಾಯಕಾರಿ ಆಯಾಮವೂ ಇದೆ. ಗೋವಾದ ಪಿಡಬ್ಲ್ಯುಡಿ ಮಂತ್ರಿ ಸುದಿನ್ ಧವಳಿಕರ್‍ನ ಹೆಂಡತಿ ಜ್ಯೋತಿ ಧವಳಿಕರ್ ಸನಾತನ ಸಂಸ್ಥೆಯ ಸಕ್ರಿಯ ಕಾರ್ಯಕರ್ತೆ. ಸನಾತನ ಸಂಸ್ಥೆಯ ಕ್ರಿಮಿನಲ್ ಚಟುವಟಿಕೆಗಳ ಹಿನ್ನೆಲೆಯಲ್ಲಿ ಪೊಲೀಸರು ಈ ಮಂತ್ರಿಯನ್ನು ವಿಚಾರಣೆ ನಡೆಸಿದ್ದರು. ಆದರೆ ತನಿಖೆ ಅಲ್ಲಿಂದ ಮುಂದಕ್ಕೆ ಸಾಗಲಿಲ್ಲ.
ಈ ಸಂಸ್ಥೆ ನಡೆಸುವ ‘ಸನಾತನ ಪ್ರಭಾತ್. ಎಂಬ ಪತ್ರಿಕೆಯನ್ನು ನಡೆಸುತ್ತಿದೆ. ಅದರಲ್ಲಿ ವಿಚಾರವಾದಿಗಳ ವಿರುದ್ಧ ಲೇಖನಗಳು ಪ್ರಕಟವಾಗುತ್ತವೆ. ವಿಚಾರವಾದಿಗಳನ್ನು ‘ದ್ರೋಹಿಗಳು’ ಎಂದು ಘೋಷಿಸಿ, ಅದರ ಅನುಯಾಯಿಗಳನ್ನು ಎತ್ತಿಕಟ್ಟುವ ಬರಹಗಳೂ ಆಗಿಂದಾಗ್ಗೆ ಪ್ರಕಟವಾಗುತ್ತವೆ. ಸದರಿ ಪತ್ರಿಕೆಗೆ ಸರ್ಕಾರಿ ಜಾಹಿರಾತುಗಳೂ ಕೂಡ ಬಿಡುಗಡೆಯಾಗಿವೆ! ವಾರ್ತಾ ಮತ್ತು ಪ್ರಚಾರ ಇಲಾಖೆಯ ಅಡ್ವೈಸರ್ ಆಗಿರುವ ವಿಷ್ಣು ವಾಘ್ ಅವರೇ ಹೇಳುವ ಪ್ರಕಾರ “ಈ ಪತ್ರಿಕೆಯ ಬರಹಗಳು ಸಮಾಜವನ್ನು ಒಡೆಯುವ ಸರಕನ್ನು ಒಳಗೊಂಡಿರುತ್ತವೆ, ಇವು ಟೆರರಿಸ್ಟ್‍ಗಳನ್ನು ಸೃಷ್ಟಿಮಾಡುವ ಸಾಧ್ಯತೆ ಇದೆ”.
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಮಿಲಿಟರಿ ಅಧಿಕಾರಿ ಕರ್ನಲ್ ಪುರೋಹಿತ್‍ನೇ ಮಾಸ್ಟರ್ ಮೈಂಡ್ ಆಗಿದ್ದ ಎಂಬ ಸುದ್ದಿ ಈಗ ಹಳೆಯದು. ಅದೇ ರೀತಿಯಲ್ಲೇ ಈ ಸಂಸ್ಥೆಯೊಂದಿಗೆ ಹಲವು ಮಿಲಿಟರಿ ಅಧಿಕಾರಿಗಳೂ ಸಂಬಂಧ ಹೊಂದಿರುವ ಸುದ್ದಿಗಳು ಬಯಲಾಗಿವೆ. ಇಂಡಿಯನ್ ನೇವಿಯ ಮಾಜಿ ಅಧಿಕಾರಿ ಸಿಯಾನ್ ಮೈಕೆಲ್ ಕ್ಲಾರ್ಕ್ ಸನಾತನದ ಸಕ್ರಿಯ ಕಾರ್ಯಕರ್ತನಾಗಿದ್ದು, ರಾಮನಾಥಿ ಆಶ್ರಮದ ವಾಸಿಯಾಗಿದ್ದ. 2006ರಲ್ಲಿ ಈತ ಆಶ್ರಮವಾಸಿಯಾಗಿರುವಾಗಲೇ ಅಸ್ಟ್ರೇಲಿಯಾ ದೇಶದ ಪೌರತ್ವ ಪಡೆದುಕೊಂಡಿದ್ದ! ಆದರೆ ಇದೇ ಅವಧಿಯಲ್ಲಿ ಗೋವಾದಲ್ಲಿ ನಡೆದ ಭಜರಂಗದಳ, ವಿಶ್ವ ಹಿಂದೂ ಪರಿಷದ್ ಮತ್ತು ಆರೆಸ್ಸೆಸ್ ಸಂಘಟನೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಈ ಸಂಘಟನೆಗಳ ಪರಸ್ಪರ ಸಂಬಂಧವೇನು ಎಂಬುದಕ್ಕೆ ಇದೊಂದು ಪುರಾವೆಯಷ್ಟೆ.
ಸನಾತನ ಸಂಸ್ಥೆಯ ಸ್ಥಾಪಕ ಜಯಂತ್ ಬಾಲಾಜಿ ಅಠಾವಳೆ ಮೂಲತಃ ತರಬೇತುಗೊಂಡ ಹಿಪ್ನೋ ಥೆರಾಪಿಸ್ಟ್. ಬಹಳಷ್ಟು ವರ್ಷ ಬ್ರಿಟನ್‍ನಲ್ಲಿದ್ದುಕೊಂಡು ಹಿಪ್ನೋ ಥೆರಪಿಸ್ಟ್ ಆಗಿ ಪ್ರಾಕ್ಟೀಸ್ ಮಾಡ್ತಾ ಇದ್ದರು. ಹಿಪ್ನೋ ಥೆರಪಿಯಲ್ಲಿ ಭಾರೀ ಸಂಶೋಧನೆ ಮಾಡಿರುವ ಈತ ‘ಆದ್ಯಾತ್ಮ’ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿಕ್ಕಾಗಿ ಭಾರತಕ್ಕೆ ವಾಪಸ್ ಬಂದ. ತನ್ನನ್ನು ಅವತಾರ ಪುರುಷ ಎಂಬಂತೆ ಪ್ರಚಾರ ಮಾಡಿಕೊಂಡ. ‘ಅಧ್ಯಾತ್ಮಿಕ ವಿಶ್ವವಿದ್ಯಾಲಯ’ ಎಂದು ಕರೆಯಲಾಗುವ ಸನಾತನ ಸಂಸ್ಥೆ ಸ್ಥಾಪಿಸಿದ್ದಾನೆ. ಆತನ ಕೆಲವು ಫೋಟೋಗಳು ನಾಲಿಗೆಯಲ್ಲಿ ಓಂ ಗುರುತಿನ ಮಚ್ಚೆ ಇರುವಂತೆ, ಉಗುರುಗಳಲ್ಲಿ ಓಂ ಎಂಬ ಬಿಳಿ ಮಚ್ಚೆ ಮೂಡಿರುವಂತೆ ಫೋಟೋಶಾಪ್ ಮಾಡಿ, ಭಕ್ತಾದಿಗಳನ್ನು ಮರುಳು ಮಾಡುವ ಕೆಲಸವೂ ನಡೆದಿದೆ.
ಈ ಇಡೀ ಸಂಸ್ಥೆಯ ಸ್ಥಾಪನೆ ಹಾಗೂ ಅದರ ವಿಸ್ತಾರವಾದ ಜಾಲದ ಹಿಂದೆ ಇದೇ ಸಂಘ ಪರಿವಾರದ ಶಕ್ತಿಗಳು ಕೆಲಸ ಮಾಡುತ್ತಿವೆ ಎಂಬುದಕ್ಕೆ ಸಾಕಷ್ಟು ಸಾಕ್ಷ್ಠಧಾರಗಳಿವೆ. ಆದರೆ ಸರ್ಕಾರಗಳು ಕುರುಡಾಗಿರುವಾಗ ಯಾರೇನು ಮಾಡಲು ಸಾಧ್ಯ?
ಸನಾತನಿಗಳು ತಮ್ಮ ಚಟುವಟಿಕೆಯನ್ನು ವಿವಿಧ ದೇಶಗಳಿಗೂ ವಿಸ್ತರಿಸಿದ್ದಾರೆ. ಗೌರಿ ಲಂಕೇಶ್ ಕೊಲೆ ಕೇಸಿನೊಂದಿಗೆ ಸಂಬಂಧ ಹೊಂದಿರುವ ಐವರಲ್ಲಿ ನಾಲ್ಕು ಮಂದಿ ದೇಶದಿಂದ ಹೊರಗಿದ್ದಾರೆಂಬ ಸುದ್ದಿಯನ್ನು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿತ್ತು. ಅವರಲ್ಲಿ ನಮ್ಮ ಬೆಳಗಾವಿ ಮೂಲದ ರುದ್ರ ಪಾಟೀಲ್, ಮಂಗಳೂರು ಮೂಲದ ಜಯಪ್ರಕಾಶ್ ಕೂಡ ಇದ್ದಾರೆ. ಇವರ ಮೇಲೆ ರೆಡ್ ಕಾರ್ನರ್ ನೋಟೀಸ್ ಕೂಡ ಜಾರಿಯಲ್ಲಿದೆ.
ಸರ್ಬಿಯಾ ದೇಶದ ಕತೆ ಕೇಳಿ. ಇಲ್ಲಿ ‘ಮಾನವನ ಆದ್ಯಾತ್ಮಿಕ ಉನ್ನತಿ’ಯ ಹೆಸರಿನಲ್ಲಿ ಚಟುವಟಿಕೆ ನಡೆಸುತ್ತಿದ್ದ ಈ ಗುಂಪನ್ನು ನಿಷೇಧಿಸಲಾಗಿದೆ. “ಸನಾತನ ಸಂಸ್ಥೆ ಮಾನವ ಹಕ್ಕುಗಳ ವಿರೋಧಿಯಾಗಿರುವ, ವ್ಯಕ್ತಿಗತ ಆಯ್ಕೆಯ ಸ್ವಾತಂತ್ರ್ಯಕ್ಕೆ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಅಡ್ಡಿಯುಂಟು ಮಾಡುತ್ತಿರುವ ಸಂಘಟನೆ. ಈ ಸಂಸ್ಥೆ ಮಾನಸಿಕ ಹಾಗೂ ಸಾಮಾಜಿಕ ಸಮತೋಲನವನ್ನು ಹಾಳು ಮಾಡುತ್ತಿರುವ ಹಾಗೂ ವ್ಯಕ್ತಿಗಳ ಸುರಕ್ಷತೆಗೆ ಮತ್ತು ಸರ್ಕಾರದ ಭದ್ರತೆಗೆ ಅತ್ಯಂತ ಅಪಾಯಕಾರಿಯಾಗಿದೆ, ಮಾನವೀಯತೆಯ ಮುಸುಕಿನಲ್ಲಿ ಸನಾತನ ಸಂಸ್ಥೆ ಟೆರರಿಸಂಅನ್ನು ಬೆಳೆಸುತ್ತಿದೆ” ಎಂದು ಅಲ್ಲಿನ ಸರ್ಕಾರ ವಿವರಣೆ ನೀಡಿದೆ.
ಭಾರತ ದೇಶ ಪಾಠ ಕಲಿಯುವುದು ಯಾವಾಗ?

– ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...